Homeಕರ್ನಾಟಕರಾಜಕೀಯ ವಿರೋಧಿಗಳಿಗೆ ದೀಪಾವಳಿ ಸಂದೇಶ ನೀಡಿದ ಸಿದ್ದರಾಮಯ್ಯ..!

ರಾಜಕೀಯ ವಿರೋಧಿಗಳಿಗೆ ದೀಪಾವಳಿ ಸಂದೇಶ ನೀಡಿದ ಸಿದ್ದರಾಮಯ್ಯ..!

- Advertisement -
- Advertisement -

ನನ್ನ ಮನೆಯಲ್ಲಿ ನಡೆದ ಖಾಸಗಿ ಮಾತುಕತೆಯ ವಿಡಿಯೋದ ತಪ್ಪು ವ್ಯಾಖ್ಯಾನ ಮಾಡುತ್ತಾ, ಪ್ರಚಾರ ಮಾಡುತ್ತಾ ನಾಯಕರು, ವಿಕೃತ ಆನಂದ ಪಡುತ್ತಿದ್ದಾರೆ. ಇದು ನನಗೆ ಹೊಸತಲ್ಲ. ಸುಳ್ಳಿನ ಕತ್ತಲನ್ನು ಸತ್ಯದ ಬೆಳಕು ಅಳಿಸಿ ಹಾಕುತ್ತೆ ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಳ್ಳುವ ಮೂಲಕ ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜಕೀಯ ವಿರೋಧಿಗಳಿಗೆ ದೀಪಾವಳಿ ಸಂದೇಶ ನೀಡಿದ್ದಾರೆ.

’ನಾನು ಜಾತಿವಾದಿ ಅಲ್ಲ, ಸಾಮಾಜಿಕ ನ್ಯಾಯಕ್ಕೆ ಬದ್ಧನಾಗಿರುವ ನಾನು, ಅಂಬೇಡ್ಕರ್, ಗಾಂಧೀಜಿ, ಬಸವಣ್ಣ ಮತ್ತು ಕುವೆಂಪು ಅವರ ಚಿಂತನೆಯಿಂದ ಪ್ರೇರಿತನಾದ ಜಾತ್ಯತೀತ. ಅವರ ಚಿಂತನೆಗಳ ಫಲವೇ ನನ್ನ ಸರ್ಕಾರದ ಯೋಜನೆಗಳಾಗಿದ್ದವು. ಇದು ನನ್ನ ಜಾತಿ ವಿನಾಶದ ಹಾದಿ. ನಿಮ್ಮದು ಯಾವ ಹಾದಿ’..? ಎಂದು ಪ್ರಶ್ನಿಸಿದ್ದಾರೆ. ’

ಇದನ್ನೂ ಓದಿ: ಸಿದ್ದರಾಮಯ್ಯ ನನ್ನ ವೆಲ್ ವಿಶರ್, ಅವರಿಗೆ ನನ್ನ ಮೇಲೆ ಪ್ರೀತಿ ಜಾಸ್ತಿ: ಡಿ.ಕೆ.ಶಿವಕುಮಾರ್

’ನಾನು ಜಾತಿ ರಾಜಕೀಯ ಮಾಡುತ್ತಿದ್ದೇನೆ ಎಂದು ಆರೋಪಿಸುವವರು ಅವರ ಪಕ್ಷಗಳ ನೀತಿ ಮತ್ತು ಕಾರ್ಯಕ್ರಮಗಳಲ್ಲಿ ಗಾಂಧಿ ಅಂಬೇಡ್ಕರ್,ಬಸವಣ್ಣ ಮತ್ತು ಕುವೆಂಪು ವಿಚಾರಧಾರೆಗಳೆಷ್ಟು ಇವೆ ಎನ್ನುವುದನ್ನು ಬಹಿರಂಗಪಡಿಸಲಿ. ಇದರ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ಧ. ಇದು ನನ್ನ ಸವಾಲು ಕೂಡಾ ಹೌದು. ರಾಜ್ಯದ ಮತದಾರರು ಜಾತಿ ಬಿಟ್ಟು ಯೋಚನೆ ಮಾಡುತ್ತಿದ್ದಾರೆ. ಲಿಂಗಾಯತರು ಯಡಿಯೂರಪ್ಪನವರಿಂದ, ಒಕ್ಕಲಿಗರು ಜೆಡಿಎಸ್ ಪಕ್ಷದಿಂದ ದೂರವಾಗುತ್ತಿದ್ದಾರೆ ಎಂಬ ಗೆಳೆಯರ ಮಾತಿಗೆ ನಾನು ಸಹಮತ ಸೂಚಿಸಿದ್ದು ನಿಜ. ಜನ ಜಾತ್ಯತೀತರಾಗುತ್ತಿದ್ದಾರೆ ಎಂದು ಹೇಳಿದ್ದರಲ್ಲಿ ಏನು ತಪ್ಪಿದೆ’..?”

’ರಾಜಕೀಯ ಪಕ್ಷಗಳು ನೈತಿಕವಾಗಿ ದಿವಾಳಿಯಾದಾಗ ಇಂತಹ ಅಪಸವ್ಯಗಳು ಹುಟ್ಟಿಕೊಳ್ಳುತ್ತವೆ.
ವೈಯುಕ್ತಿಕ ದಾಳಿಗಳು ನನ್ನ ಸಾಮಾಜಿಕ ಬದ್ದತೆಯನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ ಮತ್ತು ಜನರಿಗಾಗಿ ಹೋರಾಡುವ ಹುಮ್ಮಸ್ಸನ್ನು ಇಮ್ಮಡಿಗೊಳಿಸುತ್ತದೆ. ಇದಕ್ಕಾಗಿ ನನ್ನ ರಾಜಕೀಯ ವಿರೋಧಿಗಳಿಗೆ ಧನ್ಯವಾದಗಳು’ ಎಂದು ರಾಜಕೀಯ ವಿರೋಧಿಗಳಿಗೆ ದೀಪಾವಳಿಯ ಸಂದೇಶ ನೀಡಿದ್ದಾರೆ.

ಇನ್ನು ಸಿದ್ದರಾಮಯ್ಯ ಅವರು, ಡಿಕೆಶಿ ಜೆಡಿಎಸ್ ಬಾವುಟ ಹಿಡಿದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ವಿಡಿಯೋ ಹರಿದಾಡಿತ್ತು. ಅಲ್ಲದೇ ಅದಕ್ಕೆ ಸಂಬಂಧಪಟ್ಟಂತೆ ವ್ಯಾಪಕ ಚರ್ಚೆ ಮತ್ತು ವಿರೋಧ ವ್ಯಕ್ತವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...