Homeಕರ್ನಾಟಕಸಿದ್ದು ರಾಜೀನಾಮೆ ಕೈಕಮಾಂಡ್ ಮುಂದಿನ ನಡೆ ಏನು?

ಸಿದ್ದು ರಾಜೀನಾಮೆ ಕೈಕಮಾಂಡ್ ಮುಂದಿನ ನಡೆ ಏನು?

- Advertisement -
- Advertisement -

ರಾಜ್ಯ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಕಾಂಗ್ರೆಸ್ ನೆಲ ಕಚ್ಚುತ್ತಿದೆ. 2013ರಲ್ಲಿ ರಾಜ್ಯದಲ್ಲಿ ಬಹುಮತದ ಸರ್ಕಾರ ರಚಿಸಿದ್ದ ಕಾಂಗ್ರೆಸ್‍ಗೂ, ದಿವಂಗತ ದೇವರಾಜು ಅರಸು ನಂತರ 5 ವರ್ಷ ಸುಭದ್ರ ಸರ್ಕಾರ ನೀಡಿದ ಖ್ಯಾತಿಗೆ ಒಳಗಾಗಿದ್ದ ಸಿದ್ದರಾಮಯ್ಯನವರಿಗೂ 2018ರ ವಿಧಾನಸಭೆ ದೊಡ್ಡ ಹೊಡೆತ ಕೊಟ್ಟಿತ್ತು. ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲೇ ಚುನಾವಣೆ ಎದುರಿಸಿದ್ದ ಕಾಂಗ್ರೆಸ್ 122 ಸ್ಥಾನದಿಂದ ಕೇವಲ 88 ಸ್ಥಾನಕ್ಕೆ ಕುಸಿದಿತ್ತು. ಆದರೂ ಪಕ್ಷದಲ್ಲಿ ರಾಜೀನಾಮೆ ಪರ್ವ ಆರಂಭವಾಗಿರಲಿಲ್ಲ.

ಇನ್ನು 2019ರ ಲೋಕಸಭಾ ಚುನಾವಣೆಯಂತೂ ಕಾಂಗ್ರೆಸ್ ಪಕ್ಷವನ್ನು ರಾಜ್ಯದಲ್ಲಿ ಹೇಳಹೆಸರಿಲ್ಲದಂತೆ ಮಾಡಿತ್ತು. 2014ರಲ್ಲಿ ದೇಶಾದ್ಯಂತ ವ್ಯಾಪಿಸಿದ್ದ ನರೇಂದ್ರ ಮೋದಿ ಅಲೆಯ ನಡುವೆಯೂ ರಾಜ್ಯದಲ್ಲಿ 9 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದ ಕಾಂಗ್ರೆಸ್, ಜೆಡಿಎಸ್ ಜೊತೆಗೆ ಮೈತ್ರಿ ಸಾಧಿಸಿಕೊಂಡು ಚುನಾವಣೆ ಎದುರಿಸಿದ್ದಾಗ್ಯೂ ಕೇವಲ 1 ಸ್ಥಾನಕ್ಕೆ ಮಾತ್ರ ತೃಪ್ತಿಪಡಬೇಕಾಗಿ ಬಂದದ್ದು ವಿಪರ್ಯಾಸ. ಆಗಲೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆಗಲಿ, ಸಿಎಲ್‍ಪಿ ನಾಯಕ ಸಿದ್ದರಾಮಯ್ಯನವರಾಗಲಿ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿರಲಿಲ್ಲ. ಆದರೆ, ಈ ಒಂದು ಉಪಚುನಾವಣೆ ಕೈ ಪಕ್ಷದಲ್ಲಿ ದೊಡ್ಡ ತಲ್ಲಣಕ್ಕೆ ಕಾರಣವಾಗಿದೆ.

ಈಗಾಗಲೇ ಎರಡು ಪ್ರಮುಖ ವಿಕೆಟ್‍ಗಳನ್ನು ಬೀಳಿಸಿರುವ ಉಪಚುನಾವಣೆ, ಕನಿಷ್ಟ ಇನ್ನೂ ಎರಡು ವಿಕೆಟ್‍ಗಳನ್ನು ಬೀಳಿಸುವ ಸಾಧ್ಯತೆಯನ್ನೂ ತೆರೆದಿಟ್ಟಿದೆ.

ಉಪಚುನಾವಣೆಯ ಹೊಣೆಹೊತ್ತು ಸಾಲುಸಾಲು ನಾಯಕರು ರಾಜೀನಾಮೆ ನೀಡುತ್ತಿದ್ದಾರೆ. ಸೋಮವಾರ ಫಲಿತಾಂಶ ಹೊರಬೀಳುತ್ತಿದ್ದಂತೆ ಸಂಜೆ ವೇಳೆಗೆ ಪತ್ರಿಕಾಗೋಷ್ಠಿ ಕರೆದಿದ್ದ ಸಿದ್ದರಾಮಯ್ಯ ತಾವು ವಿಪಕ್ಷ ನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೂ ಕಳುಹಿಸಿರುವುದಾಗಿ ಸ್ಪಷ್ಟಪಡಿಸಿದ್ದಾರೆ. ಈ ವೇಳೆ ಆಪ್ತರೊಂದಿಗೆ ರಾಜೀನಾಮೆಯ ಕಾರಣ ಬಿಚ್ಚಿಟ್ಟಿರುವ ಸಿದ್ದರಾಮಯ್ಯ, “ನಾನು ಬಿಜೆಪಿಯ ಎದುರು ಸೆಣಸಬಲ್ಲೆ. ಆದರೆ, ಕತ್ತಲಿನಲ್ಲಿ ನಿಂತು ಬಾಣ ಬಿಡುವ ಸ್ವಪಕ್ಷದ ಹಿತಶತ್ರುಗಳ ವಿರುದ್ಧ ಹೋರಾಡಲಾರೆ” ಎಂದು ಹೇಳಿರುವುದು ಕೈ ಪಕ್ಷದೊಳಗಿರುವ ಭಿನ್ನಮತಕ್ಕೆ ಸಾಕ್ಷಿಯಾಗಿದೆ.

ಇನ್ನೂ ಸಿದ್ದರಾಮಯ್ಯ ಬೆನ್ನಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ಸಹ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರನಡೆದಿದ್ದಾರೆ. ಇವರಲ್ಲದೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಮತ್ತು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಸಹ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸೂಚನೆ ನೀಡಿದ್ದಾರೆ. ದಿಢೀರ್ ಬೆಳವಣಿಗೆಯಲ್ಲಿ ಈ ಇಬ್ಬರೂ ನಾಯಕರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದರೆ ಅಚ್ಚರಿಯಿಲ್ಲ.

ಅಲ್ಲಿಗೆ ವಿಧಾನಸಭೆ-ಲೋಕಸಭೆ ಚುನಾವಣಾ ಸೋಲಿಗೆ ಕುಗ್ಗದ ಕಾಂಗ್ರೆಸ್ ಘಟಾನುಘಟಿ ನಾಯಕರನ್ನು 15 ಕ್ಷೇತ್ರದ ಉಪಚುನಾವಣೆ ಹುರಿದು ಮುಕ್ಕಿದಂತಾಗಿದೆ. ಈಗಾಗಲೇ ಎರಡು ಪ್ರಮುಖ ವಿಕೆಟ್‍ಗಳನ್ನು ಬೀಳಿಸಿರುವ ಉಪ ಚುನಾವಣೆ, ಕನಿಷ್ಟ ಇನ್ನೂ ಎರಡು ವಿಕೆಟ್‍ಗಳನ್ನು ಬೀಳಿಸುವ ಸಾಧ್ಯತೆಯನ್ನೂ ತೆರೆದಿಟ್ಟಿದೆ. ಸಿದ್ದರಾಮಯ್ಯ ಅವರ ಈ ನಿರ್ಧಾರ ಸಾಮಾನ್ಯವಾಗಿ ರಾಜ್ಯ ಕಾಂಗ್ರೆಸ್‍ನಲ್ಲಿ ನಾಯಕತ್ವ ನಿರ್ವಾತ ಸ್ಥಿತಿಗೆ ಕಾರಣವಾಗಿದ್ದು, ಹೈಕಮಾಂಡ್ ಅನ್ನು ಮತ್ತಷ್ಟು ಇಕ್ಕಟ್ಟಿಗೆ ಸಿಲುಕಿಸಿರುವುದು ಸುಳ್ಳಲ್ಲ.

ಕಾಂಗ್ರೆಸ್ ಹೈಕಮಾಂಡ್ ಮುಂದಿನ ನಡೆ ಏನು?

ಸತತ ಎಲ್ಲಾ ಚುನಾವಣೆಯಲ್ಲೂ ಸೋಲನುಭವಿಸಿದರೂ ಸಹ ಕಾಂಗ್ರೆಸ್ ಪಾಲಿಗೆ ಸಿದ್ದರಾಮಯ್ಯ ಈಗಲೂ ವರ್ಚಸ್ವಿ ನಾಯಕ ಎಂಬುದರಲ್ಲಿ ಎರಡು ಮಾತಿಲ್ಲ. ಸತತ 5 ವರ್ಷ ಸಿಎಂ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸಿದ್ದ ಸಿದ್ದರಾಮಯ್ಯ, ವಿಪಕ್ಷ ನಾಯಕನ ಸ್ಥಾನವನ್ನೂ ಅಷ್ಟೇ ಸಮರ್ಥವಾಗಿ ನಿಭಾಯಿಸಿದ್ದಾರೆ. ಅಲ್ಲದೆ, ಆಡಳಿತಾರೂಢ ಪಕ್ಷವನ್ನು ಕಟು ಟೀಕೆಗೆ ಗುರಿಪಡಿಸುವ ಮೂಲಕ ಇಕ್ಕಟ್ಟಿಗೆ ಸಿಲುಕಿಸಬಲ್ಲ ಸಾಮಥ್ರ್ಯವಿರುವ ನಾಯಕ ಎಂಬ ಹೆಗ್ಗಳಿಕೆಯೂ ಸಿದ್ದರಾಮಯ್ಯ ಬೆನ್ನಿಗಿದೆ.

ಮುಂದಿನ ಮೂರೂ ವರ್ಷವೂ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನದಲ್ಲೇ ಮುಂದುವರೆದರೆ ಆಡಳಿತ ಪಕ್ಷದ ಎಲ್ಲಾ ವೈಫಲ್ಯವನ್ನು ಜನರ ಮುಂದೆ ಬಿಚ್ಚಿಡುತ್ತಾರೆ ಎಂಬ ಭಯ ಸ್ವತಃ ಬಿಜೆಪಿ ಪಾಳಯದಲ್ಲೂ ಇರುವುದು ಸುಳ್ಳಲ್ಲ. ಅಕಸ್ಮಾತ್ ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಕಾಂಗ್ರೆಸ್ ಹೈಕಮಾಂಡ್ ಅಂಗೀಕಾರ ಮಾಡಿದರೆ ರಾಜ್ಯ ರಾಜಕಾರಣದಲ್ಲಿ ಸಿದ್ದರಾಮಯ್ಯ ಸೈಲೆಂಟ್ ಆಗಿಬಿಡುತ್ತಾರೆ. ಈ ಬೆಳವಣಿಗೆ ಬಿಜೆಪಿ ಪಕ್ಷಕ್ಕೆ ಲಾಭವಾಗಿ ಪರಿಣಮಿಸುವ ಸಾಧ್ಯತೆ ಇದೆ. ಹೀಗಾಗಿ ಸಿದ್ದರಾಮಯ್ಯ ವಿಪಕ್ಷ ನಾಯಕನ ಸ್ಥಾನದಲ್ಲೇ ಮುಂದುವರೆದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕಾಗಬಹುದಾದ ಲಾಭದ ಕುರಿತ ಮಾಹಿತಿ ಕಾಂಗ್ರೆಸ್ ರಾಷ್ಟ್ರ ನಾಯಕರಿಗೂ ತಿಳಿದಿದೆ. ಅಲ್ಲದೆ, ಪ್ರಸ್ತುತ ಸಿದ್ದರಾಮಯ್ಯ ಅವರ ಸ್ಥಾನವನ್ನು ತುಂಬಬಲ್ಲ ಮತ್ತೋರ್ವ ನಾಯಕನ ಹುಡುಕಾಟ ಮಾಡುತ್ತಾ ಕೂತರೆ ಮತ್ತಷ್ಟು ಭಿನ್ನಮತ ಹೆಚ್ಚಾಗುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ..

ಹೀಗಾಗಿ ಕಾಂಗ್ರೆಸ್ ಹೈಕಮಾಂಡ್‍ಗೆ ಸಿದ್ದರಾಮಯ್ಯ ಅವರನ್ನು ರಾಜ್ಯ ರಾಜಕೀಯದಲ್ಲಿ ಉಳಿಸಿಕೊಳ್ಳದೆ ಬೇರೆ ವಿಧಿಯಿಲ್ಲ. ಇದೇ ಕಾರಣಕ್ಕೆ ಉಪಚುನಾವಣಾ ಫಲಿತಾಂಶದ ಕಾವು ತಣ್ಣಗಾದ ನಂತರ ಸಿದ್ದರಾಮಯ್ಯ ಅವರನ್ನು ಹೈಕಮಾಂಡ್ ಮುಂದುವರೆಸುತ್ತದೆ ಅನ್ನುತ್ತವೆ ರಾಜಕೀಯ ವಠಾರಗಳು. ಇಲ್ಲದೆ ಹೋದರೆ ಎಂ ಬಿ ಪಾಟೀಲ್, ಎಚ್ ಕೆ ಪಾಟೀಲ್ ಇಲ್ಲವೇ ಕೃಷ್ಣ ಭೈರೆಗೌಡರಿಗೆ ಲಾಟರಿ ಹೊಡೆಯಬಹುದು….

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ನೇಮಕ ಸಾಧ್ಯತೆ?

ಕರ್ನಾಟಕ ಪ್ರದೇಶ ಕಾಂಗ್ರೆಸ್‍ಗೆ ಅಧ್ಯಕ್ಷರಾಗಿ ದಿನೇಶ್ ಗುಂಡೂರಾವ್ ನೇಮಕವಾದ ದಿನದಿಂದ ಒಂದಲ್ಲಾ ಒಂದು ಅಪಸ್ವರ, ಭಿನ್ನಮತ ಕೇಳಿಬರುತ್ತಲೇ ಇವೆ. ಮತ್ತೊಂದೆಡೆ ಜಾರಿ ನಿರ್ದೇಶನಾಲಯ ಅಧಿಕಾರಿಗಳಿಂದ ಬಂಧನಕ್ಕೆ ಒಳಗಾಗಿ ಸರಿಸುಮಾರು ಒಂದು ತಿಂಗಳು ದೆಹಲಿಯ ತಿಹಾರ್ ಜೈಲಿನಲ್ಲಿ ಕಳೆದುಬಂದ ಕಾಂಗ್ರೆಸ್ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಗ್ರಾಫ್ ಕಾಂಗ್ರೆಸ್‍ನಲ್ಲಿ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಈ ನಡುವೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡುವುದಕ್ಕೂ, ಆ ಸ್ಥಾನಕ್ಕೆ ಡಿ.ಕೆ. ಶಿವಕುಮಾರ್ ಹೆಸರು ಕೇಳಿಬರುತ್ತಿರುವುದಕ್ಕೂ ಸರಿಯಾಗಿದೆ.

ಕಾಂಗ್ರೆಸ್ ಪಕ್ಷದ ವರ್ಚಸ್ವಿ ನಾಯಕರ ಪೈಕಿ ಡಿ.ಕೆ. ಶಿವಕುಮಾರ್ ಮುಂಚೂಣಿ ನಾಯಕ. ಯಾವುದೇ ಸಂದರ್ಭದಲ್ಲಿ ಪಕ್ಷಕ್ಕೆ ಎದುರಾಗಬಲ್ಲ ಸಮಸ್ಯೆಯನ್ನು ನೀಗಿಸಬಲ್ಲ ಸಾಮಥ್ರ್ಯವಿರುವ ನಾಯಕ. ಇದೇ ಕಾರಣಕ್ಕೆ ಅವರನ್ನು ಕಾಂಗ್ರೆಸ್ ಟ್ರಬಲ್ ಶೂಟರ್ ಎಂದು ಕರೆಯಲಾಗುತ್ತದೆ. ಆದರೆ, ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ಹಾಗೂ ಜಾರಿ ನಿರ್ದೇಶನಾಲಯದಲ್ಲಿ ಕೆಲವಾರು ಪ್ರಕರಣಗಳು ಇದ್ದ ಕಾರಣಕ್ಕೆ ಅವರಿಗೆ ಪಕ್ಷದಲ್ಲಿ ಈವರೆಗೆ ಉನ್ನತ ಸ್ಥಾನಮಾನಗಳನ್ನು ನೀಡಲಾಗಿರಲಿಲ್ಲ.

ಆದರೆ, ಪ್ರಸ್ತುತ ರಾಜ್ಯ ರಾಜಕೀಯದಲ್ಲಿ ಕಾಂಗ್ರೆಸ್ ಪಾತಾಳಕ್ಕೆ ಕುಸಿದಿದ್ದು ಪಕ್ಷವನ್ನು ಮತ್ತೆ ಮೇಲೆತ್ತಲು ಡಿ.ಕೆ. ಶಿವಕುಮಾರ್ ಅವರಂತಹ ನಾಯಕತ್ವದ ಅಗತ್ಯವಿದೆ. ಹೀಗಾಗಿ ಶೀಘ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಹೈಕಮಾಂಡ್ ಡಿ.ಕೆ. ಶಿವಕುಮಾರ್ ಅವರನ್ನು ನೇಮಕ ಮಾಡಿದರೂ ಅಚ್ಚರಿ ಇಲ್ಲ. ಇಲ್ಲದೇ ಹೋದರೆ ಚುನಾವಣೆ ಹತ್ತಿರ ಬರುವವರೆಗು ಶಾಂತಿ ಸಮಯದ ನಾಯಕ ಸ್ಥಾನ ಮುನಿಯಪ್ಪ, ಪಾಟೀಲ್ ಇಲ್ಲವೇ ಸತೀಶ್ ಜಾರಕಿಹೊಳಿ ಪಾಲಾದರು ಅಚ್ಚರಿ ಇಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಟಿಟಿಗೆ ಬಂದ ಎರಡೇ ದಿನಕ್ಕೆ ದಿಲ್ಜಿತ್ ದೋಸಾಂಜ್ ನಟನೆಯ ‘ಸಟ್ಲಜ್’ ಸಿನಿಮಾ ಔಟ್! ಜೀ5 ವಿರುದ್ಧ ಆಕ್ರೋಶ, ಕಾನೂನು ಹೋರಾಟದ ಭರವಸೆ

ತೀವ್ರ ವಿವಾದ ಹಾಗೂ ಸೆನ್ಸಾರ್ ಮಂಡಳಿಯ ಕತ್ತರಿ ಪ್ರಯೋಗದ ನಡುವೆಯೂ ಕೊನೆಗೂ ಒಟಿಟಿ ಪರದೆಯ ಮೇಲೆ ಬಿಡುಗಡೆಯಾಗಿದ್ದ ಖ್ಯಾತ ನಟ ದಿಲ್ಜಿತ್ ದೋಸಾಂಜ್ ಅಭಿನಯದ 'ಸಟ್ಲಜ್' (ಮೂಲ ಶೀರ್ಷಿಕೆ: ಪಂಜಾಬ್ 95) ಚಿತ್ರವನ್ನು...

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...