Homeಕರ್ನಾಟಕನಿಮ್ಮ ಕಣ್ಣಿಗೆ ಚೆನ್ನಮ್ಮ, ಓಬವ್ವ ಇಂದಿರಾರವರ ಸಾಧನೆ ಕಾಣುವುದಿಲ್ಲವೇ? ಶೋಭಾಗೆ ಸಿದ್ದು ಗುದ್ದು

ನಿಮ್ಮ ಕಣ್ಣಿಗೆ ಚೆನ್ನಮ್ಮ, ಓಬವ್ವ ಇಂದಿರಾರವರ ಸಾಧನೆ ಕಾಣುವುದಿಲ್ಲವೇ? ಶೋಭಾಗೆ ಸಿದ್ದು ಗುದ್ದು

ಶೋಭಾ ಕರಂದ್ಲಾಜೆ ಮಹಿಳಾ ವಿರೋಧಿ ಹೇಳಿಕೆಗೆ ಟ್ವಟ್ಟರ್ ನಲ್ಲಿ ಸಿದ್ದರಾಮಯ್ಯ ತಿರುಗೇಟು

- Advertisement -
- Advertisement -

ಸಿದ್ದರಾಮಯ್ಯನವರೇ, ಕೆಲಸ ಮಾಡಲು ಆಗದಿದ್ದರೆ ಕೈಗೆ ಬಳೆ ತೊಟ್ಟುಕೊಳ್ಳಿ ಎಂದು ಹೇಳಿದ ಶೋಭಾ ಕರಂದ್ಲಾಜೆರವರಿಗೆ ಓರ್ವ ಹೆಣ್ಣಾಗಿ ಮಹಿಳಾ ವಿರೋಧಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಸಿದ್ದರಾಮಯ್ಯನವರು ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿರುವ ಶೋಭಾ ಕರಂದ್ಲಾಜೆಯವರು ‘ಸಿದ್ದರಾಮಯ್ಯನವರು ಸಿಎಂ ಆಗುವ ಕನಸು ಕಾಣುತ್ತಿದ್ದಾರೆ, ಅವರು ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಆಗಲ್ಲ, ಕೆಲಸ ಮಾಡಲು ಆಗಲ್ಲ ಎಂದರೆ ಕೈಗೆ ಬಳೆ ತೊಟ್ಟುಕೊಳ್ಳಲಿ ಎಂದು ಹೇಳಿಕೆ ನೀಡಿದ್ದರು.

ಅದಕ್ಕೆ ಟ್ವಟ್ಟರ್‍ನಲ್ಲಿ ಪ್ರತಿಕ್ರಿಯಿಸಿದರುವ ಸಿದ್ದರಾಮನ್ಯನವರು “ಕುಮಾರಿ ಶೋಭಾ ಬಿಜೆಪಿ ಅವರೇ, ಓರ್ವ ಹೆಣ್ಣಾಗಿ ತಾವು ಮಹಿಳಾ ಸಂಕುಲವೇ ಅಸಮರ್ಥರು ಎಂಬಂತೆ ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ. ಸಂಸದರಾಗಿ ತಾವೊಬ್ಬರು ಸರಿಯಾಗಿ ಕೆಲಸ ಮಾಡಿಲ್ಲ ಎಂಬ ಮಾತ್ರಕ್ಕೆ ಬಳೆ ತೊಟ್ಟವರೆಲ್ಲ ಕೆಲಸ ಮಾಡಲಾಗದವರು ಎಂದಲ್ಲ. ನೆನಪಿರಲಿ, ಚೆನ್ನಮ್ಮ, ಓಬವ್ವ, ಇಂದಿರಾಗಾಂಧಿ ಇವರೆಲ್ಲ ಬಳೆ ತೊಟ್ಟು ಸಾಧನೆಯ ಉತ್ತುಂಗಕ್ಕೇರಿದವರು” ಎಂದು ಟ್ವೀಟ್ ಮಾಡುವ ಮೂಲಕ ಮಹಿಳಾ ವಿರೋಧಿ ಹೇಳಿಕೆಯ ವಿರುದ್ಧ ಕಿಡಿಕಾರಿದ್ದಾರೆ. ಆ ಮೂಲಕ ಸಿದ್ದರಾಮಯ್ಯನವರು ಸೂಕ್ಷ್ಮತೆ ಮೆರೆದಿದ್ದಾರೆ

ಹಾಗೆ ನೋಡಿದರೆ ಬಳೆ ತೊಟ್ಟಿಕೊಳ್ಳಿ ಎಂದು ಟೀಕೆ ಮಾಡುವುದು ಅತ್ಯಂತ ಕೆಳಮಟ್ಟದ್ದು. ಏಕೆಂದರೆ ಬಳೆ ತೊಟ್ಟುಕೊಳ್ಳುವ ಮಹಿಳೆಯರಿಲ್ಲದೇ ಈ ಪ್ರಪಂಚ ಉಳಿಯಲು ಸಾಧ್ಯವಿಲ್ಲ. ಈ ಜಗತ್ತಿನಲ್ಲಿ ಪುರುಷನಿಗೆ ಸರಿಸಮವಾಗಿ ಮಹಿಳೆಯರು ದುಡಿಯುತ್ತಿರುವುದು ಸಾರ್ವಕಾಲಿಕ ಸತ್ಯವೇ ಸರಿ. ಹಾಗಿದ್ದರೂ ಗಾದೆಮಾತಿನಂತೆ ರೂಢಿಗತವಾಗಿ ಬಂದಿರುವ ಆ ಬಳೆ ತೊಟ್ಟಿಕೊಳ್ಳಿ ಎಂಬ ಕೆಟ್ಟ ಮಾತನ್ನು ಒಬ್ಬ ಹೆಣ್ಣು ಮಗಳಾಗಿ ಶೋಭಾ ಕರಂದ್ಲಾಜೆಯವರು ಬಳಸಿರುವು ಅಕ್ಷಮ್ಯ.

ಈ ಪ್ರತಿಕ್ರಿಯೆಯಿಂದ ತನ್ನ ತಪ್ಪನ್ನು ತಿದ್ದಿಕೊಳ್ಳದ ಅಥವಾ ಸುಮ್ಮನಾಗದ ಶೋಭಾ ಕರಂದ್ಲಾಜೆಯವರು “ಸಿದ್ದರಾಮಯ್ಯನವರೆ, ಇಂದಿರಾಗಾಂಧಿಯವರ ಹೆಜ್ಜೆಗುರುತುಗಳನ್ನು ಅನುಸರಿಸಿ ಅಥವಾ ನಿರ್ಮಲ ಸೀತಾರಾಮನ್ ಮತ್ತು ಸುಷ್ಮಾ ಸ್ವರಾಜ್‍ರವರಿಂದ ಸ್ಫೂರ್ತಿ ಪಡೆದುಕೊಳ್ಳಿ” ಎಂದು, ಲೋಕಸಭೆಯ ಫಲಿತಾಂಶವು ನಾನು ಮಾಡಿರುವ ಅಭಿವೃದ್ದಿ ಕೆಲಸದ ಪ್ರತಿಫಲವಾಗಿರುತ್ತದೆ, ಅದು ನಾನು ಮತ್ತೊಮ್ಮೆ ಎಂಪಿಯನ್ನಾಗಿ ಮಾಡುತ್ತದೆ, ನೀವು ಯಾಕೆ ಚಾಮುಂಡೇಶ್ವರಿಯಲ್ಲಿ ಸೋತಿರಿ ಎಂಬುದನ್ನು ನೆನಪಿಸಿಕೊಳ್ಳಿ” ಎಂದು ಮತ್ತೆರೆಡು ಟ್ವೀಟ್ ಮಾಡಿದ್ದಾರೆ. ಈ ಮೂಲಕ ವಿಷಯಾಂತರ ಮಾಡಲು ಪ್ರಯತ್ನಿಸಿದ್ದಾರೆ.

ಒಟ್ಟಾರೆಯಾಗಿ ಶೋಭಾರವರ ಟ್ವೀಟ್‍ಗಳಿಗೆ ಜನ ನೆಗೆಟಿವ್ ಪ್ರತಿಕ್ರಿಯೆಗಳನ್ನು ನೀಡಿದರೆ, ಸಿದ್ದರಾಮಯ್ಯನವರ ಟ್ವೀಟ್‍ಗೆ ಪ್ರಶಂಸೆಯ ಸುರಿಮಳೆ ಸುರಿಸಿದ್ದಾರೆ. ಆ ಟ್ವೀಟ್ ಅನ್ನು ಸಾಕಷ್ಟು ಜನರು ಫೇಸ್‍ಬುಕ್‍ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನು ಓದಿ: ರಾಜೀವ್ ಚಂದ್ರಶೇಖರ್‍ರವರಿಗೆ ಕೊಟ್ಟ ಟ್ವಿಟ್ಟರ್ ಏಟು

ಟ್ವಿಟ್ಟರ್‍ನಲ್ಲಿ ಸಿದ್ದರಾಮಯ್ಯನವರು ಯಾವಾಗಲೂ ಮುಂದಿದ್ದಾರೆ. ಹಿಂದಿ ಹೇರಿಕೆಯ ವಿಚಾರ, ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಳ್ಳಲು, ಮೊನ್ನೆ ತಾನೇ ರಾಜೀವ್ ಚಂದ್ರಶೇಖರ್‍ರವರಿಗೆ ಕೊಟ್ಟ ಟ್ವಿಟ್ಟರ್ ಏಟು ಇದಕ್ಕೆ ಸಾಕ್ಷಿಯಾಗಿದೆ. ಇದು ಸಿದ್ದರಾಮಯ್ಯನವರೊಂದಿಗೆ ಅವರ ಟ್ವಿಟ್ಟರ್ ಹ್ಯಾಂಡಲ್ ನಿರ್ವಹಿಸುವವರು ಚುರುಕುತನ ಉಳ್ಳವರು ಮಾತ್ರವಲ್ಲದೇ ಸಂವೇದನಾಶೀಲರು ಎಂಬುದನ್ನು ತೋರಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...