Homeಮುಖಪುಟರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬೇಡಿ: ಶಾಲೆಗಳಲ್ಲಿ ಧ್ಯಾನ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ

ರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬೇಡಿ: ಶಾಲೆಗಳಲ್ಲಿ ಧ್ಯಾನ ಕುರಿತು ಸಿದ್ದರಾಮಯ್ಯ ಪ್ರತಿಕ್ರಿಯೆ

- Advertisement -
- Advertisement -

ಇನ್ನು ಮುಂದೆ ಶಾಲೆಗಳಲ್ಲಿ ನಿತ್ಯ 10 ನಿಮಿಷ ಧ್ಯಾನ ಮಾಡುವುದು ಕಡ್ಡಾಯ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೊರಡಿಸಿರುವ ಸುತ್ತೋಲೆಗೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, “ತಮ್ಮ ರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬಾರದು” ಎಂದು ಆಗ್ರಹಿಸಿದ್ದಾರೆ.

“ಯೋಗ-ಧ್ಯಾನ ಯಾವುದಕ್ಕೂ ನನ್ನ ವಿರೋಧ ಇಲ್ಲ. ಆದರೆ ಶಾಲೆಗಳಲ್ಲಿ ಯಾವುದು ಮುಖ್ಯ, ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು ಯಾವುದಕ್ಕೆ ಆದ್ಯತೆ ನೀಡಬೇಕೆನ್ನುವುದಷ್ಟೇ ಪ್ರಶ್ನೆ. ಒಂದೆಡೆ ಶಾಲೆ ನಡೆಸಲು ಸಾರ್ವಜನಿಕರಿಂದ ಭಿಕ್ಷೆ ಬೇಡುತ್ತಿರುವ ಬಿಜೆಪಿ ಸರ್ಕಾರ ಇನ್ನೊಂದೆಡೆ ದಿನಕ್ಕೊಂದರಂತೆ ಗಿಮಿಕ್‌ಗಳನ್ನು ಮಾಡುತ್ತಿರುವುದು ಖಂಡನೀಯ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ರಾಜ್ಯದಲ್ಲಿ ಬಿ.ಸಿ ನಾಗೇಶ್‌ರವರು ಶಿಕ್ಷಣ ಸಚಿವರಾದ ದಿನದಿಂದ ಪಠ್ಯಪುಸ್ತಕ ವಿವಾದದಿಂದ ಹಿಡಿದು ಶಾಲಾ ಶಿಕ್ಷಕರ ನೇಮಕದವರೆಗೆ ಬರೀ ಹಗರಣಗಳಲ್ಲೇ ಈಜಾಡುತ್ತಿದ್ದಾರೆ. ಅವರ ಮನಸ್ಸು ಸ್ಥಿಮಿತದಲ್ಲಿದ್ದ ಹಾಗಿಲ್ಲ, ನಿಜವಾಗಿ ಯೋಗ ಮತ್ತು ಧ್ಯಾನದ ಅಗತ್ಯ ಎಲ್ಲರಿಗಿಂತ ಹೆಚ್ಚಾಗಿ ಶಿಕ್ಷಣ ಸಚಿವರಿಗಿದೆ ಎಂದು ಕಿಡಿಕಾರಿದ್ದಾರೆ.

ಕೊರೊನಾವನ್ನು ಸರಿಯಾಗಿ ನಿಯಂತ್ರಿಸಲಾಗದೆ ಶಾಲೆಗಳನ್ನು ಮುಚ್ಚಿ, ಆನ್ ಲೈನ್ ತರಗತಿಗಳ ಮೂಲಕ ವಿದ್ಯಾರ್ಥಿಗಳಲ್ಲಿ ಮೊಬೈಲ್ ಹುಚ್ಚು ಹತ್ತಿಸಿರುವ ಬಿಜೆಪಿ ಸರ್ಕಾರ, ಈಗ ಆ ಹುಚ್ಚು ಬಿಡಿಸಲು ಧ್ಯಾನ ನಡೆಸಲು ಮುಂದಾಗಿರುವುದು ಹುಚ್ಚುತನವಲ್ಲದೆ ಮತ್ತೇನು? ಎಳೆಯ ಮಕ್ಕಳು ಆಡುತ್ತಾ, ಕುಣಿಯುತ್ತಾ ಪಾಠ ಓದಬೇಕು. ಇದರ ಬದಲಿಗೆ ಅವರನ್ನು ಕೋಣೆಯಲ್ಲಿ ಕೂಡಿ ಹಾಕಿ ಬಲಾತ್ಕಾರವಾಗಿ ಯೋಗ-ಧ್ಯಾನಗಳ ಕಸರತ್ತು ಮಾಡಿಸಿದರೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಅವರು ಇನ್ನಷ್ಟು ಕುಗ್ಗಿಹೋಗುತ್ತಾರೆ ಎಂದು ಸಿದ್ದರಾಮಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.

ಮೊದಲು ಶಾಲೆಗಳಲ್ಲಿ ಅಗತ್ಯ ಸಂಖ್ಯೆಯಲ್ಲಿ ಶಿಕ್ಷಕರನ್ನು ನೇಮಿಸಿ ಅವಶ್ಯಕವಾದ ಬೋದನಾ ಸಲಕರಣೆಗಳನ್ನು ಬಿಜೆಪಿ ಸರ್ಕಾರ ಒದಗಿಸಬೇಕು. ಪ್ರತಿಶಾಲೆಯಲ್ಲಿ ಕಲೆ, ಸಂಗೀತ ಮತ್ತು ಕ್ರೀಡೆಗಳಲ್ಲಿ ತರಬೇತಿ ನೀಡುವ ಶಿಕ್ಷಕರನ್ನು ನೇಮಿಸಬೇಕು. ಇದನ್ನು ಬಿಟ್ಟು ತಮ್ಮ ರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬಾರದು ಎಂದು ಆಗ್ರಹಿಸಿದ್ದಾರೆ.

ಅದಕ್ಕೂ ಮೊದಲು ಶಿಕ್ಷಣ ಸಚಿವ ಬಿ.ಸಿ ನಾಗೇಶ್‌ರವರು “ರಾಜ್ಯದಲ್ಲಿನ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಲ್ಲಿ ದೃಢತೆ, ಏಕಾಗ್ರತೆ, ಆರೋಗ್ಯ ವೃದ್ಧಿ, ದೈಹಿಕ ಮತ್ತು ಮಾನಸಿಕ ಒತ್ತಡ ಕಡಿಮೆಯಾಗಲು ಸಹಕಾರಿಯಾಗುವಂತೆ ಶಾಲೆಗಳಲ್ಲಿ ಪ್ರತಿದಿನ ಧ್ಯಾನವನ್ನು ಮಾಡಿಸುವುದು ಅಗತ್ಯವಾಗಿರುತ್ತದೆ. ಇದರಿಂದಾಗಿ ವಿದ್ಯಾರ್ಥಿಗಳಲ್ಲಿ ಸಕಾರಾತ್ಮಕ ಸ್ಪಂದನೆ, ಒಳ್ಳೆಯ ಹವ್ಯಾಸ ಬೆಳೆಸಿಕೊಂಡು ಉತ್ತಮ ಪ್ರಜೆಯಾಗಲು ಸಹಕಾರಿಯಾಗುತ್ತದೆ” ಎಂದು  ಸುತ್ತೋಲೆ ಹೊರಡಿಸಿದ್ದರು.

ಈಗಾಗಲೇ ಕೆಲವು ಜಿಲ್ಲೆಗಳ ಶಾಲೆಗಳಲ್ಲಿ ಧ್ಯಾನವನ್ನು ಮಾಡಿಸಲಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿನ ಎಲ್ಲಾ ಪ್ರಾಥಮಿಕ ಶಾಲೆಗಳಲ್ಲಿ ಪ್ರತಿದಿನ 10 ನಿಮಿಷಗಳ ಕಾಲ ಧ್ಯಾನವನ್ನು ಮಾಡಿಸಲು ಅವಕಾಶ ಕಲ್ಪಿಸುವಂತೆ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಣ ಸಂಘದ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಕೋರಿದ್ದ ಹಿನ್ನೆಲೆಯಲ್ಲಿ ಈ ಸುತ್ತೋಲೆ ಹೊರಡಿಸಲಾಗಿದೆ ಎಂದು ಸಚಿವರು ತಿಳಿಸಿದ್ದರು.

ಇದನ್ನೂ ಓದಿ: ಇನ್ನು ಮುಂದೆ ಶಾಲೆಗಳಲ್ಲಿ ನಿತ್ಯ 10 ನಿಮಿಷ ಧ್ಯಾನ ಕಡ್ಡಾಯ: ಸಚಿವ ಬಿ.ಸಿ ನಾಗೇಶ್ ಹೊಸ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....