Homeಕರ್ನಾಟಕಪ್ರವಾದಿ ನಿಂದನೆ ಹಾಗೂ ಡಿಜೆ ಹಳ್ಳಿ ಗಲಭೆ ಪ್ರಕರಣ: ಸಿದ್ದರಾಮಯ್ಯನವರ 13 ಅಂಶಗಳ ಪತ್ರ -...

ಪ್ರವಾದಿ ನಿಂದನೆ ಹಾಗೂ ಡಿಜೆ ಹಳ್ಳಿ ಗಲಭೆ ಪ್ರಕರಣ: ಸಿದ್ದರಾಮಯ್ಯನವರ 13 ಅಂಶಗಳ ಪತ್ರ – ಉತ್ತರಿಸುವರೇ ಸಿಎಂ?

ಪ್ರವಾದಿ ನಿಂದನೆ ಮತ್ತು ಡಿಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಸರ್ಕಾರ ತನ್ನ ವಿಫಲತೆಯನ್ನು ಮುಚ್ಚಲು ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುತ್ತಿದೆ ಎಂದು ಸಿದ್ದರಾಮಯ್ಯ 13 ಅಂಶಗಳ ಪತ್ರವನ್ನು ಮುಖ್ಯಮಂತ್ರಿಗೆ ಬರೆದು ಪ್ರಶ್ನೆ ಮಾಡಿದ್ದಾರೆ.

- Advertisement -
- Advertisement -

ಪ್ರವಾದಿ ನಿಂದನೆ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸರ್ಕಾರ ಮತ್ತು ಗುಪ್ತಚರ ಇಲಾಖೆಯ ವೈಫಲ್ಯವೇ ಕಾರಣ. ನಿಮ್ಮ ವಿಫಲತೆಯನ್ನು ಮುಚ್ಚಲು ಕಾಂಗ್ರೆಸ್ ಪಕ್ಷದ ಮೇಲೆ ಏಕೆ ಗೂಬೆ ಕೂರಿಸುತ್ತೀರಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ಮುಖ್ಯಮಂತ್ರಿಗೆ ಬಿ. ಎಸ್.ಯಡಿಯೂರಪ್ಪನವರಿಗೆ ಪತ್ರ ಬರೆದು ಪ್ರಶ್ನೆ ಮಾಡಿದ್ದಾರೆ.

ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪನವರಿಗೆ 13 ಅಂಶಗಳನ್ನೊಳಗೊಂಡ ಪತ್ರವನ್ನು ಬರೆದಿರುವ ಸಿದ್ದರಾಮಯ್ಯ, “ಬೆಂಗಳೂರಿನ ಕೆಜೆ ಹಳ್ಳಿ ಮತ್ತು ಡಿಜಿ ಹಳ್ಳಿ ವ್ಯಾಪ್ತಿಯಲ್ಲಿ ಆಗಸ್ಟ್ 11 ರಂದು ನಡೆದ ಘಟನೆಗಳಿಗೆ ಸರ್ಕಾರದ ವೈಫಲ್ಯವೇ ನೇರ ಕಾರಣ. ಈ ಗಲಭೆಯಲ್ಲಿ ಗುಪ್ತಚರ ಇಲಾಖೆಯ ವೈಫಲ್ಯ ಎದ್ದು ಕಾಣುತ್ತಿದೆ. ಸರ್ಕಾರ ತನ್ನ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸುವಲ್ಲಿ ವಿಫಲಾಗಿದೆ. ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ಪಕ್ಷದ ಮೇಲೆ ಗೂಬೆ ಕೂರಿಸುತ್ತಿದೆ” ಎಂದು ಪತ್ರದಲ್ಲಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಡಿಜೆ ಹಳ್ಳಿ ಫೇಸ್‌‌ಬುಕ್ ಪ್ರಚೋದನೆ ಮತ್ತು ಗುಂಪು ಗಲಭೆ: ನವೀನ್ ಮತ್ತು 110 ಜನರ ಬಂಧನ - ಶಾಂತಿ ಕಾಪಾಡಲು ಮುಖಂಡರ ಮನವಿ
ಫೋಟೋ ಕೃಪೆ: ಒನ್ ಇಂಡಿಯಾ ಕನ್ನಡ

“ಡಿಜೆ ಹಳ್ಳಿ ಘಟನೆಯ ಹೊಣೆಯನ್ನು ನೈಜವಾಗಿ ಸರ್ಕಾರವೇ ಹೊರಬೇಕು. ಇಂತಹ ವಿಚಾರವನ್ನೂ ನಿಭಾಯಿಸೋಕೆ ಆಗದಿದ್ದರೆ ಸರ್ಕಾರ ಯಾಕಿರಬೇಕು? ಪೈಗಂಬರ್ ಮುಹಮ್ಮದರ ಕುರಿತು ಅವಹೇಳನಕಾರಿ ಫೋಸ್ಟ್ ಹಾಕಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಇಂತಹ ಪೋಸ್ಟ್ ಹಾಕುತ್ತಿದ್ದಂತೆ ಪೊಲೀಸರು ಯಾಕೆ ಕ್ರಮತೆಗೆದುಕೊಳ್ಳಲಿಲ್ಲ? ತಕ್ಷಣ ಕ್ರಮ ತೆಗೆದುಕೊಂಡಿದ್ದರೆ ಹೀಗಾಗುತ್ತಿರಲಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ: ಸಿದ್ದರಾಮಯ್ಯ

ಪ್ರವಾದಿ ಬಗೆಗೆ ಕೆಟ್ಟ ಚಿತ್ರ ರಚಿಸಿ ಕೊಟ್ಟವರು ಯಾರು? ಪ್ರವಾದಿ ಪೈಗಂಬರ್ ಚಿತ್ರ ಕಳಿಸಿದವರು ಯಾರು? ಇದರ ಹಿಂದೆ ದೊಡ್ಡ ಪಿತೂರಿಯಿದೆ. ಘಟನೆ ನಡೆದಿರುವುದು ಸೂಕ್ಷ್ಮ ಪ್ರದೇಶದಲ್ಲಿ. ಪೊಲೀಸ್ ಠಾಣೆಯನ್ನೇ ರಕ್ಷಿಸಿಕೊಳ್ಳಲಾಗದವರು ನೀವು? ರಾಜ್ಯದ ಜನರನ್ನ ಹೇಗೆ ರಕ್ಷಿಸುತ್ತೀರ? ಗೃಹ ಸಚಿವರನ್ನ ಒಬ್ಬ ಕೋಮುವಾದಿ ಭೇಟಿಯಾಗಿದ್ದ. ಸಚಿವರು ಅವನ ಮೇಲಿನ ಕೇಸ್ ವಾಪಸ್ ಪಡೆಯುತ್ತೇವೆಂದಿದ್ದು ಏಕೆ? ಸಮಾಜದ ಸ್ವಾಸ್ಥ್ಯವನ್ನ ನಿಮ್ಮ ಸರ್ಕಾರ ಕಾಪಾಡಲು ಸಾಧ್ಯವೇ? ಎಂದು ಸಿದ್ದರಾಮಯ್ಯ ಹಲವಾರು ಮಹತ್ವದ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ಸಿದ್ದರಾಮಯ್ಯ ಮುಖ್ಯಮಂತ್ರಿಗೆ ಕಳುಹಿಸಿರುವ ಪತ್ರದ ಪೂರ್ಣಪಾಠ ಇಲ್ಲಿದೆ

ಸಂ:ವಿಪನಾ/ಪ/ /2020 ದಿನಾಂಕ: 18-08-2020

ಮಾನ್ಯ ಶ್ರೀ ಯಡಿಯೂರಪ್ಪ ರವರೆ,

ಬೆಂಗಳೂರಿನ ಕೆ.ಜೆ.ಹಳ್ಳಿ ಮತ್ತು ಡಿ.ಜಿ.ಹಳ್ಳಿ ವ್ಯಾಪ್ತಿಯಲ್ಲಿ ಆಗಸ್ಟ್ 11 ರಂದು ನಡೆದ ಘಟನೆಗಳಿಗೆ ಸರ್ಕಾರದ ವೈಫಲ್ಯವೇ ನೇರ ಕಾರಣ. ಗುಪ್ತಚರ ಇಲಾಖೆಯ ವೈಫಲ್ಯವೂ ಇದರಲ್ಲಿ ಎದ್ದು ಕಾಣುತ್ತಿದೆ. ಸರ್ಕಾರ ತನ್ನ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸುವುದು ಬಿಟ್ಟು ವಿರೋಧ ಪಕ್ಷವಾದ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಾ ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಪ್ರಯತ್ನಿಸುತ್ತಿದೆ.

  • ಡಿ.ಜೆ.ಹಳ್ಳಿಯ ಘಟನೆಯ ನೈತಿಕ ಜವಾಬ್ದಾರಿಯನ್ನು ಸರ್ಕಾರವೇ ಹೊರಬೇಕು. ಆಡಳಿತ ಕೇಂದ್ರದ ಕೈಯಳತೆ ದೂರದಲ್ಲಿರುವ ಈ ಪ್ರದೇಶದಲ್ಲಾದ ಅನಾಹುತವನ್ನು ನಿಭಾಯಿಸಲು ಆಗಲಿಲ್ಲವೆಂದರೆ ಸರ್ಕಾರ ಯಾಕಿರಬೇಕು. ಪ್ರವಾದಿಯವರ ಬಗ್ಗೆ ಸಾಮಾಜಿಕ ಜಾಲ ತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದರ ಕುರಿತು ದೂರು ಬಂದ ತಕ್ಷಣ ಪೊಲೀಸರು ಕ್ರಮ ಕೈಗೊಂಡಿದ್ದರೆ ಈ ಅನಾಹುತಕ್ಕೆ ಅವಕಾಶ ಇರುತ್ತಿರಲಿಲ್ಲ.
  • ಪ್ರವಾದಿಯವರ ಬಗೆಗೆ ಕೆಟ್ಟ ಚಿತ್ರ ರಚಿಸಿ ನವೀನ್ ಎಂಬ ಹುಡುಗನಿಗೆ ಕೊಟ್ಟವರಾರು? ಆ ಚಿತ್ರಗಳು ಸೋಷಿಯಲ್ ಮೀಡಿಯಾಗಳಿಗೆ ಬಿತ್ತರಿಸಲು ಕಾರಣರಾದವರು ಯಾರ್ಯಾರು ? ಇದರ ಹಿಂದೆ ದೊಡ್ಡ ಪಿತೂರಿ ಇದ್ದಂತಿದೆ. ಈ ಕುರಿತು ಸಮರ್ಪಕವಾದ ತನಿಖೆಯಾಗಬೇಕು.

  • ಪ್ರಾಮಾಣಿಕರು, ದಕ್ಷರು ಅನ್ನಿಸಿಕೊಂಡ ಹಲವು ಪೊಲೀಸ್ ಅಧಿಕಾರಿಗಳನ್ನು ‘ನಾನ್ ಎಕ್ಸಿಕ್ಯೂಟಿವ್’ ಹುದ್ದೆಗಳಲ್ಲಿ ಕೂರಿಸಿದ್ದೀರಿ. ಭ್ರಷ್ಟರು, ಅಸೂಕ್ಷ್ಮರು ಆದ ಹಲವರಿಗೆ ಆಯಕಟ್ಟಿನ ಹುದ್ದೆಗಳನ್ನು ನೀಡಲಾಗಿದೆ. ಹೀಗಾಗಿ ಸೂಕ್ಮವಾದ ಇಂಥ ಘಟನೆಗಳನ್ನು ನಿಯಂತ್ರಿಸಲು ಅಧಿಕಾರಿಗಳಿಗೆ ಸಾಧ್ಯವಾಗುತ್ತಿಲ್ಲ.
  • ಘಟನೆ ನಡೆದಿರುವುದು ಅತ್ಯಂತ ಸೂಕ್ಷ್ಮ ಪ್ರದೇಶದಲ್ಲಿ (ಈ ಹಿಂದೆಯೂ ಈ ಪ್ರದೇಶಗಳಲ್ಲಿ ಸಮಸ್ಯೆಗಳಾಗಿದ್ದವು) ಮತ್ತು ಘಟನೆಗೆ ಕಾರಣವಾದ ವಿಷಯವೂ ಅತ್ಯಂತ ಸೂಕ್ಷ್ಮವಾಗಿತ್ತು. ಇದನ್ನು ನಿರ್ಲಕ್ಷಿಸಲು ಕಾರಣವೇನು?
  • ಶಾಸಕರ ಮನೆಯನ್ನು, ಪೊಲೀಸ್ ಠಾಣೆಯನ್ನು ರಕ್ಷಿಸಿಕೊಳ್ಳಲಾಗದ ಸರ್ಕಾರದಿಂದ ರಾಜ್ಯದ ಜನರಿಗೆ ಯಾವ ರಕ್ಷಣೆಯನ್ನು ನೀಡಲು ಸಾಧ್ಯ? ಇದರ ಜವಾಬ್ದಾರಿಯನ್ನು ಸರ್ಕಾರ ಹೊರುವುದನ್ನು, ಬಿಟ್ಟು ತಲೆಕೆಟ್ಟ ಹುಡುಗರ ಮೇಲೆ ಹೊರಿಸಿ ತಮ್ಮ ಸರ್ಕಾರ ಅತ್ಯಂತ ಸಮರ್ಥವಾಗಿದೆ ಎಂದು ಹೇಳುವುದು ಅತ್ಯಂತ ದುಷ್ಟ ಮತ್ತು ನಿರ್ಲಜ್ಜ ರಾಜಕಾರಣದ ಪರಮಾವಧಿಯ ನಿಲುವು.

ಇದನ್ನೂ ಓದಿ: ಫೇಸ್‌ಬುಕ್ ಪ್ರಚೋದನೆ ಮತ್ತು ಗಲಭೆ ಎರಡೂ ಖಂಡನೀಯ; ಸಂಯಮದಿಂದ ವರ್ತಿಸಿ: ಸಿದ್ದರಾಮಯ್ಯ ಮನವಿ

  • ಗೃಹ ಸಚಿವರನ್ನು ಭೇಟಿಯಾದ ಕರಾವಳಿಯ ಕೋಮುವಾದಿಯೊಬ್ಬನಿಗೆ, ಸಚಿವರು ನಿಮ್ಮ ಮೇಲಿನ ಎಲ್ಲಾ ಪ್ರಕರಣ ವಾಪಸ್ಸು ತೆಗೆದುಕೊಳ್ಳುತ್ತೇವೆಂದು ಹೇಳುವ ಮಾತುಕತೆಯೊಂದು ಪತ್ರಿಕೆಗಳಲ್ಲಿ ವರದಿಯಾಗಿತ್ತು. ಅದು ನಿಜವೇ ಆಗಿದ್ದರೆ ಸಮಾಜದ ಸ್ವಾಸ್ಥ್ಯವನ್ನು ನಿಮ್ಮ ಸರ್ಕಾರ ಕಾಪಾಡಲು ಸಾಧ್ಯವೆ?

ಬೆಂಗಳೂರಿನಲ್ಲಿ ಮತ್ತೆ ಲಾಕ್‌ಡೌನ್ ಬೇಡವಾದರೆ ಸಹಕರಿಸಿ: ಯಡಿಯೂರಪ್ಪ

  • ನೀವು ಅಧಿಕಾರಕ್ಕೆ ಬಂದ ಮೇಲೆ ಎಷ್ಟು ಜನರನ್ನು ಕಮ್ಯುನಲ್ ಗೂಂಡಾಗಳೆಂದು ಗುರುತಿಸಿದ್ದೀರಿ? ಎಷ್ಟು ಜನರ ಮೇಲೆ ಪ್ರಕರಣಗಳನ್ನು ದಾಖಲಿಸಿ ಗಡಿಪಾರು ಮಾಡಿದ್ದೀರಿ? ಈ ಕಮ್ಯುನಲ್ ಚಟುವಟಿಕೆಗಳಲ್ಲಿ ತೊಡಗಿರುವ ಎಲ್ಲಾ ಸಂಘಟನೆಗಳನ್ನು ನಿಷೇಧಿಸುವ ತಾಕತ್ತನ್ನು ನೀವು ಪ್ರದರ್ಶಿಸಲು ಸಾಧ್ಯವೆ? ನಿಮ್ಮ ಕಡತದಲ್ಲಿನ ದಾಖಲೆಗಳ ಪ್ರಕಾರ ನಿಮ್ಮದೇ ಪಕ್ಷದ ಅಂಗ ಸಂಘಟನೆಗಳು ಕಮ್ಯುನಲ್ ಚಟುವಟಿಕೆಗಳಲ್ಲಿ ತೊಡಗಿ ಅಸಂಖ್ಯಾತ ಪ್ರಕರಣಗಳಿವೆ. ಈ ಎಲ್ಲರ ಮೇಲೆಯೂ ನಿರ್ದಾಕ್ಷಿಣ್ಯವಾಗಿ ಕ್ರಮವಹಿಸಿ ನಾವು ಈ ವಿಷಯದಲ್ಲಿ ನಿಮ್ಮ ಜೊತೆ ಇರುತ್ತೇವೆ.
  • ಹಿಂದೆ ಮುಂದೆ ನೋಡದೆ ಜನರನ್ನು ಧರ್ಮದ ಆಧಾರದ ಮೇಲೆ ದೊಂಬಿಯೆಬ್ಬಿಸಲು ಪ್ರಯತ್ನಿಸಿದ ಶೃಂಗೇರಿಯ ಜೀವರಾಜ್ ಅವರ ಮೇಲೂ ಪ್ರಕರಣ ದಾಖಲಿಸಿ ಕ್ರಮವಹಿಸಿ. ಶೃಂಗೇರಿಯಲ್ಲಿ ಆರೋಪಿ ಪತ್ತೆಯಾಗುವ ಮೊದಲೇ ಅಪರಾಧಿಗಳು ಯಾರು ಎಂದು ಬಿ.ಜೆ.ಪಿ. ತೀರ್ಮಾನಿಸಿತ್ತು. ಬಡ ತರಕಾರಿ ವ್ಯಾಪಾರಿಗಳು/ಬೀದಿ ಬದಿಯ ವ್ಯಾಪಾರಿಗಳೇ ಈ ಕೃತ್ಯ ಮಾಡಿರುವುದೆಂದು ಅವರ ತಲೆಗೆ ಅಪರಾಧವನ್ನು ಕಟ್ಟಲಾಗಿತ್ತು. ಮಸೀದಿಯಲ್ಲಿ ಸಿ.ಸಿ.ಟಿವಿಗಳು ಇರದಿದ್ದರೆ ಬಜರಂಗದಳದ ಮಾಜಿ ಕಾರ್ಯಕರ್ತನ ಬದಲಿಗೆ ಇನ್ಯಾರೋ ಇರುತ್ತಿದ್ದರು.
  • ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟ ಮಾಡಿದವರಿಂದ ನಷ್ಟ ವಸೂಲು ಮಾಡುವುದು ಒಳ್ಳೆಯ ವಿಚಾರವೇ. ಆದರೆ ಇದು ಒಂದು ಗುಂಪಿಗೆ, ಒಂದು ಘಟನೆಗೆ ಮಾತ್ರ ಸಂಬಂಧಿಸಿರಬಾರದು. ಹಾಗೆ ಮಾಡುವುದಾದರೆ ಪೂರ್ವಾನ್ವಯಗೊಳಿಸಬೇಕು. ಕಳೆದ ಮೂವತ್ತು ವರ್ಷಗಳಿಂದೀಚೆಗೆ ಕಮ್ಯುನಲ್ ಮತ್ತಿತರ ಗಲಭೆಗಳಲ್ಲಿ ಮಾಡಿರುವ ಹಾನಿಯ ನಷ್ಟವನ್ನು ಸಂಬಂಧಿಸಿದವರಿಂದ ವಸೂಲಿ ಮಾಡಬೇಕೆಂದು ಆಗ್ರಹಿಸುತ್ತೇನೆ.
  • ಆಡಳಿತ ಪಕ್ಷವೊಂದು ಸತ್ಯ ಶೋಧನಾ ತಂಡ ರಚಿಸುವುದು ಪ್ರಜಾಪ್ರಭುತ್ವದ ಭೀಕರ ಅಪಹಾಸ್ಯದಂತೆ ಕಾಣುತ್ತಿದೆ. ಆಡಳಿತ ಪಕ್ಷವೊಂದು ಸತ್ಯ ಶೋಧನೆ ಮಾಡುತ್ತೇನೆಂದು ಹೊರಟರೆ ಅದು ತನಿಖೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ.
  • ನಿಮ್ಮ ಸರ್ಕಾರಕ್ಕೆ ಪೊಲೀಸರ ಮೇಲೆ ನಂಬಿಕೆ ಇಲ್ಲವೆ? ನಿಮ್ಮ ಅಧಿಕಾರಿಗಳ ಮೇಲೆ ನಂಬಿಕೆ ಇಲ್ಲದಿದ್ದರೆ ಅವರಿಗೆ ಜನರ ತೆರಿಗೆಯ ಹಣದಲ್ಲಿ ಸಂಬಳ, ಸಾರಿಗೆ ಮುಂತಾದ ಸವಲತ್ತುಗಳನ್ನು ಯಾಕೆ ಕೊಡತ್ತಿದ್ದೀರಿ? ಮುಲಾಜಿಲ್ಲದೆ ಅವರನ್ನು ಮನೆಗೆ ಕಳಿಸಿ.
  • ಘಟನೆಯಲ್ಲಿ ಎಸ್ಡಿಪಿಐ ಪಾತ್ರ ಇದೆ ಎಂದು ಹೇಳಲಾಗುತ್ತಿದೆ. ಯಾರೇ ತಪ್ಪು ಮಾಡಿದ್ದರೂ ಯಾವ ಸಂಘಟನೆಯೇ ತಪ್ಪು ಮಾಡಿದ್ದರೂ ಸಮರ್ಪಕವಾದ ತನಿಖೆ ನಡೆಸಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕೆಂದು ಸರ್ಕಾರವನ್ನು ಆಗ್ರಹಿಸುತ್ತೇನೆ.
  • ಈ ಘಟನೆಯ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕಾದರೆ ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿಗಳಿಂದಲೇ ತನಿಖೆ ನಡೆಸಬೇಕು ಎಂದು ಸರ್ಕಾರವನ್ನು ಒತ್ತಾಯಿಸುತ್ತೇನೆ.

ಓದಿ: ಬಿಎಸ್‌ವೈ ಪದಚ್ಯುತಿಗೆ RSS ನಾಯಕರು ಪ್ರಯತ್ನಿಸುತ್ತಿದ್ದಾರೆ: ಸಿದ್ದರಾಮಯ್ಯ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...