“ಜನರಿಗೆ ಗುರುತು ಸಿಗಬಾರದು ಅಂತ ಮೋದಿ ಗಡ್ಡ ಬೆಳೆಸಿಕೊಂಡಿದ್ದಾರೆ” ಎಂದು ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
“ಮುಖ್ಯಮಂತ್ರಿ ಯಡಿಯೂರಪ್ಪ ಅವರು ಯಾವ ಅಭಿವೃದ್ಧಿ ಕಾರ್ಯಗಳಿಗೂ ಸರ್ಕಾರದ ಬಳಿ ಹಣ ಇಲ್ಲ ಎನ್ನುತ್ತಾರೆ. ಸರ್ಕಾರ ನಡೆಸೋಕೆ ಆಗಲ್ಲ ಅಂದಮೇಲೆ ಮುಖ್ಯಮಂತ್ರಿಯಾಗಿ ಯಾಕಿದೀರ? ದುಡ್ಡಿಲ್ಲದಿದ್ದರೆ ಖುರ್ಚಿ ಬಿಟ್ಟು ಇಳಿಯಿರಿ. ನಾವು ಯಾರಾದರೂ ಅಧಿಕಾರ ನಡೆಸಿ ತೋರಿಸುತ್ತೇವೆ” ಎಂದು ರಾಜ್ಯ ಸರ್ಕಾರದ ವಿರುದ್ಧವೂ ಗುಡುಗಿದ್ದಾರೆ.
“ಪ್ರತಿನಿತ್ಯ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ, ಜನಸಾಮಾನ್ಯರು ಕಷ್ಟದಲ್ಲಿ ದಿನ ದೂಡುವಂತಾಗಿದೆ. ದೇಶದ ಈ ದುಸ್ಥಿತಿಗೆ ಕಾರಣರಾದ ಪ್ರಧಾನಿ ನರೇಂದ್ರ ಮೋದಿ ಅವರು ಜನರಿಗೆ ತಮ್ಮ ಗುರುತು ಸಿಗಬಾರದು ಅಂತ ಗಡ್ಡ ಬೆಳೆಸಿಕೊಂಡಿದ್ದಾರೆ. ಸುಳ್ಳಿಗೆ ಪರ್ಯಾದ ಪದವೆಂದರೆ ಅದು ನರೇಂದ್ರ ಮೋದಿ. ಅವರ ಚುನಾವಣಾ ಪೂರ್ವದ ಭಾಷಣ ಹಾಗೂ ಇಂದಿನ ಆಡಳಿತ ಒಂದಕ್ಕೊಂದು ತದ್ವಿರುದ್ಧವಾಗಿದೆ. ಮೋದಿ, ಮೋದಿ ಅಂತ ಘೋಷಣೆ ಕೂಗುತ್ತಾ, ಅಧಿಕಾರ ಕೊಟ್ಟ ಜನರೇ ಇಂದು ಮೋಸಹೋಗಿದ್ದಾರೆ.
ಮೋದಿಯವರ ನಿಜ ಬಣ್ಣವನ್ನು ಕಾಂಗ್ರೆಸ್ ಪಕ್ಷ ಬಯಲಿಗೆಳೆಯಲಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಆತ್ಮನಿರ್ಭರಕ್ಕಾಗಿ ಖಾಸಗಿಯವರನ್ನು ಬೆಂಬಲಿಸಿ: ಮೋದಿ ಹೇಳಿಕೆಗೆ ಕೆಲವು ಪ್ರಶ್ನೆಗಳು
Excellent cover of today live update. Hats up sir.