Homeಕರ್ನಾಟಕಡ್ರಗ್ಸ್ ದಂಧೆ: ಜಿಲ್ಲಾವಾರು ಮಾಹಿತಿ ಕೋರಿ ಗೃಹಸಚಿವರಿಗೆ ಪತ್ರ ಬರೆದ ಸಿದ್ಧರಾಮಯ್ಯ

ಡ್ರಗ್ಸ್ ದಂಧೆ: ಜಿಲ್ಲಾವಾರು ಮಾಹಿತಿ ಕೋರಿ ಗೃಹಸಚಿವರಿಗೆ ಪತ್ರ ಬರೆದ ಸಿದ್ಧರಾಮಯ್ಯ

ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಕಾಯ್ದೆ- 1985 (NDPS) ಅಡಿಯಲ್ಲಿ ಕಳೆದ 10 ವರ್ಷಗಳಿಂದ ಸರ್ಕಾರ ತೆಗೆದುಕೊಂಡ ಕಾನೂನು ಕ್ರಮಗಳ ಬಗ್ಗೆ ಮಾಹಿತಿ ನೀಡಿ- ಸಿದ್ಧರಾಮಯ್ಯ

- Advertisement -
- Advertisement -

ರಾಜ್ಯದಲ್ಲಿ ಡ್ರಗ್ಸ್ ದಂಧೆಗೆ ಸಂಬಂಧಿಸಿದಂತೆ ಕಳೆದ 10 ವರ್ಷಗಳ ಜಿಲ್ಲಾವಾರು ವಿವರಗಳನ್ನು ನೀಡಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪತ್ರ ಬರೆದಿದ್ದಾರೆ.

ಇದರ ಕುರಿತು ಇಂದು ಸಂಜೆ ಟ್ವೀಟ್ ಮಾಡಿರುವ ಸಿದ್ಧರಾಮಯ್ಯ, “ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಕಾಯ್ದೆ- 1985 (NDPS) ಅಡಿಯಲ್ಲಿ ಕಳೆದ 10 ವರ್ಷಗಳಿಂದ ಸರ್ಕಾರ ತೆಗೆದುಕೊಂಡ ಕಾನೂನು ಕ್ರಮಗಳ ಬಗ್ಗೆ ಮಾಹಿತಿ ನೀಡಿ” ಎಂದು ತಾವು ಬರೆದಿರುವ ಪತ್ರವನ್ನು ಹಂಚಿಕೊಂಡಿದ್ದಾರೆ.

“ರಾಜ್ಯದಲ್ಲಿ ಮಾದಕ ವಸ್ತು ವ್ಯಸನಕ್ಕೆ ಬಲಿಯಾದವರಲ್ಲಿ ಎಷ್ಟು ಜನರನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ? ಎಷ್ಟು ಜನ ವ್ಯಸನದಿಂದ ಮುಕ್ತರಾಗಿದ್ದಾರೆ? ಮತ್ತೆ ಎಷ್ಟು ಜನ ವ್ಯಸನಿಗಳಾಗಿದ್ದಾರೆ ಮತ್ತು ಎಷ್ಟು ಜನ ಸಾವಿಗೀಡಾಗಿದ್ದಾರೆ?” ಎಂಬ ಮಾಹಿತಿಯನ್ನು ಕೋರಿ ಪತ್ರ ಬರೆಯಲಾಗಿದೆ.

“ಕಳೆದ 10 ವರ್ಷಗಳಿಂದ ಎಷ್ಟು ಜನರ ಮೇಲೆ NDPS ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಲಾಗಿದೆ, ಅವು ಈಗ ನ್ಯಾಯಾಲಯದಲ್ಲಿ ಈಗ ಯಾವ ಸ್ಥಿತಿಯಲ್ಲಿದೆ. ಖುಲಾಸೆಯಾದ ಪ್ರಕರಣಗಳೆಷ್ಟು. ಶಿಕ್ಷೆಯಾದ ಪ್ರಕರಣಗಳೆಷ್ಟು? ಇವುಗಳಿಗೆ ಸಂಬಂಧಿಸಿದಂತೆ ಪ್ರಕರಣವಾರು, ಜಿಲ್ಲಾವಾರು ಮಾಹಿತಿ ನೀಡುವುದು” ಎಂದು ಪತ್ರದಲ್ಲಿ ಕೋರಿದ್ದಾರೆ.

“ರಾಜ್ಯದಲ್ಲಿ ಪೊಲೀಸರ ಸಹಕಾರವಿಲ್ಲದೆ ಗಾಂಜಾ ದಂಧೆ ಇಷ್ಟು ನಿರಾತಂಕವಾಗಿ ನಡೆಯಲು ಸಾಧ್ಯವೇ? ಇಲ್ಲವಾದರೆ, ಸಂಬಂಧಿಸಿದ ಪೊಲೀಸ್ ಸಿಬ್ಬಂಧಿಗಳ ಮೇಲೆ ಯಾವ ಕ್ರಮ ಕೈಗೊಳ್ಳಲಾಗಿದೆ, ಎಷ್ಟು ಜನರನ್ನು ಅಮಾನತು ಮಾಡಲಾಗಿದೆ, ಎಷ್ಟು ಜನರಿಗೆ ಶಿಕ್ಷೆ ವಿಧಿಸಲಾಗಿದೆ?” ಇದರ ಕುರಿತಂತೆ ಜಿಲ್ಲಾವಾರು ಮಾಹಿತಿಯನ್ನು ಕೋರಿದ್ದಾರೆ.

NDPS ಕಾಯ್ದೆಯ ಪ್ರಕಾರ ವಿವಿಧ ಹಂತದ ಸಮಿತಿಗಳನ್ನು ರಚಿಸಬೇಕು. ಹಾಗಾಗಿ ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಎಷ್ಟು ಸಮಿತಿಗಳನ್ನು ರಚಿಸಲಾಗಿದೆ. ಅವುಗಳ ಕಾರ್ಯಕ್ರಮದ ಕುರಿತು ಮಾಹಿತಿಯನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ.

ಡ್ರಗ್ಸ್ ಚಟಕ್ಕೆ ಸಿಲುಕಿದ ಮಕ್ಕಳ ಪೋಷಕರಿಂದ ಗುಪ್ತವಾಗಿ ಮಾಹಿತಿ ಸಂಗ್ರಹಿಸುವ ವ್ಯವಸ್ಥೆ ನಮ್ಮಲ್ಲಿದೆಯೇ. ಹಾಗಿದ್ದರೆ ಎಷ್ಟು ದೂರುಗಳನ್ನು ಸ್ವೀಕರಿಸಲಾಗಿದೆ, ಅದರ ಬಗ್ಗೆ ತೆಗೆದುಕೊಂಡ ಕ್ರಮಗಳೇನು?. ಡ್ರಗ್ಸ್ ಎಂದು ಕರೆಯಲ್ಪಡುವ ವಸ್ತುಗಳು ಎಲ್ಲಿಂದ ಸರಬರಾಜಾಗುತ್ತಿವೆ, ರಾಜ್ಯದಲ್ಲಿ ಎಲ್ಲೆಲ್ಲಿಗೆ ಸರಬರಾಜಾಗುತ್ತಿದೆ. ಸರಬರಾಜುದಾರರ ಎಷ್ಟು ಆಸ್ತಿಗಳನ್ನು ಇದುವರೆಗೂ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂಬುದರ ಬಗ್ಗೆ ಜಿಲ್ಲಾವಾರು ಮಾಹಿತಿಯನ್ನು ಕೋರಿದ್ದಾರೆ.

ರಾಜ್ಯದಲ್ಲಿ ಡ್ರಗ್ಸ್ ಕುರಿತಂತೆ ಹಲವು ವ್ಯಕ್ತಿಗಳ ಬಂಧನವಾಗುತ್ತಿದೆ. ಇದರ ಬಗ್ಗೆ ಪರ-ವಿರೋಧದ ಚರ್ಚೆಗಳು ಜೋರಾಗಿಯೇ ನಡೆಯುತ್ತಿವೆ. ಇದರ ನಡುವೆ ರಾಜಕೀಯವಾಗಿಯೂ ಇದು ಮಹತ್ವವನ್ನು ಪಡೆದುಕೊಂಡಿದೆ. ಈ ಸಂದರ್ಭದಲ್ಲಿ ಸಿದ್ಧರಾಮಯ್ಯನವರ ಈ ಪತ್ರ ಮಹತ್ವದ್ದೆನಿಸುತ್ತದೆ.


ಇದನ್ನೂ ಓದಿ: ಡ್ರಗ್ಸ್ ಮಾಫಿಯಾ ಪ್ರಕರಣ: ನಟಿ ರಾಗಿಣಿ ದ್ವಿವೇದಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...