Homeಕರ್ನಾಟಕನಿಮ್ಮ ಕಣ್ಣಿಗೆ ಚೆನ್ನಮ್ಮ, ಓಬವ್ವ ಇಂದಿರಾರವರ ಸಾಧನೆ ಕಾಣುವುದಿಲ್ಲವೇ? ಶೋಭಾಗೆ ಸಿದ್ದು ಗುದ್ದು

ನಿಮ್ಮ ಕಣ್ಣಿಗೆ ಚೆನ್ನಮ್ಮ, ಓಬವ್ವ ಇಂದಿರಾರವರ ಸಾಧನೆ ಕಾಣುವುದಿಲ್ಲವೇ? ಶೋಭಾಗೆ ಸಿದ್ದು ಗುದ್ದು

ಶೋಭಾ ಕರಂದ್ಲಾಜೆ ಮಹಿಳಾ ವಿರೋಧಿ ಹೇಳಿಕೆಗೆ ಟ್ವಟ್ಟರ್ ನಲ್ಲಿ ಸಿದ್ದರಾಮಯ್ಯ ತಿರುಗೇಟು

- Advertisement -
- Advertisement -

ಸಿದ್ದರಾಮಯ್ಯನವರೇ, ಕೆಲಸ ಮಾಡಲು ಆಗದಿದ್ದರೆ ಕೈಗೆ ಬಳೆ ತೊಟ್ಟುಕೊಳ್ಳಿ ಎಂದು ಹೇಳಿದ ಶೋಭಾ ಕರಂದ್ಲಾಜೆರವರಿಗೆ ಓರ್ವ ಹೆಣ್ಣಾಗಿ ಮಹಿಳಾ ವಿರೋಧಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಸಿದ್ದರಾಮಯ್ಯನವರು ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿರುವ ಶೋಭಾ ಕರಂದ್ಲಾಜೆಯವರು ‘ಸಿದ್ದರಾಮಯ್ಯನವರು ಸಿಎಂ ಆಗುವ ಕನಸು ಕಾಣುತ್ತಿದ್ದಾರೆ, ಅವರು ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಆಗಲ್ಲ, ಕೆಲಸ ಮಾಡಲು ಆಗಲ್ಲ ಎಂದರೆ ಕೈಗೆ ಬಳೆ ತೊಟ್ಟುಕೊಳ್ಳಲಿ ಎಂದು ಹೇಳಿಕೆ ನೀಡಿದ್ದರು.

ಅದಕ್ಕೆ ಟ್ವಟ್ಟರ್‍ನಲ್ಲಿ ಪ್ರತಿಕ್ರಿಯಿಸಿದರುವ ಸಿದ್ದರಾಮನ್ಯನವರು “ಕುಮಾರಿ ಶೋಭಾ ಬಿಜೆಪಿ ಅವರೇ, ಓರ್ವ ಹೆಣ್ಣಾಗಿ ತಾವು ಮಹಿಳಾ ಸಂಕುಲವೇ ಅಸಮರ್ಥರು ಎಂಬಂತೆ ಕೀಳು ಹೇಳಿಕೆ ನೀಡಿರುವುದು ಸರಿಯಲ್ಲ. ಸಂಸದರಾಗಿ ತಾವೊಬ್ಬರು ಸರಿಯಾಗಿ ಕೆಲಸ ಮಾಡಿಲ್ಲ ಎಂಬ ಮಾತ್ರಕ್ಕೆ ಬಳೆ ತೊಟ್ಟವರೆಲ್ಲ ಕೆಲಸ ಮಾಡಲಾಗದವರು ಎಂದಲ್ಲ. ನೆನಪಿರಲಿ, ಚೆನ್ನಮ್ಮ, ಓಬವ್ವ, ಇಂದಿರಾಗಾಂಧಿ ಇವರೆಲ್ಲ ಬಳೆ ತೊಟ್ಟು ಸಾಧನೆಯ ಉತ್ತುಂಗಕ್ಕೇರಿದವರು” ಎಂದು ಟ್ವೀಟ್ ಮಾಡುವ ಮೂಲಕ ಮಹಿಳಾ ವಿರೋಧಿ ಹೇಳಿಕೆಯ ವಿರುದ್ಧ ಕಿಡಿಕಾರಿದ್ದಾರೆ. ಆ ಮೂಲಕ ಸಿದ್ದರಾಮಯ್ಯನವರು ಸೂಕ್ಷ್ಮತೆ ಮೆರೆದಿದ್ದಾರೆ

ಹಾಗೆ ನೋಡಿದರೆ ಬಳೆ ತೊಟ್ಟಿಕೊಳ್ಳಿ ಎಂದು ಟೀಕೆ ಮಾಡುವುದು ಅತ್ಯಂತ ಕೆಳಮಟ್ಟದ್ದು. ಏಕೆಂದರೆ ಬಳೆ ತೊಟ್ಟುಕೊಳ್ಳುವ ಮಹಿಳೆಯರಿಲ್ಲದೇ ಈ ಪ್ರಪಂಚ ಉಳಿಯಲು ಸಾಧ್ಯವಿಲ್ಲ. ಈ ಜಗತ್ತಿನಲ್ಲಿ ಪುರುಷನಿಗೆ ಸರಿಸಮವಾಗಿ ಮಹಿಳೆಯರು ದುಡಿಯುತ್ತಿರುವುದು ಸಾರ್ವಕಾಲಿಕ ಸತ್ಯವೇ ಸರಿ. ಹಾಗಿದ್ದರೂ ಗಾದೆಮಾತಿನಂತೆ ರೂಢಿಗತವಾಗಿ ಬಂದಿರುವ ಆ ಬಳೆ ತೊಟ್ಟಿಕೊಳ್ಳಿ ಎಂಬ ಕೆಟ್ಟ ಮಾತನ್ನು ಒಬ್ಬ ಹೆಣ್ಣು ಮಗಳಾಗಿ ಶೋಭಾ ಕರಂದ್ಲಾಜೆಯವರು ಬಳಸಿರುವು ಅಕ್ಷಮ್ಯ.

ಈ ಪ್ರತಿಕ್ರಿಯೆಯಿಂದ ತನ್ನ ತಪ್ಪನ್ನು ತಿದ್ದಿಕೊಳ್ಳದ ಅಥವಾ ಸುಮ್ಮನಾಗದ ಶೋಭಾ ಕರಂದ್ಲಾಜೆಯವರು “ಸಿದ್ದರಾಮಯ್ಯನವರೆ, ಇಂದಿರಾಗಾಂಧಿಯವರ ಹೆಜ್ಜೆಗುರುತುಗಳನ್ನು ಅನುಸರಿಸಿ ಅಥವಾ ನಿರ್ಮಲ ಸೀತಾರಾಮನ್ ಮತ್ತು ಸುಷ್ಮಾ ಸ್ವರಾಜ್‍ರವರಿಂದ ಸ್ಫೂರ್ತಿ ಪಡೆದುಕೊಳ್ಳಿ” ಎಂದು, ಲೋಕಸಭೆಯ ಫಲಿತಾಂಶವು ನಾನು ಮಾಡಿರುವ ಅಭಿವೃದ್ದಿ ಕೆಲಸದ ಪ್ರತಿಫಲವಾಗಿರುತ್ತದೆ, ಅದು ನಾನು ಮತ್ತೊಮ್ಮೆ ಎಂಪಿಯನ್ನಾಗಿ ಮಾಡುತ್ತದೆ, ನೀವು ಯಾಕೆ ಚಾಮುಂಡೇಶ್ವರಿಯಲ್ಲಿ ಸೋತಿರಿ ಎಂಬುದನ್ನು ನೆನಪಿಸಿಕೊಳ್ಳಿ” ಎಂದು ಮತ್ತೆರೆಡು ಟ್ವೀಟ್ ಮಾಡಿದ್ದಾರೆ. ಈ ಮೂಲಕ ವಿಷಯಾಂತರ ಮಾಡಲು ಪ್ರಯತ್ನಿಸಿದ್ದಾರೆ.

ಒಟ್ಟಾರೆಯಾಗಿ ಶೋಭಾರವರ ಟ್ವೀಟ್‍ಗಳಿಗೆ ಜನ ನೆಗೆಟಿವ್ ಪ್ರತಿಕ್ರಿಯೆಗಳನ್ನು ನೀಡಿದರೆ, ಸಿದ್ದರಾಮಯ್ಯನವರ ಟ್ವೀಟ್‍ಗೆ ಪ್ರಶಂಸೆಯ ಸುರಿಮಳೆ ಸುರಿಸಿದ್ದಾರೆ. ಆ ಟ್ವೀಟ್ ಅನ್ನು ಸಾಕಷ್ಟು ಜನರು ಫೇಸ್‍ಬುಕ್‍ನಲ್ಲಿ ಹಂಚಿಕೊಂಡಿದ್ದಾರೆ.

ಇದನ್ನು ಓದಿ: ರಾಜೀವ್ ಚಂದ್ರಶೇಖರ್‍ರವರಿಗೆ ಕೊಟ್ಟ ಟ್ವಿಟ್ಟರ್ ಏಟು

ಟ್ವಿಟ್ಟರ್‍ನಲ್ಲಿ ಸಿದ್ದರಾಮಯ್ಯನವರು ಯಾವಾಗಲೂ ಮುಂದಿದ್ದಾರೆ. ಹಿಂದಿ ಹೇರಿಕೆಯ ವಿಚಾರ, ನರೇಂದ್ರ ಮೋದಿಯವರನ್ನು ತರಾಟೆಗೆ ತೆಗೆದುಕೊಳ್ಳಲು, ಮೊನ್ನೆ ತಾನೇ ರಾಜೀವ್ ಚಂದ್ರಶೇಖರ್‍ರವರಿಗೆ ಕೊಟ್ಟ ಟ್ವಿಟ್ಟರ್ ಏಟು ಇದಕ್ಕೆ ಸಾಕ್ಷಿಯಾಗಿದೆ. ಇದು ಸಿದ್ದರಾಮಯ್ಯನವರೊಂದಿಗೆ ಅವರ ಟ್ವಿಟ್ಟರ್ ಹ್ಯಾಂಡಲ್ ನಿರ್ವಹಿಸುವವರು ಚುರುಕುತನ ಉಳ್ಳವರು ಮಾತ್ರವಲ್ಲದೇ ಸಂವೇದನಾಶೀಲರು ಎಂಬುದನ್ನು ತೋರಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...