Homeಕರ್ನಾಟಕಡ್ರಗ್ಸ್ ದಂಧೆ: ಜಿಲ್ಲಾವಾರು ಮಾಹಿತಿ ಕೋರಿ ಗೃಹಸಚಿವರಿಗೆ ಪತ್ರ ಬರೆದ ಸಿದ್ಧರಾಮಯ್ಯ

ಡ್ರಗ್ಸ್ ದಂಧೆ: ಜಿಲ್ಲಾವಾರು ಮಾಹಿತಿ ಕೋರಿ ಗೃಹಸಚಿವರಿಗೆ ಪತ್ರ ಬರೆದ ಸಿದ್ಧರಾಮಯ್ಯ

ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಕಾಯ್ದೆ- 1985 (NDPS) ಅಡಿಯಲ್ಲಿ ಕಳೆದ 10 ವರ್ಷಗಳಿಂದ ಸರ್ಕಾರ ತೆಗೆದುಕೊಂಡ ಕಾನೂನು ಕ್ರಮಗಳ ಬಗ್ಗೆ ಮಾಹಿತಿ ನೀಡಿ- ಸಿದ್ಧರಾಮಯ್ಯ

- Advertisement -
- Advertisement -

ರಾಜ್ಯದಲ್ಲಿ ಡ್ರಗ್ಸ್ ದಂಧೆಗೆ ಸಂಬಂಧಿಸಿದಂತೆ ಕಳೆದ 10 ವರ್ಷಗಳ ಜಿಲ್ಲಾವಾರು ವಿವರಗಳನ್ನು ನೀಡಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪತ್ರ ಬರೆದಿದ್ದಾರೆ.

ಇದರ ಕುರಿತು ಇಂದು ಸಂಜೆ ಟ್ವೀಟ್ ಮಾಡಿರುವ ಸಿದ್ಧರಾಮಯ್ಯ, “ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಕಾಯ್ದೆ- 1985 (NDPS) ಅಡಿಯಲ್ಲಿ ಕಳೆದ 10 ವರ್ಷಗಳಿಂದ ಸರ್ಕಾರ ತೆಗೆದುಕೊಂಡ ಕಾನೂನು ಕ್ರಮಗಳ ಬಗ್ಗೆ ಮಾಹಿತಿ ನೀಡಿ” ಎಂದು ತಾವು ಬರೆದಿರುವ ಪತ್ರವನ್ನು ಹಂಚಿಕೊಂಡಿದ್ದಾರೆ.

“ರಾಜ್ಯದಲ್ಲಿ ಮಾದಕ ವಸ್ತು ವ್ಯಸನಕ್ಕೆ ಬಲಿಯಾದವರಲ್ಲಿ ಎಷ್ಟು ಜನರನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ? ಎಷ್ಟು ಜನ ವ್ಯಸನದಿಂದ ಮುಕ್ತರಾಗಿದ್ದಾರೆ? ಮತ್ತೆ ಎಷ್ಟು ಜನ ವ್ಯಸನಿಗಳಾಗಿದ್ದಾರೆ ಮತ್ತು ಎಷ್ಟು ಜನ ಸಾವಿಗೀಡಾಗಿದ್ದಾರೆ?” ಎಂಬ ಮಾಹಿತಿಯನ್ನು ಕೋರಿ ಪತ್ರ ಬರೆಯಲಾಗಿದೆ.

“ಕಳೆದ 10 ವರ್ಷಗಳಿಂದ ಎಷ್ಟು ಜನರ ಮೇಲೆ NDPS ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಲಾಗಿದೆ, ಅವು ಈಗ ನ್ಯಾಯಾಲಯದಲ್ಲಿ ಈಗ ಯಾವ ಸ್ಥಿತಿಯಲ್ಲಿದೆ. ಖುಲಾಸೆಯಾದ ಪ್ರಕರಣಗಳೆಷ್ಟು. ಶಿಕ್ಷೆಯಾದ ಪ್ರಕರಣಗಳೆಷ್ಟು? ಇವುಗಳಿಗೆ ಸಂಬಂಧಿಸಿದಂತೆ ಪ್ರಕರಣವಾರು, ಜಿಲ್ಲಾವಾರು ಮಾಹಿತಿ ನೀಡುವುದು” ಎಂದು ಪತ್ರದಲ್ಲಿ ಕೋರಿದ್ದಾರೆ.

“ರಾಜ್ಯದಲ್ಲಿ ಪೊಲೀಸರ ಸಹಕಾರವಿಲ್ಲದೆ ಗಾಂಜಾ ದಂಧೆ ಇಷ್ಟು ನಿರಾತಂಕವಾಗಿ ನಡೆಯಲು ಸಾಧ್ಯವೇ? ಇಲ್ಲವಾದರೆ, ಸಂಬಂಧಿಸಿದ ಪೊಲೀಸ್ ಸಿಬ್ಬಂಧಿಗಳ ಮೇಲೆ ಯಾವ ಕ್ರಮ ಕೈಗೊಳ್ಳಲಾಗಿದೆ, ಎಷ್ಟು ಜನರನ್ನು ಅಮಾನತು ಮಾಡಲಾಗಿದೆ, ಎಷ್ಟು ಜನರಿಗೆ ಶಿಕ್ಷೆ ವಿಧಿಸಲಾಗಿದೆ?” ಇದರ ಕುರಿತಂತೆ ಜಿಲ್ಲಾವಾರು ಮಾಹಿತಿಯನ್ನು ಕೋರಿದ್ದಾರೆ.

NDPS ಕಾಯ್ದೆಯ ಪ್ರಕಾರ ವಿವಿಧ ಹಂತದ ಸಮಿತಿಗಳನ್ನು ರಚಿಸಬೇಕು. ಹಾಗಾಗಿ ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಎಷ್ಟು ಸಮಿತಿಗಳನ್ನು ರಚಿಸಲಾಗಿದೆ. ಅವುಗಳ ಕಾರ್ಯಕ್ರಮದ ಕುರಿತು ಮಾಹಿತಿಯನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ.

ಡ್ರಗ್ಸ್ ಚಟಕ್ಕೆ ಸಿಲುಕಿದ ಮಕ್ಕಳ ಪೋಷಕರಿಂದ ಗುಪ್ತವಾಗಿ ಮಾಹಿತಿ ಸಂಗ್ರಹಿಸುವ ವ್ಯವಸ್ಥೆ ನಮ್ಮಲ್ಲಿದೆಯೇ. ಹಾಗಿದ್ದರೆ ಎಷ್ಟು ದೂರುಗಳನ್ನು ಸ್ವೀಕರಿಸಲಾಗಿದೆ, ಅದರ ಬಗ್ಗೆ ತೆಗೆದುಕೊಂಡ ಕ್ರಮಗಳೇನು?. ಡ್ರಗ್ಸ್ ಎಂದು ಕರೆಯಲ್ಪಡುವ ವಸ್ತುಗಳು ಎಲ್ಲಿಂದ ಸರಬರಾಜಾಗುತ್ತಿವೆ, ರಾಜ್ಯದಲ್ಲಿ ಎಲ್ಲೆಲ್ಲಿಗೆ ಸರಬರಾಜಾಗುತ್ತಿದೆ. ಸರಬರಾಜುದಾರರ ಎಷ್ಟು ಆಸ್ತಿಗಳನ್ನು ಇದುವರೆಗೂ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂಬುದರ ಬಗ್ಗೆ ಜಿಲ್ಲಾವಾರು ಮಾಹಿತಿಯನ್ನು ಕೋರಿದ್ದಾರೆ.

ರಾಜ್ಯದಲ್ಲಿ ಡ್ರಗ್ಸ್ ಕುರಿತಂತೆ ಹಲವು ವ್ಯಕ್ತಿಗಳ ಬಂಧನವಾಗುತ್ತಿದೆ. ಇದರ ಬಗ್ಗೆ ಪರ-ವಿರೋಧದ ಚರ್ಚೆಗಳು ಜೋರಾಗಿಯೇ ನಡೆಯುತ್ತಿವೆ. ಇದರ ನಡುವೆ ರಾಜಕೀಯವಾಗಿಯೂ ಇದು ಮಹತ್ವವನ್ನು ಪಡೆದುಕೊಂಡಿದೆ. ಈ ಸಂದರ್ಭದಲ್ಲಿ ಸಿದ್ಧರಾಮಯ್ಯನವರ ಈ ಪತ್ರ ಮಹತ್ವದ್ದೆನಿಸುತ್ತದೆ.


ಇದನ್ನೂ ಓದಿ: ಡ್ರಗ್ಸ್ ಮಾಫಿಯಾ ಪ್ರಕರಣ: ನಟಿ ರಾಗಿಣಿ ದ್ವಿವೇದಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...