Homeಕರ್ನಾಟಕರಾಜ್ಯದಲ್ಲಿ ಚುನಾವಣಾ ಆಯೋಗ ಅಸ್ತಿತ್ವದಲ್ಲಿದೆಯೇ? - ಸಿದ್ದರಾಮಯ್ಯ ಪ್ರಶ್ನೆ

ರಾಜ್ಯದಲ್ಲಿ ಚುನಾವಣಾ ಆಯೋಗ ಅಸ್ತಿತ್ವದಲ್ಲಿದೆಯೇ? – ಸಿದ್ದರಾಮಯ್ಯ ಪ್ರಶ್ನೆ

ತಮ್ಮನ್ನು ಮಂತ್ರಿಯೂ ಮಾಡಬೇಕು ಹಾಗೂ ಉಪಚುನಾವಣೆಯಲ್ಲಿ ಹಣವನ್ನೂ ಖರ್ಚು ಮಾಡಬೇಕೆಂದು ಯಡಿಯೂರಪ್ಪ ಅವರ ಜೊತೆ ಅನರ್ಹರು ಮೊದಲೇ ಒಪ್ಪಂದ ಮಾಡಿಕೊಂಡಿದ್ದರು.

- Advertisement -
- Advertisement -

ನಾನು ಜೆಡಿಎಸ್ ಬಿಡಲಿಲ್ಲ, ನನ್ನನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಿದ್ದರು. ಧರಂಸಿಂಗ್ ಸರ್ಕಾರದಲ್ಲಿ ನಾನು ಉಪಮುಖ್ಯಮಂತ್ರಿಯಾಗಿದ್ದೆ, ಆ ಸ್ಥಾನದಿಂದ ನನ್ನನ್ನು ವಜಾ ಮಾಡಿದರು. ಇದಾದ ಒಂದು ವರ್ಷದ ನಂತರ ನಾನು ಕಾಂಗ್ರೆಸ್ ಸೇರಿದ್ದು. ನಾನು ಕಾಂಗ್ರೆಸ್ ಸೇರುವಾಗ ಕಾಂಗ್ರೆಸ್ ಅಧಿಕಾರದಲ್ಲಿ ಇರಲಿಲ್ಲ, ವಿರೋಧ ಪಕ್ಷದ ಸ್ಥಾನದಲ್ಲಿತ್ತು. ಹಣ, ಅಧಿಕಾರದಾಸೆಗೆ ಬೇರೆಯವರಂತೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಇನ್ನೊಂದು ಪಕ್ಷ ಸೇರಿದವನಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ರಾಜಾರೋಷವಾಗಿ ಬಿಜೆಪಿ ಪಕ್ಷ ದುಡ್ಡು ಹಂಚ್ತಿದೆ, ಸಚಿವ ಕಾರಜೋಳ ದುಡ್ಡು ಹಂಚಿದ್ದು ಟಿವಿಯಲ್ಲಿ ಬರ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಜಾತಿ ಮೇಲೆ ಮತ ಕೇಳ್ತಿದ್ದಾರೆ, ಮಂತ್ರಿ ಮಾಡ್ತೀನಿ, ತಾಲ್ಲೂಕು ಮಾಡ್ತೀನಿ ಎಂದು ಆಶ್ವಾಸನೆ ಕೊಡ್ತಿದ್ದಾರೆ. ಇದರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಟ್ಟರೂ ಕ್ರಮ ಇಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಆಯೋಗ ಅಸ್ತಿತ್ವದಲ್ಲಿದೆಯೇ? ಹದಿನೇಳು ಶಾಸಕರನ್ನು ಬಿಜೆಪಿ ದುಡ್ಡು ಕೊಟ್ಟೇ ಖರೀದಿಸಿದ್ದಕ್ಕೆ ಸಾಂದರ್ಭಿಕ ಸಾಕ್ಷ್ಯಗಳಿವೆ. ಈಗಿನ ಡಿಸಿಎಂ ಅಶ್ವಥನಾರಾಯಣ, ಶಾಸಕರಾದ ವಿಶ್ವನಾಥ್, ಲಿಂಬಾವಳಿ ಮತ್ತು ಯೋಗೇಶ್ವರ್ ಮನೆಗೆ ಬಂದು 5 ಕೋಟಿ ರೂ. ನೀಡಿದ್ದರು ಎಂದು ಮಾಜಿ ಸಚಿವ ಶ್ರೀನಿವಾಸಗೌಡ ವಿಧಾನಸಭೆಯಲ್ಲಿಯೇ ಹೇಳಿಲ್ವೆ? ಇನ್ನು ಏನು ಸಾಕ್ಷಿ ಬೇಕು? ದೇವದುರ್ಗಕ್ಕೆ ಯಡಿಯೂರಪ್ಪ ಹೋಗಿ ಜೆಡಿಎಸ್ ಶಾಸಕನ ಖರೀದಿಗೆ ಯತ್ನಿಸಿದ್ದು ಅಡಿಯೋ ಟೇಪ್‌ನಲ್ಲಿಲ್ವೇ? ಅದು ತಮ್ಮದೇ ಧ್ವನಿ ಎಂದು ಅವರು ಒಪ್ಪಿಕೊಂಡಿಲ್ವೆ? ಇದರ ಅರ್ಥ ಏನು? ಆತ್ಮಸಾಕ್ಷಿಗಿಂತ ಮಿಗಿಲಾದ ಸಾಕ್ಷಿ ಯಾವುದು? ಎಂದು ಕಿಡಿಕಾರಿದ್ದಾರೆ.

ತಮ್ಮನ್ನು ಮಂತ್ರಿಯೂ ಮಾಡಬೇಕು ಹಾಗೂ ಉಪಚುನಾವಣೆಯಲ್ಲಿ ಹಣವನ್ನೂ ಖರ್ಚು ಮಾಡಬೇಕೆಂದು ಯಡಿಯೂರಪ್ಪ ಅವರ ಜೊತೆ ಅನರ್ಹರು ಮೊದಲೇ ಒಪ್ಪಂದ ಮಾಡಿಕೊಂಡಿದ್ದರು. ಹಾಗಾಗಿ ಉಪಚುನಾವಣೆಯಲ್ಲಿ ಬಿಜೆಪಿ ಕೋಟಿಗಟ್ಟಲೆ ಹಣ ಸುರಿಯುತ್ತಿದೆ, ನಮ್ಮ ಪಕ್ಷದಲ್ಲಿ ಹಣವಿಲ್ಲ‌. ಹಣ ಖರ್ಚು ಮಾಡುವ ವಿಚಾರದಲ್ಲಿ ಬಿಜೆಪಿ ಜೊತೆ ಸ್ಪರ್ಧೆ ಅಸಾಧ್ಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...