Homeಕರ್ನಾಟಕನೆರೆ ಸಂತ್ರಸ್ತರಿಗೆ ಕೂಡಲೇ ಪರಿಹಾರ ಬಿಡುಗಡೆ ಮಾಡಿ: ಸಿಎಂಗೆ ಸಿದ್ದರಾಮಯ್ಯ ಪತ್ರ

ನೆರೆ ಸಂತ್ರಸ್ತರಿಗೆ ಕೂಡಲೇ ಪರಿಹಾರ ಬಿಡುಗಡೆ ಮಾಡಿ: ಸಿಎಂಗೆ ಸಿದ್ದರಾಮಯ್ಯ ಪತ್ರ

"ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಕೂಡಲೇ ಪರಿಹಾರ ಬಿಡುಗಡೆ ಮಾಡಿಸಬೇಕು"

- Advertisement -
- Advertisement -

’ನೆರೆಯಿಂದ ಹಾನಿಗೆ ಒಳಗಾಗಿರುವ ಜಿಲ್ಲೆಗಳಲ್ಲಿ ಮನೆ, ಬೆಳೆ, ಜಾನುವಾರು ಕಳೆದುಕೊಂಡ ಸಂತ್ರಸ್ತರಿಗೆ ಕೂಡಲೇ ಸೂಕ್ತ ಪರಿಹಾರ ಬಿಡುಗಡೆ ಮಾಡಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

“ಈ ವರ್ಷದ ಜುಲೈ 26 ಮತ್ತು 27 ರಂದು ಬಾಗಲಕೋಟೆ, ಬೆಳಗಾವಿ, ಗದಗ ಜಿಲ್ಲೆಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಹಾಗೂ ಆಗಸ್ಟ್ 2 ರಂದು ಉತ್ತರ ಕನ್ನಡ ಜಿಲ್ಲೆಯ ಹಲವಾರು ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದಾಗಿ ಭೇಟಿ ನೀಡಿದ್ದೆ. ಜುಲೈ 22 ರಿಂದ 26 ರ ವರೆಗೆ ಬಿದ್ದ ಭಾರಿ ಪ್ರಮಾಣದ ಮಳೆ ಈ ಜಿಲ್ಲೆಗಳಲ್ಲಿ ತೀವ್ರ ಸ್ವರೂಪದ ಅನಾಹುತಗಳನ್ನು ಸೃಷ್ಟಿಸಿದೆ. ಸಹಸ್ರಾರು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನ–ಜಾನವಾರುಗಳು, ಮನೆಗಳು ಹಾನಿಗೊಳಗಾಗಿವೆ. ಮನೆಯೊಳಗಿದ್ದ ಪಾತ್ರೆ-ಪಗಡೆ ಕೊಚ್ಚಿಕೊಂಡು ಹೋಗಿವೆ. ಒಟ್ಟಾರೆ ಪರಿಸ್ಥಿತಿಯಲ್ಲಿ ಉಣ್ಣಲು ಅನ್ನ ಇಲ್ಲ, ಉಡಲು ಬಟ್ಟೆ ಇಲ್ಲ, ಉಳಿಯಲು ಸೂರಿಲ್ಲ, ಕುಡಿಯಲು ನೀರಿಲ್ಲ ಎನ್ನುವ ಪರಿಸ್ಥಿತಿ ಇರುವುದನ್ನು ನಾನು ಕಣ್ಣಾರೆ ಕಂಡಿದ್ದೇನೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

“ಮನೆಯೊಳಗಿದ್ದ ಪಾತ್ರೆ ಪಗಡೆ, ಬಟ್ಟೆಗಳು, ಮಕ್ಕಳ ಶಾಲಾ ಬ್ಯಾಗು, ಪುಸ್ತಕಗಳು, ದವಸ ಧಾನ್ಯಗಳು, ಟಿವಿ, ಫ್ರಿಡ್ಜ್, ಮಿಕ್ಸರ್, ಗ್ಯಾಸ್ ಸಿಲಿಂಡರ್‌ಗಳ ಸಮೇತ ನಿತ್ಯ ಬಳಕೆಯ ವಸ್ತುಗಳು ಕೊಚ್ಚಿಕೊಂಡು ಹೋಗಿವೆ. ಮನೆಯೊಳಗೆ ನುಗ್ಗಿದ ನೀರು ನೂರಾರು ಮನೆಗಳನ್ನು ಹಾನಿ ಮಾಡಿದೆ. ಪ್ರವಾಹದಿಂದ ಕೊಚ್ಚಿ ಬಂದ ಮಣ್ಣು, ಕೆಸರು ತುಂಬಿಕೊಂಡು ಸಾವಿರಾರು ಮನೆಗಳನ್ನು ಮುಚ್ಚಿ ಹಾಕಿದೆ. ಮಕ್ಕಳು ಮರಿಗಳಾದಿಯಾಗಿ ಎಲ್ಲರ ಆರೋಗ್ಯದ ಬಗ್ಗೆಯೂ ತುರ್ತು ಗಮನ ಹರಿಸಬೇಕಾದ, ಪೌಷ್ಠಿಕ ಆಹಾರ ಒದಗಿಸುವ ನಿಟ್ಟಿನಲ್ಲಿ ತಕ್ಷಣ ಕ್ರಮ ಜರುಗಿಸಬೇಕಾದ ಅಗತ್ಯವಿದೆ” ಎಂದು ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.

ಇದನ್ನೂ ಓದಿ: ‘ಬಾರ್‌‌’ ಸಿಟಿ ರವಿಯ ಸಂಸ್ಕೃತಿ: ಸಿದ್ದರಾಮಯ್ಯ

“ಭತ್ತದ ಗದ್ದೆಗಳು, ತೋಟದ ಬೆಳೆಗಳು ನೀರಲ್ಲಿ ಕೊಚ್ಚಿ ಹೋಗಿವೆ, ನೀರಲ್ಲಿ ಮುಳುಗಿ ಕೊಳೆತು ಹೋಗಿವೆ. ದನದ ಕೊಟ್ಟಿಗೆಗಳು ಜಲಾವೃತ ಆಗಿರುವುದರಿಂದ ಸಂಗ್ರಹಿಸಿದ್ದ ಮೇವು ನೀರಿನಲ್ಲಿ ಕೊಚ್ಚಿ ಹೋಗಿ ಮೇವಿಗೂ ತತ್ವಾರ ಬಂದಿದೆ. 2019 ರಿಂದ 2021 ರ ವರೆಗೆ ಸತತವಾಗಿ ಈ ಜಿಲ್ಲೆಗಳು ಮೂರು ವರ್ಷದಿಂದ ನೆರೆಹಾವಳಿ ತುತ್ತಾಗುತ್ತಿವೆ. 2019 ಮತ್ತು 2020 ರಲ್ಲಿ ಹಾನಿಗೊಳಗಾದ ಪ್ರದೇಶಗಳ ಜನರಿಗೆ ಇದುವರೆಗೂ ಸಮರ್ಪಕ ಪರಿಹಾರ ಸಿಕ್ಕಿಲ್ಲ. ಮನೆ ಕಳೆದುಕೊಂಡವರಿಗೆ ಮನೆಗಳನ್ನು ನೀಡಿಲ್ಲ. ನದಿ ಪಾತ್ರದ ಗ್ರಾಮಗಳ ಸ್ಥಳಾಂತರ ಆಗಿಲ್ಲ ಎಂದು ನೆರೆಪೀಡಿತರು ತಮ್ಮ ಸಂಕಷ್ಟ ಹೇಳಿಕೊಂಡು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ” ಎಂದಿದ್ದಾರೆ.

2019 ರಲ್ಲಿ ಪ್ರವಾಹ ಬಂದಾಗ ಆಗಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೊದಲು ಮನೆ ಕಳೆದುಕೊಂಡವರಿಗೆ ಪರಿಹಾರ ಘೋಷಿಸಿದ್ದರು. ಸರ್ಕಾರ ಈ ಹಿಂದೆ ಘೋಷಿಸಿದ್ದಂತೆ ಮನೆ ಕಳೆದುಕೊಂಡು ಬಾಡಿಗೆ ಮನೆಯಲ್ಲಿ ಇರುವವರಿಗೆ ಬಾಡಿಗೆ ಹಣ ಬಿಡುಗಡೆ ಮಾಡಿಲ್ಲ. ಪ್ರತಿ ತಿಂಗಳು ಹತ್ತು ಸಾವಿರ ನೀಡುತ್ತೇವೆ ಎಂದು ಹೇಳಿದ್ದೂ ಸುಳ್ಳಾಗಿದೆ. ಮನೆ ಕಳೆದುಕೊಂಡ ಯಾರೊಬ್ಬರಿಗೂ ಈ ವರೆಗೂ ಯಾವ ಪರಿಹಾರದ ಹಣವೂ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ.

“ನೆರೆ ಬಂದ ಅನೇಕ ಕಡೆಗಳಲ್ಲಿ ಮನೆಗಳನ್ನು ಸ್ಥಳಾಂತರ ಮಾಡುವ ಅಗತ್ಯವಿದೆ. ಇದಕ್ಕೆ ಸರ್ಕಾರ ಜಾಗ ನೀಡಬೇಕು. ಮನೆ ಕಟ್ಟಿಕೊಡಬೇಕು. ಅಗತ್ಯವಿರುವ ಹಳ್ಳಿಗಳ ಸ್ಥಳಾಂತರದ ಅನಿವಾರ್ಯತೆ ಇದ್ದು ಈ ಬಗ್ಗೆಯೂ ಸರ್ಕಾರ ಗಂಭೀರವಾಗಿ ತುರ್ತು ಕ್ರಮಕ್ಕೆ ಮುಂದಾಗಬೇಕಿದೆ. ಉತ್ತರ ಕನ್ನಡ, ಬೆಳಗಾವಿ ಜಿಲ್ಲೆಗಳಲ್ಲಿ ತೂಗು ಸೇತುವೆಗಳೂ ನೀರಿನಲ್ಲಿ ಕೊಚ್ಚಿ ಹೋಗಿದ್ದು ಇಲ್ಲಿಯವರೆಗೂ ನಿರ್ಮಾಣ ಕಾರ್ಯ ಆಗಿಲ್ಲ. ಸಾವಿರಾರು ಹೆಕ್ಟೇರ್ ಕೃಷಿ ಭೂಮಿ, ನೂರಾರು ಹೆಕ್ಟೇರ್ ತೋಟಗಳು ಕೊಚ್ಚಿ ಹೋಗಿವೆ, ಹಾಳಾಗಿವೆ. ಹಲವಾರು ಕಡೆ ತೀವ್ರ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿದೆ. ರಸ್ತೆ, ಸೇತುವೆ, ಸರ್ಕಾರಿ ಶಾಲೆ, ಪಶು ಆಸ್ಪತ್ರೆ, ಕುಡಿಯುವ ನೀರಿನ ಯೋಜನೆ, ವಿದ್ಯುತ್ ಸಂಪರ್ಕ ಎಲ್ಲವೂ ಹಾಳಾಗಿರುವುದನ್ನು ನೆರೆಪೀಡಿತ ಪ್ರದೇಶಗಳ ಜನರ ಜತೆಗೇ ತೆರಳಿ ವೀಕ್ಷಿಸಿದ್ದೇನೆ” ಎಂದು ತಿಳಿಸಿದ್ದಾರೆ.

’ಕಾಳಿ ಯೋಜನೆಯ ಕದ್ರಾ ಅಣೆಕಟ್ಟೆನಿಂದ ಪೂರ್ವ ಸೂಚನೆ ಇಲ್ಲದೆ ಭಾರೀ ಪ್ರಮಾಣದಲ್ಲಿ ನೀರು ಬಿಟ್ಟಿದ್ದರಿಂದ ಹಠಾತ್ ನೆರೆಗೆ ವ್ಯಾಪಾರಿ ಮುಂಗಟ್ಟುಗಳು ನಾಶವಾಗಿವೆ. ಕೋವಿಡ್ ಮತ್ತು ಲಾಕ್‌ಡೌನ್ ಕಾರಣದಿಂದ ಮೊದಲೇ ವಿಪರೀತ ಸಂಕಷ್ಟದಲ್ಲಿದ್ದ ವ್ಯಾಪಾರಿಗಳ, ರೈತರು, ಕೂಲಿ ಕಾರ್ಮಿಕರ ಬದುಕು ಈಗ ಸಂಪೂರ್ಣ ನೆಲಕಚ್ಚಿದೆ. ಇವರಿಗೆ ತಕ್ಷಣ ಪುನರ್ವಸತಿ ಕಲ್ಪಿಸಿ ವ್ಯಾಪಾರಕ್ಕೆ ಅನುವು ಮಾಡಿಕೊಡುವ ಜತೆಗೆ ಕೂಡಲೇ ಆರ್ಥಿಕ ನೆರವು ನೀಡಿ ಈ ಸಣ್ಣ ಪುಟ್ಟ ವ್ಯಾಪಾರಿ ಸಮುದಾಯ, ರೈತರು, ಬೆಳೆಗಾರರು, ಕಾರ್ಮಿಕ ಸಮುದಾಯ ಮತ್ತೆ ತಲೆ ಎತ್ತಿ ನಿಲ್ಲುವಂತೆ ಮಾಡಬೇಕಿದೆ’ ಎಂದಿದ್ದಾರೆ.

“2019-2020 ರಲ್ಲೂ ನೆರೆಗೆ ತುತ್ತಾಗಿದ್ದ ಪ್ರದೇಶಗಳ ಸಾಕಷ್ಟು ಜನರೇ ಈ ಬಾರಿಯೂ ಪ್ರವಾಹಕ್ಕೂ ಸಿಲುಕಿದ್ದಾರೆ. ಹಾನಿಗೊಳಗಾಗಿರುವ ರಸ್ತೆ, ಸೇತುವೆ, ಶಾಲೆ, ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ, ಸರ್ಕಾರಿ ಕಚೇರಿ ಕಟ್ಟಡಗಳನ್ನು ದುರಸ್ತಿ/ ಪುನರ್‌ನಿರ್ಮಿಸಬೇಕು. ಮೂರು ವರ್ಷಗಳಿಂದ ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತಿರುವ ಪ್ರವಾಹ ಪರಿಹಾರದ ಮೊತ್ತ ರಾಜ್ಯಕ್ಕೆ ಅವಮಾನ ಮಾಡಿದಂತಿದೆ. ಹೀಗಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಕೂಡಲೇ ನ್ಯಾಯೋಚಿತ ಪರಿಹಾರ ಬಿಡುಗಡೆ ಮಾಡಿಸಬೇಕು” ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಭ್ರಷ್ಟಾಚಾರವೇ ರಾಜ್ಯ ಬಿಜೆಪಿಯ ಎರಡು ವರ್ಷದ ದೊಡ್ಡ ಸಾಧನೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...