Homeಕರ್ನಾಟಕಸಿದ್ದು ರಾಜೀನಾಮೆ ಕೈಕಮಾಂಡ್ ಮುಂದಿನ ನಡೆ ಏನು?

ಸಿದ್ದು ರಾಜೀನಾಮೆ ಕೈಕಮಾಂಡ್ ಮುಂದಿನ ನಡೆ ಏನು?

- Advertisement -
- Advertisement -

ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಕಾಂಗ್ರೆಸ್ ನೆಲ ಕಚ್ಚುತ್ತಿದೆ. 2013ರಲ್ಲಿ ರಾಜ್ಯದಲ್ಲಿ ಬಹುಮತದ ಸರ್ಕಾರ ರಚಿಸಿದ್ದ ಕಾಂಗ್ರೆಸ್‍ಗೂ, ದಿವಂಗತ ದೇವರಾಜು ಅರಸು ನಂತರ 5 ವರ್ಷ ಸುಭದ್ರ ಸರ್ಕಾರ ನೀಡಿದ ಖ್ಯಾತಿಗೆ ಒಳಗಾಗಿದ್ದ ಸಿದ್ದರಾಮಯ್ಯನವರಿಗೂ 2018ರ ವಿಧಾನಸಭೆ ದೊಡ್ಡ ಹೊಡೆತ ಕೊಟ್ಟಿತ್ತು. ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ ಎದುರಿಸಿದ್ದ ಕಾಂಗ್ರೆಸ್ 122 ಸ್ಥಾನದಿಂದ ಕೇವಲ 88 ಸ್ಥಾನಕ್ಕೆ ಕುಸಿದಿತ್ತು. ಆದರೂ ಪಕ್ಷದಲ್ಲಿ ರಾಜೀನಾಮೆ ಪರ್ವ ಆರಂಭವಾಗಿರಲಿಲ್ಲ.

ಇನ್ನು 2019ರ ಲೋಕಸಭಾ ಚುನಾವಣೆಯಂತೂ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಹೇಳಹೆಸರಿಲ್ಲದಂತೆ ಮಾಡಿತ್ತು. 2014ರಲ್ಲಿ ದೇಶಾದ್ಯಂತ ವ್ಯಾಪಿಸಿದ್ದ ನರೇಂದ್ರ ಮೋದಿ ಅಲೆಯ ನಡುವೆಯೂ ರಾಜ್ಯದಲ್ಲಿ 9 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದ ಕಾಂಗ್ರೆಸ್, ಜೆಡಿಎಸ್ ಜೊತೆಗೆ ಮೈತ್ರಿ ಸಾಧಿಸಿಕೊಂಡು ಚುನಾವಣೆ ಎದುರಿಸಿದ್ದಾಗ್ಯೂ ಕೇವಲ 1 ಸ್ಥಾನಕ್ಕೆ ಮಾತ್ರ ತೃಪ್ತಿಪಡಬೇಕಾಗಿ ಬಂದದ್ದು ವಿಪರ್ಯಾಸ. ಆಗಲೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗಲಿ, ಸಿಎಲ್‍ಪಿ ನಾಯಕ ಸಿದ್ದರಾಮಯ್ಯನವರಾಗಲಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿರಲಿಲ್ಲ. ಆದರೆ, ಈ ಒಂದು ಉಪಚುನಾವಣೆ ಕೈ ಪಕ್ಷದಲ್ಲಿ ದೊಡ್ಡ ತಲ್ಲಣಕ್ಕೆ ಕಾರಣವಾಗಿದೆ.

ಈಗಾಗಲೇ ಎರಡು ಪ್ರಮುಖ ವಿಕೆಟ್‍ಗಳನ್ನು ಬೀಳಿಸಿರುವ ಉಪಚುನಾವಣೆ, ಕನಿಷ್ಟ ಇನ್ನೂ ಎರಡು ವಿಕೆಟ್‍ಗಳನ್ನು ಬೀಳಿಸುವ ಸಾಧ್ಯತೆಯನ್ನೂ ತೆರೆದಿಟ್ಟಿದೆ.

ಉಪಚುನಾವಣೆಯ ಹೊಣೆಹೊತ್ತು ಸಾಲುಸಾಲು ನಾಯಕರು ರಾಜೀನಾಮೆ ನೀಡುತ್ತಿದ್ದಾರೆ. ಸೋಮವಾರ ಫಲಿತಾಂಶ ಹೊರಬೀಳುತ್ತಿದ್ದಂತೆ ಸಂಜೆ ವೇಳೆಗೆ ಪತ್ರಿಕಾಗೋಷ್ಠಿ ಕರೆದಿದ್ದ ಸಿದ್ದರಾಮಯ್ಯ ತಾವು ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೂ ಕಳುಹಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಈ ವೇಳೆ ಆಪ್ತರೊಂದಿಗೆ ರಾಜೀನಾಮೆಯ ಕಾರಣ ಬಿಚ್ಚಿಟ್ಟಿರುವ ಸಿದ್ದರಾಮಯ್ಯ, “ನಾನು ಬಿಜೆಪಿಯ ಎದುರು ಸೆಣಸಬಲ್ಲೆ. ಆದರೆ, ಕತ್ತಲಿನಲ್ಲಿ ನಿಂತು ಬಾಣ ಬಿಡುವ ಸ್ವಪಕ್ಷದ ಹಿತಶತ್ರುಗಳ ವಿರುದ್ಧ ಹೋರಾಡಲಾರೆ” ಎಂದು ಹೇಳಿರುವುದು ಕೈ ಪಕ್ಷದೊಳಗಿರುವ ಭಿನ್ನಮತಕ್ಕೆ ಸಾಕ್ಷಿಯಾಗಿದೆ.

ಇನ್ನೂ ಸಿದ್ದರಾಮಯ್ಯ ಬೆನ್ನಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಹ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರನಡೆದಿದ್ದಾರೆ. ಇವರಲ್ಲದೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಸಹ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸೂಚನೆ ನೀಡಿದ್ದಾರೆ. ದಿಢೀರ್ ಬೆಳವಣಿಗೆಯಲ್ಲಿ ಈ ಇಬ್ಬರೂ ನಾಯಕರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದರೆ ಅಚ್ಚರಿಯಿಲ್ಲ.

ಅಲ್ಲಿಗೆ ವಿಧಾನಸಭೆ-ಲೋಕಸಭೆ ಚುನಾವಣಾ ಸೋಲಿಗೆ ಕುಗ್ಗದ ಕಾಂಗ್ರೆಸ್ ಘಟಾನುಘಟಿ ನಾಯಕರನ್ನು 15 ಕ್ಷೇತ್ರದ ಉಪಚುನಾವಣೆ ಹುರಿದು ಮುಕ್ಕಿದಂತಾಗಿದೆ. ಈಗಾಗಲೇ ಎರಡು ಪ್ರಮುಖ ವಿಕೆಟ್‍ಗಳನ್ನು ಬೀಳಿಸಿರುವ ಉಪ ಚುನಾವಣೆ, ಕನಿಷ್ಟ ಇನ್ನೂ ಎರಡು ವಿಕೆಟ್‍ಗಳನ್ನು ಬೀಳಿಸುವ ಸಾಧ್ಯತೆಯನ್ನೂ ತೆರೆದಿಟ್ಟಿದೆ. ಸಿದ್ದರಾಮಯ್ಯ ಅವರ ಈ ನಿರ್ಧಾರ ಸಾಮಾನ್ಯವಾಗಿ ರಾಜ್ಯ ಕಾಂಗ್ರೆಸ್‍ನಲ್ಲಿ ನಾಯಕತ್ವ ನಿರ್ವಾತ ಸ್ಥಿತಿಗೆ ಕಾರಣವಾಗಿದ್ದು, ಹೈಕಮಾಂಡ್ ಅನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿರುವುದು ಸುಳ್ಳಲ್ಲ.

ಕಾಂಗ್ರೆಸ್ ಹೈಕಮಾಂಡ್ ಮುಂದಿನ ನಡೆ ಏನು?

ಸತತ ಎಲ್ಲಾ ಚುನಾವಣೆಯಲ್ಲೂ ಸೋಲನುಭವಿಸಿದರೂ ಸಹ ಕಾಂಗ್ರೆಸ್ ಪಾಲಿಗೆ ಸಿದ್ದರಾಮಯ್ಯ ಈಗಲೂ ವರ್ಚಸ್ವಿ ನಾಯಕ ಎಂಬುದರಲ್ಲಿ ಎರಡು ಮಾತಿಲ್ಲ. ಸತತ 5 ವರ್ಷ ಸಿಎಂ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸಿದ್ದ ಸಿದ್ದರಾಮಯ್ಯ, ವಿಪಕ್ಷ ನಾಯಕನ ಸ್ಥಾನವನ್ನೂ ಅಷ್ಟೇ ಸಮರ್ಥವಾಗಿ ನಿಭಾಯಿಸಿದ್ದಾರೆ. ಅಲ್ಲದೆ, ಆಡಳಿತಾರೂಢ ಪಕ್ಷವನ್ನು ಕಟು ಟೀಕೆಗೆ ಗುರಿಪಡಿಸುವ ಮೂಲಕ ಇಕ್ಕಟ್ಟಿಗೆ ಸಿಲುಕಿಸಬಲ್ಲ ಸಾಮಥ್ರ್ಯವಿರುವ ನಾಯಕ ಎಂಬ ಹೆಗ್ಗಳಿಕೆಯೂ ಸಿದ್ದರಾಮಯ್ಯ ಬೆನ್ನಿಗಿದೆ.

ಮುಂದಿನ ಮೂರೂ ವರ್ಷವೂ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನದಲ್ಲೇ ಮುಂದುವರೆದರೆ ಆಡಳಿತ ಪಕ್ಷದ ಎಲ್ಲಾ ವೈಫಲ್ಯವನ್ನು ಜನರ ಮುಂದೆ ಬಿಚ್ಚಿಡುತ್ತಾರೆ ಎಂಬ ಭಯ ಸ್ವತಃ ಬಿಜೆಪಿ ಪಾಳಯದಲ್ಲೂ ಇರುವುದು ಸುಳ್ಳಲ್ಲ. ಅಕಸ್ಮಾತ್ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಕಾಂಗ್ರೆಸ್ ಹೈಕಮಾಂಡ್ ಅಂಗೀಕಾರ ಮಾಡಿದರೆ ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಸೈಲೆಂಟ್ ಆಗಿಬಿಡುತ್ತಾರೆ. ಈ ಬೆಳವಣಿಗೆ ಬಿಜೆಪಿ ಪಕ್ಷಕ್ಕೆ ಲಾಭವಾಗಿ ಪರಿಣಮಿಸುವ ಸಾಧ್ಯತೆ ಇದೆ. ಹೀಗಾಗಿ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನದಲ್ಲೇ ಮುಂದುವರೆದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕಾಗಬಹುದಾದ ಲಾಭದ ಕುರಿತ ಮಾಹಿತಿ ಕಾಂಗ್ರೆಸ್ ರಾಷ್ಟ್ರ ನಾಯಕರಿಗೂ ತಿಳಿದಿದೆ. ಅಲ್ಲದೆ, ಪ್ರಸ್ತುತ ಸಿದ್ದರಾಮಯ್ಯ ಅವರ ಸ್ಥಾನವನ್ನು ತುಂಬಬಲ್ಲ ಮತ್ತೋರ್ವ ನಾಯಕನ ಹುಡುಕಾಟ ಮಾಡುತ್ತಾ ಕೂತರೆ ಮತ್ತಷ್ಟು ಭಿನ್ನಮತ ಹೆಚ್ಚಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ..

ಹೀಗಾಗಿ ಕಾಂಗ್ರೆಸ್ ಹೈಕಮಾಂಡ್‍ಗೆ ಸಿದ್ದರಾಮಯ್ಯ ಅವರನ್ನು ರಾಜ್ಯ ರಾಜಕೀಯದಲ್ಲಿ ಉಳಿಸಿಕೊಳ್ಳದೆ ಬೇರೆ ವಿಧಿಯಿಲ್ಲ. ಇದೇ ಕಾರಣಕ್ಕೆ ಉಪಚುನಾವಣಾ ಫಲಿತಾಂಶದ ಕಾವು ತಣ್ಣಗಾದ ನಂತರ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ಮುಂದುವರೆಸುತ್ತದೆ ಅನ್ನುತ್ತವೆ ರಾಜಕೀಯ ವಠಾರಗಳು. ಇಲ್ಲದೆ ಹೋದರೆ ಎಂ ಬಿ ಪಾಟೀಲ್, ಎಚ್ ಕೆ ಪಾಟೀಲ್ ಇಲ್ಲವೇ ಕೃಷ್ಣ ಭೈರೆಗೌಡರಿಗೆ ಲಾಟರಿ ಹೊಡೆಯಬಹುದು….

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ನೇಮಕ ಸಾಧ್ಯತೆ?

ಕರ್ನಾಟಕ ಪ್ರದೇಶ ಕಾಂಗ್ರೆಸ್‍ಗೆ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕವಾದ ದಿನದಿಂದ ಒಂದಲ್ಲಾ ಒಂದು ಅಪಸ್ವರ, ಭಿನ್ನಮತ ಕೇಳಿಬರುತ್ತಲೇ ಇವೆ. ಮತ್ತೊಂದೆಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿ ಸರಿಸುಮಾರು ಒಂದು ತಿಂಗಳು ದೆಹಲಿಯ ತಿಹಾರ್ ಜೈಲಿನಲ್ಲಿ ಕಳೆದುಬಂದ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಗ್ರಾಫ್ ಕಾಂಗ್ರೆಸ್‍ನಲ್ಲಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡುವುದಕ್ಕೂ, ಆ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಹೆಸರು ಕೇಳಿಬರುತ್ತಿರುವುದಕ್ಕೂ ಸರಿಯಾಗಿದೆ.

ಕಾಂಗ್ರೆಸ್ ಪಕ್ಷದ ವರ್ಚಸ್ವಿ ನಾಯಕರ ಪೈಕಿ ಡಿ.ಕೆ. ಶಿವಕುಮಾರ್ ಮುಂಚೂಣಿ ನಾಯಕ. ಯಾವುದೇ ಸಂದರ್ಭದಲ್ಲಿ ಪಕ್ಷಕ್ಕೆ ಎದುರಾಗಬಲ್ಲ ಸಮಸ್ಯೆಯನ್ನು ನೀಗಿಸಬಲ್ಲ ಸಾಮಥ್ರ್ಯವಿರುವ ನಾಯಕ. ಇದೇ ಕಾರಣಕ್ಕೆ ಅವರನ್ನು ಕಾಂಗ್ರೆಸ್ ಟ್ರಬಲ್ ಶೂಟರ್ ಎಂದು ಕರೆಯಲಾಗುತ್ತದೆ. ಆದರೆ, ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯದಲ್ಲಿ ಕೆಲವಾರು ಪ್ರಕರಣಗಳು ಇದ್ದ ಕಾರಣಕ್ಕೆ ಅವರಿಗೆ ಪಕ್ಷದಲ್ಲಿ ಈವರೆಗೆ ಉನ್ನತ ಸ್ಥಾನಮಾನಗಳನ್ನು ನೀಡಲಾಗಿರಲಿಲ್ಲ.

ಆದರೆ, ಪ್ರಸ್ತುತ ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್ ಪಾತಾಳಕ್ಕೆ ಕುಸಿದಿದ್ದು ಪಕ್ಷವನ್ನು ಮತ್ತೆ ಮೇಲೆತ್ತಲು ಡಿ.ಕೆ. ಶಿವಕುಮಾರ್ ಅವರಂತಹ ನಾಯಕತ್ವದ ಅಗತ್ಯವಿದೆ. ಹೀಗಾಗಿ ಶೀಘ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಡಿ.ಕೆ. ಶಿವಕುಮಾರ್ ಅವರನ್ನು ನೇಮಕ ಮಾಡಿದರೂ ಅಚ್ಚರಿ ಇಲ್ಲ. ಇಲ್ಲದೇ ಹೋದರೆ ಚುನಾವಣೆ ಹತ್ತಿರ ಬರುವವರೆಗು ಶಾಂತಿ ಸಮಯದ ನಾಯಕ ಸ್ಥಾನ ಮುನಿಯಪ್ಪ, ಪಾಟೀಲ್ ಇಲ್ಲವೇ ಸತೀಶ್ ಜಾರಕಿಹೊಳಿ ಪಾಲಾದರು ಅಚ್ಚರಿ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...