Homeಕರ್ನಾಟಕನಿಮ್ಮ ಕಣ್ಣಿಗೆ ಚೆನ್ನಮ್ಮ, ಓಬವ್ವ ಇಂದಿರಾರವರ ಸಾಧನೆ ಕಾಣುವುದಿಲ್ಲವೇ? ಶೋಭಾಗೆ ಸಿದ್ದು ಗುದ್ದು

ನಿಮ್ಮ ಕಣ್ಣಿಗೆ ಚೆನ್ನಮ್ಮ, ಓಬವ್ವ ಇಂದಿರಾರವರ ಸಾಧನೆ ಕಾಣುವುದಿಲ್ಲವೇ? ಶೋಭಾಗೆ ಸಿದ್ದು ಗುದ್ದು

ಶೋಭಾ ಕರಂದ್ಲಾಜೆ ಮಹಿಳಾ ವಿರೋಧಿ ಹೇಳಿಕೆಗೆ ಟ್ವಟ್ಟರ್ ನಲ್ಲಿ ಸಿದ್ದರಾಮಯ್ಯ ತಿರುಗೇಟು

- Advertisement -
- Advertisement -

ಸಿದ್ದರಾಮಯ್ಯನವರೇ, ಕೆಲಸ ಮಾಡಲು ಆಗದಿದ್ದರೆ ಕೈಗೆ ಬಳೆ ತೊಟ್ಟುಕೊಳ್ಳಿ ಎಂದು ಹೇಳಿದ ಶೋಭಾ ಕರಂದ್ಲಾಜೆರವರಿಗೆ ಓರ್ವ ಹೆಣ್ಣಾಗಿ ಮಹಿಳಾ ವಿರೋಧಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಸಿದ್ದರಾಮಯ್ಯನವರು ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿರುವ ಶೋಭಾ ಕರಂದ್ಲಾಜೆಯವರು ‘ಸಿದ್ದರಾಮಯ್ಯನವರು ಸಿಎಂ ಆಗುವ ಕನಸು ಕಾಣುತ್ತಿದ್ದಾರೆ, ಅವರು ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಆಗಲ್ಲ, ಕೆಲಸ ಮಾಡಲು ಆಗಲ್ಲ ಎಂದರೆ ಕೈಗೆ ಬಳೆ ತೊಟ್ಟುಕೊಳ್ಳಲಿ ಎಂದು ಹೇಳಿಕೆ ನೀಡಿದ್ದರು.

ಅದಕ್ಕೆ ಟ್ವಟ್ಟರ್‍ನಲ್ಲಿ ಪ್ರತಿಕ್ರಿಯಿಸಿದರುವ ಸಿದ್ದರಾಮನ್ಯನವರು “ಕುಮಾರಿ ಶೋಭಾ ಬಿಜೆಪಿ ಅವರೇ, ಓರ್ವ ಹೆಣ್ಣಾಗಿ ತಾವು ಮಹಿಳಾ ಸಂಕುಲವೇ ಅಸಮರ್ಥರು ಎಂಬಂತೆ ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ. ಸಂಸದರಾಗಿ ತಾವೊಬ್ಬರು ಸರಿಯಾಗಿ ಕೆಲಸ ಮಾಡಿಲ್ಲ ಎಂಬ ಮಾತ್ರಕ್ಕೆ ಬಳೆ ತೊಟ್ಟವರೆಲ್ಲ ಕೆಲಸ ಮಾಡಲಾಗದವರು ಎಂದಲ್ಲ. ನೆನಪಿರಲಿ, ಚೆನ್ನಮ್ಮ, ಓಬವ್ವ, ಇಂದಿರಾಗಾಂಧಿ ಇವರೆಲ್ಲ ಬಳೆ ತೊಟ್ಟು ಸಾಧನೆಯ ಉತ್ತುಂಗಕ್ಕೇರಿದವರು” ಎಂದು ಟ್ವೀಟ್ ಮಾಡುವ ಮೂಲಕ ಮಹಿಳಾ ವಿರೋಧಿ ಹೇಳಿಕೆಯ ವಿರುದ್ಧ ಕಿಡಿಕಾರಿದ್ದಾರೆ. ಆ ಮೂಲಕ ಸಿದ್ದರಾಮಯ್ಯನವರು ಸೂಕ್ಷ್ಮತೆ ಮೆರೆದಿದ್ದಾರೆ

ಹಾಗೆ ನೋಡಿದರೆ ಬಳೆ ತೊಟ್ಟಿಕೊಳ್ಳಿ ಎಂದು ಟೀಕೆ ಮಾಡುವುದು ಅತ್ಯಂತ ಕೆಳಮಟ್ಟದ್ದು. ಏಕೆಂದರೆ ಬಳೆ ತೊಟ್ಟುಕೊಳ್ಳುವ ಮಹಿಳೆಯರಿಲ್ಲದೇ ಈ ಪ್ರಪಂಚ ಉಳಿಯಲು ಸಾಧ್ಯವಿಲ್ಲ. ಈ ಜಗತ್ತಿನಲ್ಲಿ ಪುರುಷನಿಗೆ ಸರಿಸಮವಾಗಿ ಮಹಿಳೆಯರು ದುಡಿಯುತ್ತಿರುವುದು ಸಾರ್ವಕಾಲಿಕ ಸತ್ಯವೇ ಸರಿ. ಹಾಗಿದ್ದರೂ ಗಾದೆಮಾತಿನಂತೆ ರೂಢಿಗತವಾಗಿ ಬಂದಿರುವ ಆ ಬಳೆ ತೊಟ್ಟಿಕೊಳ್ಳಿ ಎಂಬ ಕೆಟ್ಟ ಮಾತನ್ನು ಒಬ್ಬ ಹೆಣ್ಣು ಮಗಳಾಗಿ ಶೋಭಾ ಕರಂದ್ಲಾಜೆಯವರು ಬಳಸಿರುವು ಅಕ್ಷಮ್ಯ.

ಈ ಪ್ರತಿಕ್ರಿಯೆಯಿಂದ ತನ್ನ ತಪ್ಪನ್ನು ತಿದ್ದಿಕೊಳ್ಳದ ಅಥವಾ ಸುಮ್ಮನಾಗದ ಶೋಭಾ ಕರಂದ್ಲಾಜೆಯವರು “ಸಿದ್ದರಾಮಯ್ಯನವರೆ, ಇಂದಿರಾಗಾಂಧಿಯವರ ಹೆಜ್ಜೆಗುರುತುಗಳನ್ನು ಅನುಸರಿಸಿ ಅಥವಾ ನಿರ್ಮಲ ಸೀತಾರಾಮನ್ ಮತ್ತು ಸುಷ್ಮಾ ಸ್ವರಾಜ್‍ರವರಿಂದ ಸ್ಫೂರ್ತಿ ಪಡೆದುಕೊಳ್ಳಿ” ಎಂದು, ಲೋಕಸಭೆಯ ಫಲಿತಾಂಶವು ನಾನು ಮಾಡಿರುವ ಅಭಿವೃದ್ದಿ ಕೆಲಸದ ಪ್ರತಿಫಲವಾಗಿರುತ್ತದೆ, ಅದು ನಾನು ಮತ್ತೊಮ್ಮೆ ಎಂಪಿಯನ್ನಾಗಿ ಮಾಡುತ್ತದೆ, ನೀವು ಯಾಕೆ ಚಾಮುಂಡೇಶ್ವರಿಯಲ್ಲಿ ಸೋತಿರಿ ಎಂಬುದನ್ನು ನೆನಪಿಸಿಕೊಳ್ಳಿ” ಎಂದು ಮತ್ತೆರೆಡು ಟ್ವೀಟ್ ಮಾಡಿದ್ದಾರೆ. ಈ ಮೂಲಕ ವಿಷಯಾಂತರ ಮಾಡಲು ಪ್ರಯತ್ನಿಸಿದ್ದಾರೆ.

ಒಟ್ಟಾರೆಯಾಗಿ ಶೋಭಾರವರ ಟ್ವೀಟ್‍ಗಳಿಗೆ ಜನ ನೆಗೆಟಿವ್ ಪ್ರತಿಕ್ರಿಯೆಗಳನ್ನು ನೀಡಿದರೆ, ಸಿದ್ದರಾಮಯ್ಯನವರ ಟ್ವೀಟ್‍ಗೆ ಪ್ರಶಂಸೆಯ ಸುರಿಮಳೆ ಸುರಿಸಿದ್ದಾರೆ. ಆ ಟ್ವೀಟ್ ಅನ್ನು ಸಾಕಷ್ಟು ಜನರು ಫೇಸ್‍ಬುಕ್‍ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನು ಓದಿ: ರಾಜೀವ್ ಚಂದ್ರಶೇಖರ್‍ರವರಿಗೆ ಕೊಟ್ಟ ಟ್ವಿಟ್ಟರ್ ಏಟು

ಟ್ವಿಟ್ಟರ್‍ನಲ್ಲಿ ಸಿದ್ದರಾಮಯ್ಯನವರು ಯಾವಾಗಲೂ ಮುಂದಿದ್ದಾರೆ. ಹಿಂದಿ ಹೇರಿಕೆಯ ವಿಚಾರ, ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಳ್ಳಲು, ಮೊನ್ನೆ ತಾನೇ ರಾಜೀವ್ ಚಂದ್ರಶೇಖರ್‍ರವರಿಗೆ ಕೊಟ್ಟ ಟ್ವಿಟ್ಟರ್ ಏಟು ಇದಕ್ಕೆ ಸಾಕ್ಷಿಯಾಗಿದೆ. ಇದು ಸಿದ್ದರಾಮಯ್ಯನವರೊಂದಿಗೆ ಅವರ ಟ್ವಿಟ್ಟರ್ ಹ್ಯಾಂಡಲ್ ನಿರ್ವಹಿಸುವವರು ಚುರುಕುತನ ಉಳ್ಳವರು ಮಾತ್ರವಲ್ಲದೇ ಸಂವೇದನಾಶೀಲರು ಎಂಬುದನ್ನು ತೋರಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...