Homeಕರ್ನಾಟಕನೆರೆ ಸಂತ್ರಸ್ತರಿಗೆ ಕೂಡಲೇ ಪರಿಹಾರ ಬಿಡುಗಡೆ ಮಾಡಿ: ಸಿಎಂಗೆ ಸಿದ್ದರಾಮಯ್ಯ ಪತ್ರ

ನೆರೆ ಸಂತ್ರಸ್ತರಿಗೆ ಕೂಡಲೇ ಪರಿಹಾರ ಬಿಡುಗಡೆ ಮಾಡಿ: ಸಿಎಂಗೆ ಸಿದ್ದರಾಮಯ್ಯ ಪತ್ರ

"ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಕೂಡಲೇ ಪರಿಹಾರ ಬಿಡುಗಡೆ ಮಾಡಿಸಬೇಕು"

- Advertisement -
- Advertisement -

’ನೆರೆಯಿಂದ ಹಾನಿಗೆ ಒಳಗಾಗಿರುವ ಜಿಲ್ಲೆಗಳಲ್ಲಿ ಮನೆ, ಬೆಳೆ, ಜಾನುವಾರು ಕಳೆದುಕೊಂಡ ಸಂತ್ರಸ್ತರಿಗೆ ಕೂಡಲೇ ಸೂಕ್ತ ಪರಿಹಾರ ಬಿಡುಗಡೆ ಮಾಡಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

“ಈ ವರ್ಷದ ಜುಲೈ 26 ಮತ್ತು 27 ರಂದು ಬಾಗಲಕೋಟೆ, ಬೆಳಗಾವಿ, ಗದಗ ಜಿಲ್ಲೆಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಹಾಗೂ ಆಗಸ್ಟ್ 2 ರಂದು ಉತ್ತರ ಕನ್ನಡ ಜಿಲ್ಲೆಯ ಹಲವಾರು ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದಾಗಿ ಭೇಟಿ ನೀಡಿದ್ದೆ. ಜುಲೈ 22 ರಿಂದ 26 ರ ವರೆಗೆ ಬಿದ್ದ ಭಾರಿ ಪ್ರಮಾಣದ ಮಳೆ ಈ ಜಿಲ್ಲೆಗಳಲ್ಲಿ ತೀವ್ರ ಸ್ವರೂಪದ ಅನಾಹುತಗಳನ್ನು ಸೃಷ್ಟಿಸಿದೆ. ಸಹಸ್ರಾರು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನ–ಜಾನವಾರುಗಳು, ಮನೆಗಳು ಹಾನಿಗೊಳಗಾಗಿವೆ. ಮನೆಯೊಳಗಿದ್ದ ಪಾತ್ರೆ-ಪಗಡೆ ಕೊಚ್ಚಿಕೊಂಡು ಹೋಗಿವೆ. ಒಟ್ಟಾರೆ ಪರಿಸ್ಥಿತಿಯಲ್ಲಿ ಉಣ್ಣಲು ಅನ್ನ ಇಲ್ಲ, ಉಡಲು ಬಟ್ಟೆ ಇಲ್ಲ, ಉಳಿಯಲು ಸೂರಿಲ್ಲ, ಕುಡಿಯಲು ನೀರಿಲ್ಲ ಎನ್ನುವ ಪರಿಸ್ಥಿತಿ ಇರುವುದನ್ನು ನಾನು ಕಣ್ಣಾರೆ ಕಂಡಿದ್ದೇನೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

“ಮನೆಯೊಳಗಿದ್ದ ಪಾತ್ರೆ ಪಗಡೆ, ಬಟ್ಟೆಗಳು, ಮಕ್ಕಳ ಶಾಲಾ ಬ್ಯಾಗು, ಪುಸ್ತಕಗಳು, ದವಸ ಧಾನ್ಯಗಳು, ಟಿವಿ, ಫ್ರಿಡ್ಜ್, ಮಿಕ್ಸರ್, ಗ್ಯಾಸ್ ಸಿಲಿಂಡರ್‌ಗಳ ಸಮೇತ ನಿತ್ಯ ಬಳಕೆಯ ವಸ್ತುಗಳು ಕೊಚ್ಚಿಕೊಂಡು ಹೋಗಿವೆ. ಮನೆಯೊಳಗೆ ನುಗ್ಗಿದ ನೀರು ನೂರಾರು ಮನೆಗಳನ್ನು ಹಾನಿ ಮಾಡಿದೆ. ಪ್ರವಾಹದಿಂದ ಕೊಚ್ಚಿ ಬಂದ ಮಣ್ಣು, ಕೆಸರು ತುಂಬಿಕೊಂಡು ಸಾವಿರಾರು ಮನೆಗಳನ್ನು ಮುಚ್ಚಿ ಹಾಕಿದೆ. ಮಕ್ಕಳು ಮರಿಗಳಾದಿಯಾಗಿ ಎಲ್ಲರ ಆರೋಗ್ಯದ ಬಗ್ಗೆಯೂ ತುರ್ತು ಗಮನ ಹರಿಸಬೇಕಾದ, ಪೌಷ್ಠಿಕ ಆಹಾರ ಒದಗಿಸುವ ನಿಟ್ಟಿನಲ್ಲಿ ತಕ್ಷಣ ಕ್ರಮ ಜರುಗಿಸಬೇಕಾದ ಅಗತ್ಯವಿದೆ” ಎಂದು ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.

ಇದನ್ನೂ ಓದಿ: ‘ಬಾರ್‌‌’ ಸಿಟಿ ರವಿಯ ಸಂಸ್ಕೃತಿ: ಸಿದ್ದರಾಮಯ್ಯ

“ಭತ್ತದ ಗದ್ದೆಗಳು, ತೋಟದ ಬೆಳೆಗಳು ನೀರಲ್ಲಿ ಕೊಚ್ಚಿ ಹೋಗಿವೆ, ನೀರಲ್ಲಿ ಮುಳುಗಿ ಕೊಳೆತು ಹೋಗಿವೆ. ದನದ ಕೊಟ್ಟಿಗೆಗಳು ಜಲಾವೃತ ಆಗಿರುವುದರಿಂದ ಸಂಗ್ರಹಿಸಿದ್ದ ಮೇವು ನೀರಿನಲ್ಲಿ ಕೊಚ್ಚಿ ಹೋಗಿ ಮೇವಿಗೂ ತತ್ವಾರ ಬಂದಿದೆ. 2019 ರಿಂದ 2021 ರ ವರೆಗೆ ಸತತವಾಗಿ ಈ ಜಿಲ್ಲೆಗಳು ಮೂರು ವರ್ಷದಿಂದ ನೆರೆಹಾವಳಿ ತುತ್ತಾಗುತ್ತಿವೆ. 2019 ಮತ್ತು 2020 ರಲ್ಲಿ ಹಾನಿಗೊಳಗಾದ ಪ್ರದೇಶಗಳ ಜನರಿಗೆ ಇದುವರೆಗೂ ಸಮರ್ಪಕ ಪರಿಹಾರ ಸಿಕ್ಕಿಲ್ಲ. ಮನೆ ಕಳೆದುಕೊಂಡವರಿಗೆ ಮನೆಗಳನ್ನು ನೀಡಿಲ್ಲ. ನದಿ ಪಾತ್ರದ ಗ್ರಾಮಗಳ ಸ್ಥಳಾಂತರ ಆಗಿಲ್ಲ ಎಂದು ನೆರೆಪೀಡಿತರು ತಮ್ಮ ಸಂಕಷ್ಟ ಹೇಳಿಕೊಂಡು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ” ಎಂದಿದ್ದಾರೆ.

2019 ರಲ್ಲಿ ಪ್ರವಾಹ ಬಂದಾಗ ಆಗಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೊದಲು ಮನೆ ಕಳೆದುಕೊಂಡವರಿಗೆ ಪರಿಹಾರ ಘೋಷಿಸಿದ್ದರು. ಸರ್ಕಾರ ಈ ಹಿಂದೆ ಘೋಷಿಸಿದ್ದಂತೆ ಮನೆ ಕಳೆದುಕೊಂಡು ಬಾಡಿಗೆ ಮನೆಯಲ್ಲಿ ಇರುವವರಿಗೆ ಬಾಡಿಗೆ ಹಣ ಬಿಡುಗಡೆ ಮಾಡಿಲ್ಲ. ಪ್ರತಿ ತಿಂಗಳು ಹತ್ತು ಸಾವಿರ ನೀಡುತ್ತೇವೆ ಎಂದು ಹೇಳಿದ್ದೂ ಸುಳ್ಳಾಗಿದೆ. ಮನೆ ಕಳೆದುಕೊಂಡ ಯಾರೊಬ್ಬರಿಗೂ ಈ ವರೆಗೂ ಯಾವ ಪರಿಹಾರದ ಹಣವೂ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ.

“ನೆರೆ ಬಂದ ಅನೇಕ ಕಡೆಗಳಲ್ಲಿ ಮನೆಗಳನ್ನು ಸ್ಥಳಾಂತರ ಮಾಡುವ ಅಗತ್ಯವಿದೆ. ಇದಕ್ಕೆ ಸರ್ಕಾರ ಜಾಗ ನೀಡಬೇಕು. ಮನೆ ಕಟ್ಟಿಕೊಡಬೇಕು. ಅಗತ್ಯವಿರುವ ಹಳ್ಳಿಗಳ ಸ್ಥಳಾಂತರದ ಅನಿವಾರ್ಯತೆ ಇದ್ದು ಈ ಬಗ್ಗೆಯೂ ಸರ್ಕಾರ ಗಂಭೀರವಾಗಿ ತುರ್ತು ಕ್ರಮಕ್ಕೆ ಮುಂದಾಗಬೇಕಿದೆ. ಉತ್ತರ ಕನ್ನಡ, ಬೆಳಗಾವಿ ಜಿಲ್ಲೆಗಳಲ್ಲಿ ತೂಗು ಸೇತುವೆಗಳೂ ನೀರಿನಲ್ಲಿ ಕೊಚ್ಚಿ ಹೋಗಿದ್ದು ಇಲ್ಲಿಯವರೆಗೂ ನಿರ್ಮಾಣ ಕಾರ್ಯ ಆಗಿಲ್ಲ. ಸಾವಿರಾರು ಹೆಕ್ಟೇರ್ ಕೃಷಿ ಭೂಮಿ, ನೂರಾರು ಹೆಕ್ಟೇರ್ ತೋಟಗಳು ಕೊಚ್ಚಿ ಹೋಗಿವೆ, ಹಾಳಾಗಿವೆ. ಹಲವಾರು ಕಡೆ ತೀವ್ರ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿದೆ. ರಸ್ತೆ, ಸೇತುವೆ, ಸರ್ಕಾರಿ ಶಾಲೆ, ಪಶು ಆಸ್ಪತ್ರೆ, ಕುಡಿಯುವ ನೀರಿನ ಯೋಜನೆ, ವಿದ್ಯುತ್ ಸಂಪರ್ಕ ಎಲ್ಲವೂ ಹಾಳಾಗಿರುವುದನ್ನು ನೆರೆಪೀಡಿತ ಪ್ರದೇಶಗಳ ಜನರ ಜತೆಗೇ ತೆರಳಿ ವೀಕ್ಷಿಸಿದ್ದೇನೆ” ಎಂದು ತಿಳಿಸಿದ್ದಾರೆ.

’ಕಾಳಿ ಯೋಜನೆಯ ಕದ್ರಾ ಅಣೆಕಟ್ಟೆನಿಂದ ಪೂರ್ವ ಸೂಚನೆ ಇಲ್ಲದೆ ಭಾರೀ ಪ್ರಮಾಣದಲ್ಲಿ ನೀರು ಬಿಟ್ಟಿದ್ದರಿಂದ ಹಠಾತ್ ನೆರೆಗೆ ವ್ಯಾಪಾರಿ ಮುಂಗಟ್ಟುಗಳು ನಾಶವಾಗಿವೆ. ಕೋವಿಡ್ ಮತ್ತು ಲಾಕ್‌ಡೌನ್ ಕಾರಣದಿಂದ ಮೊದಲೇ ವಿಪರೀತ ಸಂಕಷ್ಟದಲ್ಲಿದ್ದ ವ್ಯಾಪಾರಿಗಳ, ರೈತರು, ಕೂಲಿ ಕಾರ್ಮಿಕರ ಬದುಕು ಈಗ ಸಂಪೂರ್ಣ ನೆಲಕಚ್ಚಿದೆ. ಇವರಿಗೆ ತಕ್ಷಣ ಪುನರ್ವಸತಿ ಕಲ್ಪಿಸಿ ವ್ಯಾಪಾರಕ್ಕೆ ಅನುವು ಮಾಡಿಕೊಡುವ ಜತೆಗೆ ಕೂಡಲೇ ಆರ್ಥಿಕ ನೆರವು ನೀಡಿ ಈ ಸಣ್ಣ ಪುಟ್ಟ ವ್ಯಾಪಾರಿ ಸಮುದಾಯ, ರೈತರು, ಬೆಳೆಗಾರರು, ಕಾರ್ಮಿಕ ಸಮುದಾಯ ಮತ್ತೆ ತಲೆ ಎತ್ತಿ ನಿಲ್ಲುವಂತೆ ಮಾಡಬೇಕಿದೆ’ ಎಂದಿದ್ದಾರೆ.

“2019-2020 ರಲ್ಲೂ ನೆರೆಗೆ ತುತ್ತಾಗಿದ್ದ ಪ್ರದೇಶಗಳ ಸಾಕಷ್ಟು ಜನರೇ ಈ ಬಾರಿಯೂ ಪ್ರವಾಹಕ್ಕೂ ಸಿಲುಕಿದ್ದಾರೆ. ಹಾನಿಗೊಳಗಾಗಿರುವ ರಸ್ತೆ, ಸೇತುವೆ, ಶಾಲೆ, ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ, ಸರ್ಕಾರಿ ಕಚೇರಿ ಕಟ್ಟಡಗಳನ್ನು ದುರಸ್ತಿ/ ಪುನರ್‌ನಿರ್ಮಿಸಬೇಕು. ಮೂರು ವರ್ಷಗಳಿಂದ ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತಿರುವ ಪ್ರವಾಹ ಪರಿಹಾರದ ಮೊತ್ತ ರಾಜ್ಯಕ್ಕೆ ಅವಮಾನ ಮಾಡಿದಂತಿದೆ. ಹೀಗಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಕೂಡಲೇ ನ್ಯಾಯೋಚಿತ ಪರಿಹಾರ ಬಿಡುಗಡೆ ಮಾಡಿಸಬೇಕು” ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಭ್ರಷ್ಟಾಚಾರವೇ ರಾಜ್ಯ ಬಿಜೆಪಿಯ ಎರಡು ವರ್ಷದ ದೊಡ್ಡ ಸಾಧನೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...