Homeಕರ್ನಾಟಕರಾಜಕೀಯ ವಿರೋಧಿಗಳಿಗೆ ದೀಪಾವಳಿ ಸಂದೇಶ ನೀಡಿದ ಸಿದ್ದರಾಮಯ್ಯ..!

ರಾಜಕೀಯ ವಿರೋಧಿಗಳಿಗೆ ದೀಪಾವಳಿ ಸಂದೇಶ ನೀಡಿದ ಸಿದ್ದರಾಮಯ್ಯ..!

- Advertisement -
- Advertisement -

ನನ್ನ ಮನೆಯಲ್ಲಿ ನಡೆದ ಖಾಸಗಿ ಮಾತುಕತೆಯ ವಿಡಿಯೋದ ತಪ್ಪು ವ್ಯಾಖ್ಯಾನ ಮಾಡುತ್ತಾ, ಪ್ರಚಾರ ಮಾಡುತ್ತಾ ನಾಯಕರು, ವಿಕೃತ ಆನಂದ ಪಡುತ್ತಿದ್ದಾರೆ. ಇದು ನನಗೆ ಹೊಸತಲ್ಲ. ಸುಳ್ಳಿನ ಕತ್ತಲನ್ನು ಸತ್ಯದ ಬೆಳಕು ಅಳಿಸಿ ಹಾಕುತ್ತೆ ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಳ್ಳುವ ಮೂಲಕ ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜಕೀಯ ವಿರೋಧಿಗಳಿಗೆ ದೀಪಾವಳಿ ಸಂದೇಶ ನೀಡಿದ್ದಾರೆ.

’ನಾನು ಜಾತಿವಾದಿ ಅಲ್ಲ, ಸಾಮಾಜಿಕ ನ್ಯಾಯಕ್ಕೆ ಬದ್ಧನಾಗಿರುವ ನಾನು, ಅಂಬೇಡ್ಕರ್, ಗಾಂಧೀಜಿ, ಬಸವಣ್ಣ ಮತ್ತು ಕುವೆಂಪು ಅವರ ಚಿಂತನೆಯಿಂದ ಪ್ರೇರಿತನಾದ ಜಾತ್ಯತೀತ. ಅವರ ಚಿಂತನೆಗಳ ಫಲವೇ ನನ್ನ ಸರ್ಕಾರದ ಯೋಜನೆಗಳಾಗಿದ್ದವು. ಇದು ನನ್ನ ಜಾತಿ ವಿನಾಶದ ಹಾದಿ. ನಿಮ್ಮದು ಯಾವ ಹಾದಿ’..? ಎಂದು ಪ್ರಶ್ನಿಸಿದ್ದಾರೆ. ’

ಇದನ್ನೂ ಓದಿ: ಸಿದ್ದರಾಮಯ್ಯ ನನ್ನ ವೆಲ್ ವಿಶರ್, ಅವರಿಗೆ ನನ್ನ ಮೇಲೆ ಪ್ರೀತಿ ಜಾಸ್ತಿ: ಡಿ.ಕೆ.ಶಿವಕುಮಾರ್

’ನಾನು ಜಾತಿ ರಾಜಕೀಯ ಮಾಡುತ್ತಿದ್ದೇನೆ ಎಂದು ಆರೋಪಿಸುವವರು ಅವರ ಪಕ್ಷಗಳ ನೀತಿ ಮತ್ತು ಕಾರ್ಯಕ್ರಮಗಳಲ್ಲಿ ಗಾಂಧಿ ಅಂಬೇಡ್ಕರ್,ಬಸವಣ್ಣ ಮತ್ತು ಕುವೆಂಪು ವಿಚಾರಧಾರೆಗಳೆಷ್ಟು ಇವೆ ಎನ್ನುವುದನ್ನು ಬಹಿರಂಗಪಡಿಸಲಿ. ಇದರ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ಧ. ಇದು ನನ್ನ ಸವಾಲು ಕೂಡಾ ಹೌದು. ರಾಜ್ಯದ ಮತದಾರರು ಜಾತಿ ಬಿಟ್ಟು ಯೋಚನೆ ಮಾಡುತ್ತಿದ್ದಾರೆ. ಲಿಂಗಾಯತರು ಯಡಿಯೂರಪ್ಪನವರಿಂದ, ಒಕ್ಕಲಿಗರು ಜೆಡಿಎಸ್ ಪಕ್ಷದಿಂದ ದೂರವಾಗುತ್ತಿದ್ದಾರೆ ಎಂಬ ಗೆಳೆಯರ ಮಾತಿಗೆ ನಾನು ಸಹಮತ ಸೂಚಿಸಿದ್ದು ನಿಜ. ಜನ ಜಾತ್ಯತೀತರಾಗುತ್ತಿದ್ದಾರೆ ಎಂದು ಹೇಳಿದ್ದರಲ್ಲಿ ಏನು ತಪ್ಪಿದೆ’..?”

’ರಾಜಕೀಯ ಪಕ್ಷಗಳು ನೈತಿಕವಾಗಿ ದಿವಾಳಿಯಾದಾಗ ಇಂತಹ ಅಪಸವ್ಯಗಳು ಹುಟ್ಟಿಕೊಳ್ಳುತ್ತವೆ.
ವೈಯುಕ್ತಿಕ ದಾಳಿಗಳು ನನ್ನ ಸಾಮಾಜಿಕ ಬದ್ದತೆಯನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ ಮತ್ತು ಜನರಿಗಾಗಿ ಹೋರಾಡುವ ಹುಮ್ಮಸ್ಸನ್ನು ಇಮ್ಮಡಿಗೊಳಿಸುತ್ತದೆ. ಇದಕ್ಕಾಗಿ ನನ್ನ ರಾಜಕೀಯ ವಿರೋಧಿಗಳಿಗೆ ಧನ್ಯವಾದಗಳು’ ಎಂದು ರಾಜಕೀಯ ವಿರೋಧಿಗಳಿಗೆ ದೀಪಾವಳಿಯ ಸಂದೇಶ ನೀಡಿದ್ದಾರೆ.

ಇನ್ನು ಸಿದ್ದರಾಮಯ್ಯ ಅವರು, ಡಿಕೆಶಿ ಜೆಡಿಎಸ್ ಬಾವುಟ ಹಿಡಿದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ವಿಡಿಯೋ ಹರಿದಾಡಿತ್ತು. ಅಲ್ಲದೇ ಅದಕ್ಕೆ ಸಂಬಂಧಪಟ್ಟಂತೆ ವ್ಯಾಪಕ ಚರ್ಚೆ ಮತ್ತು ವಿರೋಧ ವ್ಯಕ್ತವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...

ಜಿಲ್ಲಾ ನ್ಯಾಯಾಧೀಶೆ ತಬಸ್ಸುಮ್ ಖಾನ್‌ಗೆ ಬಲಪಂಥೀಯರಿಂದ ಬೆದರಿಕೆ : ಗಂಭೀರವಾಗಿ ಪರಿಗಣಿಸಿದ ಹೈಕೋರ್ಟ್

ನರ್ಮದಾಪುರಂ ಜಿಲ್ಲಾ ನ್ಯಾಯಾಧೀಶರಾದ ತಬಸ್ಸುಮ್ ಖಾನ್ ಅವರು ತಮ್ಮ ಕರ್ತವ್ಯ ನಿರ್ವಹಣೆಯ ಕಾರಣಕ್ಕಾಗಿ ಬೆದರಿಕೆ ಮತ್ತು ನಿಂದನೆಗೆ ಒಳಗಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಮಧ್ಯಪ್ರದೇಶ ಹೈಕೋರ್ಟ್, ಅವರಿಗೆ ಸೂಕ್ತ ರಕ್ಷಣೆ ನೀಡುವಂತೆ ಮತ್ತು ಅಪರಾಧಿಗಳನ್ನು ಪತ್ತೆಹಚ್ಚಲು ಕೈಗೊಂಡಿರುವ...

ಎಸ್ಐಆರ್ ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗದ ಪಕ್ಷಪಾತದ ಬಗ್ಗೆ ಸಿಜೆಐಗೆ ಪ್ರತಿಪಕ್ಷಗಳಿಂದ ಪತ್ರ: ‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಎಂದು ಆರೋಪ

ದೇಶದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಪಕ್ಷಪಾತ ಧೋರಣೆ ತಳೆದಿದೆ ಎಂದು ಆರೋಪಿಸಿ, 24 ವಿರೋಧ ಪಕ್ಷಗಳ ನಾಯಕರು ಹಾಗೂ ಒಬ್ಬರು ಸ್ವತಂತ್ರ...

ಬೆಂಗಳೂರು| ಕೆ.ಆರ್. ವೃತ್ತದ ಬಳಿ ಬಿಎಂಟಿಸಿ ಬಸ್‌ಗಳ ನಡುವೆ ಅಪಘಾತ; ಹಲವರಿಗೆ ಗಾಯ

ಇಂದು ಬೆಳಿಗ್ಗೆ ವಿಧಾನಸೌಧದಿಂದ ಸ್ವಲ್ಪ ದೂರದಲ್ಲಿರುವ ಜನನಿಬಿಡ ಕೆ.ಆರ್. ವೃತ್ತ ಜಂಕ್ಷನ್ ಬಳಿ ಎರಡು ಬಿಎಂಟಿಸಿ ಬಸ್‌ಗಳು ಡಿಕ್ಕಿ ಹೊಡೆದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡರು. ಡಿಕ್ಕಿಯ ಪರಿಣಾಮ ಬಸ್ಸಿನೊಳಗೆ ಹಲವಾರು ಪ್ರಯಾಣಿಕರು...

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಲೋಪ ಆರೋಪ; ಕೋಲಾರ-ಮೈಸೂರಿನ ಅಧಿಕಾರಿಗಳಿಗೆ ನೋಟಿಸ್ ಜಾರಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)ಗೆ ಸಂಬಂಧಿಸಿದಂತೆ, ಕೋಲಾರ ಮತ್ತು ಮೈಸೂರಿನಲ್ಲಿ ನಡೆದ ಕಾರ್ಯವಿಧಾನದಲ್ಲಿ ನಿಯಮ ಉಲ್ಲಂಘನೆ ಆರೋಪ ಕೇಳಿಬಂದೆ. ಕೋಲಾರದಲ್ಲಿ, ಪರಿಷ್ಕರಣಾ ಕಾರ್ಯದ ಸಮಯದಲ್ಲಿ ಕರ್ತವ್ಯ...

ಸೂರತ್ ಧ್ವಂಸ ಕಾರ್ಯಾಚರಣೆ ಸಂಪೂರ್ಣ ‘ಕಾನೂನುಬಾಹಿರ’: 100 ನಿರಾಶ್ರಿತ ಕುಟುಂಬಗಳ ಪುನರ್ವಸತಿಗೆ ಗುಜರಾತ್ ಹೈಕೋರ್ಟ್ ಆದೇಶ

ಅಹಮದಾಬಾದ್: ಗುಜರಾತ್‌ನ ಸೂರತ್‌ನ ನಾಸಿರ್ ನಗರದಲ್ಲಿ ನಡೆದ ಮನೆಗಳ ಧ್ವಂಸ ಕಾರ್ಯಾಚರಣೆಯನ್ನು ತೀವ್ರವಾಗಿ ಖಂಡಿಸಿರುವ ಗುಜರಾತ್ ಹೈಕೋರ್ಟ್, ಇದನ್ನು "ಸಂಪೂರ್ಣ ಕಾನೂನುಬಾಹಿರ" ಎಂದು ಕರೆದಿದೆ. ಮೇ 30 ರಂದು ನಡೆದ ಈ "ಅನಧಿಕೃತ"...

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...