Homeಮುಖಪುಟರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬೇಡಿ: ಶಾಲೆಗಳಲ್ಲಿ ಧ್ಯಾನ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ

ರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬೇಡಿ: ಶಾಲೆಗಳಲ್ಲಿ ಧ್ಯಾನ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ

- Advertisement -
- Advertisement -

ಇನ್ನು ಮುಂದೆ ಶಾಲೆಗಳಲ್ಲಿ ನಿತ್ಯ 10 ನಿಮಿಷ ಧ್ಯಾನ ಮಾಡುವುದು ಕಡ್ಡಾಯ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೊರಡಿಸಿರುವ ಸುತ್ತೋಲೆಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, “ತಮ್ಮ ರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬಾರದು” ಎಂದು ಆಗ್ರಹಿಸಿದ್ದಾರೆ.

“ಯೋಗ-ಧ್ಯಾನ ಯಾವುದಕ್ಕೂ ನನ್ನ ವಿರೋಧ ಇಲ್ಲ. ಆದರೆ ಶಾಲೆಗಳಲ್ಲಿ ಯಾವುದು ಮುಖ್ಯ, ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ಯಾವುದಕ್ಕೆ ಆದ್ಯತೆ ನೀಡಬೇಕೆನ್ನುವುದಷ್ಟೇ ಪ್ರಶ್ನೆ. ಒಂದೆಡೆ ಶಾಲೆ ನಡೆಸಲು ಸಾರ್ವಜನಿಕರಿಂದ ಭಿಕ್ಷೆ ಬೇಡುತ್ತಿರುವ ಬಿಜೆಪಿ ಸರ್ಕಾರ ಇನ್ನೊಂದೆಡೆ ದಿನಕ್ಕೊಂದರಂತೆ ಗಿಮಿಕ್‌ಗಳನ್ನು ಮಾಡುತ್ತಿರುವುದು ಖಂಡನೀಯ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಬಿ.ಸಿ ನಾಗೇಶ್‌ರವರು ಶಿಕ್ಷಣ ಸಚಿವರಾದ ದಿನದಿಂದ ಪಠ್ಯಪುಸ್ತಕ ವಿವಾದದಿಂದ ಹಿಡಿದು ಶಾಲಾ ಶಿಕ್ಷಕರ ನೇಮಕದವರೆಗೆ ಬರೀ ಹಗರಣಗಳಲ್ಲೇ ಈಜಾಡುತ್ತಿದ್ದಾರೆ. ಅವರ ಮನಸ್ಸು ಸ್ಥಿಮಿತದಲ್ಲಿದ್ದ ಹಾಗಿಲ್ಲ, ನಿಜವಾಗಿ ಯೋಗ ಮತ್ತು ಧ್ಯಾನದ ಅಗತ್ಯ ಎಲ್ಲರಿಗಿಂತ ಹೆಚ್ಚಾಗಿ ಶಿಕ್ಷಣ ಸಚಿವರಿಗಿದೆ ಎಂದು ಕಿಡಿಕಾರಿದ್ದಾರೆ.

ಕೊರೊನಾವನ್ನು ಸರಿಯಾಗಿ ನಿಯಂತ್ರಿಸಲಾಗದೆ ಶಾಲೆಗಳನ್ನು ಮುಚ್ಚಿ, ಆನ್ ಲೈನ್ ತರಗತಿಗಳ ಮೂಲಕ ವಿದ್ಯಾರ್ಥಿಗಳಲ್ಲಿ ಮೊಬೈಲ್ ಹುಚ್ಚು ಹತ್ತಿಸಿರುವ ಬಿಜೆಪಿ ಸರ್ಕಾರ, ಈಗ ಆ ಹುಚ್ಚು ಬಿಡಿಸಲು ಧ್ಯಾನ ನಡೆಸಲು ಮುಂದಾಗಿರುವುದು ಹುಚ್ಚುತನವಲ್ಲದೆ ಮತ್ತೇನು? ಎಳೆಯ ಮಕ್ಕಳು ಆಡುತ್ತಾ, ಕುಣಿಯುತ್ತಾ ಪಾಠ ಓದಬೇಕು. ಇದರ ಬದಲಿಗೆ ಅವರನ್ನು ಕೋಣೆಯಲ್ಲಿ ಕೂಡಿ ಹಾಕಿ ಬಲಾತ್ಕಾರವಾಗಿ ಯೋಗ-ಧ್ಯಾನಗಳ ಕಸರತ್ತು ಮಾಡಿಸಿದರೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಅವರು ಇನ್ನಷ್ಟು ಕುಗ್ಗಿಹೋಗುತ್ತಾರೆ ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಮೊದಲು ಶಾಲೆಗಳಲ್ಲಿ ಅಗತ್ಯ ಸಂಖ್ಯೆಯಲ್ಲಿ ಶಿಕ್ಷಕರನ್ನು ನೇಮಿಸಿ ಅವಶ್ಯಕವಾದ ಬೋದನಾ ಸಲಕರಣೆಗಳನ್ನು ಬಿಜೆಪಿ ಸರ್ಕಾರ ಒದಗಿಸಬೇಕು. ಪ್ರತಿಶಾಲೆಯಲ್ಲಿ ಕಲೆ, ಸಂಗೀತ ಮತ್ತು ಕ್ರೀಡೆಗಳಲ್ಲಿ ತರಬೇತಿ ನೀಡುವ ಶಿಕ್ಷಕರನ್ನು ನೇಮಿಸಬೇಕು. ಇದನ್ನು ಬಿಟ್ಟು ತಮ್ಮ ರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬಾರದು ಎಂದು ಆಗ್ರಹಿಸಿದ್ದಾರೆ.

ಅದಕ್ಕೂ ಮೊದಲು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು “ರಾಜ್ಯದಲ್ಲಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ದೃಢತೆ, ಏಕಾಗ್ರತೆ, ಆರೋಗ್ಯ ವೃದ್ಧಿ, ದೈಹಿಕ ಮತ್ತು ಮಾನಸಿಕ ಒತ್ತಡ ಕಡಿಮೆಯಾಗಲು ಸಹಕಾರಿಯಾಗುವಂತೆ ಶಾಲೆಗಳಲ್ಲಿ ಪ್ರತಿದಿನ ಧ್ಯಾನವನ್ನು ಮಾಡಿಸುವುದು ಅಗತ್ಯವಾಗಿರುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಸ್ಪಂದನೆ, ಒಳ್ಳೆಯ ಹವ್ಯಾಸ ಬೆಳೆಸಿಕೊಂಡು ಉತ್ತಮ ಪ್ರಜೆಯಾಗಲು ಸಹಕಾರಿಯಾಗುತ್ತದೆ” ಎಂದು  ಸುತ್ತೋಲೆ ಹೊರಡಿಸಿದ್ದರು.

ಈಗಾಗಲೇ ಕೆಲವು ಜಿಲ್ಲೆಗಳ ಶಾಲೆಗಳಲ್ಲಿ ಧ್ಯಾನವನ್ನು ಮಾಡಿಸಲಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ ಪ್ರತಿದಿನ 10 ನಿಮಿಷಗಳ ಕಾಲ ಧ್ಯಾನವನ್ನು ಮಾಡಿಸಲು ಅವಕಾಶ ಕಲ್ಪಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಣ ಸಂಘದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಕೋರಿದ್ದ ಹಿನ್ನೆಲೆಯಲ್ಲಿ ಈ ಸುತ್ತೋಲೆ ಹೊರಡಿಸಲಾಗಿದೆ ಎಂದು ಸಚಿವರು ತಿಳಿಸಿದ್ದರು.

ಇದನ್ನೂ ಓದಿ: ಇನ್ನು ಮುಂದೆ ಶಾಲೆಗಳಲ್ಲಿ ನಿತ್ಯ 10 ನಿಮಿಷ ಧ್ಯಾನ ಕಡ್ಡಾಯ: ಸಚಿವ ಬಿ.ಸಿ ನಾಗೇಶ್ ಹೊಸ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...