Homeಕರ್ನಾಟಕರಾಜ್ಯದಲ್ಲಿ ಚುನಾವಣಾ ಆಯೋಗ ಅಸ್ತಿತ್ವದಲ್ಲಿದೆಯೇ? - ಸಿದ್ದರಾಮಯ್ಯ ಪ್ರಶ್ನೆ

ರಾಜ್ಯದಲ್ಲಿ ಚುನಾವಣಾ ಆಯೋಗ ಅಸ್ತಿತ್ವದಲ್ಲಿದೆಯೇ? – ಸಿದ್ದರಾಮಯ್ಯ ಪ್ರಶ್ನೆ

ತಮ್ಮನ್ನು ಮಂತ್ರಿಯೂ ಮಾಡಬೇಕು ಹಾಗೂ ಉಪಚುನಾವಣೆಯಲ್ಲಿ ಹಣವನ್ನೂ ಖರ್ಚು ಮಾಡಬೇಕೆಂದು ಯಡಿಯೂರಪ್ಪ ಅವರ ಜೊತೆ ಅನರ್ಹರು ಮೊದಲೇ ಒಪ್ಪಂದ ಮಾಡಿಕೊಂಡಿದ್ದರು.

- Advertisement -
- Advertisement -

ನಾನು ಜೆಡಿಎಸ್ ಬಿಡಲಿಲ್ಲ, ನನ್ನನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಿದ್ದರು. ಧರಂಸಿಂಗ್ ಸರ್ಕಾರದಲ್ಲಿ ನಾನು ಉಪಮುಖ್ಯಮಂತ್ರಿಯಾಗಿದ್ದೆ, ಆ ಸ್ಥಾನದಿಂದ ನನ್ನನ್ನು ವಜಾ ಮಾಡಿದರು. ಇದಾದ ಒಂದು ವರ್ಷದ ನಂತರ ನಾನು ಕಾಂಗ್ರೆಸ್ ಸೇರಿದ್ದು. ನಾನು ಕಾಂಗ್ರೆಸ್ ಸೇರುವಾಗ ಕಾಂಗ್ರೆಸ್ ಅಧಿಕಾರದಲ್ಲಿ ಇರಲಿಲ್ಲ, ವಿರೋಧ ಪಕ್ಷದ ಸ್ಥಾನದಲ್ಲಿತ್ತು. ಹಣ, ಅಧಿಕಾರದಾಸೆಗೆ ಬೇರೆಯವರಂತೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಇನ್ನೊಂದು ಪಕ್ಷ ಸೇರಿದವನಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ರಾಜಾರೋಷವಾಗಿ ಬಿಜೆಪಿ ಪಕ್ಷ ದುಡ್ಡು ಹಂಚ್ತಿದೆ, ಸಚಿವ ಕಾರಜೋಳ ದುಡ್ಡು ಹಂಚಿದ್ದು ಟಿವಿಯಲ್ಲಿ ಬರ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಜಾತಿ ಮೇಲೆ ಮತ ಕೇಳ್ತಿದ್ದಾರೆ, ಮಂತ್ರಿ ಮಾಡ್ತೀನಿ, ತಾಲ್ಲೂಕು ಮಾಡ್ತೀನಿ ಎಂದು ಆಶ್ವಾಸನೆ ಕೊಡ್ತಿದ್ದಾರೆ. ಇದರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಟ್ಟರೂ ಕ್ರಮ ಇಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಆಯೋಗ ಅಸ್ತಿತ್ವದಲ್ಲಿದೆಯೇ? ಹದಿನೇಳು ಶಾಸಕರನ್ನು ಬಿಜೆಪಿ ದುಡ್ಡು ಕೊಟ್ಟೇ ಖರೀದಿಸಿದ್ದಕ್ಕೆ ಸಾಂದರ್ಭಿಕ ಸಾಕ್ಷ್ಯಗಳಿವೆ. ಈಗಿನ ಡಿಸಿಎಂ ಅಶ್ವಥನಾರಾಯಣ, ಶಾಸಕರಾದ ವಿಶ್ವನಾಥ್, ಲಿಂಬಾವಳಿ ಮತ್ತು ಯೋಗೇಶ್ವರ್ ಮನೆಗೆ ಬಂದು 5 ಕೋಟಿ ರೂ. ನೀಡಿದ್ದರು ಎಂದು ಮಾಜಿ ಸಚಿವ ಶ್ರೀನಿವಾಸಗೌಡ ವಿಧಾನಸಭೆಯಲ್ಲಿಯೇ ಹೇಳಿಲ್ವೆ? ಇನ್ನು ಏನು ಸಾಕ್ಷಿ ಬೇಕು? ದೇವದುರ್ಗಕ್ಕೆ ಯಡಿಯೂರಪ್ಪ ಹೋಗಿ ಜೆಡಿಎಸ್ ಶಾಸಕನ ಖರೀದಿಗೆ ಯತ್ನಿಸಿದ್ದು ಅಡಿಯೋ ಟೇಪ್‌ನಲ್ಲಿಲ್ವೇ? ಅದು ತಮ್ಮದೇ ಧ್ವನಿ ಎಂದು ಅವರು ಒಪ್ಪಿಕೊಂಡಿಲ್ವೆ? ಇದರ ಅರ್ಥ ಏನು? ಆತ್ಮಸಾಕ್ಷಿಗಿಂತ ಮಿಗಿಲಾದ ಸಾಕ್ಷಿ ಯಾವುದು? ಎಂದು ಕಿಡಿಕಾರಿದ್ದಾರೆ.

ತಮ್ಮನ್ನು ಮಂತ್ರಿಯೂ ಮಾಡಬೇಕು ಹಾಗೂ ಉಪಚುನಾವಣೆಯಲ್ಲಿ ಹಣವನ್ನೂ ಖರ್ಚು ಮಾಡಬೇಕೆಂದು ಯಡಿಯೂರಪ್ಪ ಅವರ ಜೊತೆ ಅನರ್ಹರು ಮೊದಲೇ ಒಪ್ಪಂದ ಮಾಡಿಕೊಂಡಿದ್ದರು. ಹಾಗಾಗಿ ಉಪಚುನಾವಣೆಯಲ್ಲಿ ಬಿಜೆಪಿ ಕೋಟಿಗಟ್ಟಲೆ ಹಣ ಸುರಿಯುತ್ತಿದೆ, ನಮ್ಮ ಪಕ್ಷದಲ್ಲಿ ಹಣವಿಲ್ಲ‌. ಹಣ ಖರ್ಚು ಮಾಡುವ ವಿಚಾರದಲ್ಲಿ ಬಿಜೆಪಿ ಜೊತೆ ಸ್ಪರ್ಧೆ ಅಸಾಧ್ಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...