Homeಕರ್ನಾಟಕಪ್ರವಾದಿ ನಿಂದನೆ ಹಾಗೂ ಡಿಜೆ ಹಳ್ಳಿ ಗಲಭೆ ಪ್ರಕರಣ: ಸಿದ್ದರಾಮಯ್ಯನವರ 13 ಅಂಶಗಳ ಪತ್ರ -...

ಪ್ರವಾದಿ ನಿಂದನೆ ಹಾಗೂ ಡಿಜೆ ಹಳ್ಳಿ ಗಲಭೆ ಪ್ರಕರಣ: ಸಿದ್ದರಾಮಯ್ಯನವರ 13 ಅಂಶಗಳ ಪತ್ರ – ಉತ್ತರಿಸುವರೇ ಸಿಎಂ?

ಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಸರ್ಕಾರ ತನ್ನ ವಿಫಲತೆಯನ್ನು ಮುಚ್ಚಲು ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಸಿದ್ದರಾಮಯ್ಯ 13 ಅಂಶಗಳ ಪತ್ರವನ್ನು ಮುಖ್ಯಮಂತ್ರಿಗೆ ಬರೆದು ಪ್ರಶ್ನೆ ಮಾಡಿದ್ದಾರೆ.

- Advertisement -
- Advertisement -

ಪ್ರವಾದಿ ನಿಂದನೆ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸರ್ಕಾರ ಮತ್ತು ಗುಪ್ತಚರ ಇಲಾಖೆಯ ವೈಫಲ್ಯವೇ ಕಾರಣ. ನಿಮ್ಮ ವಿಫಲತೆಯನ್ನು ಮುಚ್ಚಲು ಕಾಂಗ್ರೆಸ್ ಪಕ್ಷದ ಮೇಲೆ ಏಕೆ ಗೂಬೆ ಕೂರಿಸುತ್ತೀರಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿಗೆ ಬಿ. ಎಸ್.ಯಡಿಯೂರಪ್ಪನವರಿಗೆ ಪತ್ರ ಬರೆದು ಪ್ರಶ್ನೆ ಮಾಡಿದ್ದಾರೆ.

ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪನವರಿಗೆ 13 ಅಂಶಗಳನ್ನೊಳಗೊಂಡ ಪತ್ರವನ್ನು ಬರೆದಿರುವ ಸಿದ್ದರಾಮಯ್ಯ, “ಬೆಂಗಳೂರಿನ ಕೆಜೆ ಹಳ್ಳಿ ಮತ್ತು ಡಿಜಿ ಹಳ್ಳಿ ವ್ಯಾಪ್ತಿಯಲ್ಲಿ ಆಗಸ್ಟ್ 11 ರಂದು ನಡೆದ ಘಟನೆಗಳಿಗೆ ಸರ್ಕಾರದ ವೈಫಲ್ಯವೇ ನೇರ ಕಾರಣ. ಈ ಗಲಭೆಯಲ್ಲಿ ಗುಪ್ತಚರ ಇಲಾಖೆಯ ವೈಫಲ್ಯ ಎದ್ದು ಕಾಣುತ್ತಿದೆ. ಸರ್ಕಾರ ತನ್ನ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲಾಗಿದೆ. ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುತ್ತಿದೆ” ಎಂದು ಪತ್ರದಲ್ಲಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಡಿಜೆ ಹಳ್ಳಿ ಫೇಸ್‌‌ಬುಕ್ ಪ್ರಚೋದನೆ ಮತ್ತು ಗುಂಪು ಗಲಭೆ: ನವೀನ್ ಮತ್ತು 110 ಜನರ ಬಂಧನ - ಶಾಂತಿ ಕಾಪಾಡಲು ಮುಖಂಡರ ಮನವಿ
ಫೋಟೋ ಕೃಪೆ: ಒನ್ ಇಂಡಿಯಾ ಕನ್ನಡ

“ಡಿಜೆ ಹಳ್ಳಿ ಘಟನೆಯ ಹೊಣೆಯನ್ನು ನೈಜವಾಗಿ ಸರ್ಕಾರವೇ ಹೊರಬೇಕು. ಇಂತಹ ವಿಚಾರವನ್ನೂ ನಿಭಾಯಿಸೋಕೆ ಆಗದಿದ್ದರೆ ಸರ್ಕಾರ ಯಾಕಿರಬೇಕು? ಪೈಗಂಬರ್ ಮುಹಮ್ಮದರ ಕುರಿತು ಅವಹೇಳನಕಾರಿ ಫೋಸ್ಟ್ ಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇಂತಹ ಪೋಸ್ಟ್ ಹಾಕುತ್ತಿದ್ದಂತೆ ಪೊಲೀಸರು ಯಾಕೆ ಕ್ರಮತೆಗೆದುಕೊಳ್ಳಲಿಲ್ಲ? ತಕ್ಷಣ ಕ್ರಮ ತೆಗೆದುಕೊಂಡಿದ್ದರೆ ಹೀಗಾಗುತ್ತಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ: ಸಿದ್ದರಾಮಯ್ಯ

ಪ್ರವಾದಿ ಬಗೆಗೆ ಕೆಟ್ಟ ಚಿತ್ರ ರಚಿಸಿ ಕೊಟ್ಟವರು ಯಾರು? ಪ್ರವಾದಿ ಪೈಗಂಬರ್ ಚಿತ್ರ ಕಳಿಸಿದವರು ಯಾರು? ಇದರ ಹಿಂದೆ ದೊಡ್ಡ ಪಿತೂರಿಯಿದೆ. ಘಟನೆ ನಡೆದಿರುವುದು ಸೂಕ್ಷ್ಮ ಪ್ರದೇಶದಲ್ಲಿ. ಪೊಲೀಸ್ ಠಾಣೆಯನ್ನೇ ರಕ್ಷಿಸಿಕೊಳ್ಳಲಾಗದವರು ನೀವು? ರಾಜ್ಯದ ಜನರನ್ನ ಹೇಗೆ ರಕ್ಷಿಸುತ್ತೀರ? ಗೃಹ ಸಚಿವರನ್ನ ಒಬ್ಬ ಕೋಮುವಾದಿ ಭೇಟಿಯಾಗಿದ್ದ. ಸಚಿವರು ಅವನ ಮೇಲಿನ ಕೇಸ್ ವಾಪಸ್ ಪಡೆಯುತ್ತೇವೆಂದಿದ್ದು ಏಕೆ? ಸಮಾಜದ ಸ್ವಾಸ್ಥ್ಯವನ್ನ ನಿಮ್ಮ ಸರ್ಕಾರ ಕಾಪಾಡಲು ಸಾಧ್ಯವೇ? ಎಂದು ಸಿದ್ದರಾಮಯ್ಯ ಹಲವಾರು ಮಹತ್ವದ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿಗೆ ಕಳುಹಿಸಿರುವ ಪತ್ರದ ಪೂರ್ಣಪಾಠ ಇಲ್ಲಿದೆ

ಸಂ:ವಿಪನಾ/ಪ/ /2020 ದಿನಾಂಕ: 18-08-2020

ಮಾನ್ಯ ಶ್ರೀ ಯಡಿಯೂರಪ್ಪ ರವರೆ,

ಬೆಂಗಳೂರಿನ ಕೆ.ಜೆ.ಹಳ್ಳಿ ಮತ್ತು ಡಿ.ಜಿ.ಹಳ್ಳಿ ವ್ಯಾಪ್ತಿಯಲ್ಲಿ ಆಗಸ್ಟ್ 11 ರಂದು ನಡೆದ ಘಟನೆಗಳಿಗೆ ಸರ್ಕಾರದ ವೈಫಲ್ಯವೇ ನೇರ ಕಾರಣ. ಗುಪ್ತಚರ ಇಲಾಖೆಯ ವೈಫಲ್ಯವೂ ಇದರಲ್ಲಿ ಎದ್ದು ಕಾಣುತ್ತಿದೆ. ಸರ್ಕಾರ ತನ್ನ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸುವುದು ಬಿಟ್ಟು ವಿರೋಧ ಪಕ್ಷವಾದ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಾ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಪ್ರಯತ್ನಿಸುತ್ತಿದೆ.

  • ಡಿ.ಜೆ.ಹಳ್ಳಿಯ ಘಟನೆಯ ನೈತಿಕ ಜವಾಬ್ದಾರಿಯನ್ನು ಸರ್ಕಾರವೇ ಹೊರಬೇಕು. ಆಡಳಿತ ಕೇಂದ್ರದ ಕೈಯಳತೆ ದೂರದಲ್ಲಿರುವ ಈ ಪ್ರದೇಶದಲ್ಲಾದ ಅನಾಹುತವನ್ನು ನಿಭಾಯಿಸಲು ಆಗಲಿಲ್ಲವೆಂದರೆ ಸರ್ಕಾರ ಯಾಕಿರಬೇಕು. ಪ್ರವಾದಿಯವರ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದರ ಕುರಿತು ದೂರು ಬಂದ ತಕ್ಷಣ ಪೊಲೀಸರು ಕ್ರಮ ಕೈಗೊಂಡಿದ್ದರೆ ಈ ಅನಾಹುತಕ್ಕೆ ಅವಕಾಶ ಇರುತ್ತಿರಲಿಲ್ಲ.
  • ಪ್ರವಾದಿಯವರ ಬಗೆಗೆ ಕೆಟ್ಟ ಚಿತ್ರ ರಚಿಸಿ ನವೀನ್ ಎಂಬ ಹುಡುಗನಿಗೆ ಕೊಟ್ಟವರಾರು? ಆ ಚಿತ್ರಗಳು ಸೋಷಿಯಲ್ ಮೀಡಿಯಾಗಳಿಗೆ ಬಿತ್ತರಿಸಲು ಕಾರಣರಾದವರು ಯಾರ್ಯಾರು ? ಇದರ ಹಿಂದೆ ದೊಡ್ಡ ಪಿತೂರಿ ಇದ್ದಂತಿದೆ. ಈ ಕುರಿತು ಸಮರ್ಪಕವಾದ ತನಿಖೆಯಾಗಬೇಕು.

  • ಪ್ರಾಮಾಣಿಕರು, ದಕ್ಷರು ಅನ್ನಿಸಿಕೊಂಡ ಹಲವು ಪೊಲೀಸ್ ಅಧಿಕಾರಿಗಳನ್ನು ‘ನಾನ್ ಎಕ್ಸಿಕ್ಯೂಟಿವ್’ ಹುದ್ದೆಗಳಲ್ಲಿ ಕೂರಿಸಿದ್ದೀರಿ. ಭ್ರಷ್ಟರು, ಅಸೂಕ್ಷ್ಮರು ಆದ ಹಲವರಿಗೆ ಆಯಕಟ್ಟಿನ ಹುದ್ದೆಗಳನ್ನು ನೀಡಲಾಗಿದೆ. ಹೀಗಾಗಿ ಸೂಕ್ಮವಾದ ಇಂಥ ಘಟನೆಗಳನ್ನು ನಿಯಂತ್ರಿಸಲು ಅಧಿಕಾರಿಗಳಿಗೆ ಸಾಧ್ಯವಾಗುತ್ತಿಲ್ಲ.
  • ಘಟನೆ ನಡೆದಿರುವುದು ಅತ್ಯಂತ ಸೂಕ್ಷ್ಮ ಪ್ರದೇಶದಲ್ಲಿ (ಈ ಹಿಂದೆಯೂ ಈ ಪ್ರದೇಶಗಳಲ್ಲಿ ಸಮಸ್ಯೆಗಳಾಗಿದ್ದವು) ಮತ್ತು ಘಟನೆಗೆ ಕಾರಣವಾದ ವಿಷಯವೂ ಅತ್ಯಂತ ಸೂಕ್ಷ್ಮವಾಗಿತ್ತು. ಇದನ್ನು ನಿರ್ಲಕ್ಷಿಸಲು ಕಾರಣವೇನು?
  • ಶಾಸಕರ ಮನೆಯನ್ನು, ಪೊಲೀಸ್ ಠಾಣೆಯನ್ನು ರಕ್ಷಿಸಿಕೊಳ್ಳಲಾಗದ ಸರ್ಕಾರದಿಂದ ರಾಜ್ಯದ ಜನರಿಗೆ ಯಾವ ರಕ್ಷಣೆಯನ್ನು ನೀಡಲು ಸಾಧ್ಯ? ಇದರ ಜವಾಬ್ದಾರಿಯನ್ನು ಸರ್ಕಾರ ಹೊರುವುದನ್ನು, ಬಿಟ್ಟು ತಲೆಕೆಟ್ಟ ಹುಡುಗರ ಮೇಲೆ ಹೊರಿಸಿ ತಮ್ಮ ಸರ್ಕಾರ ಅತ್ಯಂತ ಸಮರ್ಥವಾಗಿದೆ ಎಂದು ಹೇಳುವುದು ಅತ್ಯಂತ ದುಷ್ಟ ಮತ್ತು ನಿರ್ಲಜ್ಜ ರಾಜಕಾರಣದ ಪರಮಾವಧಿಯ ನಿಲುವು.

ಇದನ್ನೂ ಓದಿ: ಫೇಸ್‌ಬುಕ್ ಪ್ರಚೋದನೆ ಮತ್ತು ಗಲಭೆ ಎರಡೂ ಖಂಡನೀಯ; ಸಂಯಮದಿಂದ ವರ್ತಿಸಿ: ಸಿದ್ದರಾಮಯ್ಯ ಮನವಿ

  • ಗೃಹ ಸಚಿವರನ್ನು ಭೇಟಿಯಾದ ಕರಾವಳಿಯ ಕೋಮುವಾದಿಯೊಬ್ಬನಿಗೆ, ಸಚಿವರು ನಿಮ್ಮ ಮೇಲಿನ ಎಲ್ಲಾ ಪ್ರಕರಣ ವಾಪಸ್ಸು ತೆಗೆದುಕೊಳ್ಳುತ್ತೇವೆಂದು ಹೇಳುವ ಮಾತುಕತೆಯೊಂದು ಪತ್ರಿಕೆಗಳಲ್ಲಿ ವರದಿಯಾಗಿತ್ತು. ಅದು ನಿಜವೇ ಆಗಿದ್ದರೆ ಸಮಾಜದ ಸ್ವಾಸ್ಥ್ಯವನ್ನು ನಿಮ್ಮ ಸರ್ಕಾರ ಕಾಪಾಡಲು ಸಾಧ್ಯವೆ?

ಬೆಂಗಳೂರಿನಲ್ಲಿ ಮತ್ತೆ ಲಾಕ್‌ಡೌನ್ ಬೇಡವಾದರೆ ಸಹಕರಿಸಿ: ಯಡಿಯೂರಪ್ಪ

  • ನೀವು ಅಧಿಕಾರಕ್ಕೆ ಬಂದ ಮೇಲೆ ಎಷ್ಟು ಜನರನ್ನು ಕಮ್ಯುನಲ್ ಗೂಂಡಾಗಳೆಂದು ಗುರುತಿಸಿದ್ದೀರಿ? ಎಷ್ಟು ಜನರ ಮೇಲೆ ಪ್ರಕರಣಗಳನ್ನು ದಾಖಲಿಸಿ ಗಡಿಪಾರು ಮಾಡಿದ್ದೀರಿ? ಈ ಕಮ್ಯುನಲ್ ಚಟುವಟಿಕೆಗಳಲ್ಲಿ ತೊಡಗಿರುವ ಎಲ್ಲಾ ಸಂಘಟನೆಗಳನ್ನು ನಿಷೇಧಿಸುವ ತಾಕತ್ತನ್ನು ನೀವು ಪ್ರದರ್ಶಿಸಲು ಸಾಧ್ಯವೆ? ನಿಮ್ಮ ಕಡತದಲ್ಲಿನ ದಾಖಲೆಗಳ ಪ್ರಕಾರ ನಿಮ್ಮದೇ ಪಕ್ಷದ ಅಂಗ ಸಂಘಟನೆಗಳು ಕಮ್ಯುನಲ್ ಚಟುವಟಿಕೆಗಳಲ್ಲಿ ತೊಡಗಿ ಅಸಂಖ್ಯಾತ ಪ್ರಕರಣಗಳಿವೆ. ಈ ಎಲ್ಲರ ಮೇಲೆಯೂ ನಿರ್ದಾಕ್ಷಿಣ್ಯವಾಗಿ ಕ್ರಮವಹಿಸಿ ನಾವು ಈ ವಿಷಯದಲ್ಲಿ ನಿಮ್ಮ ಜೊತೆ ಇರುತ್ತೇವೆ.
  • ಹಿಂದೆ ಮುಂದೆ ನೋಡದೆ ಜನರನ್ನು ಧರ್ಮದ ಆಧಾರದ ಮೇಲೆ ದೊಂಬಿಯೆಬ್ಬಿಸಲು ಪ್ರಯತ್ನಿಸಿದ ಶೃಂಗೇರಿಯ ಜೀವರಾಜ್ ಅವರ ಮೇಲೂ ಪ್ರಕರಣ ದಾಖಲಿಸಿ ಕ್ರಮವಹಿಸಿ. ಶೃಂಗೇರಿಯಲ್ಲಿ ಆರೋಪಿ ಪತ್ತೆಯಾಗುವ ಮೊದಲೇ ಅಪರಾಧಿಗಳು ಯಾರು ಎಂದು ಬಿ.ಜೆ.ಪಿ. ತೀರ್ಮಾನಿಸಿತ್ತು. ಬಡ ತರಕಾರಿ ವ್ಯಾಪಾರಿಗಳು/ಬೀದಿ ಬದಿಯ ವ್ಯಾಪಾರಿಗಳೇ ಈ ಕೃತ್ಯ ಮಾಡಿರುವುದೆಂದು ಅವರ ತಲೆಗೆ ಅಪರಾಧವನ್ನು ಕಟ್ಟಲಾಗಿತ್ತು. ಮಸೀದಿಯಲ್ಲಿ ಸಿ.ಸಿ.ಟಿವಿಗಳು ಇರದಿದ್ದರೆ ಬಜರಂಗದಳದ ಮಾಜಿ ಕಾರ್ಯಕರ್ತನ ಬದಲಿಗೆ ಇನ್ಯಾರೋ ಇರುತ್ತಿದ್ದರು.
  • ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟ ಮಾಡಿದವರಿಂದ ನಷ್ಟ ವಸೂಲು ಮಾಡುವುದು ಒಳ್ಳೆಯ ವಿಚಾರವೇ. ಆದರೆ ಇದು ಒಂದು ಗುಂಪಿಗೆ, ಒಂದು ಘಟನೆಗೆ ಮಾತ್ರ ಸಂಬಂಧಿಸಿರಬಾರದು. ಹಾಗೆ ಮಾಡುವುದಾದರೆ ಪೂರ್ವಾನ್ವಯಗೊಳಿಸಬೇಕು. ಕಳೆದ ಮೂವತ್ತು ವರ್ಷಗಳಿಂದೀಚೆಗೆ ಕಮ್ಯುನಲ್ ಮತ್ತಿತರ ಗಲಭೆಗಳಲ್ಲಿ ಮಾಡಿರುವ ಹಾನಿಯ ನಷ್ಟವನ್ನು ಸಂಬಂಧಿಸಿದವರಿಂದ ವಸೂಲಿ ಮಾಡಬೇಕೆಂದು ಆಗ್ರಹಿಸುತ್ತೇನೆ.
  • ಆಡಳಿತ ಪಕ್ಷವೊಂದು ಸತ್ಯ ಶೋಧನಾ ತಂಡ ರಚಿಸುವುದು ಪ್ರಜಾಪ್ರಭುತ್ವದ ಭೀಕರ ಅಪಹಾಸ್ಯದಂತೆ ಕಾಣುತ್ತಿದೆ. ಆಡಳಿತ ಪಕ್ಷವೊಂದು ಸತ್ಯ ಶೋಧನೆ ಮಾಡುತ್ತೇನೆಂದು ಹೊರಟರೆ ಅದು ತನಿಖೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.
  • ನಿಮ್ಮ ಸರ್ಕಾರಕ್ಕೆ ಪೊಲೀಸರ ಮೇಲೆ ನಂಬಿಕೆ ಇಲ್ಲವೆ? ನಿಮ್ಮ ಅಧಿಕಾರಿಗಳ ಮೇಲೆ ನಂಬಿಕೆ ಇಲ್ಲದಿದ್ದರೆ ಅವರಿಗೆ ಜನರ ತೆರಿಗೆಯ ಹಣದಲ್ಲಿ ಸಂಬಳ, ಸಾರಿಗೆ ಮುಂತಾದ ಸವಲತ್ತುಗಳನ್ನು ಯಾಕೆ ಕೊಡತ್ತಿದ್ದೀರಿ? ಮುಲಾಜಿಲ್ಲದೆ ಅವರನ್ನು ಮನೆಗೆ ಕಳಿಸಿ.
  • ಘಟನೆಯಲ್ಲಿ ಎಸ್ಡಿಪಿಐ ಪಾತ್ರ ಇದೆ ಎಂದು ಹೇಳಲಾಗುತ್ತಿದೆ. ಯಾರೇ ತಪ್ಪು ಮಾಡಿದ್ದರೂ ಯಾವ ಸಂಘಟನೆಯೇ ತಪ್ಪು ಮಾಡಿದ್ದರೂ ಸಮರ್ಪಕವಾದ ತನಿಖೆ ನಡೆಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಸರ್ಕಾರವನ್ನು ಆಗ್ರಹಿಸುತ್ತೇನೆ.
  • ಈ ಘಟನೆಯ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕಾದರೆ ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿಗಳಿಂದಲೇ ತನಿಖೆ ನಡೆಸಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇನೆ.

ಓದಿ: ಬಿಎಸ್‌ವೈ ಪದಚ್ಯುತಿಗೆ RSS ನಾಯಕರು ಪ್ರಯತ್ನಿಸುತ್ತಿದ್ದಾರೆ: ಸಿದ್ದರಾಮಯ್ಯ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...