Homeಕರ್ನಾಟಕಸಿದ್ದರಾಮಯ್ಯನವರ ಹೇಳಿಕೆ ತಿರುಚಿ, ನಂತರ ತಿದ್ದಿದ ಎನ್‌ಡಿಟಿವಿ; ಸುಳ್ಳನ್ನೇ ವೈಭವೀಕರಿಸಿದ ಕನ್ನಡ ಮಾಧ್ಯಮಗಳು

ಸಿದ್ದರಾಮಯ್ಯನವರ ಹೇಳಿಕೆ ತಿರುಚಿ, ನಂತರ ತಿದ್ದಿದ ಎನ್‌ಡಿಟಿವಿ; ಸುಳ್ಳನ್ನೇ ವೈಭವೀಕರಿಸಿದ ಕನ್ನಡ ಮಾಧ್ಯಮಗಳು

- Advertisement -
- Advertisement -

“ಕಾಂಗ್ರೆಸ್‌ ಗೆದ್ದರೂ ಹೈಕಮಾಂಡ್‌ ಡಿ.ಕೆ.ಶಿವಕುಮಾರ್‌ ಅವರನ್ನು ಸಿಎಂ ಮಾಡುವುದಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿರುವುದಾಗಿ ‘ಎನ್‌ಡಿಟಿವಿ’ ಸುಳ್ಳನ್ನು ಹಬ್ಬಿಸಿ‍ದ್ದು ಇದನ್ನೇ ಕನ್ನಡ ಮಾಧ್ಯಮಗಳು ಕೂಡ ವರದಿ ಮಾಡಿವೆ.

ಸಿದ್ದರಾಮಯ್ಯನವರು ತಮ್ಮ ಸಂದರ್ಶನದಲ್ಲಿ ಹೇಳಿರುವುದೇ ಒಂದಾದರೆ, ಅದಾನಿ ಒಡೆತನದ ಎನ್‌ಡಿಟಿವಿ ವರದಿ ಮಾಡಿರುವ ವಿಚಾರವೇ ಇನ್ನೊಂದಾಗಿದೆ. ಸಿದ್ದರಾಮಯ್ಯನವರು ಹೇಳದೆ ಇರುವ ಸಂಗತಿಯನ್ನು ಸೇರಿಸಿ ವರದಿ ಪ್ರಕಟಿಸಲಾಗಿದೆ. ಆದರೆ ಇದನ್ನೇ ‘ಕನ್ನಡಪ್ರಭ’ದಂತಹ ಪತ್ರಿಕಾ ಸಂಸ್ಥೆಗಳು ವರದಿ ಮಾಡಿವೆ. ಸಿದ್ದರಾಮಯ್ಯನವರು ವಿರೋಧ ವ್ಯಕ್ತಪಡಿಸಿದ ಬಳಿಕ ಹೆಡ್‌ಲೈನ್ ಹಾಗೂ ವರದಿಯನ್ನು ಎನ್‌ಡಿಟಿವಿ ತಿದ್ದಿದೆಯಾದರೂ ಸುಳ್ಳು ಈಗಾಗಲೇ ಊರು ಸುತ್ತಾಡಿಕೊಂಡು ಬಂದಿದೆ.

ಎನ್‌ಡಿಟಿವಿ ನಡೆಸಿದ ವಿಡಿಯೊ ಸಂದರ್ಶನದಲ್ಲಿ ಸಿದ್ದರಾಮಯ್ಯನವರು ಅನೇಕ ವಿಷಯಗಳನ್ನು ಮಾತನಾಡಿದ್ದಾರೆ. ಕೋಲಾರ ಮತ್ತು ವರುಣಾದಲ್ಲಿ ಸ್ಪರ್ಧಿಸುವ ಕುರಿತು, ಬಿಜೆಪಿ ಸರ್ಕಾರದ 40% ಕಮಿಷನ್‌ ದಂಧೆ ಮತ್ತು ಕೋಮುವಾದಿ ರಾಜಕಾರಣದ ಕುರಿತು ಮಾತನಾಡುತ್ತಾರೆ. ಜೊತೆಗೆ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿರುವುದಾಗಿಯೂ ಹೇಳುತ್ತಾರೆ.

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರಾದರೂ ಮುಖ್ಯಮಂತ್ರಿಯಾಗುವ ಆಕಾಂಕ್ಷೆಯನ್ನು ಹೊಂದಿರಬಹುದು. ನಾನು ಆಕಾಂಕ್ಷಿಯಾಗಿದ್ದೇನೆ, ಡಿ.ಕೆ.ಶಿವಕುಮಾರ್‌ ಅವರೂ ಆಕಾಂಕ್ಷಿಯಾಗಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೆಲ್ಲವೂ ನಡೆಯುತ್ತವೆ. ಇದರಲ್ಲಿ ಯಾವುದೇ ತಪ್ಪಿಲ್ಲ” ಎನ್ನುತ್ತಾರೆ. ಅದಕ್ಕೆ ಸಂದರ್ಶಕಿ ಕೂಡ ದನಿಗೂಡಿಸುತ್ತಾರೆ.

ಮುಂದುವರಿದು ಸಿದ್ದರಾಮಯ್ಯನವರು, “ನಾನು ಮುಖ್ಯಮಂತ್ರಿಯಾಗಬೇಕೆಂದು ಬಯಸುವುದು ತಪ್ಪಲ್ಲ, ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಬೇಕೆಂದು ಬಯಸುವುದು ತಪ್ಪಲ್ಲ, ಮತ್ಯಾರೋ ಮುಖ್ಯಮಂತ್ರಿಯಾಗಬೇಕೆಂದು ಬಯಸುವುದು ತಪ್ಪಲ್ಲ. ಅಂತಿಮವಾಗಿ ಆಯ್ಕೆಯಾದ ಎಂಎಲ್‌ಎಗಳು ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡುತ್ತಾರೆ. ಅಂತಿಮವಾಗಿ ಹೈಕಮಾಂಡ್‌ ನಿರ್ಧಾರ ಕೈಗೊಳ್ಳುತ್ತದೆ. ಇದು ಪ್ರಜಾಪ್ರಭುತ್ವದ ಮಾದರಿ” ಎನ್ನುತ್ತಾರೆ.

“ಒಂದು ವೇಳೆ ಡಿ.ಕೆ.ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಹೈಕಮಾಂಡ್ ನಿರ್ಧರಿಸಿದರೆ?” ಎಂದು ಸಂದರ್ಶಕಿ ಕೇಳುತ್ತಾರೆ. ಮುಂದುವರಿದು, “ಇಲ್ಲ, ಅದು ಹಾಗಾಗುವುದಿಲ್ಲ. ಹೈಕಮಾಂಡ್ ಕೂಡ ತನ್ನಷ್ಟಕ್ಕೆ ತಾನೇ ನಿರ್ಧಾರವನ್ನು ಕೈಗೊಳ್ಳುವುದಿಲ್ಲ. ಹೊಸದಾಗಿ ಆಯ್ಕೆಯಾದ ಎಂಎಲ್‌ಎಗಳ ನಿರ್ಧಾರದ ಮೇಲೆ ಮುಂದುವರಿಯುತ್ತದೆ” ಎನ್ನುತ್ತಾರೆ.

ಹೀಗೆ ಸಿದ್ದರಾಮಯ್ಯನವರು ಮಾತನಾಡಿದ್ದರೆ, ಬೇರೆಯದ್ದೇ ರೀತಿಯಲ್ಲಿ ವರದಿ ಮಾಡಲಾಗಿದೆ. “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ ಮುಖ್ಯಮಂತ್ರಿ ಹುದ್ದೆಯನ್ನು ನೀಡುವುದಿಲ್ಲ” ಎಂದು ಸಿದ್ದರಾಮಯ್ಯನವರು ಎನ್‌ಡಿಟಿವಿ ಸಂದರ್ಶನದಲ್ಲಿ ತಿಳಿಸಿದ್ದಾರೆಂದು ‘ಕನ್ನಡಪ್ರಭ’ ದಿನಪತ್ರಿಕೆ ಮುಖಪುಟದಲ್ಲಿ ವರದಿ ಮಾಡಿದೆ.

ಎನ್‌ಡಿಟಿವಿ ತನ್ನ ವರದಿಯಲ್ಲಿ “ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಹೈಕಮಾಂಡ್ ನೀಡುವುದಿಲ್ಲ” ಎಂಬ ಸಾಲನ್ನು ಸೇರಿಸಿದೆ. ವಿರೋಧ ವ್ಯಕ್ತವಾದ ಬಳಿಕ ವರದಿಯನ್ನು ತಿದ್ದಿದೆ.

ತಿರುಚಲ್ಪಟ್ಟಿರುವ ವರದಿ
ತಿದ್ದಲ್ಪಟ್ಟ ವರದಿ

“ಇಲ್ಲ, ಹಾಗೇ ಆಗಲು ಸಾಧ್ಯವಿಲ್ಲ. ಏಕೆಂದರೆ ನಾವು ಪ್ರಜಾಪ್ರಭುತ್ವ ದಾರಿಯಲ್ಲಿ ನಡೆಯಬೇಕು. ತನ್ನಷ್ಟಕ್ಕೆ ತಾನೇ ಹೈಕಮಾಂಡ್ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಹೊಸದಾಗಿ ಆಯ್ಕೆಯಾದ ಎಂಎಲ್‌ಎಗಳ ಅಭಿಪ್ರಾಯದಂತೆ ಹೋಗಬೇಕಾಗುತ್ತದೆ” ಎಂದು ಸಿದ್ದರಾಮಯ್ಯನವರು ಹೇಳಿರುವುದಾಗಿ ಎನ್‌ಡಿಟಿವಿ ವರದಿಯನ್ನು ತಿದ್ದಿದೆ.

ಎನ್‌ಡಿಟಿವಿ ಮಾಡಿರುವ ಸುಳ್ಳು ಸುದ್ದಿಗೆ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್‌ಗಳನ್ನು ಮಾಡಿ ಸ್ಪಷ್ಟೀಕರಣ ನೀಡಿದ್ದಾರೆ. “ನಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ನಾನು ಆಡದ ಮಾತುಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿಯೊಂದನ್ನು ಪ್ರಕಟಿಸಿದೆ. ಇದು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶದಿಂದ ಕೂಡಿದ್ದಾಗಿದೆ. ಎನ್.ಡಿ ಟಿವಿ ತಕ್ಷಣ ಈ ಬರಹವನ್ನು ಅಳಿಸಿಹಾಕಿ ತಿದ್ದುಪಡಿ ಪ್ರಕಟಿಸಬೇಕು ಎಂದು ಒತ್ತಾಯಿಸುತ್ತೇನೆ” ಎಂದಿದ್ದಾರೆ.

ನಮ್ಮ ಪಕ್ಷದ ಮುಂದಿನ ಮುಖ್ಯಮಂತ್ರಿಯನ್ನು ಶಾಸಕಾಂಗ ಪಕ್ಷ ಮತ್ತು ಹೈಕಮಾಂಡ್ ಕೂಡಿ ಆಯ್ಕೆ ಮಾಡಲಿದೆ ಎನ್ನುವುದನ್ನು ನೂರು ಸಲ ಹೇಳಿದ್ದೇನೆ. ನನ್ನ ಮತ್ತು ಡಿ.ಕೆ.ಶಿವಕುಮಾರ್‌ ನಡುವೆ ಭಿನ್ನಾಭಿಪ್ರಾಯವನ್ನು ಹುಟ್ಟುಹಾಕುವ ವಿರೋಧ ಪಕ್ಷಗಳ ಹುನ್ನಾರಕ್ಕೆ ಮಾಧ್ಯಮಗಳು ಆಯುಧವಾಗಿ ಬಳಕೆಯಾಗಬಾರದು” ಎಂದು ಆಶಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...