Homeಕರ್ನಾಟಕಸಿದ್ದರಾಮಯ್ಯನವರ ಹೇಳಿಕೆ ತಿರುಚಿ, ನಂತರ ತಿದ್ದಿದ ಎನ್‌ಡಿಟಿವಿ; ಸುಳ್ಳನ್ನೇ ವೈಭವೀಕರಿಸಿದ ಕನ್ನಡ ಮಾಧ್ಯಮಗಳು

ಸಿದ್ದರಾಮಯ್ಯನವರ ಹೇಳಿಕೆ ತಿರುಚಿ, ನಂತರ ತಿದ್ದಿದ ಎನ್‌ಡಿಟಿವಿ; ಸುಳ್ಳನ್ನೇ ವೈಭವೀಕರಿಸಿದ ಕನ್ನಡ ಮಾಧ್ಯಮಗಳು

- Advertisement -
- Advertisement -

“ಕಾಂಗ್ರೆಸ್‌ ಗೆದ್ದರೂ ಹೈಕಮಾಂಡ್‌ ಡಿ.ಕೆ.ಶಿವಕುಮಾರ್‌ ಅವರನ್ನು ಸಿಎಂ ಮಾಡುವುದಿಲ್ಲ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿರುವುದಾಗಿ ‘ಎನ್‌ಡಿಟಿವಿ’ ಸುಳ್ಳನ್ನು ಹಬ್ಬಿಸಿ‍ದ್ದು ಇದನ್ನೇ ಕನ್ನಡ ಮಾಧ್ಯಮಗಳು ಕೂಡ ವರದಿ ಮಾಡಿವೆ.

ಸಿದ್ದರಾಮಯ್ಯನವರು ತಮ್ಮ ಸಂದರ್ಶನದಲ್ಲಿ ಹೇಳಿರುವುದೇ ಒಂದಾದರೆ, ಅದಾನಿ ಒಡೆತನದ ಎನ್‌ಡಿಟಿವಿ ವರದಿ ಮಾಡಿರುವ ವಿಚಾರವೇ ಇನ್ನೊಂದಾಗಿದೆ. ಸಿದ್ದರಾಮಯ್ಯನವರು ಹೇಳದೆ ಇರುವ ಸಂಗತಿಯನ್ನು ಸೇರಿಸಿ ವರದಿ ಪ್ರಕಟಿಸಲಾಗಿದೆ. ಆದರೆ ಇದನ್ನೇ ‘ಕನ್ನಡಪ್ರಭ’ದಂತಹ ಪತ್ರಿಕಾ ಸಂಸ್ಥೆಗಳು ವರದಿ ಮಾಡಿವೆ. ಸಿದ್ದರಾಮಯ್ಯನವರು ವಿರೋಧ ವ್ಯಕ್ತಪಡಿಸಿದ ಬಳಿಕ ಹೆಡ್‌ಲೈನ್ ಹಾಗೂ ವರದಿಯನ್ನು ಎನ್‌ಡಿಟಿವಿ ತಿದ್ದಿದೆಯಾದರೂ ಸುಳ್ಳು ಈಗಾಗಲೇ ಊರು ಸುತ್ತಾಡಿಕೊಂಡು ಬಂದಿದೆ.

ಎನ್‌ಡಿಟಿವಿ ನಡೆಸಿದ ವಿಡಿಯೊ ಸಂದರ್ಶನದಲ್ಲಿ ಸಿದ್ದರಾಮಯ್ಯನವರು ಅನೇಕ ವಿಷಯಗಳನ್ನು ಮಾತನಾಡಿದ್ದಾರೆ. ಕೋಲಾರ ಮತ್ತು ವರುಣಾದಲ್ಲಿ ಸ್ಪರ್ಧಿಸುವ ಕುರಿತು, ಬಿಜೆಪಿ ಸರ್ಕಾರದ 40% ಕಮಿಷನ್‌ ದಂಧೆ ಮತ್ತು ಕೋಮುವಾದಿ ರಾಜಕಾರಣದ ಕುರಿತು ಮಾತನಾಡುತ್ತಾರೆ. ಜೊತೆಗೆ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಾಗಿರುವುದಾಗಿಯೂ ಹೇಳುತ್ತಾರೆ.

“ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರಾದರೂ ಮುಖ್ಯಮಂತ್ರಿಯಾಗುವ ಆಕಾಂಕ್ಷೆಯನ್ನು ಹೊಂದಿರಬಹುದು. ನಾನು ಆಕಾಂಕ್ಷಿಯಾಗಿದ್ದೇನೆ, ಡಿ.ಕೆ.ಶಿವಕುಮಾರ್‌ ಅವರೂ ಆಕಾಂಕ್ಷಿಯಾಗಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದೆಲ್ಲವೂ ನಡೆಯುತ್ತವೆ. ಇದರಲ್ಲಿ ಯಾವುದೇ ತಪ್ಪಿಲ್ಲ” ಎನ್ನುತ್ತಾರೆ. ಅದಕ್ಕೆ ಸಂದರ್ಶಕಿ ಕೂಡ ದನಿಗೂಡಿಸುತ್ತಾರೆ.

ಮುಂದುವರಿದು ಸಿದ್ದರಾಮಯ್ಯನವರು, “ನಾನು ಮುಖ್ಯಮಂತ್ರಿಯಾಗಬೇಕೆಂದು ಬಯಸುವುದು ತಪ್ಪಲ್ಲ, ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಬೇಕೆಂದು ಬಯಸುವುದು ತಪ್ಪಲ್ಲ, ಮತ್ಯಾರೋ ಮುಖ್ಯಮಂತ್ರಿಯಾಗಬೇಕೆಂದು ಬಯಸುವುದು ತಪ್ಪಲ್ಲ. ಅಂತಿಮವಾಗಿ ಆಯ್ಕೆಯಾದ ಎಂಎಲ್‌ಎಗಳು ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡುತ್ತಾರೆ. ಅಂತಿಮವಾಗಿ ಹೈಕಮಾಂಡ್‌ ನಿರ್ಧಾರ ಕೈಗೊಳ್ಳುತ್ತದೆ. ಇದು ಪ್ರಜಾಪ್ರಭುತ್ವದ ಮಾದರಿ” ಎನ್ನುತ್ತಾರೆ.

“ಒಂದು ವೇಳೆ ಡಿ.ಕೆ.ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿ ಮಾಡಬೇಕೆಂದು ಹೈಕಮಾಂಡ್ ನಿರ್ಧರಿಸಿದರೆ?” ಎಂದು ಸಂದರ್ಶಕಿ ಕೇಳುತ್ತಾರೆ. ಮುಂದುವರಿದು, “ಇಲ್ಲ, ಅದು ಹಾಗಾಗುವುದಿಲ್ಲ. ಹೈಕಮಾಂಡ್ ಕೂಡ ತನ್ನಷ್ಟಕ್ಕೆ ತಾನೇ ನಿರ್ಧಾರವನ್ನು ಕೈಗೊಳ್ಳುವುದಿಲ್ಲ. ಹೊಸದಾಗಿ ಆಯ್ಕೆಯಾದ ಎಂಎಲ್‌ಎಗಳ ನಿರ್ಧಾರದ ಮೇಲೆ ಮುಂದುವರಿಯುತ್ತದೆ” ಎನ್ನುತ್ತಾರೆ.

ಹೀಗೆ ಸಿದ್ದರಾಮಯ್ಯನವರು ಮಾತನಾಡಿದ್ದರೆ, ಬೇರೆಯದ್ದೇ ರೀತಿಯಲ್ಲಿ ವರದಿ ಮಾಡಲಾಗಿದೆ. “ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಕಾಂಗ್ರೆಸ್ ಹೈಕಮಾಂಡ್‌ ಮುಖ್ಯಮಂತ್ರಿ ಹುದ್ದೆಯನ್ನು ನೀಡುವುದಿಲ್ಲ” ಎಂದು ಸಿದ್ದರಾಮಯ್ಯನವರು ಎನ್‌ಡಿಟಿವಿ ಸಂದರ್ಶನದಲ್ಲಿ ತಿಳಿಸಿದ್ದಾರೆಂದು ‘ಕನ್ನಡಪ್ರಭ’ ದಿನಪತ್ರಿಕೆ ಮುಖಪುಟದಲ್ಲಿ ವರದಿ ಮಾಡಿದೆ.

ಎನ್‌ಡಿಟಿವಿ ತನ್ನ ವರದಿಯಲ್ಲಿ “ಡಿ.ಕೆ.ಶಿವಕುಮಾರ್‌ ಅವರಿಗೆ ಮುಖ್ಯಮಂತ್ರಿ ಹುದ್ದೆಯನ್ನು ಹೈಕಮಾಂಡ್ ನೀಡುವುದಿಲ್ಲ” ಎಂಬ ಸಾಲನ್ನು ಸೇರಿಸಿದೆ. ವಿರೋಧ ವ್ಯಕ್ತವಾದ ಬಳಿಕ ವರದಿಯನ್ನು ತಿದ್ದಿದೆ.

ತಿರುಚಲ್ಪಟ್ಟಿರುವ ವರದಿ
ತಿದ್ದಲ್ಪಟ್ಟ ವರದಿ

“ಇಲ್ಲ, ಹಾಗೇ ಆಗಲು ಸಾಧ್ಯವಿಲ್ಲ. ಏಕೆಂದರೆ ನಾವು ಪ್ರಜಾಪ್ರಭುತ್ವ ದಾರಿಯಲ್ಲಿ ನಡೆಯಬೇಕು. ತನ್ನಷ್ಟಕ್ಕೆ ತಾನೇ ಹೈಕಮಾಂಡ್ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಹೊಸದಾಗಿ ಆಯ್ಕೆಯಾದ ಎಂಎಲ್‌ಎಗಳ ಅಭಿಪ್ರಾಯದಂತೆ ಹೋಗಬೇಕಾಗುತ್ತದೆ” ಎಂದು ಸಿದ್ದರಾಮಯ್ಯನವರು ಹೇಳಿರುವುದಾಗಿ ಎನ್‌ಡಿಟಿವಿ ವರದಿಯನ್ನು ತಿದ್ದಿದೆ.

ಎನ್‌ಡಿಟಿವಿ ಮಾಡಿರುವ ಸುಳ್ಳು ಸುದ್ದಿಗೆ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್‌ಗಳನ್ನು ಮಾಡಿ ಸ್ಪಷ್ಟೀಕರಣ ನೀಡಿದ್ದಾರೆ. “ನಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಬಗ್ಗೆ ನಾನು ಆಡದ ಮಾತುಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿಯೊಂದನ್ನು ಪ್ರಕಟಿಸಿದೆ. ಇದು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶದಿಂದ ಕೂಡಿದ್ದಾಗಿದೆ. ಎನ್.ಡಿ ಟಿವಿ ತಕ್ಷಣ ಈ ಬರಹವನ್ನು ಅಳಿಸಿಹಾಕಿ ತಿದ್ದುಪಡಿ ಪ್ರಕಟಿಸಬೇಕು ಎಂದು ಒತ್ತಾಯಿಸುತ್ತೇನೆ” ಎಂದಿದ್ದಾರೆ.

ನಮ್ಮ ಪಕ್ಷದ ಮುಂದಿನ ಮುಖ್ಯಮಂತ್ರಿಯನ್ನು ಶಾಸಕಾಂಗ ಪಕ್ಷ ಮತ್ತು ಹೈಕಮಾಂಡ್ ಕೂಡಿ ಆಯ್ಕೆ ಮಾಡಲಿದೆ ಎನ್ನುವುದನ್ನು ನೂರು ಸಲ ಹೇಳಿದ್ದೇನೆ. ನನ್ನ ಮತ್ತು ಡಿ.ಕೆ.ಶಿವಕುಮಾರ್‌ ನಡುವೆ ಭಿನ್ನಾಭಿಪ್ರಾಯವನ್ನು ಹುಟ್ಟುಹಾಕುವ ವಿರೋಧ ಪಕ್ಷಗಳ ಹುನ್ನಾರಕ್ಕೆ ಮಾಧ್ಯಮಗಳು ಆಯುಧವಾಗಿ ಬಳಕೆಯಾಗಬಾರದು” ಎಂದು ಆಶಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...