Homeಕರ್ನಾಟಕನೆರೆ ಸಂತ್ರಸ್ತರಿಗೆ ಕೂಡಲೇ ಪರಿಹಾರ ಬಿಡುಗಡೆ ಮಾಡಿ: ಸಿಎಂಗೆ ಸಿದ್ದರಾಮಯ್ಯ ಪತ್ರ

ನೆರೆ ಸಂತ್ರಸ್ತರಿಗೆ ಕೂಡಲೇ ಪರಿಹಾರ ಬಿಡುಗಡೆ ಮಾಡಿ: ಸಿಎಂಗೆ ಸಿದ್ದರಾಮಯ್ಯ ಪತ್ರ

"ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಕೂಡಲೇ ಪರಿಹಾರ ಬಿಡುಗಡೆ ಮಾಡಿಸಬೇಕು"

- Advertisement -
- Advertisement -

’ನೆರೆಯಿಂದ ಹಾನಿಗೆ ಒಳಗಾಗಿರುವ ಜಿಲ್ಲೆಗಳಲ್ಲಿ ಮನೆ, ಬೆಳೆ, ಜಾನುವಾರು ಕಳೆದುಕೊಂಡ ಸಂತ್ರಸ್ತರಿಗೆ ಕೂಡಲೇ ಸೂಕ್ತ ಪರಿಹಾರ ಬಿಡುಗಡೆ ಮಾಡಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

“ಈ ವರ್ಷದ ಜುಲೈ 26 ಮತ್ತು 27 ರಂದು ಬಾಗಲಕೋಟೆ, ಬೆಳಗಾವಿ, ಗದಗ ಜಿಲ್ಲೆಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಹಾಗೂ ಆಗಸ್ಟ್ 2 ರಂದು ಉತ್ತರ ಕನ್ನಡ ಜಿಲ್ಲೆಯ ಹಲವಾರು ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದಾಗಿ ಭೇಟಿ ನೀಡಿದ್ದೆ. ಜುಲೈ 22 ರಿಂದ 26 ರ ವರೆಗೆ ಬಿದ್ದ ಭಾರಿ ಪ್ರಮಾಣದ ಮಳೆ ಈ ಜಿಲ್ಲೆಗಳಲ್ಲಿ ತೀವ್ರ ಸ್ವರೂಪದ ಅನಾಹುತಗಳನ್ನು ಸೃಷ್ಟಿಸಿದೆ. ಸಹಸ್ರಾರು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಜನ–ಜಾನವಾರುಗಳು, ಮನೆಗಳು ಹಾನಿಗೊಳಗಾಗಿವೆ. ಮನೆಯೊಳಗಿದ್ದ ಪಾತ್ರೆ-ಪಗಡೆ ಕೊಚ್ಚಿಕೊಂಡು ಹೋಗಿವೆ. ಒಟ್ಟಾರೆ ಪರಿಸ್ಥಿತಿಯಲ್ಲಿ ಉಣ್ಣಲು ಅನ್ನ ಇಲ್ಲ, ಉಡಲು ಬಟ್ಟೆ ಇಲ್ಲ, ಉಳಿಯಲು ಸೂರಿಲ್ಲ, ಕುಡಿಯಲು ನೀರಿಲ್ಲ ಎನ್ನುವ ಪರಿಸ್ಥಿತಿ ಇರುವುದನ್ನು ನಾನು ಕಣ್ಣಾರೆ ಕಂಡಿದ್ದೇನೆ” ಎಂದು ಪತ್ರದಲ್ಲಿ ಬರೆದಿದ್ದಾರೆ.

“ಮನೆಯೊಳಗಿದ್ದ ಪಾತ್ರೆ ಪಗಡೆ, ಬಟ್ಟೆಗಳು, ಮಕ್ಕಳ ಶಾಲಾ ಬ್ಯಾಗು, ಪುಸ್ತಕಗಳು, ದವಸ ಧಾನ್ಯಗಳು, ಟಿವಿ, ಫ್ರಿಡ್ಜ್, ಮಿಕ್ಸರ್, ಗ್ಯಾಸ್ ಸಿಲಿಂಡರ್‌ಗಳ ಸಮೇತ ನಿತ್ಯ ಬಳಕೆಯ ವಸ್ತುಗಳು ಕೊಚ್ಚಿಕೊಂಡು ಹೋಗಿವೆ. ಮನೆಯೊಳಗೆ ನುಗ್ಗಿದ ನೀರು ನೂರಾರು ಮನೆಗಳನ್ನು ಹಾನಿ ಮಾಡಿದೆ. ಪ್ರವಾಹದಿಂದ ಕೊಚ್ಚಿ ಬಂದ ಮಣ್ಣು, ಕೆಸರು ತುಂಬಿಕೊಂಡು ಸಾವಿರಾರು ಮನೆಗಳನ್ನು ಮುಚ್ಚಿ ಹಾಕಿದೆ. ಮಕ್ಕಳು ಮರಿಗಳಾದಿಯಾಗಿ ಎಲ್ಲರ ಆರೋಗ್ಯದ ಬಗ್ಗೆಯೂ ತುರ್ತು ಗಮನ ಹರಿಸಬೇಕಾದ, ಪೌಷ್ಠಿಕ ಆಹಾರ ಒದಗಿಸುವ ನಿಟ್ಟಿನಲ್ಲಿ ತಕ್ಷಣ ಕ್ರಮ ಜರುಗಿಸಬೇಕಾದ ಅಗತ್ಯವಿದೆ” ಎಂದು ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ.

ಇದನ್ನೂ ಓದಿ: ‘ಬಾರ್‌‌’ ಸಿಟಿ ರವಿಯ ಸಂಸ್ಕೃತಿ: ಸಿದ್ದರಾಮಯ್ಯ

“ಭತ್ತದ ಗದ್ದೆಗಳು, ತೋಟದ ಬೆಳೆಗಳು ನೀರಲ್ಲಿ ಕೊಚ್ಚಿ ಹೋಗಿವೆ, ನೀರಲ್ಲಿ ಮುಳುಗಿ ಕೊಳೆತು ಹೋಗಿವೆ. ದನದ ಕೊಟ್ಟಿಗೆಗಳು ಜಲಾವೃತ ಆಗಿರುವುದರಿಂದ ಸಂಗ್ರಹಿಸಿದ್ದ ಮೇವು ನೀರಿನಲ್ಲಿ ಕೊಚ್ಚಿ ಹೋಗಿ ಮೇವಿಗೂ ತತ್ವಾರ ಬಂದಿದೆ. 2019 ರಿಂದ 2021 ರ ವರೆಗೆ ಸತತವಾಗಿ ಈ ಜಿಲ್ಲೆಗಳು ಮೂರು ವರ್ಷದಿಂದ ನೆರೆಹಾವಳಿ ತುತ್ತಾಗುತ್ತಿವೆ. 2019 ಮತ್ತು 2020 ರಲ್ಲಿ ಹಾನಿಗೊಳಗಾದ ಪ್ರದೇಶಗಳ ಜನರಿಗೆ ಇದುವರೆಗೂ ಸಮರ್ಪಕ ಪರಿಹಾರ ಸಿಕ್ಕಿಲ್ಲ. ಮನೆ ಕಳೆದುಕೊಂಡವರಿಗೆ ಮನೆಗಳನ್ನು ನೀಡಿಲ್ಲ. ನದಿ ಪಾತ್ರದ ಗ್ರಾಮಗಳ ಸ್ಥಳಾಂತರ ಆಗಿಲ್ಲ ಎಂದು ನೆರೆಪೀಡಿತರು ತಮ್ಮ ಸಂಕಷ್ಟ ಹೇಳಿಕೊಂಡು ಕಣ್ಣೀರಿನಲ್ಲಿ ಕೈತೊಳೆಯುತ್ತಿದ್ದಾರೆ” ಎಂದಿದ್ದಾರೆ.

2019 ರಲ್ಲಿ ಪ್ರವಾಹ ಬಂದಾಗ ಆಗಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೊದಲು ಮನೆ ಕಳೆದುಕೊಂಡವರಿಗೆ ಪರಿಹಾರ ಘೋಷಿಸಿದ್ದರು. ಸರ್ಕಾರ ಈ ಹಿಂದೆ ಘೋಷಿಸಿದ್ದಂತೆ ಮನೆ ಕಳೆದುಕೊಂಡು ಬಾಡಿಗೆ ಮನೆಯಲ್ಲಿ ಇರುವವರಿಗೆ ಬಾಡಿಗೆ ಹಣ ಬಿಡುಗಡೆ ಮಾಡಿಲ್ಲ. ಪ್ರತಿ ತಿಂಗಳು ಹತ್ತು ಸಾವಿರ ನೀಡುತ್ತೇವೆ ಎಂದು ಹೇಳಿದ್ದೂ ಸುಳ್ಳಾಗಿದೆ. ಮನೆ ಕಳೆದುಕೊಂಡ ಯಾರೊಬ್ಬರಿಗೂ ಈ ವರೆಗೂ ಯಾವ ಪರಿಹಾರದ ಹಣವೂ ಸಿಕ್ಕಿಲ್ಲ ಎಂದು ಆರೋಪಿಸಿದ್ದಾರೆ.

“ನೆರೆ ಬಂದ ಅನೇಕ ಕಡೆಗಳಲ್ಲಿ ಮನೆಗಳನ್ನು ಸ್ಥಳಾಂತರ ಮಾಡುವ ಅಗತ್ಯವಿದೆ. ಇದಕ್ಕೆ ಸರ್ಕಾರ ಜಾಗ ನೀಡಬೇಕು. ಮನೆ ಕಟ್ಟಿಕೊಡಬೇಕು. ಅಗತ್ಯವಿರುವ ಹಳ್ಳಿಗಳ ಸ್ಥಳಾಂತರದ ಅನಿವಾರ್ಯತೆ ಇದ್ದು ಈ ಬಗ್ಗೆಯೂ ಸರ್ಕಾರ ಗಂಭೀರವಾಗಿ ತುರ್ತು ಕ್ರಮಕ್ಕೆ ಮುಂದಾಗಬೇಕಿದೆ. ಉತ್ತರ ಕನ್ನಡ, ಬೆಳಗಾವಿ ಜಿಲ್ಲೆಗಳಲ್ಲಿ ತೂಗು ಸೇತುವೆಗಳೂ ನೀರಿನಲ್ಲಿ ಕೊಚ್ಚಿ ಹೋಗಿದ್ದು ಇಲ್ಲಿಯವರೆಗೂ ನಿರ್ಮಾಣ ಕಾರ್ಯ ಆಗಿಲ್ಲ. ಸಾವಿರಾರು ಹೆಕ್ಟೇರ್ ಕೃಷಿ ಭೂಮಿ, ನೂರಾರು ಹೆಕ್ಟೇರ್ ತೋಟಗಳು ಕೊಚ್ಚಿ ಹೋಗಿವೆ, ಹಾಳಾಗಿವೆ. ಹಲವಾರು ಕಡೆ ತೀವ್ರ ಪ್ರಮಾಣದಲ್ಲಿ ಭೂ ಕುಸಿತ ಉಂಟಾಗಿದೆ. ರಸ್ತೆ, ಸೇತುವೆ, ಸರ್ಕಾರಿ ಶಾಲೆ, ಪಶು ಆಸ್ಪತ್ರೆ, ಕುಡಿಯುವ ನೀರಿನ ಯೋಜನೆ, ವಿದ್ಯುತ್ ಸಂಪರ್ಕ ಎಲ್ಲವೂ ಹಾಳಾಗಿರುವುದನ್ನು ನೆರೆಪೀಡಿತ ಪ್ರದೇಶಗಳ ಜನರ ಜತೆಗೇ ತೆರಳಿ ವೀಕ್ಷಿಸಿದ್ದೇನೆ” ಎಂದು ತಿಳಿಸಿದ್ದಾರೆ.

’ಕಾಳಿ ಯೋಜನೆಯ ಕದ್ರಾ ಅಣೆಕಟ್ಟೆನಿಂದ ಪೂರ್ವ ಸೂಚನೆ ಇಲ್ಲದೆ ಭಾರೀ ಪ್ರಮಾಣದಲ್ಲಿ ನೀರು ಬಿಟ್ಟಿದ್ದರಿಂದ ಹಠಾತ್ ನೆರೆಗೆ ವ್ಯಾಪಾರಿ ಮುಂಗಟ್ಟುಗಳು ನಾಶವಾಗಿವೆ. ಕೋವಿಡ್ ಮತ್ತು ಲಾಕ್‌ಡೌನ್ ಕಾರಣದಿಂದ ಮೊದಲೇ ವಿಪರೀತ ಸಂಕಷ್ಟದಲ್ಲಿದ್ದ ವ್ಯಾಪಾರಿಗಳ, ರೈತರು, ಕೂಲಿ ಕಾರ್ಮಿಕರ ಬದುಕು ಈಗ ಸಂಪೂರ್ಣ ನೆಲಕಚ್ಚಿದೆ. ಇವರಿಗೆ ತಕ್ಷಣ ಪುನರ್ವಸತಿ ಕಲ್ಪಿಸಿ ವ್ಯಾಪಾರಕ್ಕೆ ಅನುವು ಮಾಡಿಕೊಡುವ ಜತೆಗೆ ಕೂಡಲೇ ಆರ್ಥಿಕ ನೆರವು ನೀಡಿ ಈ ಸಣ್ಣ ಪುಟ್ಟ ವ್ಯಾಪಾರಿ ಸಮುದಾಯ, ರೈತರು, ಬೆಳೆಗಾರರು, ಕಾರ್ಮಿಕ ಸಮುದಾಯ ಮತ್ತೆ ತಲೆ ಎತ್ತಿ ನಿಲ್ಲುವಂತೆ ಮಾಡಬೇಕಿದೆ’ ಎಂದಿದ್ದಾರೆ.

“2019-2020 ರಲ್ಲೂ ನೆರೆಗೆ ತುತ್ತಾಗಿದ್ದ ಪ್ರದೇಶಗಳ ಸಾಕಷ್ಟು ಜನರೇ ಈ ಬಾರಿಯೂ ಪ್ರವಾಹಕ್ಕೂ ಸಿಲುಕಿದ್ದಾರೆ. ಹಾನಿಗೊಳಗಾಗಿರುವ ರಸ್ತೆ, ಸೇತುವೆ, ಶಾಲೆ, ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ, ಸರ್ಕಾರಿ ಕಚೇರಿ ಕಟ್ಟಡಗಳನ್ನು ದುರಸ್ತಿ/ ಪುನರ್‌ನಿರ್ಮಿಸಬೇಕು. ಮೂರು ವರ್ಷಗಳಿಂದ ಕೇಂದ್ರ ಸರ್ಕಾರ ಬಿಡುಗಡೆ ಮಾಡುತ್ತಿರುವ ಪ್ರವಾಹ ಪರಿಹಾರದ ಮೊತ್ತ ರಾಜ್ಯಕ್ಕೆ ಅವಮಾನ ಮಾಡಿದಂತಿದೆ. ಹೀಗಾಗಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಕೂಡಲೇ ನ್ಯಾಯೋಚಿತ ಪರಿಹಾರ ಬಿಡುಗಡೆ ಮಾಡಿಸಬೇಕು” ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಭ್ರಷ್ಟಾಚಾರವೇ ರಾಜ್ಯ ಬಿಜೆಪಿಯ ಎರಡು ವರ್ಷದ ದೊಡ್ಡ ಸಾಧನೆ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...