Homeಮುಖಪುಟಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗು: ಚುಚ್ಚು ಮದ್ದಿಗೆ ತೆರಿಗೆ ವಿನಾಯಿತಿ ನೀಡುವಂತೆ ಪ್ರಧಾನಿಗೆ ಸಿಎಂ ಪತ್ರ

ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗು: ಚುಚ್ಚು ಮದ್ದಿಗೆ ತೆರಿಗೆ ವಿನಾಯಿತಿ ನೀಡುವಂತೆ ಪ್ರಧಾನಿಗೆ ಸಿಎಂ ಪತ್ರ

- Advertisement -
- Advertisement -

ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವಿನ ಚಿಕಿತ್ಸೆಗಾಗಿ ಚುಚ್ಚುಮದ್ದನ್ನು ಆಮದು ಮಾಡಿಕೊಳ್ಳಬೇಕಿದ್ದು ಚುಚ್ಚು ಮದ್ದಿನ ಆಮದು ತೆರಿಗೆಯನ್ನು ಮನ್ನಾ ಮಾಡುವಂತೆ ಮತ್ತು ಆರ್ಥಿಕವಾಗಿ ಸಹಾಯ ಮಾಡುವಂತೆ ಸಿದ್ದರಾಮಯ್ಯ ಅವರು ಪ್ರಧಾನಿಗೆ ಪತ್ರ ಬರೆದಿದ್ದಾರೆ.

ಕರ್ನಾಟಕದ 15 ತಿಂಗಳ ಮೌರ್ಯ ಎಂಬ ಪುಟ್ಟ ಕಂದ ‘ಸ್ಪೈನಲ್ ಮಸ್ಕ್ಯುಲರ್ ಅಟ್ರೋಪಿ’ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾನೆ. ಈ ಮಗುವಿನ ಖಾಯಿಲೆಯನ್ನು ಗುಣಪಡಿಸಬಹುದಾದ ಝೋಲ್ಗೆನ್‌ಸ್ಮ ಎಂಬ ಚುಚ್ಚುಮದ್ದನ್ನು ವಿದೇಶದಿಂದ ಆಮದು ಮಾಡಿಕೊಳ್ಳಬೇಕಾಗಿದೆ. ಅದರ ಬೆಲೆ ರೂ.17.5 ಕೋಟಿ ಇದೆ. ಕೇಂದ್ರ ಸರ್ಕಾರವು ಇದನ್ನು ಮಾನವೀಯ ನೆಲೆಗಟ್ಟಿನಲ್ಲಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಆಮದು ಸುಂಕದಿಂದ ವಿನಾಯಿತಿ ನೀಡುವ ಮೂಲಕ ಕರುನಾಡಿನ ಪುಟ್ಟ ಕಂದನ ಪ್ರಾಣ ಉಳಿಸಲು ನೆರವಾಗಬೇಕು ಎಂದು ಸಿದ್ದರಾಮಯ್ಯ ಅವರು ಮನವಿ ಮಾಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ, ನಮ್ಮ ರಾಜ್ಯದ ಚಿಕ್ಕ ಮಗುವಿಗೆ ಸಂಬಂಧಿಸಿದ ಒಂದು ಪ್ರಮುಖ ವಿಚಾರವನ್ನು ನಿಮ್ಮ ಮುಂದೆ ಇಡುತ್ತಿದ್ದೇನೆ. ಕರ್ನಾಟಕದ ಮೌರ್ಯ ಎಂಬ 15 ತಿಂಗಳ ಬಾಲಕ ಸ್ಪೈನಲ್ ಮಸ್ಕ್ಯುಲರ್ ಅಟ್ರೋಫಿ ಎಂಬ ಅಪರೂಪದ ಕಾಯಿಲೆಯಿಂದ ಬಳಲುತ್ತಿದ್ದಾನೆ. ಬಾಲಕನಿಗೆ ‘ಝೋಲ್ಗೆನ್ಸ್ಮಾ’ ಎಂಬ ದುಬಾರಿ ಚುಚ್ಚುಮದ್ದನ್ನು ನೀಡಬೇಕು ಎಂದು ವೈದ್ಯರು ತಿಳಿಸಿದ್ದಾರೆ.

ಈ ಔಷಧಿಯ ವೆಚ್ಚವು ಸುಮಾರು 17.5 ಕೋಟಿ ರೂ.ಗಳಷ್ಟಿದೆ. ಈ ಚಿಕಿತ್ಸೆಯನ್ನು ನೀಡಲು ಬಾಲಕನ ಕುಟುಂಬವು ಆರ್ಥಿಕ ಸಮಸ್ಯೆ ಎದುರಿಸುತ್ತಿದೆ. ಔಷಧದ ಬೆಲೆಯೇ ಅಗಾಧವಾಗಿದ್ದರೆ, ಆಮದು ತೆರಿಗೆಗಳು ಕೂಡ ಗಣನೀಯವಾಗಿ ಹೆಚ್ಚಳವಾಗುತ್ತದೆ. ಆರ್ಥಿಕ ಹೊರೆಯಿಂದ ಈ ಜೀವ ಉಳಿಸುವ ಔಷಧಿಯನ್ನು ಪಡೆಯಲು ಕುಟುಂಬವು ಹೆಣಗಾಡುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತ ಪತ್ರವನ್ನು ಸಿಎಂ ಎಕ್ಸ್‌ನಲ್ಲಿ ಹಂಚಿಕೊಂಡಿದ್ದು, ಅ.27ರಂದು ಪತ್ರವನ್ನು ಬರೆಯಲಾಗಿದೆ. ಪತ್ರದಲ್ಲಿ ಮಗುವಿನ ಚಿಕಿತ್ಸೆಗೆ ಅಗತ್ಯವಿರುವ ಝೋಲ್ಗೆನ್ಸ್ಮಾ ಮೇಲಿನ ಆಮದು ತೆರಿಗೆಗಳನ್ನು ಮನ್ನಾ ಮಾಡಲು ಹಣಕಾಸು ಸಚಿವಾಲಯಕ್ಕೆ ನಿರ್ದೇಶನ ನೀಡುವಂತೆ ಮೋದಿಯವರಿಗೆ ಮನವಿ ಮಾಡಲಾಗಿದೆ. ಇದಲ್ಲದೆ ಚುಚ್ಚುಮದ್ದಿನ ಖರೀದಿಗೆ ಸಹಾಯ ಮಾಡಲು ಪಿಎಂ ಕೇರ್ಸ್ ನಿಧಿಯಿಂದ ಹಣಕಾಸಿನ ನೆರವು ನೀಡುವಂತೆ ಸಿಎಂ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಈ ಸಹಾಯ ಮಗುವಿನ ಕುಟುಂಬದ ಮೇಲಿನ ಆರ್ಥಿಕ ಹೊರೆಯನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ.  ಮಕ್ಕಳ ಆರೋಗ್ಯ ಮತ್ತು ಯೋಗಕ್ಷೇಮವನ್ನು ಖಾತರಿಪಡಿಸುವಲ್ಲಿ ನಮ್ಮ ರಾಷ್ಟ್ರದ ಬದ್ಧತೆಯನ್ನು ಎತ್ತಿತೋರಿಸುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನು ಓದಿ: ಕೇರಳ: ಸಿಎಂ ಪಿಣರಾಯ್‌ ವಿಜಯನ್‌ಗೆ ಬೆದರಿಕೆ ಕರೆ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...