Homeಕರ್ನಾಟಕಸಿದ್ದರಾಮಯ್ಯನವರ ಹೇಳಿಕೆ ತಿರುಚಿ, ನಂತರ ತಿದ್ದಿದ ಎನ್‌ಡಿಟಿವಿ; ಸುಳ್ಳನ್ನೇ ವೈಭವೀಕರಿಸಿದ ಕನ್ನಡ ಮಾಧ್ಯಮಗಳು

ಸಿದ್ದರಾಮಯ್ಯನವರ ಹೇಳಿಕೆ ತಿರುಚಿ, ನಂತರ ತಿದ್ದಿದ ಎನ್‌ಡಿಟಿವಿ; ಸುಳ್ಳನ್ನೇ ವೈಭವೀಕರಿಸಿದ ಕನ್ನಡ ಮಾಧ್ಯಮಗಳು

- Advertisement -
- Advertisement -

“ಕಾಂಗ್ರೆಸ್‌ ಗೆದ್ದರೂ ಹೈಕಮಾಂಡ್‌ ಡಿ.ಕೆ.ಶಿವಕುಮಾರ್‌ ಅವರನ್ನು ಸಿಎಂ ಮಾಡುವುದಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿರುವುದಾಗಿ ‘ಎನ್‌ಡಿಟಿವಿ’ ಸುಳ್ಳನ್ನು ಹಬ್ಬಿಸಿ‍ದ್ದು ಇದನ್ನೇ ಕನ್ನಡ ಮಾಧ್ಯಮಗಳು ಕೂಡ ವರದಿ ಮಾಡಿವೆ.

ಸಿದ್ದರಾಮಯ್ಯನವರು ತಮ್ಮ ಸಂದರ್ಶನದಲ್ಲಿ ಹೇಳಿರುವುದೇ ಒಂದಾದರೆ, ಅದಾನಿ ಒಡೆತನದ ಎನ್‌ಡಿಟಿವಿ ವರದಿ ಮಾಡಿರುವ ವಿಚಾರವೇ ಇನ್ನೊಂದಾಗಿದೆ. ಸಿದ್ದರಾಮಯ್ಯನವರು ಹೇಳದೆ ಇರುವ ಸಂಗತಿಯನ್ನು ಸೇರಿಸಿ ವರದಿ ಪ್ರಕಟಿಸಲಾಗಿದೆ. ಆದರೆ ಇದನ್ನೇ ‘ಕನ್ನಡಪ್ರಭ’ದಂತಹ ಪತ್ರಿಕಾ ಸಂಸ್ಥೆಗಳು ವರದಿ ಮಾಡಿವೆ. ಸಿದ್ದರಾಮಯ್ಯನವರು ವಿರೋಧ ವ್ಯಕ್ತಪಡಿಸಿದ ಬಳಿಕ ಹೆಡ್‌ಲೈನ್ ಹಾಗೂ ವರದಿಯನ್ನು ಎನ್‌ಡಿಟಿವಿ ತಿದ್ದಿದೆಯಾದರೂ ಸುಳ್ಳು ಈಗಾಗಲೇ ಊರು ಸುತ್ತಾಡಿಕೊಂಡು ಬಂದಿದೆ.

ಎನ್‌ಡಿಟಿವಿ ನಡೆಸಿದ ವಿಡಿಯೊ ಸಂದರ್ಶನದಲ್ಲಿ ಸಿದ್ದರಾಮಯ್ಯನವರು ಅನೇಕ ವಿಷಯಗಳನ್ನು ಮಾತನಾಡಿದ್ದಾರೆ. ಕೋಲಾರ ಮತ್ತು ವರುಣಾದಲ್ಲಿ ಸ್ಪರ್ಧಿಸುವ ಕುರಿತು, ಬಿಜೆಪಿ ಸರ್ಕಾರದ 40% ಕಮಿಷನ್‌ ದಂಧೆ ಮತ್ತು ಕೋಮುವಾದಿ ರಾಜಕಾರಣದ ಕುರಿತು ಮಾತನಾಡುತ್ತಾರೆ. ಜೊತೆಗೆ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿರುವುದಾಗಿಯೂ ಹೇಳುತ್ತಾರೆ.

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರಾದರೂ ಮುಖ್ಯಮಂತ್ರಿಯಾಗುವ ಆಕಾಂಕ್ಷೆಯನ್ನು ಹೊಂದಿರಬಹುದು. ನಾನು ಆಕಾಂಕ್ಷಿಯಾಗಿದ್ದೇನೆ, ಡಿ.ಕೆ.ಶಿವಕುಮಾರ್‌ ಅವರೂ ಆಕಾಂಕ್ಷಿಯಾಗಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೆಲ್ಲವೂ ನಡೆಯುತ್ತವೆ. ಇದರಲ್ಲಿ ಯಾವುದೇ ತಪ್ಪಿಲ್ಲ” ಎನ್ನುತ್ತಾರೆ. ಅದಕ್ಕೆ ಸಂದರ್ಶಕಿ ಕೂಡ ದನಿಗೂಡಿಸುತ್ತಾರೆ.

ಮುಂದುವರಿದು ಸಿದ್ದರಾಮಯ್ಯನವರು, “ನಾನು ಮುಖ್ಯಮಂತ್ರಿಯಾಗಬೇಕೆಂದು ಬಯಸುವುದು ತಪ್ಪಲ್ಲ, ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಬೇಕೆಂದು ಬಯಸುವುದು ತಪ್ಪಲ್ಲ, ಮತ್ಯಾರೋ ಮುಖ್ಯಮಂತ್ರಿಯಾಗಬೇಕೆಂದು ಬಯಸುವುದು ತಪ್ಪಲ್ಲ. ಅಂತಿಮವಾಗಿ ಆಯ್ಕೆಯಾದ ಎಂಎಲ್‌ಎಗಳು ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡುತ್ತಾರೆ. ಅಂತಿಮವಾಗಿ ಹೈಕಮಾಂಡ್‌ ನಿರ್ಧಾರ ಕೈಗೊಳ್ಳುತ್ತದೆ. ಇದು ಪ್ರಜಾಪ್ರಭುತ್ವದ ಮಾದರಿ” ಎನ್ನುತ್ತಾರೆ.

“ಒಂದು ವೇಳೆ ಡಿ.ಕೆ.ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಹೈಕಮಾಂಡ್ ನಿರ್ಧರಿಸಿದರೆ?” ಎಂದು ಸಂದರ್ಶಕಿ ಕೇಳುತ್ತಾರೆ. ಮುಂದುವರಿದು, “ಇಲ್ಲ, ಅದು ಹಾಗಾಗುವುದಿಲ್ಲ. ಹೈಕಮಾಂಡ್ ಕೂಡ ತನ್ನಷ್ಟಕ್ಕೆ ತಾನೇ ನಿರ್ಧಾರವನ್ನು ಕೈಗೊಳ್ಳುವುದಿಲ್ಲ. ಹೊಸದಾಗಿ ಆಯ್ಕೆಯಾದ ಎಂಎಲ್‌ಎಗಳ ನಿರ್ಧಾರದ ಮೇಲೆ ಮುಂದುವರಿಯುತ್ತದೆ” ಎನ್ನುತ್ತಾರೆ.

ಹೀಗೆ ಸಿದ್ದರಾಮಯ್ಯನವರು ಮಾತನಾಡಿದ್ದರೆ, ಬೇರೆಯದ್ದೇ ರೀತಿಯಲ್ಲಿ ವರದಿ ಮಾಡಲಾಗಿದೆ. “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ ಮುಖ್ಯಮಂತ್ರಿ ಹುದ್ದೆಯನ್ನು ನೀಡುವುದಿಲ್ಲ” ಎಂದು ಸಿದ್ದರಾಮಯ್ಯನವರು ಎನ್‌ಡಿಟಿವಿ ಸಂದರ್ಶನದಲ್ಲಿ ತಿಳಿಸಿದ್ದಾರೆಂದು ‘ಕನ್ನಡಪ್ರಭ’ ದಿನಪತ್ರಿಕೆ ಮುಖಪುಟದಲ್ಲಿ ವರದಿ ಮಾಡಿದೆ.

ಎನ್‌ಡಿಟಿವಿ ತನ್ನ ವರದಿಯಲ್ಲಿ “ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಹೈಕಮಾಂಡ್ ನೀಡುವುದಿಲ್ಲ” ಎಂಬ ಸಾಲನ್ನು ಸೇರಿಸಿದೆ. ವಿರೋಧ ವ್ಯಕ್ತವಾದ ಬಳಿಕ ವರದಿಯನ್ನು ತಿದ್ದಿದೆ.

ತಿರುಚಲ್ಪಟ್ಟಿರುವ ವರದಿ
ತಿದ್ದಲ್ಪಟ್ಟ ವರದಿ

“ಇಲ್ಲ, ಹಾಗೇ ಆಗಲು ಸಾಧ್ಯವಿಲ್ಲ. ಏಕೆಂದರೆ ನಾವು ಪ್ರಜಾಪ್ರಭುತ್ವ ದಾರಿಯಲ್ಲಿ ನಡೆಯಬೇಕು. ತನ್ನಷ್ಟಕ್ಕೆ ತಾನೇ ಹೈಕಮಾಂಡ್ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಹೊಸದಾಗಿ ಆಯ್ಕೆಯಾದ ಎಂಎಲ್‌ಎಗಳ ಅಭಿಪ್ರಾಯದಂತೆ ಹೋಗಬೇಕಾಗುತ್ತದೆ” ಎಂದು ಸಿದ್ದರಾಮಯ್ಯನವರು ಹೇಳಿರುವುದಾಗಿ ಎನ್‌ಡಿಟಿವಿ ವರದಿಯನ್ನು ತಿದ್ದಿದೆ.

ಎನ್‌ಡಿಟಿವಿ ಮಾಡಿರುವ ಸುಳ್ಳು ಸುದ್ದಿಗೆ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್‌ಗಳನ್ನು ಮಾಡಿ ಸ್ಪಷ್ಟೀಕರಣ ನೀಡಿದ್ದಾರೆ. “ನಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ನಾನು ಆಡದ ಮಾತುಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿಯೊಂದನ್ನು ಪ್ರಕಟಿಸಿದೆ. ಇದು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶದಿಂದ ಕೂಡಿದ್ದಾಗಿದೆ. ಎನ್.ಡಿ ಟಿವಿ ತಕ್ಷಣ ಈ ಬರಹವನ್ನು ಅಳಿಸಿಹಾಕಿ ತಿದ್ದುಪಡಿ ಪ್ರಕಟಿಸಬೇಕು ಎಂದು ಒತ್ತಾಯಿಸುತ್ತೇನೆ” ಎಂದಿದ್ದಾರೆ.

ನಮ್ಮ ಪಕ್ಷದ ಮುಂದಿನ ಮುಖ್ಯಮಂತ್ರಿಯನ್ನು ಶಾಸಕಾಂಗ ಪಕ್ಷ ಮತ್ತು ಹೈಕಮಾಂಡ್ ಕೂಡಿ ಆಯ್ಕೆ ಮಾಡಲಿದೆ ಎನ್ನುವುದನ್ನು ನೂರು ಸಲ ಹೇಳಿದ್ದೇನೆ. ನನ್ನ ಮತ್ತು ಡಿ.ಕೆ.ಶಿವಕುಮಾರ್‌ ನಡುವೆ ಭಿನ್ನಾಭಿಪ್ರಾಯವನ್ನು ಹುಟ್ಟುಹಾಕುವ ವಿರೋಧ ಪಕ್ಷಗಳ ಹುನ್ನಾರಕ್ಕೆ ಮಾಧ್ಯಮಗಳು ಆಯುಧವಾಗಿ ಬಳಕೆಯಾಗಬಾರದು” ಎಂದು ಆಶಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...