Homeಕರ್ನಾಟಕಮೈತ್ರಿ ಸರ್ಕಾರ ಪತನಕ್ಕೆ ಯಡಿಯೂರಪ್ಪನವರೊಂದಿಗೆ ಸಿದ್ದರಾಮಯ್ಯ ಸಾಥ್: ಸಂದರ್ಶನದಲ್ಲಿ ದೇವೇಗೌಡರ ಆರೋಪ

ಮೈತ್ರಿ ಸರ್ಕಾರ ಪತನಕ್ಕೆ ಯಡಿಯೂರಪ್ಪನವರೊಂದಿಗೆ ಸಿದ್ದರಾಮಯ್ಯ ಸಾಥ್: ಸಂದರ್ಶನದಲ್ಲಿ ದೇವೇಗೌಡರ ಆರೋಪ

- Advertisement -
- Advertisement -

ಕಳೆದ ಒಂದೂವರೆ ವರ್ಷದಿಂದ ಯಾವುದೇ ವಿವಾದಾತ್ಮಕ ಹೇಳಿಕೆ ಕೊಡದೇ ಅಂತರ ಕಾಯ್ದುಕೊಂಡಿದ್ದ ಮಾಜಿ ಪ್ರಧಾನಿ ದೇವೆಗೌಡರು ಈಗ ಮೈತ್ರಿ ಸರ್ಕಾರದ ಪತನದ ನಂತರ ಅದರ ಹೊಣೆಯನ್ನು ಸಿದ್ದರಾಮಯ್ಯನವರ ತಲೆಗೆ ಕಟ್ಟಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ಬಹುದೊಡ್ಡ ತಿರುವು ತೆಗೆದುಕೊಳ್ಳಬಹುದಾದ ವಿಷಯವಾಗಿದೆ. ದಿ ಹಿಂದು ಪತ್ರಿಕೆಯ ಶರತ್ ಎಸ್. ಶ್ರೀವತ್ಸ ರವರು ದೇವೇಗೌಡರವರೊಂದಿಗೆ ನಡೆಸಿದ ಸಂದರ್ಶನವನ್ನು ಕನ್ನಡ ಓದುಗರಿಗಾಗಿ ನಿಖಿಲ್ ಕೋಲ್ಪೆಯವರು ಅನುವಾದಿಸಿದ್ದಾರೆ. ಸಂದರ್ಶನದ ಆಯ್ದ ಭಾಗಗಳು ಇಲ್ಲಿವೆ

ಕೃಪೆ: ದಿ ಹಿಂದು
ಅನುವಾದ: ನಿಖಿಲ್ ಕೋಲ್ಪೆ

ಪ್ರಶ್ನೆ: ಕಾಂಗ್ರೆಸ್-ಜೆಡಿಎಸ್ ಮೈತ್ರಿಯಲ್ಲಿ ಎಡವಟ್ಟಾದುದು ಎಲ್ಲಿ?

ಕಾಂಗ್ರೆಸ್‌ನ ಉದ್ದೇಶ ಬಿಜೆಪಿಯನ್ನು ಹೊರಗಿಡುವುದಾಗಿತ್ತು; ಆದರೆ, ಸಿದ್ದರಾಮಯ್ಯ ಈ ನಿರ್ಧಾರಕ್ಕೆ ಒಗ್ಗಿಕೊಳ್ಳಲಿಲ್ಲ. ಸ್ಪರ್ಧೆ ಅವರ ಮತ್ತು ಎಚ್.ಡಿ. ಕುಮಾರಸ್ವಾಮಿ ನಡುವೆ ಇತ್ತು. ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದನ್ನು ನೋಡುವುದು ಅವರಿಗೆ ಕಷ್ಟವಾಗಿತ್ತು. ಅವರಿಗೆ ನೋವಾಗಿತ್ತು, ಸಿಟ್ಟೂ ಬಂದಿತ್ತು. ಮೈಸೂರಿನಲ್ಲಿ (ಚಾಮುಂಡೇಶ್ವರಿ) ತನ್ನ ಸೋಲಿನ ಬಳಿಕ ಜೆಡಿಎಸ್ ಪಕ್ಷವನ್ನು ನಾಶಗೊಳಿಸುವ ಅವರ ನಿರ್ಧಾರ ಇನ್ನಷ್ಟು ಬಲವಾಯಿತು.

ಪ್ರಶ್ನೆ: ಸಮ್ಮಿಶ್ರ ಸರಕಾರದ ವೈಫಲ್ಯಕ್ಕೆ ನೀವು ಸಿದ್ದರಾಮಯ್ಯ ಒಬ್ಬರನ್ನೇ ಹೊಣೆಮಾಡುತ್ತೀರಾ?

ಮೈತ್ರಿ ಸರಕಾರದ ಕುರಿತು ನಿರ್ಧಾರಕ್ಕೆ ಬರುವ ಮೊದಲು ಸೋನಿಯಾ ಗಾಂಧಿ ಅಥವಾ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರ ಜೊತೆ ಸಮಾಲೋಚನೆ ನಡೆಸಿರಲಿಲ್ಲ. ಲೋಕಸಭಾ ಚುನಾವಣೆಯಲ್ಲಿ ನನ್ನ ಮತ್ತು ನನ್ನ ಮೊಮ್ಮಗನ ಸೋಲಿಗೆ ಸಿದ್ದರಾಮಯ್ಯ ಹೊಣೆ ಎಂದು ಅವರ ಸ್ವಂತ ಬೆಂಬಲಿಗರೇ (ಬಂಡುಕೋರ ಕಾಂಗ್ರೆಸಿಗರು) ಬಹಿರಂಗವಾಗಿ ಹೇಳಿದ್ದಾರೆ. ನಮ್ಮ ವಿರುದ್ದ ಕೆಲಸ ಮಾಡಿದ ಕಾಂಗ್ರೆಸಿಗರಿಗೆ ಅವರು ನೋಟೀಸು ನೀಡಿದ್ದರೆಯೆ? ಕಾಂಗ್ರೆಸ್ ಒಳಗೆಯೇ ಈಗ ಸಿದ್ದರಾಮಯ್ಯರನ್ನು ಪ್ರಶ್ನಿಸಬಲ್ಲವರಾಗಲೀ, ಅವರ ವಿರುದ್ದ ಸ್ಪರ್ಧಿಸುವವರಾಗಲೀ ಯಾರೂ ಇಲ್ಲ.

ಪ್ರಶ್ನೆ: ಅವರು ಅದನ್ನು ಮಾಡಿದ್ದಾದರೂ ಏಕೆ?

ಸಿದ್ದರಾಮಯ್ಯ ಅವರ ಗುರಿ ಎಂದರೆ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿ, ತಾನು ಪ್ರತಿಪಕ್ಷದ ನಾಯಕನಾಗುವುದು. ಅವರು ಮತ್ತು ಯಡಿಯೂರಪ್ಪ ಹಿಂದೆ ಜೊತೆಯಲ್ಲಿ ಕೆಲಸ ಮಾಡಿದ್ದಿದೆ. ಬಳ್ಳಾರಿಗೆ ಪಾದಯಾತ್ರೆ (ಅಕ್ರಮ ಗಣಿಗಾರಿಕೆ ವಿರುದ್ಧ) ಹೋದದ್ದು ಬಿಟ್ಟರೆ, ಪ್ರತಿಪಕ್ಷ ನಾಯಕರಾಗಿ ಅವರು ಬೇರೇನು ಮಾಡಿದ್ದಾರೆ? ಯಡಿಯೂರಪ್ಪ ಸರಕಾರದ ವಿರುದ್ಧ ಹೋರಾಟ ಮಾಡಿದವರು ಯಾರು? ನಿಜವಾದ ಹೋರಾಟಗಾರ ಕುಮಾರಸ್ವಾಮಿ. ಸಿದ್ದರಾಮಯ್ಯ ಕೇವಲ ಮೆಲ್ನೋಟಕ್ಕೆ ಮಾತ್ರ ಇದ್ದಂತೆ ತೋರಿಸಿದರು.

ಪ್ರಶ್ನೆ: ಆದರೆ ಅವರು ಒಂದು ದಶಕಕ್ಕೂ ಹಿಂದೆ ಪಕ್ಷದಿಂದ ಹೊರಹೋದಾಗಿನಿಂದಲೇ ಜೆಡಿಎಸ್‌ಗೆ ವಿರೋಧವಿದ್ದಾರೆ ಅಲ್ಲವೇ?

ಸಿದ್ದರಾಮಯ್ಯ ಜೆಡಿಎಸ್‌ಗೆ ಹಾನಿ ಮಾಡಲು ಬಯಸುತ್ತಾರೆ ಎಂಬುದು ಹೊಸ ವಿಷಯವಲ್ಲ. 2016ರ ರಾಜ್ಯಸಭಾ ಚುನಾವಣೆಯ ವೇಳೆ ನಮ್ಮ ಎಂಟು ಶಾಸಕರನ್ನು ಅವರು ಹೊತ್ತೊಯ್ದಿದ್ದರು. ವಾಸ್ತವವಾಗಿ ನಮ್ಮ ಪಕ್ಷಕ್ಕೆ ಹಾನಿ ಮಾಡುವ ಅವರ ಕಾರ್ಯಾಚರಣೆ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನೆರವಿನೊಂದಿಗೆ 2004ರಲ್ಲಿಯೇ ಆರಂಭವಾಗಿತ್ತು. ಅಹಿಂದ ಸಮಾವೇಶಗಳಲ್ಲಿ ಎನ್. ಧರಂಸಿಂಗ್ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿ ಇದ್ದಾಗಲೂ ಕಾಂಗ್ರೆಸ್ ನಾಯಕರು ನನ್ನ ಮೇಲೆ ದಾಳಿ ನಡೆಸಿದರು; ಮತ್ತಾಗ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಆಗಿದ್ದರು. ಇದು ಜೆಡಿಎಸ್‌ನಿಂದ ಅವರ ಉಚ್ಛಾಟನೆಗೆ ಕಾರಣವಾಯಿತು….

ನಾನು 1996ರಲ್ಲಿ ಪ್ರಧಾನಮಂತ್ರಿ ಆಗಲು ದಿಲ್ಲಿಗೆ ಹೋದಾಗ ಅವರನ್ನು ಮುಖ್ಯಮಂತ್ರಿ ಮಾಡಲಿಲ್ಲ ಎಂದು ಅವರು ಕೋಪಗೊಂಡಿದ್ದರು; ಮತ್ತೊಮ್ಮೆ 2004ರಲ್ಲಿ ಸಮ್ಮಿಶ್ರ ಸರಕಾರ ರಚನೆಯಾದಾಗ. 2004ರಲ್ಲಿ ನಾನು ಅವರನ್ನು ಮುಖ್ಯಮಂತ್ರಿ ಮಾಡಲು ಎಷ್ಟೊಂದು ಪ್ರಯತ್ನಪಟ್ಟೆ ಎಂಬುದನ್ನು ಕಾಂಗ್ರೆಸ್‌ನ ತಾತ್ಕಾಲಿಕ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಸ್ಪಷ್ಟಪಡಿಸಬೇಕು. ಸಿದ್ದರಾಮಯ್ಯ ಅವರಿಗಾಗಿ ನಾನು- ತನ್ನನ್ನೇ ಮುಖ್ಯಮಂತ್ರಿಯಾಗಿ ಮುಂದುವರಿಯಲು ಅವಕಾಶ ನೀಡಬೇಕೆಂಬ ಎಸ್.ಎಂ. ಕೃಷ್ಣ ಅವರ ಮನವಿಯನ್ನೂ ಒಪ್ಪಿಕೊಂಡಿರಲಿಲ್ಲ.

ಪ್ರಶ್ನೆ: ಪರಿಣಾಮ ಏನಾಗಿತ್ತು?

ನಮ್ಮನ್ನು ನಾಶಮಾಡಲು ಅವರು ಮಾಡಿದ ಪ್ರಯತ್ನದ ಪರಿಣಾಮವಾಗಿ ವಿಧಾನಸಭೆಯಲ್ಲಿ ಕಾಂಗ್ರೆಸ್‌ನ ಬಲ 130ರಿಂದ 79ಕ್ಕೆ ಕುಸಿಯಿತು. ಶಾದಿಭಾಗ್ಯ ಮತ್ತು ಬಾಕಿ ಎಲ್ಲಾ ಭಾಗ್ಯಗಳಿಗೆ ಏನಾಯಿತು? ಅಹಿಂದಕ್ಕೆ ಏನಾಯಿತು? ಅವರಿಂದ ತಪ್ಪುದಾರಿಗಿಳಿದ ರಾಹುಲ್ ಗಾಂಧಿ ನಮ್ಮನ್ನು ಹಾಸನದಲ್ಲಿ ಬಿಜೆಪಿಯ ಬಿ. ಟೀಮ್ ಎಂದು ಕರೆದರು. ಪರಿಣಾಮವಾಗಿ ಹಾಸನ ಬಿಜೆಪಿ ಪರವಾಯಿತು ಮತ್ತು ಸ್ಥಳೀಯಾಡಳಿತ ಚುನಾವಣೆಗಳಲ್ಲಿ ಮೊದಲ ಬಾರಿಗೆ 14 ಸ್ಥಾನಗಳನ್ನು ಗೆದ್ದಿತು. ಇವತ್ತು ಹಾಸನ ಮತ್ತು ಮಂಡ್ಯದಲ್ಲಿ ಬಿಜೆಪಿ ನುಸುಳಲು ಪ್ರಯತ್ನಿಸುತ್ತಿದೆ ಎಂದರೆ, ಮತ್ತೆ ಅವರ ಕಾರಣದಿಂದ. ಅವರು ಪರೋಕ್ಷವಾಗಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿಯನ್ನು (ಸುಮಲತಾ) ಮಂಡ್ಯದಲ್ಲಿ ಬೆಂಬಲಿಸಿದರು.

ಪ್ರಶ್ನೆ: ಇತ್ತೀಚೆಗೆ ನೀವವರನ್ನು ಸಂಪರ್ಕಿಸಲು ಯತ್ನಿಸಿದ್ದೀರಾ?

ನನ್ನನ್ನು ನಂಬಿ,  ಮೈತ್ರಿ ಸರಕಾರ ಆದ ಮೇಲೆ ನಾನು ಅವರಲ್ಲಿ ಹೋಗಿ, ಎರಡು ಸಲ ರಾಜ್ಯದಲ್ಲಿ ಜಂಟಿ ಯಾತ್ರೆ ಮಾಡೋಣ ಎಂದು ವಿನಂತಿದೆ. ಹಿಂದಿನದ್ದು ಮರೆಯೋಣ ಎಂದೆ. ಆದರೂ ಏನೂ ಆಗಲಿಲ್ಲ.

ಪ್ರಶ್ನೆ: ಸದ್ಯಕ್ಕೆ ಕಾಂಗ್ರೆಸ್ ಜೊತೆ ನಿಮ್ಮ ಹೊಂದಾಣಿಕೆ ಏನು? ಒಂದುವೇಳೆ ಉಪಚುನಾವಣೆ ನಡೆದರೆ, ಎರಡೂ ಪಕ್ಷಗಳು ಜೊತೆಗೆ ಬರುತ್ತವೆಯೆ?

ಕಾಂಗ್ರೆಸ್ ಜೊತೆ ಯಾವುದೇ ಸಂಪರ್ಕ ಇಲ್ಲ. ಕುಮಾರಸ್ವಾಮಿ ಕೂಡಾ ಹಾಗೆ ಮಾಡುತ್ತಾರೆ ಎಂದು ನನಗನಿಸುವುದಿಲ್ಲ. ಸಿದ್ದರಾಮಯ್ಯ ಹೇಳುವುದೇನೆಂದರೆ ದೇವೇಗೌಡರ ಜೊತೆ ಹೋಗಿ ತಾವು ಸೋತೆವು ಎಂದು. (ನಗು) ಯಾವುದೇ ಸ್ಥಳೀಯ ನಾಯಕರು ಮಾತನಾಡಲು ಸಿದ್ಧರಿಲ್ಲ. ಸಿದ್ದರಾಮಯ್ಯ ಅವರು ಬಲಪ್ರದರ್ಶನ ಮಾಡಲು ಬಯಸುತ್ತಿದ್ದಾರೆ. ಆದರೆ, ಸೋನಿಯಾ ಗಾಂಧಿಯವರು ಉಪಚುನಾವಣೆಯಲ್ಲಿ ಸ್ಥಾನ ಹಂಚಿಕೆ ವಿಷಯ ಮಾತನಾಡಿದರೆ, ಅದು ಬೇರೆಯೇ ವಿಷಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ? ಬೆಕ್ಕು ಕಣ್ಣುಮುಚ್ಚಿ ಹಾಲುಕುಡಿಯುತ್ತಿತಾ ತಿಳಿದುಕೊಂಡಿರುವಂತಿದೆ…family politics dangerous to democracy

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...