Homeಕರ್ನಾಟಕಸಿದ್ದು ರಾಜೀನಾಮೆ ಕೈಕಮಾಂಡ್ ಮುಂದಿನ ನಡೆ ಏನು?

ಸಿದ್ದು ರಾಜೀನಾಮೆ ಕೈಕಮಾಂಡ್ ಮುಂದಿನ ನಡೆ ಏನು?

- Advertisement -
- Advertisement -

ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಕಾಂಗ್ರೆಸ್ ನೆಲ ಕಚ್ಚುತ್ತಿದೆ. 2013ರಲ್ಲಿ ರಾಜ್ಯದಲ್ಲಿ ಬಹುಮತದ ಸರ್ಕಾರ ರಚಿಸಿದ್ದ ಕಾಂಗ್ರೆಸ್‍ಗೂ, ದಿವಂಗತ ದೇವರಾಜು ಅರಸು ನಂತರ 5 ವರ್ಷ ಸುಭದ್ರ ಸರ್ಕಾರ ನೀಡಿದ ಖ್ಯಾತಿಗೆ ಒಳಗಾಗಿದ್ದ ಸಿದ್ದರಾಮಯ್ಯನವರಿಗೂ 2018ರ ವಿಧಾನಸಭೆ ದೊಡ್ಡ ಹೊಡೆತ ಕೊಟ್ಟಿತ್ತು. ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ ಎದುರಿಸಿದ್ದ ಕಾಂಗ್ರೆಸ್ 122 ಸ್ಥಾನದಿಂದ ಕೇವಲ 88 ಸ್ಥಾನಕ್ಕೆ ಕುಸಿದಿತ್ತು. ಆದರೂ ಪಕ್ಷದಲ್ಲಿ ರಾಜೀನಾಮೆ ಪರ್ವ ಆರಂಭವಾಗಿರಲಿಲ್ಲ.

ಇನ್ನು 2019ರ ಲೋಕಸಭಾ ಚುನಾವಣೆಯಂತೂ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಹೇಳಹೆಸರಿಲ್ಲದಂತೆ ಮಾಡಿತ್ತು. 2014ರಲ್ಲಿ ದೇಶಾದ್ಯಂತ ವ್ಯಾಪಿಸಿದ್ದ ನರೇಂದ್ರ ಮೋದಿ ಅಲೆಯ ನಡುವೆಯೂ ರಾಜ್ಯದಲ್ಲಿ 9 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದ ಕಾಂಗ್ರೆಸ್, ಜೆಡಿಎಸ್ ಜೊತೆಗೆ ಮೈತ್ರಿ ಸಾಧಿಸಿಕೊಂಡು ಚುನಾವಣೆ ಎದುರಿಸಿದ್ದಾಗ್ಯೂ ಕೇವಲ 1 ಸ್ಥಾನಕ್ಕೆ ಮಾತ್ರ ತೃಪ್ತಿಪಡಬೇಕಾಗಿ ಬಂದದ್ದು ವಿಪರ್ಯಾಸ. ಆಗಲೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗಲಿ, ಸಿಎಲ್‍ಪಿ ನಾಯಕ ಸಿದ್ದರಾಮಯ್ಯನವರಾಗಲಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿರಲಿಲ್ಲ. ಆದರೆ, ಈ ಒಂದು ಉಪಚುನಾವಣೆ ಕೈ ಪಕ್ಷದಲ್ಲಿ ದೊಡ್ಡ ತಲ್ಲಣಕ್ಕೆ ಕಾರಣವಾಗಿದೆ.

ಈಗಾಗಲೇ ಎರಡು ಪ್ರಮುಖ ವಿಕೆಟ್‍ಗಳನ್ನು ಬೀಳಿಸಿರುವ ಉಪಚುನಾವಣೆ, ಕನಿಷ್ಟ ಇನ್ನೂ ಎರಡು ವಿಕೆಟ್‍ಗಳನ್ನು ಬೀಳಿಸುವ ಸಾಧ್ಯತೆಯನ್ನೂ ತೆರೆದಿಟ್ಟಿದೆ.

ಉಪಚುನಾವಣೆಯ ಹೊಣೆಹೊತ್ತು ಸಾಲುಸಾಲು ನಾಯಕರು ರಾಜೀನಾಮೆ ನೀಡುತ್ತಿದ್ದಾರೆ. ಸೋಮವಾರ ಫಲಿತಾಂಶ ಹೊರಬೀಳುತ್ತಿದ್ದಂತೆ ಸಂಜೆ ವೇಳೆಗೆ ಪತ್ರಿಕಾಗೋಷ್ಠಿ ಕರೆದಿದ್ದ ಸಿದ್ದರಾಮಯ್ಯ ತಾವು ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೂ ಕಳುಹಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಈ ವೇಳೆ ಆಪ್ತರೊಂದಿಗೆ ರಾಜೀನಾಮೆಯ ಕಾರಣ ಬಿಚ್ಚಿಟ್ಟಿರುವ ಸಿದ್ದರಾಮಯ್ಯ, “ನಾನು ಬಿಜೆಪಿಯ ಎದುರು ಸೆಣಸಬಲ್ಲೆ. ಆದರೆ, ಕತ್ತಲಿನಲ್ಲಿ ನಿಂತು ಬಾಣ ಬಿಡುವ ಸ್ವಪಕ್ಷದ ಹಿತಶತ್ರುಗಳ ವಿರುದ್ಧ ಹೋರಾಡಲಾರೆ” ಎಂದು ಹೇಳಿರುವುದು ಕೈ ಪಕ್ಷದೊಳಗಿರುವ ಭಿನ್ನಮತಕ್ಕೆ ಸಾಕ್ಷಿಯಾಗಿದೆ.

ಇನ್ನೂ ಸಿದ್ದರಾಮಯ್ಯ ಬೆನ್ನಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಹ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರನಡೆದಿದ್ದಾರೆ. ಇವರಲ್ಲದೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಸಹ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸೂಚನೆ ನೀಡಿದ್ದಾರೆ. ದಿಢೀರ್ ಬೆಳವಣಿಗೆಯಲ್ಲಿ ಈ ಇಬ್ಬರೂ ನಾಯಕರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದರೆ ಅಚ್ಚರಿಯಿಲ್ಲ.

ಅಲ್ಲಿಗೆ ವಿಧಾನಸಭೆ-ಲೋಕಸಭೆ ಚುನಾವಣಾ ಸೋಲಿಗೆ ಕುಗ್ಗದ ಕಾಂಗ್ರೆಸ್ ಘಟಾನುಘಟಿ ನಾಯಕರನ್ನು 15 ಕ್ಷೇತ್ರದ ಉಪಚುನಾವಣೆ ಹುರಿದು ಮುಕ್ಕಿದಂತಾಗಿದೆ. ಈಗಾಗಲೇ ಎರಡು ಪ್ರಮುಖ ವಿಕೆಟ್‍ಗಳನ್ನು ಬೀಳಿಸಿರುವ ಉಪ ಚುನಾವಣೆ, ಕನಿಷ್ಟ ಇನ್ನೂ ಎರಡು ವಿಕೆಟ್‍ಗಳನ್ನು ಬೀಳಿಸುವ ಸಾಧ್ಯತೆಯನ್ನೂ ತೆರೆದಿಟ್ಟಿದೆ. ಸಿದ್ದರಾಮಯ್ಯ ಅವರ ಈ ನಿರ್ಧಾರ ಸಾಮಾನ್ಯವಾಗಿ ರಾಜ್ಯ ಕಾಂಗ್ರೆಸ್‍ನಲ್ಲಿ ನಾಯಕತ್ವ ನಿರ್ವಾತ ಸ್ಥಿತಿಗೆ ಕಾರಣವಾಗಿದ್ದು, ಹೈಕಮಾಂಡ್ ಅನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿರುವುದು ಸುಳ್ಳಲ್ಲ.

ಕಾಂಗ್ರೆಸ್ ಹೈಕಮಾಂಡ್ ಮುಂದಿನ ನಡೆ ಏನು?

ಸತತ ಎಲ್ಲಾ ಚುನಾವಣೆಯಲ್ಲೂ ಸೋಲನುಭವಿಸಿದರೂ ಸಹ ಕಾಂಗ್ರೆಸ್ ಪಾಲಿಗೆ ಸಿದ್ದರಾಮಯ್ಯ ಈಗಲೂ ವರ್ಚಸ್ವಿ ನಾಯಕ ಎಂಬುದರಲ್ಲಿ ಎರಡು ಮಾತಿಲ್ಲ. ಸತತ 5 ವರ್ಷ ಸಿಎಂ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸಿದ್ದ ಸಿದ್ದರಾಮಯ್ಯ, ವಿಪಕ್ಷ ನಾಯಕನ ಸ್ಥಾನವನ್ನೂ ಅಷ್ಟೇ ಸಮರ್ಥವಾಗಿ ನಿಭಾಯಿಸಿದ್ದಾರೆ. ಅಲ್ಲದೆ, ಆಡಳಿತಾರೂಢ ಪಕ್ಷವನ್ನು ಕಟು ಟೀಕೆಗೆ ಗುರಿಪಡಿಸುವ ಮೂಲಕ ಇಕ್ಕಟ್ಟಿಗೆ ಸಿಲುಕಿಸಬಲ್ಲ ಸಾಮಥ್ರ್ಯವಿರುವ ನಾಯಕ ಎಂಬ ಹೆಗ್ಗಳಿಕೆಯೂ ಸಿದ್ದರಾಮಯ್ಯ ಬೆನ್ನಿಗಿದೆ.

ಮುಂದಿನ ಮೂರೂ ವರ್ಷವೂ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನದಲ್ಲೇ ಮುಂದುವರೆದರೆ ಆಡಳಿತ ಪಕ್ಷದ ಎಲ್ಲಾ ವೈಫಲ್ಯವನ್ನು ಜನರ ಮುಂದೆ ಬಿಚ್ಚಿಡುತ್ತಾರೆ ಎಂಬ ಭಯ ಸ್ವತಃ ಬಿಜೆಪಿ ಪಾಳಯದಲ್ಲೂ ಇರುವುದು ಸುಳ್ಳಲ್ಲ. ಅಕಸ್ಮಾತ್ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಕಾಂಗ್ರೆಸ್ ಹೈಕಮಾಂಡ್ ಅಂಗೀಕಾರ ಮಾಡಿದರೆ ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಸೈಲೆಂಟ್ ಆಗಿಬಿಡುತ್ತಾರೆ. ಈ ಬೆಳವಣಿಗೆ ಬಿಜೆಪಿ ಪಕ್ಷಕ್ಕೆ ಲಾಭವಾಗಿ ಪರಿಣಮಿಸುವ ಸಾಧ್ಯತೆ ಇದೆ. ಹೀಗಾಗಿ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನದಲ್ಲೇ ಮುಂದುವರೆದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕಾಗಬಹುದಾದ ಲಾಭದ ಕುರಿತ ಮಾಹಿತಿ ಕಾಂಗ್ರೆಸ್ ರಾಷ್ಟ್ರ ನಾಯಕರಿಗೂ ತಿಳಿದಿದೆ. ಅಲ್ಲದೆ, ಪ್ರಸ್ತುತ ಸಿದ್ದರಾಮಯ್ಯ ಅವರ ಸ್ಥಾನವನ್ನು ತುಂಬಬಲ್ಲ ಮತ್ತೋರ್ವ ನಾಯಕನ ಹುಡುಕಾಟ ಮಾಡುತ್ತಾ ಕೂತರೆ ಮತ್ತಷ್ಟು ಭಿನ್ನಮತ ಹೆಚ್ಚಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ..

ಹೀಗಾಗಿ ಕಾಂಗ್ರೆಸ್ ಹೈಕಮಾಂಡ್‍ಗೆ ಸಿದ್ದರಾಮಯ್ಯ ಅವರನ್ನು ರಾಜ್ಯ ರಾಜಕೀಯದಲ್ಲಿ ಉಳಿಸಿಕೊಳ್ಳದೆ ಬೇರೆ ವಿಧಿಯಿಲ್ಲ. ಇದೇ ಕಾರಣಕ್ಕೆ ಉಪಚುನಾವಣಾ ಫಲಿತಾಂಶದ ಕಾವು ತಣ್ಣಗಾದ ನಂತರ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ಮುಂದುವರೆಸುತ್ತದೆ ಅನ್ನುತ್ತವೆ ರಾಜಕೀಯ ವಠಾರಗಳು. ಇಲ್ಲದೆ ಹೋದರೆ ಎಂ ಬಿ ಪಾಟೀಲ್, ಎಚ್ ಕೆ ಪಾಟೀಲ್ ಇಲ್ಲವೇ ಕೃಷ್ಣ ಭೈರೆಗೌಡರಿಗೆ ಲಾಟರಿ ಹೊಡೆಯಬಹುದು….

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ನೇಮಕ ಸಾಧ್ಯತೆ?

ಕರ್ನಾಟಕ ಪ್ರದೇಶ ಕಾಂಗ್ರೆಸ್‍ಗೆ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕವಾದ ದಿನದಿಂದ ಒಂದಲ್ಲಾ ಒಂದು ಅಪಸ್ವರ, ಭಿನ್ನಮತ ಕೇಳಿಬರುತ್ತಲೇ ಇವೆ. ಮತ್ತೊಂದೆಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿ ಸರಿಸುಮಾರು ಒಂದು ತಿಂಗಳು ದೆಹಲಿಯ ತಿಹಾರ್ ಜೈಲಿನಲ್ಲಿ ಕಳೆದುಬಂದ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಗ್ರಾಫ್ ಕಾಂಗ್ರೆಸ್‍ನಲ್ಲಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡುವುದಕ್ಕೂ, ಆ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಹೆಸರು ಕೇಳಿಬರುತ್ತಿರುವುದಕ್ಕೂ ಸರಿಯಾಗಿದೆ.

ಕಾಂಗ್ರೆಸ್ ಪಕ್ಷದ ವರ್ಚಸ್ವಿ ನಾಯಕರ ಪೈಕಿ ಡಿ.ಕೆ. ಶಿವಕುಮಾರ್ ಮುಂಚೂಣಿ ನಾಯಕ. ಯಾವುದೇ ಸಂದರ್ಭದಲ್ಲಿ ಪಕ್ಷಕ್ಕೆ ಎದುರಾಗಬಲ್ಲ ಸಮಸ್ಯೆಯನ್ನು ನೀಗಿಸಬಲ್ಲ ಸಾಮಥ್ರ್ಯವಿರುವ ನಾಯಕ. ಇದೇ ಕಾರಣಕ್ಕೆ ಅವರನ್ನು ಕಾಂಗ್ರೆಸ್ ಟ್ರಬಲ್ ಶೂಟರ್ ಎಂದು ಕರೆಯಲಾಗುತ್ತದೆ. ಆದರೆ, ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯದಲ್ಲಿ ಕೆಲವಾರು ಪ್ರಕರಣಗಳು ಇದ್ದ ಕಾರಣಕ್ಕೆ ಅವರಿಗೆ ಪಕ್ಷದಲ್ಲಿ ಈವರೆಗೆ ಉನ್ನತ ಸ್ಥಾನಮಾನಗಳನ್ನು ನೀಡಲಾಗಿರಲಿಲ್ಲ.

ಆದರೆ, ಪ್ರಸ್ತುತ ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್ ಪಾತಾಳಕ್ಕೆ ಕುಸಿದಿದ್ದು ಪಕ್ಷವನ್ನು ಮತ್ತೆ ಮೇಲೆತ್ತಲು ಡಿ.ಕೆ. ಶಿವಕುಮಾರ್ ಅವರಂತಹ ನಾಯಕತ್ವದ ಅಗತ್ಯವಿದೆ. ಹೀಗಾಗಿ ಶೀಘ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಡಿ.ಕೆ. ಶಿವಕುಮಾರ್ ಅವರನ್ನು ನೇಮಕ ಮಾಡಿದರೂ ಅಚ್ಚರಿ ಇಲ್ಲ. ಇಲ್ಲದೇ ಹೋದರೆ ಚುನಾವಣೆ ಹತ್ತಿರ ಬರುವವರೆಗು ಶಾಂತಿ ಸಮಯದ ನಾಯಕ ಸ್ಥಾನ ಮುನಿಯಪ್ಪ, ಪಾಟೀಲ್ ಇಲ್ಲವೇ ಸತೀಶ್ ಜಾರಕಿಹೊಳಿ ಪಾಲಾದರು ಅಚ್ಚರಿ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...