Homeಕರ್ನಾಟಕರಾಜ್ಯದಲ್ಲಿ ಚುನಾವಣಾ ಆಯೋಗ ಅಸ್ತಿತ್ವದಲ್ಲಿದೆಯೇ? - ಸಿದ್ದರಾಮಯ್ಯ ಪ್ರಶ್ನೆ

ರಾಜ್ಯದಲ್ಲಿ ಚುನಾವಣಾ ಆಯೋಗ ಅಸ್ತಿತ್ವದಲ್ಲಿದೆಯೇ? – ಸಿದ್ದರಾಮಯ್ಯ ಪ್ರಶ್ನೆ

ತಮ್ಮನ್ನು ಮಂತ್ರಿಯೂ ಮಾಡಬೇಕು ಹಾಗೂ ಉಪಚುನಾವಣೆಯಲ್ಲಿ ಹಣವನ್ನೂ ಖರ್ಚು ಮಾಡಬೇಕೆಂದು ಯಡಿಯೂರಪ್ಪ ಅವರ ಜೊತೆ ಅನರ್ಹರು ಮೊದಲೇ ಒಪ್ಪಂದ ಮಾಡಿಕೊಂಡಿದ್ದರು.

- Advertisement -
- Advertisement -

ನಾನು ಜೆಡಿಎಸ್ ಬಿಡಲಿಲ್ಲ, ನನ್ನನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಿದ್ದರು. ಧರಂಸಿಂಗ್ ಸರ್ಕಾರದಲ್ಲಿ ನಾನು ಉಪಮುಖ್ಯಮಂತ್ರಿಯಾಗಿದ್ದೆ, ಆ ಸ್ಥಾನದಿಂದ ನನ್ನನ್ನು ವಜಾ ಮಾಡಿದರು. ಇದಾದ ಒಂದು ವರ್ಷದ ನಂತರ ನಾನು ಕಾಂಗ್ರೆಸ್ ಸೇರಿದ್ದು. ನಾನು ಕಾಂಗ್ರೆಸ್ ಸೇರುವಾಗ ಕಾಂಗ್ರೆಸ್ ಅಧಿಕಾರದಲ್ಲಿ ಇರಲಿಲ್ಲ, ವಿರೋಧ ಪಕ್ಷದ ಸ್ಥಾನದಲ್ಲಿತ್ತು. ಹಣ, ಅಧಿಕಾರದಾಸೆಗೆ ಬೇರೆಯವರಂತೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಇನ್ನೊಂದು ಪಕ್ಷ ಸೇರಿದವನಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ರಾಜಾರೋಷವಾಗಿ ಬಿಜೆಪಿ ಪಕ್ಷ ದುಡ್ಡು ಹಂಚ್ತಿದೆ, ಸಚಿವ ಕಾರಜೋಳ ದುಡ್ಡು ಹಂಚಿದ್ದು ಟಿವಿಯಲ್ಲಿ ಬರ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಜಾತಿ ಮೇಲೆ ಮತ ಕೇಳ್ತಿದ್ದಾರೆ, ಮಂತ್ರಿ ಮಾಡ್ತೀನಿ, ತಾಲ್ಲೂಕು ಮಾಡ್ತೀನಿ ಎಂದು ಆಶ್ವಾಸನೆ ಕೊಡ್ತಿದ್ದಾರೆ. ಇದರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಟ್ಟರೂ ಕ್ರಮ ಇಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಆಯೋಗ ಅಸ್ತಿತ್ವದಲ್ಲಿದೆಯೇ? ಹದಿನೇಳು ಶಾಸಕರನ್ನು ಬಿಜೆಪಿ ದುಡ್ಡು ಕೊಟ್ಟೇ ಖರೀದಿಸಿದ್ದಕ್ಕೆ ಸಾಂದರ್ಭಿಕ ಸಾಕ್ಷ್ಯಗಳಿವೆ. ಈಗಿನ ಡಿಸಿಎಂ ಅಶ್ವಥನಾರಾಯಣ, ಶಾಸಕರಾದ ವಿಶ್ವನಾಥ್, ಲಿಂಬಾವಳಿ ಮತ್ತು ಯೋಗೇಶ್ವರ್ ಮನೆಗೆ ಬಂದು 5 ಕೋಟಿ ರೂ. ನೀಡಿದ್ದರು ಎಂದು ಮಾಜಿ ಸಚಿವ ಶ್ರೀನಿವಾಸಗೌಡ ವಿಧಾನಸಭೆಯಲ್ಲಿಯೇ ಹೇಳಿಲ್ವೆ? ಇನ್ನು ಏನು ಸಾಕ್ಷಿ ಬೇಕು? ದೇವದುರ್ಗಕ್ಕೆ ಯಡಿಯೂರಪ್ಪ ಹೋಗಿ ಜೆಡಿಎಸ್ ಶಾಸಕನ ಖರೀದಿಗೆ ಯತ್ನಿಸಿದ್ದು ಅಡಿಯೋ ಟೇಪ್‌ನಲ್ಲಿಲ್ವೇ? ಅದು ತಮ್ಮದೇ ಧ್ವನಿ ಎಂದು ಅವರು ಒಪ್ಪಿಕೊಂಡಿಲ್ವೆ? ಇದರ ಅರ್ಥ ಏನು? ಆತ್ಮಸಾಕ್ಷಿಗಿಂತ ಮಿಗಿಲಾದ ಸಾಕ್ಷಿ ಯಾವುದು? ಎಂದು ಕಿಡಿಕಾರಿದ್ದಾರೆ.

ತಮ್ಮನ್ನು ಮಂತ್ರಿಯೂ ಮಾಡಬೇಕು ಹಾಗೂ ಉಪಚುನಾವಣೆಯಲ್ಲಿ ಹಣವನ್ನೂ ಖರ್ಚು ಮಾಡಬೇಕೆಂದು ಯಡಿಯೂರಪ್ಪ ಅವರ ಜೊತೆ ಅನರ್ಹರು ಮೊದಲೇ ಒಪ್ಪಂದ ಮಾಡಿಕೊಂಡಿದ್ದರು. ಹಾಗಾಗಿ ಉಪಚುನಾವಣೆಯಲ್ಲಿ ಬಿಜೆಪಿ ಕೋಟಿಗಟ್ಟಲೆ ಹಣ ಸುರಿಯುತ್ತಿದೆ, ನಮ್ಮ ಪಕ್ಷದಲ್ಲಿ ಹಣವಿಲ್ಲ‌. ಹಣ ಖರ್ಚು ಮಾಡುವ ವಿಚಾರದಲ್ಲಿ ಬಿಜೆಪಿ ಜೊತೆ ಸ್ಪರ್ಧೆ ಅಸಾಧ್ಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...