Homeಕರ್ನಾಟಕಡ್ರಗ್ಸ್ ದಂಧೆ: ಜಿಲ್ಲಾವಾರು ಮಾಹಿತಿ ಕೋರಿ ಗೃಹಸಚಿವರಿಗೆ ಪತ್ರ ಬರೆದ ಸಿದ್ಧರಾಮಯ್ಯ

ಡ್ರಗ್ಸ್ ದಂಧೆ: ಜಿಲ್ಲಾವಾರು ಮಾಹಿತಿ ಕೋರಿ ಗೃಹಸಚಿವರಿಗೆ ಪತ್ರ ಬರೆದ ಸಿದ್ಧರಾಮಯ್ಯ

ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಕಾಯ್ದೆ- 1985 (NDPS) ಅಡಿಯಲ್ಲಿ ಕಳೆದ 10 ವರ್ಷಗಳಿಂದ ಸರ್ಕಾರ ತೆಗೆದುಕೊಂಡ ಕಾನೂನು ಕ್ರಮಗಳ ಬಗ್ಗೆ ಮಾಹಿತಿ ನೀಡಿ- ಸಿದ್ಧರಾಮಯ್ಯ

- Advertisement -
- Advertisement -

ರಾಜ್ಯದಲ್ಲಿ ಡ್ರಗ್ಸ್ ದಂಧೆಗೆ ಸಂಬಂಧಿಸಿದಂತೆ ಕಳೆದ 10 ವರ್ಷಗಳ ಜಿಲ್ಲಾವಾರು ವಿವರಗಳನ್ನು ನೀಡಿ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪತ್ರ ಬರೆದಿದ್ದಾರೆ.

ಇದರ ಕುರಿತು ಇಂದು ಸಂಜೆ ಟ್ವೀಟ್ ಮಾಡಿರುವ ಸಿದ್ಧರಾಮಯ್ಯ, “ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಕಾಯ್ದೆ- 1985 (NDPS) ಅಡಿಯಲ್ಲಿ ಕಳೆದ 10 ವರ್ಷಗಳಿಂದ ಸರ್ಕಾರ ತೆಗೆದುಕೊಂಡ ಕಾನೂನು ಕ್ರಮಗಳ ಬಗ್ಗೆ ಮಾಹಿತಿ ನೀಡಿ” ಎಂದು ತಾವು ಬರೆದಿರುವ ಪತ್ರವನ್ನು ಹಂಚಿಕೊಂಡಿದ್ದಾರೆ.

“ರಾಜ್ಯದಲ್ಲಿ ಮಾದಕ ವಸ್ತು ವ್ಯಸನಕ್ಕೆ ಬಲಿಯಾದವರಲ್ಲಿ ಎಷ್ಟು ಜನರನ್ನು ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಗಿದೆ? ಎಷ್ಟು ಜನ ವ್ಯಸನದಿಂದ ಮುಕ್ತರಾಗಿದ್ದಾರೆ? ಮತ್ತೆ ಎಷ್ಟು ಜನ ವ್ಯಸನಿಗಳಾಗಿದ್ದಾರೆ ಮತ್ತು ಎಷ್ಟು ಜನ ಸಾವಿಗೀಡಾಗಿದ್ದಾರೆ?” ಎಂಬ ಮಾಹಿತಿಯನ್ನು ಕೋರಿ ಪತ್ರ ಬರೆಯಲಾಗಿದೆ.

“ಕಳೆದ 10 ವರ್ಷಗಳಿಂದ ಎಷ್ಟು ಜನರ ಮೇಲೆ NDPS ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಲಾಗಿದೆ, ಅವು ಈಗ ನ್ಯಾಯಾಲಯದಲ್ಲಿ ಈಗ ಯಾವ ಸ್ಥಿತಿಯಲ್ಲಿದೆ. ಖುಲಾಸೆಯಾದ ಪ್ರಕರಣಗಳೆಷ್ಟು. ಶಿಕ್ಷೆಯಾದ ಪ್ರಕರಣಗಳೆಷ್ಟು? ಇವುಗಳಿಗೆ ಸಂಬಂಧಿಸಿದಂತೆ ಪ್ರಕರಣವಾರು, ಜಿಲ್ಲಾವಾರು ಮಾಹಿತಿ ನೀಡುವುದು” ಎಂದು ಪತ್ರದಲ್ಲಿ ಕೋರಿದ್ದಾರೆ.

“ರಾಜ್ಯದಲ್ಲಿ ಪೊಲೀಸರ ಸಹಕಾರವಿಲ್ಲದೆ ಗಾಂಜಾ ದಂಧೆ ಇಷ್ಟು ನಿರಾತಂಕವಾಗಿ ನಡೆಯಲು ಸಾಧ್ಯವೇ? ಇಲ್ಲವಾದರೆ, ಸಂಬಂಧಿಸಿದ ಪೊಲೀಸ್ ಸಿಬ್ಬಂಧಿಗಳ ಮೇಲೆ ಯಾವ ಕ್ರಮ ಕೈಗೊಳ್ಳಲಾಗಿದೆ, ಎಷ್ಟು ಜನರನ್ನು ಅಮಾನತು ಮಾಡಲಾಗಿದೆ, ಎಷ್ಟು ಜನರಿಗೆ ಶಿಕ್ಷೆ ವಿಧಿಸಲಾಗಿದೆ?” ಇದರ ಕುರಿತಂತೆ ಜಿಲ್ಲಾವಾರು ಮಾಹಿತಿಯನ್ನು ಕೋರಿದ್ದಾರೆ.

NDPS ಕಾಯ್ದೆಯ ಪ್ರಕಾರ ವಿವಿಧ ಹಂತದ ಸಮಿತಿಗಳನ್ನು ರಚಿಸಬೇಕು. ಹಾಗಾಗಿ ಜಿಲ್ಲೆ ಮತ್ತು ತಾಲ್ಲೂಕು ಮಟ್ಟದಲ್ಲಿ ಎಷ್ಟು ಸಮಿತಿಗಳನ್ನು ರಚಿಸಲಾಗಿದೆ. ಅವುಗಳ ಕಾರ್ಯಕ್ರಮದ ಕುರಿತು ಮಾಹಿತಿಯನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ.

ಡ್ರಗ್ಸ್ ಚಟಕ್ಕೆ ಸಿಲುಕಿದ ಮಕ್ಕಳ ಪೋಷಕರಿಂದ ಗುಪ್ತವಾಗಿ ಮಾಹಿತಿ ಸಂಗ್ರಹಿಸುವ ವ್ಯವಸ್ಥೆ ನಮ್ಮಲ್ಲಿದೆಯೇ. ಹಾಗಿದ್ದರೆ ಎಷ್ಟು ದೂರುಗಳನ್ನು ಸ್ವೀಕರಿಸಲಾಗಿದೆ, ಅದರ ಬಗ್ಗೆ ತೆಗೆದುಕೊಂಡ ಕ್ರಮಗಳೇನು?. ಡ್ರಗ್ಸ್ ಎಂದು ಕರೆಯಲ್ಪಡುವ ವಸ್ತುಗಳು ಎಲ್ಲಿಂದ ಸರಬರಾಜಾಗುತ್ತಿವೆ, ರಾಜ್ಯದಲ್ಲಿ ಎಲ್ಲೆಲ್ಲಿಗೆ ಸರಬರಾಜಾಗುತ್ತಿದೆ. ಸರಬರಾಜುದಾರರ ಎಷ್ಟು ಆಸ್ತಿಗಳನ್ನು ಇದುವರೆಗೂ ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂಬುದರ ಬಗ್ಗೆ ಜಿಲ್ಲಾವಾರು ಮಾಹಿತಿಯನ್ನು ಕೋರಿದ್ದಾರೆ.

ರಾಜ್ಯದಲ್ಲಿ ಡ್ರಗ್ಸ್ ಕುರಿತಂತೆ ಹಲವು ವ್ಯಕ್ತಿಗಳ ಬಂಧನವಾಗುತ್ತಿದೆ. ಇದರ ಬಗ್ಗೆ ಪರ-ವಿರೋಧದ ಚರ್ಚೆಗಳು ಜೋರಾಗಿಯೇ ನಡೆಯುತ್ತಿವೆ. ಇದರ ನಡುವೆ ರಾಜಕೀಯವಾಗಿಯೂ ಇದು ಮಹತ್ವವನ್ನು ಪಡೆದುಕೊಂಡಿದೆ. ಈ ಸಂದರ್ಭದಲ್ಲಿ ಸಿದ್ಧರಾಮಯ್ಯನವರ ಈ ಪತ್ರ ಮಹತ್ವದ್ದೆನಿಸುತ್ತದೆ.


ಇದನ್ನೂ ಓದಿ: ಡ್ರಗ್ಸ್ ಮಾಫಿಯಾ ಪ್ರಕರಣ: ನಟಿ ರಾಗಿಣಿ ದ್ವಿವೇದಿ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...