Homeಮುಖಪುಟರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬೇಡಿ: ಶಾಲೆಗಳಲ್ಲಿ ಧ್ಯಾನ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ

ರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬೇಡಿ: ಶಾಲೆಗಳಲ್ಲಿ ಧ್ಯಾನ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ

- Advertisement -
- Advertisement -

ಇನ್ನು ಮುಂದೆ ಶಾಲೆಗಳಲ್ಲಿ ನಿತ್ಯ 10 ನಿಮಿಷ ಧ್ಯಾನ ಮಾಡುವುದು ಕಡ್ಡಾಯ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೊರಡಿಸಿರುವ ಸುತ್ತೋಲೆಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, “ತಮ್ಮ ರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬಾರದು” ಎಂದು ಆಗ್ರಹಿಸಿದ್ದಾರೆ.

“ಯೋಗ-ಧ್ಯಾನ ಯಾವುದಕ್ಕೂ ನನ್ನ ವಿರೋಧ ಇಲ್ಲ. ಆದರೆ ಶಾಲೆಗಳಲ್ಲಿ ಯಾವುದು ಮುಖ್ಯ, ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ಯಾವುದಕ್ಕೆ ಆದ್ಯತೆ ನೀಡಬೇಕೆನ್ನುವುದಷ್ಟೇ ಪ್ರಶ್ನೆ. ಒಂದೆಡೆ ಶಾಲೆ ನಡೆಸಲು ಸಾರ್ವಜನಿಕರಿಂದ ಭಿಕ್ಷೆ ಬೇಡುತ್ತಿರುವ ಬಿಜೆಪಿ ಸರ್ಕಾರ ಇನ್ನೊಂದೆಡೆ ದಿನಕ್ಕೊಂದರಂತೆ ಗಿಮಿಕ್‌ಗಳನ್ನು ಮಾಡುತ್ತಿರುವುದು ಖಂಡನೀಯ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಬಿ.ಸಿ ನಾಗೇಶ್‌ರವರು ಶಿಕ್ಷಣ ಸಚಿವರಾದ ದಿನದಿಂದ ಪಠ್ಯಪುಸ್ತಕ ವಿವಾದದಿಂದ ಹಿಡಿದು ಶಾಲಾ ಶಿಕ್ಷಕರ ನೇಮಕದವರೆಗೆ ಬರೀ ಹಗರಣಗಳಲ್ಲೇ ಈಜಾಡುತ್ತಿದ್ದಾರೆ. ಅವರ ಮನಸ್ಸು ಸ್ಥಿಮಿತದಲ್ಲಿದ್ದ ಹಾಗಿಲ್ಲ, ನಿಜವಾಗಿ ಯೋಗ ಮತ್ತು ಧ್ಯಾನದ ಅಗತ್ಯ ಎಲ್ಲರಿಗಿಂತ ಹೆಚ್ಚಾಗಿ ಶಿಕ್ಷಣ ಸಚಿವರಿಗಿದೆ ಎಂದು ಕಿಡಿಕಾರಿದ್ದಾರೆ.

ಕೊರೊನಾವನ್ನು ಸರಿಯಾಗಿ ನಿಯಂತ್ರಿಸಲಾಗದೆ ಶಾಲೆಗಳನ್ನು ಮುಚ್ಚಿ, ಆನ್ ಲೈನ್ ತರಗತಿಗಳ ಮೂಲಕ ವಿದ್ಯಾರ್ಥಿಗಳಲ್ಲಿ ಮೊಬೈಲ್ ಹುಚ್ಚು ಹತ್ತಿಸಿರುವ ಬಿಜೆಪಿ ಸರ್ಕಾರ, ಈಗ ಆ ಹುಚ್ಚು ಬಿಡಿಸಲು ಧ್ಯಾನ ನಡೆಸಲು ಮುಂದಾಗಿರುವುದು ಹುಚ್ಚುತನವಲ್ಲದೆ ಮತ್ತೇನು? ಎಳೆಯ ಮಕ್ಕಳು ಆಡುತ್ತಾ, ಕುಣಿಯುತ್ತಾ ಪಾಠ ಓದಬೇಕು. ಇದರ ಬದಲಿಗೆ ಅವರನ್ನು ಕೋಣೆಯಲ್ಲಿ ಕೂಡಿ ಹಾಕಿ ಬಲಾತ್ಕಾರವಾಗಿ ಯೋಗ-ಧ್ಯಾನಗಳ ಕಸರತ್ತು ಮಾಡಿಸಿದರೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಅವರು ಇನ್ನಷ್ಟು ಕುಗ್ಗಿಹೋಗುತ್ತಾರೆ ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಮೊದಲು ಶಾಲೆಗಳಲ್ಲಿ ಅಗತ್ಯ ಸಂಖ್ಯೆಯಲ್ಲಿ ಶಿಕ್ಷಕರನ್ನು ನೇಮಿಸಿ ಅವಶ್ಯಕವಾದ ಬೋದನಾ ಸಲಕರಣೆಗಳನ್ನು ಬಿಜೆಪಿ ಸರ್ಕಾರ ಒದಗಿಸಬೇಕು. ಪ್ರತಿಶಾಲೆಯಲ್ಲಿ ಕಲೆ, ಸಂಗೀತ ಮತ್ತು ಕ್ರೀಡೆಗಳಲ್ಲಿ ತರಬೇತಿ ನೀಡುವ ಶಿಕ್ಷಕರನ್ನು ನೇಮಿಸಬೇಕು. ಇದನ್ನು ಬಿಟ್ಟು ತಮ್ಮ ರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬಾರದು ಎಂದು ಆಗ್ರಹಿಸಿದ್ದಾರೆ.

ಅದಕ್ಕೂ ಮೊದಲು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು “ರಾಜ್ಯದಲ್ಲಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ದೃಢತೆ, ಏಕಾಗ್ರತೆ, ಆರೋಗ್ಯ ವೃದ್ಧಿ, ದೈಹಿಕ ಮತ್ತು ಮಾನಸಿಕ ಒತ್ತಡ ಕಡಿಮೆಯಾಗಲು ಸಹಕಾರಿಯಾಗುವಂತೆ ಶಾಲೆಗಳಲ್ಲಿ ಪ್ರತಿದಿನ ಧ್ಯಾನವನ್ನು ಮಾಡಿಸುವುದು ಅಗತ್ಯವಾಗಿರುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಸ್ಪಂದನೆ, ಒಳ್ಳೆಯ ಹವ್ಯಾಸ ಬೆಳೆಸಿಕೊಂಡು ಉತ್ತಮ ಪ್ರಜೆಯಾಗಲು ಸಹಕಾರಿಯಾಗುತ್ತದೆ” ಎಂದು  ಸುತ್ತೋಲೆ ಹೊರಡಿಸಿದ್ದರು.

ಈಗಾಗಲೇ ಕೆಲವು ಜಿಲ್ಲೆಗಳ ಶಾಲೆಗಳಲ್ಲಿ ಧ್ಯಾನವನ್ನು ಮಾಡಿಸಲಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ ಪ್ರತಿದಿನ 10 ನಿಮಿಷಗಳ ಕಾಲ ಧ್ಯಾನವನ್ನು ಮಾಡಿಸಲು ಅವಕಾಶ ಕಲ್ಪಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಣ ಸಂಘದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಕೋರಿದ್ದ ಹಿನ್ನೆಲೆಯಲ್ಲಿ ಈ ಸುತ್ತೋಲೆ ಹೊರಡಿಸಲಾಗಿದೆ ಎಂದು ಸಚಿವರು ತಿಳಿಸಿದ್ದರು.

ಇದನ್ನೂ ಓದಿ: ಇನ್ನು ಮುಂದೆ ಶಾಲೆಗಳಲ್ಲಿ ನಿತ್ಯ 10 ನಿಮಿಷ ಧ್ಯಾನ ಕಡ್ಡಾಯ: ಸಚಿವ ಬಿ.ಸಿ ನಾಗೇಶ್ ಹೊಸ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...