Homeಮುಖಪುಟರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬೇಡಿ: ಶಾಲೆಗಳಲ್ಲಿ ಧ್ಯಾನ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ

ರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬೇಡಿ: ಶಾಲೆಗಳಲ್ಲಿ ಧ್ಯಾನ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ

- Advertisement -
- Advertisement -

ಇನ್ನು ಮುಂದೆ ಶಾಲೆಗಳಲ್ಲಿ ನಿತ್ಯ 10 ನಿಮಿಷ ಧ್ಯಾನ ಮಾಡುವುದು ಕಡ್ಡಾಯ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೊರಡಿಸಿರುವ ಸುತ್ತೋಲೆಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, “ತಮ್ಮ ರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬಾರದು” ಎಂದು ಆಗ್ರಹಿಸಿದ್ದಾರೆ.

“ಯೋಗ-ಧ್ಯಾನ ಯಾವುದಕ್ಕೂ ನನ್ನ ವಿರೋಧ ಇಲ್ಲ. ಆದರೆ ಶಾಲೆಗಳಲ್ಲಿ ಯಾವುದು ಮುಖ್ಯ, ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ಯಾವುದಕ್ಕೆ ಆದ್ಯತೆ ನೀಡಬೇಕೆನ್ನುವುದಷ್ಟೇ ಪ್ರಶ್ನೆ. ಒಂದೆಡೆ ಶಾಲೆ ನಡೆಸಲು ಸಾರ್ವಜನಿಕರಿಂದ ಭಿಕ್ಷೆ ಬೇಡುತ್ತಿರುವ ಬಿಜೆಪಿ ಸರ್ಕಾರ ಇನ್ನೊಂದೆಡೆ ದಿನಕ್ಕೊಂದರಂತೆ ಗಿಮಿಕ್‌ಗಳನ್ನು ಮಾಡುತ್ತಿರುವುದು ಖಂಡನೀಯ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಬಿ.ಸಿ ನಾಗೇಶ್‌ರವರು ಶಿಕ್ಷಣ ಸಚಿವರಾದ ದಿನದಿಂದ ಪಠ್ಯಪುಸ್ತಕ ವಿವಾದದಿಂದ ಹಿಡಿದು ಶಾಲಾ ಶಿಕ್ಷಕರ ನೇಮಕದವರೆಗೆ ಬರೀ ಹಗರಣಗಳಲ್ಲೇ ಈಜಾಡುತ್ತಿದ್ದಾರೆ. ಅವರ ಮನಸ್ಸು ಸ್ಥಿಮಿತದಲ್ಲಿದ್ದ ಹಾಗಿಲ್ಲ, ನಿಜವಾಗಿ ಯೋಗ ಮತ್ತು ಧ್ಯಾನದ ಅಗತ್ಯ ಎಲ್ಲರಿಗಿಂತ ಹೆಚ್ಚಾಗಿ ಶಿಕ್ಷಣ ಸಚಿವರಿಗಿದೆ ಎಂದು ಕಿಡಿಕಾರಿದ್ದಾರೆ.

ಕೊರೊನಾವನ್ನು ಸರಿಯಾಗಿ ನಿಯಂತ್ರಿಸಲಾಗದೆ ಶಾಲೆಗಳನ್ನು ಮುಚ್ಚಿ, ಆನ್ ಲೈನ್ ತರಗತಿಗಳ ಮೂಲಕ ವಿದ್ಯಾರ್ಥಿಗಳಲ್ಲಿ ಮೊಬೈಲ್ ಹುಚ್ಚು ಹತ್ತಿಸಿರುವ ಬಿಜೆಪಿ ಸರ್ಕಾರ, ಈಗ ಆ ಹುಚ್ಚು ಬಿಡಿಸಲು ಧ್ಯಾನ ನಡೆಸಲು ಮುಂದಾಗಿರುವುದು ಹುಚ್ಚುತನವಲ್ಲದೆ ಮತ್ತೇನು? ಎಳೆಯ ಮಕ್ಕಳು ಆಡುತ್ತಾ, ಕುಣಿಯುತ್ತಾ ಪಾಠ ಓದಬೇಕು. ಇದರ ಬದಲಿಗೆ ಅವರನ್ನು ಕೋಣೆಯಲ್ಲಿ ಕೂಡಿ ಹಾಕಿ ಬಲಾತ್ಕಾರವಾಗಿ ಯೋಗ-ಧ್ಯಾನಗಳ ಕಸರತ್ತು ಮಾಡಿಸಿದರೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಅವರು ಇನ್ನಷ್ಟು ಕುಗ್ಗಿಹೋಗುತ್ತಾರೆ ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಮೊದಲು ಶಾಲೆಗಳಲ್ಲಿ ಅಗತ್ಯ ಸಂಖ್ಯೆಯಲ್ಲಿ ಶಿಕ್ಷಕರನ್ನು ನೇಮಿಸಿ ಅವಶ್ಯಕವಾದ ಬೋದನಾ ಸಲಕರಣೆಗಳನ್ನು ಬಿಜೆಪಿ ಸರ್ಕಾರ ಒದಗಿಸಬೇಕು. ಪ್ರತಿಶಾಲೆಯಲ್ಲಿ ಕಲೆ, ಸಂಗೀತ ಮತ್ತು ಕ್ರೀಡೆಗಳಲ್ಲಿ ತರಬೇತಿ ನೀಡುವ ಶಿಕ್ಷಕರನ್ನು ನೇಮಿಸಬೇಕು. ಇದನ್ನು ಬಿಟ್ಟು ತಮ್ಮ ರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬಾರದು ಎಂದು ಆಗ್ರಹಿಸಿದ್ದಾರೆ.

ಅದಕ್ಕೂ ಮೊದಲು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು “ರಾಜ್ಯದಲ್ಲಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ದೃಢತೆ, ಏಕಾಗ್ರತೆ, ಆರೋಗ್ಯ ವೃದ್ಧಿ, ದೈಹಿಕ ಮತ್ತು ಮಾನಸಿಕ ಒತ್ತಡ ಕಡಿಮೆಯಾಗಲು ಸಹಕಾರಿಯಾಗುವಂತೆ ಶಾಲೆಗಳಲ್ಲಿ ಪ್ರತಿದಿನ ಧ್ಯಾನವನ್ನು ಮಾಡಿಸುವುದು ಅಗತ್ಯವಾಗಿರುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಸ್ಪಂದನೆ, ಒಳ್ಳೆಯ ಹವ್ಯಾಸ ಬೆಳೆಸಿಕೊಂಡು ಉತ್ತಮ ಪ್ರಜೆಯಾಗಲು ಸಹಕಾರಿಯಾಗುತ್ತದೆ” ಎಂದು  ಸುತ್ತೋಲೆ ಹೊರಡಿಸಿದ್ದರು.

ಈಗಾಗಲೇ ಕೆಲವು ಜಿಲ್ಲೆಗಳ ಶಾಲೆಗಳಲ್ಲಿ ಧ್ಯಾನವನ್ನು ಮಾಡಿಸಲಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ ಪ್ರತಿದಿನ 10 ನಿಮಿಷಗಳ ಕಾಲ ಧ್ಯಾನವನ್ನು ಮಾಡಿಸಲು ಅವಕಾಶ ಕಲ್ಪಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಣ ಸಂಘದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಕೋರಿದ್ದ ಹಿನ್ನೆಲೆಯಲ್ಲಿ ಈ ಸುತ್ತೋಲೆ ಹೊರಡಿಸಲಾಗಿದೆ ಎಂದು ಸಚಿವರು ತಿಳಿಸಿದ್ದರು.

ಇದನ್ನೂ ಓದಿ: ಇನ್ನು ಮುಂದೆ ಶಾಲೆಗಳಲ್ಲಿ ನಿತ್ಯ 10 ನಿಮಿಷ ಧ್ಯಾನ ಕಡ್ಡಾಯ: ಸಚಿವ ಬಿ.ಸಿ ನಾಗೇಶ್ ಹೊಸ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...