Homeಕರ್ನಾಟಕಮೈತ್ರಿ ಸರ್ಕಾರ ಪತನಕ್ಕೆ ಯಡಿಯೂರಪ್ಪನವರೊಂದಿಗೆ ಸಿದ್ದರಾಮಯ್ಯ ಸಾಥ್: ಸಂದರ್ಶನದಲ್ಲಿ ದೇವೇಗೌಡರ ಆರೋಪ

ಮೈತ್ರಿ ಸರ್ಕಾರ ಪತನಕ್ಕೆ ಯಡಿಯೂರಪ್ಪನವರೊಂದಿಗೆ ಸಿದ್ದರಾಮಯ್ಯ ಸಾಥ್: ಸಂದರ್ಶನದಲ್ಲಿ ದೇವೇಗೌಡರ ಆರೋಪ

- Advertisement -
- Advertisement -

ಕಳೆದ ಒಂದೂವರೆ ವರ್ಷದಿಂದ ಯಾವುದೇ ವಿವಾದಾತ್ಮಕ ಹೇಳಿಕೆ ಕೊಡದೇ ಅಂತರ ಕಾಯ್ದುಕೊಂಡಿದ್ದ ಮಾಜಿ ಪ್ರಧಾನಿ ದೇವೆಗೌಡರು ಈಗ ಮೈತ್ರಿ ಸರ್ಕಾರದ ಪತನದ ನಂತರ ಅದರ ಹೊಣೆಯನ್ನು ಸಿದ್ದರಾಮಯ್ಯನವರ ತಲೆಗೆ ಕಟ್ಟಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ಬಹುದೊಡ್ಡ ತಿರುವು ತೆಗೆದುಕೊಳ್ಳಬಹುದಾದ ವಿಷಯವಾಗಿದೆ. ದಿ ಹಿಂದು ಪತ್ರಿಕೆಯ ಶರತ್ ಎಸ್. ಶ್ರೀವತ್ಸ ರವರು ದೇವೇಗೌಡರವರೊಂದಿಗೆ ನಡೆಸಿದ ಸಂದರ್ಶನವನ್ನು ಕನ್ನಡ ಓದುಗರಿಗಾಗಿ ನಿಖಿಲ್ ಕೋಲ್ಪೆಯವರು ಅನುವಾದಿಸಿದ್ದಾರೆ. ಸಂದರ್ಶನದ ಆಯ್ದ ಭಾಗಗಳು ಇಲ್ಲಿವೆ

ಕೃಪೆ: ದಿ ಹಿಂದು
ಅನುವಾದ: ನಿಖಿಲ್ ಕೋಲ್ಪೆ

ಪ್ರಶ್ನೆ: ಕಾಂಗ್ರೆಸ್-ಜೆಡಿಎಸ್ ಮೈತ್ರಿಯಲ್ಲಿ ಎಡವಟ್ಟಾದುದು ಎಲ್ಲಿ?

ಕಾಂಗ್ರೆಸ್‌ನ ಉದ್ದೇಶ ಬಿಜೆಪಿಯನ್ನು ಹೊರಗಿಡುವುದಾಗಿತ್ತು; ಆದರೆ, ಸಿದ್ದರಾಮಯ್ಯ ಈ ನಿರ್ಧಾರಕ್ಕೆ ಒಗ್ಗಿಕೊಳ್ಳಲಿಲ್ಲ. ಸ್ಪರ್ಧೆ ಅವರ ಮತ್ತು ಎಚ್.ಡಿ. ಕುಮಾರಸ್ವಾಮಿ ನಡುವೆ ಇತ್ತು. ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದನ್ನು ನೋಡುವುದು ಅವರಿಗೆ ಕಷ್ಟವಾಗಿತ್ತು. ಅವರಿಗೆ ನೋವಾಗಿತ್ತು, ಸಿಟ್ಟೂ ಬಂದಿತ್ತು. ಮೈಸೂರಿನಲ್ಲಿ (ಚಾಮುಂಡೇಶ್ವರಿ) ತನ್ನ ಸೋಲಿನ ಬಳಿಕ ಜೆಡಿಎಸ್ ಪಕ್ಷವನ್ನು ನಾಶಗೊಳಿಸುವ ಅವರ ನಿರ್ಧಾರ ಇನ್ನಷ್ಟು ಬಲವಾಯಿತು.

ಪ್ರಶ್ನೆ: ಸಮ್ಮಿಶ್ರ ಸರಕಾರದ ವೈಫಲ್ಯಕ್ಕೆ ನೀವು ಸಿದ್ದರಾಮಯ್ಯ ಒಬ್ಬರನ್ನೇ ಹೊಣೆಮಾಡುತ್ತೀರಾ?

ಮೈತ್ರಿ ಸರಕಾರದ ಕುರಿತು ನಿರ್ಧಾರಕ್ಕೆ ಬರುವ ಮೊದಲು ಸೋನಿಯಾ ಗಾಂಧಿ ಅಥವಾ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರ ಜೊತೆ ಸಮಾಲೋಚನೆ ನಡೆಸಿರಲಿಲ್ಲ. ಲೋಕಸಭಾ ಚುನಾವಣೆಯಲ್ಲಿ ನನ್ನ ಮತ್ತು ನನ್ನ ಮೊಮ್ಮಗನ ಸೋಲಿಗೆ ಸಿದ್ದರಾಮಯ್ಯ ಹೊಣೆ ಎಂದು ಅವರ ಸ್ವಂತ ಬೆಂಬಲಿಗರೇ (ಬಂಡುಕೋರ ಕಾಂಗ್ರೆಸಿಗರು) ಬಹಿರಂಗವಾಗಿ ಹೇಳಿದ್ದಾರೆ. ನಮ್ಮ ವಿರುದ್ದ ಕೆಲಸ ಮಾಡಿದ ಕಾಂಗ್ರೆಸಿಗರಿಗೆ ಅವರು ನೋಟೀಸು ನೀಡಿದ್ದರೆಯೆ? ಕಾಂಗ್ರೆಸ್ ಒಳಗೆಯೇ ಈಗ ಸಿದ್ದರಾಮಯ್ಯರನ್ನು ಪ್ರಶ್ನಿಸಬಲ್ಲವರಾಗಲೀ, ಅವರ ವಿರುದ್ದ ಸ್ಪರ್ಧಿಸುವವರಾಗಲೀ ಯಾರೂ ಇಲ್ಲ.

ಪ್ರಶ್ನೆ: ಅವರು ಅದನ್ನು ಮಾಡಿದ್ದಾದರೂ ಏಕೆ?

ಸಿದ್ದರಾಮಯ್ಯ ಅವರ ಗುರಿ ಎಂದರೆ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡಿ, ತಾನು ಪ್ರತಿಪಕ್ಷದ ನಾಯಕನಾಗುವುದು. ಅವರು ಮತ್ತು ಯಡಿಯೂರಪ್ಪ ಹಿಂದೆ ಜೊತೆಯಲ್ಲಿ ಕೆಲಸ ಮಾಡಿದ್ದಿದೆ. ಬಳ್ಳಾರಿಗೆ ಪಾದಯಾತ್ರೆ (ಅಕ್ರಮ ಗಣಿಗಾರಿಕೆ ವಿರುದ್ಧ) ಹೋದದ್ದು ಬಿಟ್ಟರೆ, ಪ್ರತಿಪಕ್ಷ ನಾಯಕರಾಗಿ ಅವರು ಬೇರೇನು ಮಾಡಿದ್ದಾರೆ? ಯಡಿಯೂರಪ್ಪ ಸರಕಾರದ ವಿರುದ್ಧ ಹೋರಾಟ ಮಾಡಿದವರು ಯಾರು? ನಿಜವಾದ ಹೋರಾಟಗಾರ ಕುಮಾರಸ್ವಾಮಿ. ಸಿದ್ದರಾಮಯ್ಯ ಕೇವಲ ಮೆಲ್ನೋಟಕ್ಕೆ ಮಾತ್ರ ಇದ್ದಂತೆ ತೋರಿಸಿದರು.

ಪ್ರಶ್ನೆ: ಆದರೆ ಅವರು ಒಂದು ದಶಕಕ್ಕೂ ಹಿಂದೆ ಪಕ್ಷದಿಂದ ಹೊರಹೋದಾಗಿನಿಂದಲೇ ಜೆಡಿಎಸ್‌ಗೆ ವಿರೋಧವಿದ್ದಾರೆ ಅಲ್ಲವೇ?

ಸಿದ್ದರಾಮಯ್ಯ ಜೆಡಿಎಸ್‌ಗೆ ಹಾನಿ ಮಾಡಲು ಬಯಸುತ್ತಾರೆ ಎಂಬುದು ಹೊಸ ವಿಷಯವಲ್ಲ. 2016ರ ರಾಜ್ಯಸಭಾ ಚುನಾವಣೆಯ ವೇಳೆ ನಮ್ಮ ಎಂಟು ಶಾಸಕರನ್ನು ಅವರು ಹೊತ್ತೊಯ್ದಿದ್ದರು. ವಾಸ್ತವವಾಗಿ ನಮ್ಮ ಪಕ್ಷಕ್ಕೆ ಹಾನಿ ಮಾಡುವ ಅವರ ಕಾರ್ಯಾಚರಣೆ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನೆರವಿನೊಂದಿಗೆ 2004ರಲ್ಲಿಯೇ ಆರಂಭವಾಗಿತ್ತು. ಅಹಿಂದ ಸಮಾವೇಶಗಳಲ್ಲಿ ಎನ್. ಧರಂಸಿಂಗ್ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿ ಇದ್ದಾಗಲೂ ಕಾಂಗ್ರೆಸ್ ನಾಯಕರು ನನ್ನ ಮೇಲೆ ದಾಳಿ ನಡೆಸಿದರು; ಮತ್ತಾಗ ಸಿದ್ದರಾಮಯ್ಯ ಅವರು ಉಪಮುಖ್ಯಮಂತ್ರಿ ಆಗಿದ್ದರು. ಇದು ಜೆಡಿಎಸ್‌ನಿಂದ ಅವರ ಉಚ್ಛಾಟನೆಗೆ ಕಾರಣವಾಯಿತು….

ನಾನು 1996ರಲ್ಲಿ ಪ್ರಧಾನಮಂತ್ರಿ ಆಗಲು ದಿಲ್ಲಿಗೆ ಹೋದಾಗ ಅವರನ್ನು ಮುಖ್ಯಮಂತ್ರಿ ಮಾಡಲಿಲ್ಲ ಎಂದು ಅವರು ಕೋಪಗೊಂಡಿದ್ದರು; ಮತ್ತೊಮ್ಮೆ 2004ರಲ್ಲಿ ಸಮ್ಮಿಶ್ರ ಸರಕಾರ ರಚನೆಯಾದಾಗ. 2004ರಲ್ಲಿ ನಾನು ಅವರನ್ನು ಮುಖ್ಯಮಂತ್ರಿ ಮಾಡಲು ಎಷ್ಟೊಂದು ಪ್ರಯತ್ನಪಟ್ಟೆ ಎಂಬುದನ್ನು ಕಾಂಗ್ರೆಸ್‌ನ ತಾತ್ಕಾಲಿಕ ಅಧ್ಯಕ್ಷೆ ಸೋನಿಯಾ ಗಾಂಧಿಯವರು ಸ್ಪಷ್ಟಪಡಿಸಬೇಕು. ಸಿದ್ದರಾಮಯ್ಯ ಅವರಿಗಾಗಿ ನಾನು- ತನ್ನನ್ನೇ ಮುಖ್ಯಮಂತ್ರಿಯಾಗಿ ಮುಂದುವರಿಯಲು ಅವಕಾಶ ನೀಡಬೇಕೆಂಬ ಎಸ್.ಎಂ. ಕೃಷ್ಣ ಅವರ ಮನವಿಯನ್ನೂ ಒಪ್ಪಿಕೊಂಡಿರಲಿಲ್ಲ.

ಪ್ರಶ್ನೆ: ಪರಿಣಾಮ ಏನಾಗಿತ್ತು?

ನಮ್ಮನ್ನು ನಾಶಮಾಡಲು ಅವರು ಮಾಡಿದ ಪ್ರಯತ್ನದ ಪರಿಣಾಮವಾಗಿ ವಿಧಾನಸಭೆಯಲ್ಲಿ ಕಾಂಗ್ರೆಸ್‌ನ ಬಲ 130ರಿಂದ 79ಕ್ಕೆ ಕುಸಿಯಿತು. ಶಾದಿಭಾಗ್ಯ ಮತ್ತು ಬಾಕಿ ಎಲ್ಲಾ ಭಾಗ್ಯಗಳಿಗೆ ಏನಾಯಿತು? ಅಹಿಂದಕ್ಕೆ ಏನಾಯಿತು? ಅವರಿಂದ ತಪ್ಪುದಾರಿಗಿಳಿದ ರಾಹುಲ್ ಗಾಂಧಿ ನಮ್ಮನ್ನು ಹಾಸನದಲ್ಲಿ ಬಿಜೆಪಿಯ ಬಿ. ಟೀಮ್ ಎಂದು ಕರೆದರು. ಪರಿಣಾಮವಾಗಿ ಹಾಸನ ಬಿಜೆಪಿ ಪರವಾಯಿತು ಮತ್ತು ಸ್ಥಳೀಯಾಡಳಿತ ಚುನಾವಣೆಗಳಲ್ಲಿ ಮೊದಲ ಬಾರಿಗೆ 14 ಸ್ಥಾನಗಳನ್ನು ಗೆದ್ದಿತು. ಇವತ್ತು ಹಾಸನ ಮತ್ತು ಮಂಡ್ಯದಲ್ಲಿ ಬಿಜೆಪಿ ನುಸುಳಲು ಪ್ರಯತ್ನಿಸುತ್ತಿದೆ ಎಂದರೆ, ಮತ್ತೆ ಅವರ ಕಾರಣದಿಂದ. ಅವರು ಪರೋಕ್ಷವಾಗಿ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿಯನ್ನು (ಸುಮಲತಾ) ಮಂಡ್ಯದಲ್ಲಿ ಬೆಂಬಲಿಸಿದರು.

ಪ್ರಶ್ನೆ: ಇತ್ತೀಚೆಗೆ ನೀವವರನ್ನು ಸಂಪರ್ಕಿಸಲು ಯತ್ನಿಸಿದ್ದೀರಾ?

ನನ್ನನ್ನು ನಂಬಿ,  ಮೈತ್ರಿ ಸರಕಾರ ಆದ ಮೇಲೆ ನಾನು ಅವರಲ್ಲಿ ಹೋಗಿ, ಎರಡು ಸಲ ರಾಜ್ಯದಲ್ಲಿ ಜಂಟಿ ಯಾತ್ರೆ ಮಾಡೋಣ ಎಂದು ವಿನಂತಿದೆ. ಹಿಂದಿನದ್ದು ಮರೆಯೋಣ ಎಂದೆ. ಆದರೂ ಏನೂ ಆಗಲಿಲ್ಲ.

ಪ್ರಶ್ನೆ: ಸದ್ಯಕ್ಕೆ ಕಾಂಗ್ರೆಸ್ ಜೊತೆ ನಿಮ್ಮ ಹೊಂದಾಣಿಕೆ ಏನು? ಒಂದುವೇಳೆ ಉಪಚುನಾವಣೆ ನಡೆದರೆ, ಎರಡೂ ಪಕ್ಷಗಳು ಜೊತೆಗೆ ಬರುತ್ತವೆಯೆ?

ಕಾಂಗ್ರೆಸ್ ಜೊತೆ ಯಾವುದೇ ಸಂಪರ್ಕ ಇಲ್ಲ. ಕುಮಾರಸ್ವಾಮಿ ಕೂಡಾ ಹಾಗೆ ಮಾಡುತ್ತಾರೆ ಎಂದು ನನಗನಿಸುವುದಿಲ್ಲ. ಸಿದ್ದರಾಮಯ್ಯ ಹೇಳುವುದೇನೆಂದರೆ ದೇವೇಗೌಡರ ಜೊತೆ ಹೋಗಿ ತಾವು ಸೋತೆವು ಎಂದು. (ನಗು) ಯಾವುದೇ ಸ್ಥಳೀಯ ನಾಯಕರು ಮಾತನಾಡಲು ಸಿದ್ಧರಿಲ್ಲ. ಸಿದ್ದರಾಮಯ್ಯ ಅವರು ಬಲಪ್ರದರ್ಶನ ಮಾಡಲು ಬಯಸುತ್ತಿದ್ದಾರೆ. ಆದರೆ, ಸೋನಿಯಾ ಗಾಂಧಿಯವರು ಉಪಚುನಾವಣೆಯಲ್ಲಿ ಸ್ಥಾನ ಹಂಚಿಕೆ ವಿಷಯ ಮಾತನಾಡಿದರೆ, ಅದು ಬೇರೆಯೇ ವಿಷಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ? ಬೆಕ್ಕು ಕಣ್ಣುಮುಚ್ಚಿ ಹಾಲುಕುಡಿಯುತ್ತಿತಾ ತಿಳಿದುಕೊಂಡಿರುವಂತಿದೆ…family politics dangerous to democracy

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಬಿಜೆಪಿ ಶಾಸಕ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...