Homeಕರ್ನಾಟಕರಾಜಕೀಯ ವಿರೋಧಿಗಳಿಗೆ ದೀಪಾವಳಿ ಸಂದೇಶ ನೀಡಿದ ಸಿದ್ದರಾಮಯ್ಯ..!

ರಾಜಕೀಯ ವಿರೋಧಿಗಳಿಗೆ ದೀಪಾವಳಿ ಸಂದೇಶ ನೀಡಿದ ಸಿದ್ದರಾಮಯ್ಯ..!

- Advertisement -
- Advertisement -

ನನ್ನ ಮನೆಯಲ್ಲಿ ನಡೆದ ಖಾಸಗಿ ಮಾತುಕತೆಯ ವಿಡಿಯೋದ ತಪ್ಪು ವ್ಯಾಖ್ಯಾನ ಮಾಡುತ್ತಾ, ಪ್ರಚಾರ ಮಾಡುತ್ತಾ ನಾಯಕರು, ವಿಕೃತ ಆನಂದ ಪಡುತ್ತಿದ್ದಾರೆ. ಇದು ನನಗೆ ಹೊಸತಲ್ಲ. ಸುಳ್ಳಿನ ಕತ್ತಲನ್ನು ಸತ್ಯದ ಬೆಳಕು ಅಳಿಸಿ ಹಾಕುತ್ತೆ ಎಂದು ಫೇಸ್‌ಬುಕ್‌ನಲ್ಲಿ ಬರೆದುಕೊಳ್ಳುವ ಮೂಲಕ ಮಾಜಿ ಸಿಎಂ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜಕೀಯ ವಿರೋಧಿಗಳಿಗೆ ದೀಪಾವಳಿ ಸಂದೇಶ ನೀಡಿದ್ದಾರೆ.

’ನಾನು ಜಾತಿವಾದಿ ಅಲ್ಲ, ಸಾಮಾಜಿಕ ನ್ಯಾಯಕ್ಕೆ ಬದ್ಧನಾಗಿರುವ ನಾನು, ಅಂಬೇಡ್ಕರ್, ಗಾಂಧೀಜಿ, ಬಸವಣ್ಣ ಮತ್ತು ಕುವೆಂಪು ಅವರ ಚಿಂತನೆಯಿಂದ ಪ್ರೇರಿತನಾದ ಜಾತ್ಯತೀತ. ಅವರ ಚಿಂತನೆಗಳ ಫಲವೇ ನನ್ನ ಸರ್ಕಾರದ ಯೋಜನೆಗಳಾಗಿದ್ದವು. ಇದು ನನ್ನ ಜಾತಿ ವಿನಾಶದ ಹಾದಿ. ನಿಮ್ಮದು ಯಾವ ಹಾದಿ’..? ಎಂದು ಪ್ರಶ್ನಿಸಿದ್ದಾರೆ. ’

ಇದನ್ನೂ ಓದಿ: ಸಿದ್ದರಾಮಯ್ಯ ನನ್ನ ವೆಲ್ ವಿಶರ್, ಅವರಿಗೆ ನನ್ನ ಮೇಲೆ ಪ್ರೀತಿ ಜಾಸ್ತಿ: ಡಿ.ಕೆ.ಶಿವಕುಮಾರ್

’ನಾನು ಜಾತಿ ರಾಜಕೀಯ ಮಾಡುತ್ತಿದ್ದೇನೆ ಎಂದು ಆರೋಪಿಸುವವರು ಅವರ ಪಕ್ಷಗಳ ನೀತಿ ಮತ್ತು ಕಾರ್ಯಕ್ರಮಗಳಲ್ಲಿ ಗಾಂಧಿ ಅಂಬೇಡ್ಕರ್,ಬಸವಣ್ಣ ಮತ್ತು ಕುವೆಂಪು ವಿಚಾರಧಾರೆಗಳೆಷ್ಟು ಇವೆ ಎನ್ನುವುದನ್ನು ಬಹಿರಂಗಪಡಿಸಲಿ. ಇದರ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ಧ. ಇದು ನನ್ನ ಸವಾಲು ಕೂಡಾ ಹೌದು. ರಾಜ್ಯದ ಮತದಾರರು ಜಾತಿ ಬಿಟ್ಟು ಯೋಚನೆ ಮಾಡುತ್ತಿದ್ದಾರೆ. ಲಿಂಗಾಯತರು ಯಡಿಯೂರಪ್ಪನವರಿಂದ, ಒಕ್ಕಲಿಗರು ಜೆಡಿಎಸ್ ಪಕ್ಷದಿಂದ ದೂರವಾಗುತ್ತಿದ್ದಾರೆ ಎಂಬ ಗೆಳೆಯರ ಮಾತಿಗೆ ನಾನು ಸಹಮತ ಸೂಚಿಸಿದ್ದು ನಿಜ. ಜನ ಜಾತ್ಯತೀತರಾಗುತ್ತಿದ್ದಾರೆ ಎಂದು ಹೇಳಿದ್ದರಲ್ಲಿ ಏನು ತಪ್ಪಿದೆ’..?”

’ರಾಜಕೀಯ ಪಕ್ಷಗಳು ನೈತಿಕವಾಗಿ ದಿವಾಳಿಯಾದಾಗ ಇಂತಹ ಅಪಸವ್ಯಗಳು ಹುಟ್ಟಿಕೊಳ್ಳುತ್ತವೆ.
ವೈಯುಕ್ತಿಕ ದಾಳಿಗಳು ನನ್ನ ಸಾಮಾಜಿಕ ಬದ್ದತೆಯನ್ನು ಇನ್ನಷ್ಟು ಗಟ್ಟಿಗೊಳಿಸುತ್ತದೆ ಮತ್ತು ಜನರಿಗಾಗಿ ಹೋರಾಡುವ ಹುಮ್ಮಸ್ಸನ್ನು ಇಮ್ಮಡಿಗೊಳಿಸುತ್ತದೆ. ಇದಕ್ಕಾಗಿ ನನ್ನ ರಾಜಕೀಯ ವಿರೋಧಿಗಳಿಗೆ ಧನ್ಯವಾದಗಳು’ ಎಂದು ರಾಜಕೀಯ ವಿರೋಧಿಗಳಿಗೆ ದೀಪಾವಳಿಯ ಸಂದೇಶ ನೀಡಿದ್ದಾರೆ.

ಇನ್ನು ಸಿದ್ದರಾಮಯ್ಯ ಅವರು, ಡಿಕೆಶಿ ಜೆಡಿಎಸ್ ಬಾವುಟ ಹಿಡಿದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ವಿಡಿಯೋ ಹರಿದಾಡಿತ್ತು. ಅಲ್ಲದೇ ಅದಕ್ಕೆ ಸಂಬಂಧಪಟ್ಟಂತೆ ವ್ಯಾಪಕ ಚರ್ಚೆ ಮತ್ತು ವಿರೋಧ ವ್ಯಕ್ತವಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...