Homeಕರ್ನಾಟಕನೆರೆ ಸಂತ್ರಸ್ತರಿಗೆ ಕೂಡಲೇ ಪರಿಹಾರ ಬಿಡುಗಡೆ ಮಾಡಿ: ಸಿಎಂಗೆ ಸಿದ್ದರಾಮಯ್ಯ ಪತ್ರ

ನೆರೆ ಸಂತ್ರಸ್ತರಿಗೆ ಕೂಡಲೇ ಪರಿಹಾರ ಬಿಡುಗಡೆ ಮಾಡಿ: ಸಿಎಂಗೆ ಸಿದ್ದರಾಮಯ್ಯ ಪತ್ರ

"ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಕೂಡಲೇ ಪರಿಹಾರ ಬಿಡುಗಡೆ ಮಾಡಿಸಬೇಕು"

- Advertisement -
- Advertisement -

’ನೆರೆಯಿಂದ ಹಾನಿಗೆ ಒಳಗಾಗಿರುವ ಜಿಲ್ಲೆಗಳಲ್ಲಿ ಮನೆ, ಬೆಳೆ, ಜಾನುವಾರು ಕಳೆದುಕೊಂಡ ಸಂತ್ರಸ್ತರಿಗೆ ಕೂಡಲೇ ಸೂಕ್ತ ಪರಿಹಾರ ಬಿಡುಗಡೆ ಮಾಡಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

“ಈ ವರ್ಷದ ಜುಲೈ 26 ಮತ್ತು 27 ರಂದು ಬಾಗಲಕೋಟೆ, ಬೆಳಗಾವಿ, ಗದಗ ಜಿಲ್ಲೆಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಹಾಗೂ ಆಗಸ್ಟ್ 2 ರಂದು ಉತ್ತರ ಕನ್ನಡ ಜಿಲ್ಲೆಯ ಹಲವಾರು ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದಾಗಿ ಭೇಟಿ ನೀಡಿದ್ದೆ. ಜುಲೈ 22 ರಿಂದ 26 ರ ವರೆಗೆ ಬಿದ್ದ ಭಾರಿ ಪ್ರಮಾಣದ ಮಳೆ ಈ ಜಿಲ್ಲೆಗಳಲ್ಲಿ ತೀವ್ರ ಸ್ವರೂಪದ ಅನಾಹುತಗಳನ್ನು ಸೃಷ್ಟಿಸಿದೆ. ಸಹಸ್ರಾರು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನ–ಜಾನವಾರುಗಳು, ಮನೆಗಳು ಹಾನಿಗೊಳಗಾಗಿವೆ. ಮನೆಯೊಳಗಿದ್ದ ಪಾತ್ರೆ-ಪಗಡೆ ಕೊಚ್ಚಿಕೊಂಡು ಹೋಗಿವೆ. ಒಟ್ಟಾರೆ ಪರಿಸ್ಥಿತಿಯಲ್ಲಿ ಉಣ್ಣಲು ಅನ್ನ ಇಲ್ಲ, ಉಡಲು ಬಟ್ಟೆ ಇಲ್ಲ, ಉಳಿಯಲು ಸೂರಿಲ್ಲ, ಕುಡಿಯಲು ನೀರಿಲ್ಲ ಎನ್ನುವ ಪರಿಸ್ಥಿತಿ ಇರುವುದನ್ನು ನಾನು ಕಣ್ಣಾರೆ ಕಂಡಿದ್ದೇನೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

“ಮನೆಯೊಳಗಿದ್ದ ಪಾತ್ರೆ ಪಗಡೆ, ಬಟ್ಟೆಗಳು, ಮಕ್ಕಳ ಶಾಲಾ ಬ್ಯಾಗು, ಪುಸ್ತಕಗಳು, ದವಸ ಧಾನ್ಯಗಳು, ಟಿವಿ, ಫ್ರಿಡ್ಜ್, ಮಿಕ್ಸರ್, ಗ್ಯಾಸ್ ಸಿಲಿಂಡರ್‌ಗಳ ಸಮೇತ ನಿತ್ಯ ಬಳಕೆಯ ವಸ್ತುಗಳು ಕೊಚ್ಚಿಕೊಂಡು ಹೋಗಿವೆ. ಮನೆಯೊಳಗೆ ನುಗ್ಗಿದ ನೀರು ನೂರಾರು ಮನೆಗಳನ್ನು ಹಾನಿ ಮಾಡಿದೆ. ಪ್ರವಾಹದಿಂದ ಕೊಚ್ಚಿ ಬಂದ ಮಣ್ಣು, ಕೆಸರು ತುಂಬಿಕೊಂಡು ಸಾವಿರಾರು ಮನೆಗಳನ್ನು ಮುಚ್ಚಿ ಹಾಕಿದೆ. ಮಕ್ಕಳು ಮರಿಗಳಾದಿಯಾಗಿ ಎಲ್ಲರ ಆರೋಗ್ಯದ ಬಗ್ಗೆಯೂ ತುರ್ತು ಗಮನ ಹರಿಸಬೇಕಾದ, ಪೌಷ್ಠಿಕ ಆಹಾರ ಒದಗಿಸುವ ನಿಟ್ಟಿನಲ್ಲಿ ತಕ್ಷಣ ಕ್ರಮ ಜರುಗಿಸಬೇಕಾದ ಅಗತ್ಯವಿದೆ” ಎಂದು ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.

ಇದನ್ನೂ ಓದಿ: ‘ಬಾರ್‌‌’ ಸಿಟಿ ರವಿಯ ಸಂಸ್ಕೃತಿ: ಸಿದ್ದರಾಮಯ್ಯ

“ಭತ್ತದ ಗದ್ದೆಗಳು, ತೋಟದ ಬೆಳೆಗಳು ನೀರಲ್ಲಿ ಕೊಚ್ಚಿ ಹೋಗಿವೆ, ನೀರಲ್ಲಿ ಮುಳುಗಿ ಕೊಳೆತು ಹೋಗಿವೆ. ದನದ ಕೊಟ್ಟಿಗೆಗಳು ಜಲಾವೃತ ಆಗಿರುವುದರಿಂದ ಸಂಗ್ರಹಿಸಿದ್ದ ಮೇವು ನೀರಿನಲ್ಲಿ ಕೊಚ್ಚಿ ಹೋಗಿ ಮೇವಿಗೂ ತತ್ವಾರ ಬಂದಿದೆ. 2019 ರಿಂದ 2021 ರ ವರೆಗೆ ಸತತವಾಗಿ ಈ ಜಿಲ್ಲೆಗಳು ಮೂರು ವರ್ಷದಿಂದ ನೆರೆಹಾವಳಿ ತುತ್ತಾಗುತ್ತಿವೆ. 2019 ಮತ್ತು 2020 ರಲ್ಲಿ ಹಾನಿಗೊಳಗಾದ ಪ್ರದೇಶಗಳ ಜನರಿಗೆ ಇದುವರೆಗೂ ಸಮರ್ಪಕ ಪರಿಹಾರ ಸಿಕ್ಕಿಲ್ಲ. ಮನೆ ಕಳೆದುಕೊಂಡವರಿಗೆ ಮನೆಗಳನ್ನು ನೀಡಿಲ್ಲ. ನದಿ ಪಾತ್ರದ ಗ್ರಾಮಗಳ ಸ್ಥಳಾಂತರ ಆಗಿಲ್ಲ ಎಂದು ನೆರೆಪೀಡಿತರು ತಮ್ಮ ಸಂಕಷ್ಟ ಹೇಳಿಕೊಂಡು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ” ಎಂದಿದ್ದಾರೆ.

2019 ರಲ್ಲಿ ಪ್ರವಾಹ ಬಂದಾಗ ಆಗಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೊದಲು ಮನೆ ಕಳೆದುಕೊಂಡವರಿಗೆ ಪರಿಹಾರ ಘೋಷಿಸಿದ್ದರು. ಸರ್ಕಾರ ಈ ಹಿಂದೆ ಘೋಷಿಸಿದ್ದಂತೆ ಮನೆ ಕಳೆದುಕೊಂಡು ಬಾಡಿಗೆ ಮನೆಯಲ್ಲಿ ಇರುವವರಿಗೆ ಬಾಡಿಗೆ ಹಣ ಬಿಡುಗಡೆ ಮಾಡಿಲ್ಲ. ಪ್ರತಿ ತಿಂಗಳು ಹತ್ತು ಸಾವಿರ ನೀಡುತ್ತೇವೆ ಎಂದು ಹೇಳಿದ್ದೂ ಸುಳ್ಳಾಗಿದೆ. ಮನೆ ಕಳೆದುಕೊಂಡ ಯಾರೊಬ್ಬರಿಗೂ ಈ ವರೆಗೂ ಯಾವ ಪರಿಹಾರದ ಹಣವೂ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ.

“ನೆರೆ ಬಂದ ಅನೇಕ ಕಡೆಗಳಲ್ಲಿ ಮನೆಗಳನ್ನು ಸ್ಥಳಾಂತರ ಮಾಡುವ ಅಗತ್ಯವಿದೆ. ಇದಕ್ಕೆ ಸರ್ಕಾರ ಜಾಗ ನೀಡಬೇಕು. ಮನೆ ಕಟ್ಟಿಕೊಡಬೇಕು. ಅಗತ್ಯವಿರುವ ಹಳ್ಳಿಗಳ ಸ್ಥಳಾಂತರದ ಅನಿವಾರ್ಯತೆ ಇದ್ದು ಈ ಬಗ್ಗೆಯೂ ಸರ್ಕಾರ ಗಂಭೀರವಾಗಿ ತುರ್ತು ಕ್ರಮಕ್ಕೆ ಮುಂದಾಗಬೇಕಿದೆ. ಉತ್ತರ ಕನ್ನಡ, ಬೆಳಗಾವಿ ಜಿಲ್ಲೆಗಳಲ್ಲಿ ತೂಗು ಸೇತುವೆಗಳೂ ನೀರಿನಲ್ಲಿ ಕೊಚ್ಚಿ ಹೋಗಿದ್ದು ಇಲ್ಲಿಯವರೆಗೂ ನಿರ್ಮಾಣ ಕಾರ್ಯ ಆಗಿಲ್ಲ. ಸಾವಿರಾರು ಹೆಕ್ಟೇರ್ ಕೃಷಿ ಭೂಮಿ, ನೂರಾರು ಹೆಕ್ಟೇರ್ ತೋಟಗಳು ಕೊಚ್ಚಿ ಹೋಗಿವೆ, ಹಾಳಾಗಿವೆ. ಹಲವಾರು ಕಡೆ ತೀವ್ರ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿದೆ. ರಸ್ತೆ, ಸೇತುವೆ, ಸರ್ಕಾರಿ ಶಾಲೆ, ಪಶು ಆಸ್ಪತ್ರೆ, ಕುಡಿಯುವ ನೀರಿನ ಯೋಜನೆ, ವಿದ್ಯುತ್ ಸಂಪರ್ಕ ಎಲ್ಲವೂ ಹಾಳಾಗಿರುವುದನ್ನು ನೆರೆಪೀಡಿತ ಪ್ರದೇಶಗಳ ಜನರ ಜತೆಗೇ ತೆರಳಿ ವೀಕ್ಷಿಸಿದ್ದೇನೆ” ಎಂದು ತಿಳಿಸಿದ್ದಾರೆ.

’ಕಾಳಿ ಯೋಜನೆಯ ಕದ್ರಾ ಅಣೆಕಟ್ಟೆನಿಂದ ಪೂರ್ವ ಸೂಚನೆ ಇಲ್ಲದೆ ಭಾರೀ ಪ್ರಮಾಣದಲ್ಲಿ ನೀರು ಬಿಟ್ಟಿದ್ದರಿಂದ ಹಠಾತ್ ನೆರೆಗೆ ವ್ಯಾಪಾರಿ ಮುಂಗಟ್ಟುಗಳು ನಾಶವಾಗಿವೆ. ಕೋವಿಡ್ ಮತ್ತು ಲಾಕ್‌ಡೌನ್ ಕಾರಣದಿಂದ ಮೊದಲೇ ವಿಪರೀತ ಸಂಕಷ್ಟದಲ್ಲಿದ್ದ ವ್ಯಾಪಾರಿಗಳ, ರೈತರು, ಕೂಲಿ ಕಾರ್ಮಿಕರ ಬದುಕು ಈಗ ಸಂಪೂರ್ಣ ನೆಲಕಚ್ಚಿದೆ. ಇವರಿಗೆ ತಕ್ಷಣ ಪುನರ್ವಸತಿ ಕಲ್ಪಿಸಿ ವ್ಯಾಪಾರಕ್ಕೆ ಅನುವು ಮಾಡಿಕೊಡುವ ಜತೆಗೆ ಕೂಡಲೇ ಆರ್ಥಿಕ ನೆರವು ನೀಡಿ ಈ ಸಣ್ಣ ಪುಟ್ಟ ವ್ಯಾಪಾರಿ ಸಮುದಾಯ, ರೈತರು, ಬೆಳೆಗಾರರು, ಕಾರ್ಮಿಕ ಸಮುದಾಯ ಮತ್ತೆ ತಲೆ ಎತ್ತಿ ನಿಲ್ಲುವಂತೆ ಮಾಡಬೇಕಿದೆ’ ಎಂದಿದ್ದಾರೆ.

“2019-2020 ರಲ್ಲೂ ನೆರೆಗೆ ತುತ್ತಾಗಿದ್ದ ಪ್ರದೇಶಗಳ ಸಾಕಷ್ಟು ಜನರೇ ಈ ಬಾರಿಯೂ ಪ್ರವಾಹಕ್ಕೂ ಸಿಲುಕಿದ್ದಾರೆ. ಹಾನಿಗೊಳಗಾಗಿರುವ ರಸ್ತೆ, ಸೇತುವೆ, ಶಾಲೆ, ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ, ಸರ್ಕಾರಿ ಕಚೇರಿ ಕಟ್ಟಡಗಳನ್ನು ದುರಸ್ತಿ/ ಪುನರ್‌ನಿರ್ಮಿಸಬೇಕು. ಮೂರು ವರ್ಷಗಳಿಂದ ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತಿರುವ ಪ್ರವಾಹ ಪರಿಹಾರದ ಮೊತ್ತ ರಾಜ್ಯಕ್ಕೆ ಅವಮಾನ ಮಾಡಿದಂತಿದೆ. ಹೀಗಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಕೂಡಲೇ ನ್ಯಾಯೋಚಿತ ಪರಿಹಾರ ಬಿಡುಗಡೆ ಮಾಡಿಸಬೇಕು” ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಭ್ರಷ್ಟಾಚಾರವೇ ರಾಜ್ಯ ಬಿಜೆಪಿಯ ಎರಡು ವರ್ಷದ ದೊಡ್ಡ ಸಾಧನೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...