Homeಕರ್ನಾಟಕರಾಜ್ಯದಲ್ಲಿ ಚುನಾವಣಾ ಆಯೋಗ ಅಸ್ತಿತ್ವದಲ್ಲಿದೆಯೇ? - ಸಿದ್ದರಾಮಯ್ಯ ಪ್ರಶ್ನೆ

ರಾಜ್ಯದಲ್ಲಿ ಚುನಾವಣಾ ಆಯೋಗ ಅಸ್ತಿತ್ವದಲ್ಲಿದೆಯೇ? – ಸಿದ್ದರಾಮಯ್ಯ ಪ್ರಶ್ನೆ

ತಮ್ಮನ್ನು ಮಂತ್ರಿಯೂ ಮಾಡಬೇಕು ಹಾಗೂ ಉಪಚುನಾವಣೆಯಲ್ಲಿ ಹಣವನ್ನೂ ಖರ್ಚು ಮಾಡಬೇಕೆಂದು ಯಡಿಯೂರಪ್ಪ ಅವರ ಜೊತೆ ಅನರ್ಹರು ಮೊದಲೇ ಒಪ್ಪಂದ ಮಾಡಿಕೊಂಡಿದ್ದರು.

- Advertisement -
- Advertisement -

ನಾನು ಜೆಡಿಎಸ್ ಬಿಡಲಿಲ್ಲ, ನನ್ನನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಿದ್ದರು. ಧರಂಸಿಂಗ್ ಸರ್ಕಾರದಲ್ಲಿ ನಾನು ಉಪಮುಖ್ಯಮಂತ್ರಿಯಾಗಿದ್ದೆ, ಆ ಸ್ಥಾನದಿಂದ ನನ್ನನ್ನು ವಜಾ ಮಾಡಿದರು. ಇದಾದ ಒಂದು ವರ್ಷದ ನಂತರ ನಾನು ಕಾಂಗ್ರೆಸ್ ಸೇರಿದ್ದು. ನಾನು ಕಾಂಗ್ರೆಸ್ ಸೇರುವಾಗ ಕಾಂಗ್ರೆಸ್ ಅಧಿಕಾರದಲ್ಲಿ ಇರಲಿಲ್ಲ, ವಿರೋಧ ಪಕ್ಷದ ಸ್ಥಾನದಲ್ಲಿತ್ತು. ಹಣ, ಅಧಿಕಾರದಾಸೆಗೆ ಬೇರೆಯವರಂತೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಇನ್ನೊಂದು ಪಕ್ಷ ಸೇರಿದವನಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ರಾಜಾರೋಷವಾಗಿ ಬಿಜೆಪಿ ಪಕ್ಷ ದುಡ್ಡು ಹಂಚ್ತಿದೆ, ಸಚಿವ ಕಾರಜೋಳ ದುಡ್ಡು ಹಂಚಿದ್ದು ಟಿವಿಯಲ್ಲಿ ಬರ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಜಾತಿ ಮೇಲೆ ಮತ ಕೇಳ್ತಿದ್ದಾರೆ, ಮಂತ್ರಿ ಮಾಡ್ತೀನಿ, ತಾಲ್ಲೂಕು ಮಾಡ್ತೀನಿ ಎಂದು ಆಶ್ವಾಸನೆ ಕೊಡ್ತಿದ್ದಾರೆ. ಇದರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಟ್ಟರೂ ಕ್ರಮ ಇಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಆಯೋಗ ಅಸ್ತಿತ್ವದಲ್ಲಿದೆಯೇ? ಹದಿನೇಳು ಶಾಸಕರನ್ನು ಬಿಜೆಪಿ ದುಡ್ಡು ಕೊಟ್ಟೇ ಖರೀದಿಸಿದ್ದಕ್ಕೆ ಸಾಂದರ್ಭಿಕ ಸಾಕ್ಷ್ಯಗಳಿವೆ. ಈಗಿನ ಡಿಸಿಎಂ ಅಶ್ವಥನಾರಾಯಣ, ಶಾಸಕರಾದ ವಿಶ್ವನಾಥ್, ಲಿಂಬಾವಳಿ ಮತ್ತು ಯೋಗೇಶ್ವರ್ ಮನೆಗೆ ಬಂದು 5 ಕೋಟಿ ರೂ. ನೀಡಿದ್ದರು ಎಂದು ಮಾಜಿ ಸಚಿವ ಶ್ರೀನಿವಾಸಗೌಡ ವಿಧಾನಸಭೆಯಲ್ಲಿಯೇ ಹೇಳಿಲ್ವೆ? ಇನ್ನು ಏನು ಸಾಕ್ಷಿ ಬೇಕು? ದೇವದುರ್ಗಕ್ಕೆ ಯಡಿಯೂರಪ್ಪ ಹೋಗಿ ಜೆಡಿಎಸ್ ಶಾಸಕನ ಖರೀದಿಗೆ ಯತ್ನಿಸಿದ್ದು ಅಡಿಯೋ ಟೇಪ್‌ನಲ್ಲಿಲ್ವೇ? ಅದು ತಮ್ಮದೇ ಧ್ವನಿ ಎಂದು ಅವರು ಒಪ್ಪಿಕೊಂಡಿಲ್ವೆ? ಇದರ ಅರ್ಥ ಏನು? ಆತ್ಮಸಾಕ್ಷಿಗಿಂತ ಮಿಗಿಲಾದ ಸಾಕ್ಷಿ ಯಾವುದು? ಎಂದು ಕಿಡಿಕಾರಿದ್ದಾರೆ.

ತಮ್ಮನ್ನು ಮಂತ್ರಿಯೂ ಮಾಡಬೇಕು ಹಾಗೂ ಉಪಚುನಾವಣೆಯಲ್ಲಿ ಹಣವನ್ನೂ ಖರ್ಚು ಮಾಡಬೇಕೆಂದು ಯಡಿಯೂರಪ್ಪ ಅವರ ಜೊತೆ ಅನರ್ಹರು ಮೊದಲೇ ಒಪ್ಪಂದ ಮಾಡಿಕೊಂಡಿದ್ದರು. ಹಾಗಾಗಿ ಉಪಚುನಾವಣೆಯಲ್ಲಿ ಬಿಜೆಪಿ ಕೋಟಿಗಟ್ಟಲೆ ಹಣ ಸುರಿಯುತ್ತಿದೆ, ನಮ್ಮ ಪಕ್ಷದಲ್ಲಿ ಹಣವಿಲ್ಲ‌. ಹಣ ಖರ್ಚು ಮಾಡುವ ವಿಚಾರದಲ್ಲಿ ಬಿಜೆಪಿ ಜೊತೆ ಸ್ಪರ್ಧೆ ಅಸಾಧ್ಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಶಾಲಾ ಬಸ್ಸಿನ ನೆಲಹಾಸು ಕುಸಿದು 7 ವರ್ಷದ ಬಾಲಕಿ ಸಾವು; ಇಬ್ಬರ ಬಂಧನ

ಉತ್ತರ ಪ್ರದೇಶದ ಅಲಿಗಢದಲ್ಲಿ ಶಾಲಾ ಬಸ್ಸಿನ ನೆಲಹಾಸು ಕುಸಿದು ಕೆಳಗೆ ಬಿದ್ದ ಏಳು ವರ್ಷದ ಬಾಲಕಿ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ. ಖಾಸಗಿ ಶಾಲೆಯ ವ್ಯವಸ್ಥಾಪಕ ಮತ್ತು ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು...

ಇಸ್ರೇಲ್-ಇರಾನ್ ಸಂಘರ್ಷ: ನವದೆಹಲಿಯಲ್ಲಿ 24×7 ನಿಯಂತ್ರಣ ಕೊಠಡಿ ಸ್ಥಾಪಿಸಿದ ತೆಲಂಗಾಣ

ಹೈದರಾಬಾದ್: ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಅವರ ನಿರ್ದೇಶನಗಳನ್ನು ಅನುಸರಿಸಿ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ, ಮಧ್ಯಪ್ರಾಚ್ಯದಲ್ಲಿರುವ ತೆಲಂಗಾಣ ನಾಗರಿಕರಿಗೆ ಸಹಾಯ ಮಾಡಲು ನವದೆಹಲಿಯ ತೆಲಂಗಾಣ ಭವನದಲ್ಲಿ 24×7 ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ಪ್ರಯಾಣ...

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಡ್ರೋನ್ ದೋಣಿ ಡಿಕ್ಕಿ; ಭಾರತೀಯ ಸಿಬ್ಬಂದಿ ಸಾವು

ಒಮಾನ್ ಕರಾವಳಿಯಲ್ಲಿ ತೈಲ ಟ್ಯಾಂಕರ್‌ಗೆ ಮಾನವರಹಿತ ಡ್ರೋನ್ ದೋಣಿ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ಇಸ್ರೇಲ್ ಮತ್ತು ಇರಾನ್ ನಡುವಿನ ಹಗೆತನವು ಪ್ರದೇಶದಾದ್ಯಂತ ಉಲ್ಬಣಗೊಳ್ಳುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡು ಹಡಗಿನಲ್ಲಿದ್ದ...

ನಾಗ್ಪುರ ಕಾರ್ಖಾನೆ ಸ್ಫೋಟ: ಸ್ಫೋಟಕ ಕಂಪನಿಯ ಒಂಬತ್ತು ನಿರ್ದೇಶಕರ ಬಂಧನ

ನಾಗ್ಪುರ: ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ 18 ಜನರು ಸಾವನ್ನಪ್ಪಿದ್ದು, ಸ್ಫೋಟಕ ತಯಾರಿಕಾ ಕಂಪನಿಯ ಒಂಬತ್ತು ನಿರ್ದೇಶಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಇಲ್ಲಿನ ಕಲ್ಮೇಶ್ವರ ಪೊಲೀಸರು ಎಸ್‌ಬಿಎಲ್ ಎನರ್ಜಿ...

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...

ಸೌದಿ ಅರೇಬಿಯಾ | ಡ್ರೋನ್ ದಾಳಿ ಬಳಿಕ ರಾಸ್ ತನುರಾ ಸಂಸ್ಕರಣಾಗಾರ ಮುಚ್ಚಿದ ತೈಲ ದೈತ್ಯ ಅರಾಮ್ಕೊ

ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ತೈಲ ದೈತ್ಯ ಸಂಸ್ಥೆ ಅರಾಮ್ಕೊ ಡ್ರೋನ್ ದಾಳಿಗೆ ಒಳಗಾದ ನಂತರ ತನ್ನ ರಾಸ್ ತನುರಾ ತೈಲ ಸಂಸ್ಕರಣಾಗಾರವನ್ನು ಮುಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಸೋಮವಾರ (ಫೆ.2)...

ದೆಹಲಿ ನ್ಯಾಯಾಲಯದಿಂದ ತಕ್ಷಣ ಬಿಡುಗಡೆ ಆದೇಶ: ತಿಹಾರ್ ಜೈಲಿನಿಂದ ಹೊರಬಂದ 14 ಜೆಎನ್‌ಯು ವಿದ್ಯಾರ್ಥಿಗಳು 

ಫೆಬ್ರವರಿ 26 ರಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಪ್ರತಿಭಟನೆಯ ಸಂದರ್ಭದಲ್ಲಿ ಬಂಧಿಸಲ್ಪಟ್ಟಿದ್ದ ಹದಿನಾಲ್ಕು ವಿದ್ಯಾರ್ಥಿ ನಾಯಕರನ್ನು ದೆಹಲಿ ನ್ಯಾಯಾಲಯವು ಭಾನುವಾರ ತಕ್ಷಣ ಬಿಡುಗಡೆ ಮಾಡಲು ಆದೇಶಿಸಿದ ನಂತರ, 14...

ಉತ್ತರ ಪ್ರದೇಶ| ಇಂಜೆಕ್ಷನ್ ನೀಡಿದ ಗೋರಖ್‌ಪುರದ ಮೆಡಿಕಲ್ ಸ್ಟೋರ್‌ ನಿರ್ವಾಹಕ; ಬಾಲಕಿ ಸಾವು

ಗೋರಖ್‌ಪುರದ ಉರುವಾ ಪ್ರದೇಶದ ಮೆಡಿಕಲ್ ಸ್ಟೋರ್‌ ನಿರ್ವಾಹಕನಿಂದ ಇಂಜೆಕ್ಷನ್ ಪಡೆದ ಒಂಬತ್ತು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತ ದಿವ್ಯಾ ಬನ್ಸ್‌ಗಾಂವ್ ಪೊಲೀಸ್...