Homeಮುಖಪುಟಜನರಿಗೆ ಗುರುತು ಸಿಗಬಾರದು ಅಂತ ಗಡ್ಡ ಬೆಳೆಸಿದ್ದಾರೆ: ಮೋದಿ ವಿರುದ್ಧ ಸಿದ್ದರಾಮಯ್ಯ ವ್ಯಂಗ್ಯ

ಜನರಿಗೆ ಗುರುತು ಸಿಗಬಾರದು ಅಂತ ಗಡ್ಡ ಬೆಳೆಸಿದ್ದಾರೆ: ಮೋದಿ ವಿರುದ್ಧ ಸಿದ್ದರಾಮಯ್ಯ ವ್ಯಂಗ್ಯ

- Advertisement -
- Advertisement -

“ಜನರಿಗೆ ಗುರುತು ಸಿಗಬಾರದು ಅಂತ ಮೋದಿ ಗಡ್ಡ ಬೆಳೆಸಿಕೊಂಡಿದ್ದಾರೆ” ಎಂದು ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

“ಮುಖ್ಯಮಂತ್ರಿ ಯಡಿಯೂರಪ್ಪ ಅವರು ಯಾವ ಅಭಿವೃದ್ಧಿ ಕಾರ್ಯಗಳಿಗೂ ಸರ್ಕಾರದ ಬಳಿ ಹಣ ಇಲ್ಲ ಎನ್ನುತ್ತಾರೆ. ಸರ್ಕಾರ ನಡೆಸೋಕೆ ಆಗಲ್ಲ ಅಂದಮೇಲೆ ಮುಖ್ಯಮಂತ್ರಿಯಾಗಿ ಯಾಕಿದೀರ? ದುಡ್ಡಿಲ್ಲದಿದ್ದರೆ ಖುರ್ಚಿ ಬಿಟ್ಟು ಇಳಿಯಿರಿ. ನಾವು ಯಾರಾದರೂ ಅಧಿಕಾರ ನಡೆಸಿ ತೋರಿಸುತ್ತೇವೆ” ಎಂದು ರಾಜ್ಯ ಸರ್ಕಾರದ ವಿರುದ್ಧವೂ ಗುಡುಗಿದ್ದಾರೆ.

“ಪ್ರತಿನಿತ್ಯ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ, ಜನಸಾಮಾನ್ಯರು ಕಷ್ಟದಲ್ಲಿ ದಿನ ದೂಡುವಂತಾಗಿದೆ. ದೇಶದ ಈ ದುಸ್ಥಿತಿಗೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ ಅವರು ಜನರಿಗೆ ತಮ್ಮ ಗುರುತು ಸಿಗಬಾರದು ಅಂತ ಗಡ್ಡ ಬೆಳೆಸಿಕೊಂಡಿದ್ದಾರೆ. ಸುಳ್ಳಿಗೆ ಪರ್ಯಾದ ಪದವೆಂದರೆ ಅದು ನರೇಂದ್ರ ಮೋದಿ. ಅವರ ಚುನಾವಣಾ ಪೂರ್ವದ ಭಾಷಣ ಹಾಗೂ ಇಂದಿನ ಆಡಳಿತ ಒಂದಕ್ಕೊಂದು ತದ್ವಿರುದ್ಧವಾಗಿದೆ. ಮೋದಿ, ಮೋದಿ ಅಂತ ಘೋಷಣೆ ಕೂಗುತ್ತಾ, ಅಧಿಕಾರ ಕೊಟ್ಟ ಜನರೇ ಇಂದು ಮೋಸಹೋಗಿದ್ದಾರೆ.
ಮೋದಿಯವರ ನಿಜ ಬಣ್ಣವನ್ನು ಕಾಂಗ್ರೆಸ್ ಪಕ್ಷ ಬಯಲಿಗೆಳೆಯಲಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಆತ್ಮನಿರ್ಭರಕ್ಕಾಗಿ ಖಾಸಗಿಯವರನ್ನು ಬೆಂಬಲಿಸಿ: ಮೋದಿ ಹೇಳಿಕೆಗೆ ಕೆಲವು ಪ್ರಶ್ನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಕಾನೂನು ಕ್ರಮ ಜರುಗಿಸಲು ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ: ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ 2021 ರ "ಬಟ್ಟೆ ಚೀಲ ಹಗರಣ"ಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡುವಂತೆ...

‘ಯುದ್ಧ ಸೃಷ್ಟಿಸಿದ್ದು ನೀವೇ’: ಹಾರ್ಮುಜ್ ಅಡ್ಡಿಗೆ ಅಮೆರಿಕವನ್ನು ದೂಷಿಸಿದ ಚೀನಾ, ಟ್ರಂಪ್ ಅವರ ‘ಧೈರ್ಯದ ಕೊರತೆ’ ಹೇಳಿಕೆಗೆ ತಿರುಗೇಟು

ಚೀನಾ ಮತ್ತು ಜಪಾನ್‌ನಂತಹ ದೇಶಗಳು ಹಾರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯಲು "ಧೈರ್ಯ" ಹೊಂದಿಲ್ಲ ಎಂದು ಹೇಳಿದ್ದ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳನ್ನು ಚೀನಾ ಬಲವಾಗಿ ವಿರೋಧಿಸಿದೆ. ಪತ್ರಿಕಾಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಚೀನಾದ ವಿದೇಶಾಂಗ...

ಮೂರನೇ ಅತ್ಯಾಚಾರ ಪ್ರಕರಣ: ಸ್ವ-ಘೋಷಿತ ‘ದೇವಮಾನವ’ ಖರತ್‌ಗೆ ಏಳು ದಿನಗಳ ನ್ಯಾಯಾಂಗ ಬಂಧನ ವಿಧಿಸಿದ ನಾಸಿಕ್ ನ್ಯಾಯಾಲಯ

ನಾಸಿಕ್: ಗರ್ಭಿಣಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದಾಖಲಾಗಿರುವ ಮೂರನೇ ಅತ್ಯಾಚಾರ ಪ್ರಕರಣದಲ್ಲಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರನ್ನು ಮಹಾರಾಷ್ಟ್ರದ ನಾಸಿಕ್ ನ್ಯಾಯಾಲಯ ಸೋಮವಾರ ಏಪ್ರಿಲ್...

‘ನನ್ನನ್ನು ಎದುರಿಸಲು 19 ರಾಜ್ಯಗಳು, ಕೇಂದ್ರ ಒಗ್ಗೂಡಿವೆ, ನಾನು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ ಹೋರಾಡುತ್ತಿದ್ದೇನೆ’: ಮಮತಾ ಬ್ಯಾನರ್ಜಿ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ತಮ್ಮ ವಿರುದ್ಧ ಹೋರಾಡಲು 19 ರಾಜ್ಯಗಳು ಮತ್ತು ಕೇಂದ್ರ ಸರ್ಕಾರಗಳು ಒಗ್ಗೂಡಿವೆ ಮತ್ತು ಅವರು ಸಾಮಾನ್ಯ ಜನರಿಗಾಗಿ ಏಕಾಂಗಿಯಾಗಿ...

ಮತಗಟ್ಟೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ : ಕೇಂದ್ರ ಸರ್ಕಾರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಚುನಾವಣಾ ಅಕ್ರಮಗಳನ್ನು ತಡೆಗಟ್ಟಲು ಮತದಾನ ಕೇಂದ್ರಗಳಲ್ಲಿ ಬೆರಳಚ್ಚು ಮತ್ತು ಕಣ್ಣಿನ ಮಣಿ (ಐರಿಸ್) ಆಧಾರಿತ ಬಯೋಮೆಟ್ರಿಕ್ ಗುರುತಿಸುವಿಕೆಯನ್ನು ಜಾರಿಗೆ ತರಬೇಕು ಎಂದು ಕೋರಿ ಸಲ್ಲಿಕೆಯಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ಸಂಬಂಧ ಸುಪ್ರೀಂ...

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...