Homeಕರ್ನಾಟಕನಿಮ್ಮ ಕಣ್ಣಿಗೆ ಚೆನ್ನಮ್ಮ, ಓಬವ್ವ ಇಂದಿರಾರವರ ಸಾಧನೆ ಕಾಣುವುದಿಲ್ಲವೇ? ಶೋಭಾಗೆ ಸಿದ್ದು ಗುದ್ದು

ನಿಮ್ಮ ಕಣ್ಣಿಗೆ ಚೆನ್ನಮ್ಮ, ಓಬವ್ವ ಇಂದಿರಾರವರ ಸಾಧನೆ ಕಾಣುವುದಿಲ್ಲವೇ? ಶೋಭಾಗೆ ಸಿದ್ದು ಗುದ್ದು

ಶೋಭಾ ಕರಂದ್ಲಾಜೆ ಮಹಿಳಾ ವಿರೋಧಿ ಹೇಳಿಕೆಗೆ ಟ್ವಟ್ಟರ್ ನಲ್ಲಿ ಸಿದ್ದರಾಮಯ್ಯ ತಿರುಗೇಟು

- Advertisement -
- Advertisement -

ಸಿದ್ದರಾಮಯ್ಯನವರೇ, ಕೆಲಸ ಮಾಡಲು ಆಗದಿದ್ದರೆ ಕೈಗೆ ಬಳೆ ತೊಟ್ಟುಕೊಳ್ಳಿ ಎಂದು ಹೇಳಿದ ಶೋಭಾ ಕರಂದ್ಲಾಜೆರವರಿಗೆ ಓರ್ವ ಹೆಣ್ಣಾಗಿ ಮಹಿಳಾ ವಿರೋಧಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಸಿದ್ದರಾಮಯ್ಯನವರು ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿರುವ ಶೋಭಾ ಕರಂದ್ಲಾಜೆಯವರು ‘ಸಿದ್ದರಾಮಯ್ಯನವರು ಸಿಎಂ ಆಗುವ ಕನಸು ಕಾಣುತ್ತಿದ್ದಾರೆ, ಅವರು ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಆಗಲ್ಲ, ಕೆಲಸ ಮಾಡಲು ಆಗಲ್ಲ ಎಂದರೆ ಕೈಗೆ ಬಳೆ ತೊಟ್ಟುಕೊಳ್ಳಲಿ ಎಂದು ಹೇಳಿಕೆ ನೀಡಿದ್ದರು.

ಅದಕ್ಕೆ ಟ್ವಟ್ಟರ್‍ನಲ್ಲಿ ಪ್ರತಿಕ್ರಿಯಿಸಿದರುವ ಸಿದ್ದರಾಮನ್ಯನವರು “ಕುಮಾರಿ ಶೋಭಾ ಬಿಜೆಪಿ ಅವರೇ, ಓರ್ವ ಹೆಣ್ಣಾಗಿ ತಾವು ಮಹಿಳಾ ಸಂಕುಲವೇ ಅಸಮರ್ಥರು ಎಂಬಂತೆ ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ. ಸಂಸದರಾಗಿ ತಾವೊಬ್ಬರು ಸರಿಯಾಗಿ ಕೆಲಸ ಮಾಡಿಲ್ಲ ಎಂಬ ಮಾತ್ರಕ್ಕೆ ಬಳೆ ತೊಟ್ಟವರೆಲ್ಲ ಕೆಲಸ ಮಾಡಲಾಗದವರು ಎಂದಲ್ಲ. ನೆನಪಿರಲಿ, ಚೆನ್ನಮ್ಮ, ಓಬವ್ವ, ಇಂದಿರಾಗಾಂಧಿ ಇವರೆಲ್ಲ ಬಳೆ ತೊಟ್ಟು ಸಾಧನೆಯ ಉತ್ತುಂಗಕ್ಕೇರಿದವರು” ಎಂದು ಟ್ವೀಟ್ ಮಾಡುವ ಮೂಲಕ ಮಹಿಳಾ ವಿರೋಧಿ ಹೇಳಿಕೆಯ ವಿರುದ್ಧ ಕಿಡಿಕಾರಿದ್ದಾರೆ. ಆ ಮೂಲಕ ಸಿದ್ದರಾಮಯ್ಯನವರು ಸೂಕ್ಷ್ಮತೆ ಮೆರೆದಿದ್ದಾರೆ

ಹಾಗೆ ನೋಡಿದರೆ ಬಳೆ ತೊಟ್ಟಿಕೊಳ್ಳಿ ಎಂದು ಟೀಕೆ ಮಾಡುವುದು ಅತ್ಯಂತ ಕೆಳಮಟ್ಟದ್ದು. ಏಕೆಂದರೆ ಬಳೆ ತೊಟ್ಟುಕೊಳ್ಳುವ ಮಹಿಳೆಯರಿಲ್ಲದೇ ಈ ಪ್ರಪಂಚ ಉಳಿಯಲು ಸಾಧ್ಯವಿಲ್ಲ. ಈ ಜಗತ್ತಿನಲ್ಲಿ ಪುರುಷನಿಗೆ ಸರಿಸಮವಾಗಿ ಮಹಿಳೆಯರು ದುಡಿಯುತ್ತಿರುವುದು ಸಾರ್ವಕಾಲಿಕ ಸತ್ಯವೇ ಸರಿ. ಹಾಗಿದ್ದರೂ ಗಾದೆಮಾತಿನಂತೆ ರೂಢಿಗತವಾಗಿ ಬಂದಿರುವ ಆ ಬಳೆ ತೊಟ್ಟಿಕೊಳ್ಳಿ ಎಂಬ ಕೆಟ್ಟ ಮಾತನ್ನು ಒಬ್ಬ ಹೆಣ್ಣು ಮಗಳಾಗಿ ಶೋಭಾ ಕರಂದ್ಲಾಜೆಯವರು ಬಳಸಿರುವು ಅಕ್ಷಮ್ಯ.

ಈ ಪ್ರತಿಕ್ರಿಯೆಯಿಂದ ತನ್ನ ತಪ್ಪನ್ನು ತಿದ್ದಿಕೊಳ್ಳದ ಅಥವಾ ಸುಮ್ಮನಾಗದ ಶೋಭಾ ಕರಂದ್ಲಾಜೆಯವರು “ಸಿದ್ದರಾಮಯ್ಯನವರೆ, ಇಂದಿರಾಗಾಂಧಿಯವರ ಹೆಜ್ಜೆಗುರುತುಗಳನ್ನು ಅನುಸರಿಸಿ ಅಥವಾ ನಿರ್ಮಲ ಸೀತಾರಾಮನ್ ಮತ್ತು ಸುಷ್ಮಾ ಸ್ವರಾಜ್‍ರವರಿಂದ ಸ್ಫೂರ್ತಿ ಪಡೆದುಕೊಳ್ಳಿ” ಎಂದು, ಲೋಕಸಭೆಯ ಫಲಿತಾಂಶವು ನಾನು ಮಾಡಿರುವ ಅಭಿವೃದ್ದಿ ಕೆಲಸದ ಪ್ರತಿಫಲವಾಗಿರುತ್ತದೆ, ಅದು ನಾನು ಮತ್ತೊಮ್ಮೆ ಎಂಪಿಯನ್ನಾಗಿ ಮಾಡುತ್ತದೆ, ನೀವು ಯಾಕೆ ಚಾಮುಂಡೇಶ್ವರಿಯಲ್ಲಿ ಸೋತಿರಿ ಎಂಬುದನ್ನು ನೆನಪಿಸಿಕೊಳ್ಳಿ” ಎಂದು ಮತ್ತೆರೆಡು ಟ್ವೀಟ್ ಮಾಡಿದ್ದಾರೆ. ಈ ಮೂಲಕ ವಿಷಯಾಂತರ ಮಾಡಲು ಪ್ರಯತ್ನಿಸಿದ್ದಾರೆ.

ಒಟ್ಟಾರೆಯಾಗಿ ಶೋಭಾರವರ ಟ್ವೀಟ್‍ಗಳಿಗೆ ಜನ ನೆಗೆಟಿವ್ ಪ್ರತಿಕ್ರಿಯೆಗಳನ್ನು ನೀಡಿದರೆ, ಸಿದ್ದರಾಮಯ್ಯನವರ ಟ್ವೀಟ್‍ಗೆ ಪ್ರಶಂಸೆಯ ಸುರಿಮಳೆ ಸುರಿಸಿದ್ದಾರೆ. ಆ ಟ್ವೀಟ್ ಅನ್ನು ಸಾಕಷ್ಟು ಜನರು ಫೇಸ್‍ಬುಕ್‍ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನು ಓದಿ: ರಾಜೀವ್ ಚಂದ್ರಶೇಖರ್‍ರವರಿಗೆ ಕೊಟ್ಟ ಟ್ವಿಟ್ಟರ್ ಏಟು

ಟ್ವಿಟ್ಟರ್‍ನಲ್ಲಿ ಸಿದ್ದರಾಮಯ್ಯನವರು ಯಾವಾಗಲೂ ಮುಂದಿದ್ದಾರೆ. ಹಿಂದಿ ಹೇರಿಕೆಯ ವಿಚಾರ, ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಳ್ಳಲು, ಮೊನ್ನೆ ತಾನೇ ರಾಜೀವ್ ಚಂದ್ರಶೇಖರ್‍ರವರಿಗೆ ಕೊಟ್ಟ ಟ್ವಿಟ್ಟರ್ ಏಟು ಇದಕ್ಕೆ ಸಾಕ್ಷಿಯಾಗಿದೆ. ಇದು ಸಿದ್ದರಾಮಯ್ಯನವರೊಂದಿಗೆ ಅವರ ಟ್ವಿಟ್ಟರ್ ಹ್ಯಾಂಡಲ್ ನಿರ್ವಹಿಸುವವರು ಚುರುಕುತನ ಉಳ್ಳವರು ಮಾತ್ರವಲ್ಲದೇ ಸಂವೇದನಾಶೀಲರು ಎಂಬುದನ್ನು ತೋರಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...