Homeಮುಖಪುಟರೈತರ ಹತ್ಯೆ ಪ್ರಕರಣ: ಉತ್ತರ ಪ್ರದೇಶ ಸರ್ಕಾರ ವಜಾ ಮಾಡಲು ಸಿದ್ದರಾಮಯ್ಯ ಆಗ್ರಹ

ರೈತರ ಹತ್ಯೆ ಪ್ರಕರಣ: ಉತ್ತರ ಪ್ರದೇಶ ಸರ್ಕಾರ ವಜಾ ಮಾಡಲು ಸಿದ್ದರಾಮಯ್ಯ ಆಗ್ರಹ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಪ್ರತಿಭಟನಾನಿರತ ರೈತರ ಮೇಲೆ ಕೇಂದ್ರ ಸಚಿವ ಅಜಯ್‌ ಮಿಶ್ರಾರವರ ಮಗ ಆಶಿಶ್ ಮಿಶ್ರಾ ಕಾರು ಹರಿಸಿ ನಾಲ್ವರು ರೈತರನ್ನು ಕೊಂದ ಘಟನೆಗೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಕರ್ನಾಟಕದ ಹಲವು ಕಡೆ ಪ್ರತಿಭಟನೆಗಳು ಭುಗಿಲೆದ್ದಿವೆ. ರೈತರ ಮೇಲೆ ಹಗೆ ಸಾಧಿಸುತ್ತಿರುವ ಉತ್ತರ ಪ್ರದೇಶ ಸರ್ಕಾರವನ್ನು ವಜಾ ಮಾಡಬೇಕೆಂದು ಕರ್ನಾಟಕದ ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, “ರೈತರು ತನ್ನ ಶತ್ರುಗಳೆಂದು ತಿಳಿದುಕೊಂಡಿರುವ ಬಿಜೆಪಿಯು ಅವರನ್ನು ಪೋಲಿಸರ ಮೂಲಕ ದಮನಿಸಲು ಪ್ರಯತ್ನಿಸಿ ವಿಫಲವಾದ ನಂತರ ಈಗ ನೇರವಾಗಿ ಹತ್ಯೆ ನಡೆಸಲು ಹೊರಟಿದೆ. ಉತ್ತರಪ್ರದೇಶದಲ್ಲಿ ಸಚಿವರ ಮಗನ ಕಾರಿನಡಿಗೆ ಸಿಕ್ಕಿ ರೈತರು ಸಾವಿಗೀಡಾದ ಪ್ರಕರಣ ಬಿಜೆಪಿಯ ಕೊಲೆಗಡುಕ‌ ಮನಸ್ಸಿಗೆ ಸಾಕ್ಷಿ” ಎಂದು ಕಿಡಿಕಾರದ್ದಾರೆ.

ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಗೂಂಡಾ ರಾಜ್ಯದಲ್ಲಿ ದಲಿತರು, ರೈತರು,‌ ಮಹಿಳೆಯರು ಮತ್ತು ಬಡವರ ಮಾನ-ಪ್ರಾಣ ಯಾವುದೂ ಸುರಕ್ಷಿತ ಅಲ್ಲ. ಸಂವಿಧಾನವೇ ಕುಸಿದು‌ಬಿದ್ದಿರುವ ಸ್ಥಿತಿಯಲ್ಲಿ ರಾಷ್ಟ್ರಪತಿಗಳು‌ ಮಧ್ಯಪ್ರವೇಶಿಸಿ ಅಲ್ಲಿನ ಬಿಜೆಪಿ
ಸರ್ಕಾರವನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬಿಜೆಪಿ ಮತ್ತು ಅದರ ರಾಜ್ಯ ಘಟಕಗಳು ಇಡೀ ದೇಶವನ್ನು ಗೂಂಡಾ ರಾಜ್ ಆಗಿ ಪರಿವರ್ತಿಸಿವೆ. ಅವರು ಮಾಡಿದ ತಪ್ಪುಗಳನ್ನು ಪ್ರಶ್ನಿಸಲು ಜಾಗವಿಲ್ಲ. ಆ ಮುಗ್ಧ ರೈತರು ಏನು ಮಾಡಿದರು, ಏಕೆ ಅವರನ್ನು ಕೊಲ್ಲಲಾಯಿತು? ಅವರು ನರೇಂದ್ರ ಮೋದಿಯವರ ನಿರಂಕುಶಾಧಿಕಾರವನ್ನು ಪ್ರಶ್ನಿಸಿದ್ದೇ ತಪ್ಪೇ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿರೋಧ ಪಕ್ಷಗಳು ರೈತರ ಜೊತೆ ನಿಲ್ಲುವುದನ್ನು ತಡೆಯಲು ಸಿಕ್ಕ ಸಿಕ್ಕವರನ್ನು ಬಂಧಿಸುತ್ತಿರುವ ಬಿಜೆಪಿಯ ತಾಲಿಬಾನ್ ಮನಸ್ಥಿತಿಯನ್ನು ಖಂಡಿಸುತ್ತೇನೆ. ಪ್ರಿಯಾಂಕ ಗಾಂಧಿ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರನ್ನು ಬಂಧಿಸಿರುವುದು ಪ್ರಜಾಪ್ರಭುತ್ವಕ್ಕೆ ದೊಡ್ಡ ಕಳಂಕ. ನ್ಯಾಯ ಸಿಗುವವರೆಗೂ ಕಾಂಗ್ರೆಸ್ ಹೋರಾಟ ಮುಂದುವರಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಕಾರು ಹರಿಸಿ ನಾಲ್ವರು ರೈತರನ್ನು ಕೊಂದ ಘಟನೆ ಖಂಡಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಆರಂಭವಾಗಿದೆ. ಸಂಯುಕ್ತ ಹೋರಾಟ ಕರ್ನಾಟಕ ಮತ್ತು ರೈತ ಸಂಘಟನೆಗಳು, ಪ್ರಗತಿಪರ ಮತ್ತು ಎಡ ಸಂಘಟನೆಗಳು ಮೈಸೂರು ಬ್ಯಾಂಕ್ ವೃತ್ತದ ಬಳಿ ಸೇರಿ ಆಕ್ರೋಶ ಹೊರ ಹಾಕಿದ್ದಾರೆ. ವಿದ್ಯಾರ್ಥಿ ಯುವಜನ ಸಂಘಟನೆಗಳು ಸಾಥ್ ನೀಡಿವೆ.

“ಸರ್ವಾಧಿಕಾರಿ ಸರ್ಕಾರ ಮಾತ್ರ ಇದನ್ನು ಮಾಡಲು ಸಾಧ್ಯ. ಉತ್ತರ ಪ್ರದೇಶ ಆಡಳಿತಾರೂಢ ಬಿಜೆಪಿ ಪ್ರಜಾಪ್ರಭುತ್ವವನ್ನು ಕೊನೆಗೊಳಿಸಲು ಬಯಸುತ್ತಿದೆಯೇ? ಈ ರೀತಿಯಾದ ನಾಗರಿಕ ಹಕ್ಕುಗಳ ಉಲ್ಲಂಘನೆ ಸಂವಿಧಾನದ ಮನೋಭಾವಕ್ಕೆ ವಿರುದ್ಧವಾಗಿದೆ” ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಯುಪಿ ರೈತರ ಹತ್ಯೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ- ಬಿಜೆಪಿ ವಿರುದ್ಧ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...