Homeಕರ್ನಾಟಕರಾಜ್ಯದಲ್ಲಿ ಚುನಾವಣಾ ಆಯೋಗ ಅಸ್ತಿತ್ವದಲ್ಲಿದೆಯೇ? - ಸಿದ್ದರಾಮಯ್ಯ ಪ್ರಶ್ನೆ

ರಾಜ್ಯದಲ್ಲಿ ಚುನಾವಣಾ ಆಯೋಗ ಅಸ್ತಿತ್ವದಲ್ಲಿದೆಯೇ? – ಸಿದ್ದರಾಮಯ್ಯ ಪ್ರಶ್ನೆ

ತಮ್ಮನ್ನು ಮಂತ್ರಿಯೂ ಮಾಡಬೇಕು ಹಾಗೂ ಉಪಚುನಾವಣೆಯಲ್ಲಿ ಹಣವನ್ನೂ ಖರ್ಚು ಮಾಡಬೇಕೆಂದು ಯಡಿಯೂರಪ್ಪ ಅವರ ಜೊತೆ ಅನರ್ಹರು ಮೊದಲೇ ಒಪ್ಪಂದ ಮಾಡಿಕೊಂಡಿದ್ದರು.

- Advertisement -
- Advertisement -

ನಾನು ಜೆಡಿಎಸ್ ಬಿಡಲಿಲ್ಲ, ನನ್ನನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಿದ್ದರು. ಧರಂಸಿಂಗ್ ಸರ್ಕಾರದಲ್ಲಿ ನಾನು ಉಪಮುಖ್ಯಮಂತ್ರಿಯಾಗಿದ್ದೆ, ಆ ಸ್ಥಾನದಿಂದ ನನ್ನನ್ನು ವಜಾ ಮಾಡಿದರು. ಇದಾದ ಒಂದು ವರ್ಷದ ನಂತರ ನಾನು ಕಾಂಗ್ರೆಸ್ ಸೇರಿದ್ದು. ನಾನು ಕಾಂಗ್ರೆಸ್ ಸೇರುವಾಗ ಕಾಂಗ್ರೆಸ್ ಅಧಿಕಾರದಲ್ಲಿ ಇರಲಿಲ್ಲ, ವಿರೋಧ ಪಕ್ಷದ ಸ್ಥಾನದಲ್ಲಿತ್ತು. ಹಣ, ಅಧಿಕಾರದಾಸೆಗೆ ಬೇರೆಯವರಂತೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಇನ್ನೊಂದು ಪಕ್ಷ ಸೇರಿದವನಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ರಾಜಾರೋಷವಾಗಿ ಬಿಜೆಪಿ ಪಕ್ಷ ದುಡ್ಡು ಹಂಚ್ತಿದೆ, ಸಚಿವ ಕಾರಜೋಳ ದುಡ್ಡು ಹಂಚಿದ್ದು ಟಿವಿಯಲ್ಲಿ ಬರ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಜಾತಿ ಮೇಲೆ ಮತ ಕೇಳ್ತಿದ್ದಾರೆ, ಮಂತ್ರಿ ಮಾಡ್ತೀನಿ, ತಾಲ್ಲೂಕು ಮಾಡ್ತೀನಿ ಎಂದು ಆಶ್ವಾಸನೆ ಕೊಡ್ತಿದ್ದಾರೆ. ಇದರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಟ್ಟರೂ ಕ್ರಮ ಇಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಆಯೋಗ ಅಸ್ತಿತ್ವದಲ್ಲಿದೆಯೇ? ಹದಿನೇಳು ಶಾಸಕರನ್ನು ಬಿಜೆಪಿ ದುಡ್ಡು ಕೊಟ್ಟೇ ಖರೀದಿಸಿದ್ದಕ್ಕೆ ಸಾಂದರ್ಭಿಕ ಸಾಕ್ಷ್ಯಗಳಿವೆ. ಈಗಿನ ಡಿಸಿಎಂ ಅಶ್ವಥನಾರಾಯಣ, ಶಾಸಕರಾದ ವಿಶ್ವನಾಥ್, ಲಿಂಬಾವಳಿ ಮತ್ತು ಯೋಗೇಶ್ವರ್ ಮನೆಗೆ ಬಂದು 5 ಕೋಟಿ ರೂ. ನೀಡಿದ್ದರು ಎಂದು ಮಾಜಿ ಸಚಿವ ಶ್ರೀನಿವಾಸಗೌಡ ವಿಧಾನಸಭೆಯಲ್ಲಿಯೇ ಹೇಳಿಲ್ವೆ? ಇನ್ನು ಏನು ಸಾಕ್ಷಿ ಬೇಕು? ದೇವದುರ್ಗಕ್ಕೆ ಯಡಿಯೂರಪ್ಪ ಹೋಗಿ ಜೆಡಿಎಸ್ ಶಾಸಕನ ಖರೀದಿಗೆ ಯತ್ನಿಸಿದ್ದು ಅಡಿಯೋ ಟೇಪ್‌ನಲ್ಲಿಲ್ವೇ? ಅದು ತಮ್ಮದೇ ಧ್ವನಿ ಎಂದು ಅವರು ಒಪ್ಪಿಕೊಂಡಿಲ್ವೆ? ಇದರ ಅರ್ಥ ಏನು? ಆತ್ಮಸಾಕ್ಷಿಗಿಂತ ಮಿಗಿಲಾದ ಸಾಕ್ಷಿ ಯಾವುದು? ಎಂದು ಕಿಡಿಕಾರಿದ್ದಾರೆ.

ತಮ್ಮನ್ನು ಮಂತ್ರಿಯೂ ಮಾಡಬೇಕು ಹಾಗೂ ಉಪಚುನಾವಣೆಯಲ್ಲಿ ಹಣವನ್ನೂ ಖರ್ಚು ಮಾಡಬೇಕೆಂದು ಯಡಿಯೂರಪ್ಪ ಅವರ ಜೊತೆ ಅನರ್ಹರು ಮೊದಲೇ ಒಪ್ಪಂದ ಮಾಡಿಕೊಂಡಿದ್ದರು. ಹಾಗಾಗಿ ಉಪಚುನಾವಣೆಯಲ್ಲಿ ಬಿಜೆಪಿ ಕೋಟಿಗಟ್ಟಲೆ ಹಣ ಸುರಿಯುತ್ತಿದೆ, ನಮ್ಮ ಪಕ್ಷದಲ್ಲಿ ಹಣವಿಲ್ಲ‌. ಹಣ ಖರ್ಚು ಮಾಡುವ ವಿಚಾರದಲ್ಲಿ ಬಿಜೆಪಿ ಜೊತೆ ಸ್ಪರ್ಧೆ ಅಸಾಧ್ಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಬಿವಿಪಿ ಮತ್ತು ಎಡಪಂಥೀಯ ಗುಂಪುಗಳ ನಡುವೆ ವಾಗ್ವಾದ: ಮಧ್ಯರಾತ್ರಿ ಜಾದವ್‌ಪುರ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಳಿ ನಡೆಸಿದ ಹಿಂದುತ್ವವಾದಿ ಗುಂಪು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಪ್ರತಿಷ್ಠಿತ ಜಾದವ್‌ಪುರ ವಿಶ್ವವಿದ್ಯಾಲಯದ (ಜೆ ಯು) ಕ್ಯಾಂಪಸ್‌ ಮೇಲೆ ತಡರಾತ್ರಿ ಹಿಂದುತ್ವವಾದಿ ಸಂಘಟನೆಗೆ ಸೇರಿದ ಗುಂಪೊಂದು ಭೀಕರ ದಾಳಿ ನಡೆಸಿದ್ದು, ವಿಶ್ವವಿದ್ಯಾಲಯದ ಆಸ್ತಿಪಾಸ್ತಿ ಧ್ವಂಸಗೊಳಿಸಿ ಹಲವು ವಿದ್ಯಾರ್ಥಿಗಳನ್ನು ತೀವ್ರವಾಗಿ...

‘ನಾವು Gen Z’ ಎಂಬುದು ‘ನನ್ನಪ್ಪ ಯಾರು ಗೊತ್ತಾ?’ ಎಂಬಂತಾಗಬಾರದು: ಒಮರ್ ಅಬ್ದುಲ್ಲಾ

ಸಣ್ಣಪುಟ್ಟ ಅಸಮಾಧಾನ ಅಥವಾ ಭಿನ್ನಾಪ್ರಾಯಗಳು ಎದುರಾದಾಗಲೆಲ್ಲ 'ನಾವು Gen Z' (ಜೆನ್ ಝೀ) ಎಂದು ಹೇಳಿಕೊಳ್ಳುವುದು, 'ನನ್ನಪ್ಪ ಯಾರು ಗೊತ್ತಾ?' (ಜಾಂತೇ ನಹೀನ್ ಹೋ, ಮೇರಾ ಬಾಪ್ ಕೌನ್ ಹೈ) ಎಂಬ ಹಳೆಯ...

ಪಶ್ಚಿಮ ಬಂಗಾಳ | ಬಾರ್ ಕೌನ್ಸಿಲ್ ಚುನಾವಣೆಯಲ್ಲಿ ಟಿಎಂಸಿಗೆ ಭರ್ಜರಿ ಗೆಲುವು

ವಿಧಾನಸಭಾ ಚುನಾವಣೆ ನಂತರ ಪಕ್ಷದಲ್ಲಿ ಉಂಟಾದ ಬಂಡಾಯ, ಪಕ್ಷಾಂತರಗಳು, ಕಾನೂನು ಪ್ರಕರಣಗಳು ಮತ್ತು ರಾಜಕೀಯ ಆರೋಪಗಳಿಂದ ಸಾಲು ಸಾಲು ಹಿನ್ನಡೆಗಳನ್ನು ಎದುರಿಸಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷಕ್ಕೆ ಕೊನೆಗೂ...

ವಂದೇ ಮಾತರಂ ವಿವಾದ: ಕಾಂಗ್ರೆಸ್ ಪಕ್ಷವನ್ನು ‘ನ್ಯೂ ​​ಮುಸ್ಲಿಂ ಲೀಗ್’ ಎಂದು ಕರೆದ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್

ತಮ್ಮ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲು ನಿರ್ಧರಿಸಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ ಅಧ್ಯಕ್ಷ ನಿತಿನ್ ನವೀನ್, "ಮತಗಳಿಗಾಗಿ ವಿರೋಧ ಪಕ್ಷವು ಹೊಸ ಮುಸ್ಲಿಂ ಲೀಗ್...

ದೆಹಲಿ: ಪಟ್ಟಿಯಿಂದ ಹೊರಗುಳಿದಿರುವ 47.7 ಲಕ್ಷ ಮತದಾರರ ಹೆಸರುಗಳನ್ನು ಪ್ರಕಟಿಸಿ, ಕರಡು ಪಟ್ಟಿಗೆ ಮುನ್ನ ತಿದ್ದುಪಡಿಗೆ ಅವಕಾಶ ನೀಡಿ: ಮತದಾರರ ಅಧಿಕಾರ ಮಂಚ್ ಸೂಚನೆ

ದೆಹಲಿ: ದೆಹಲಿಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ "ಸಂಗ್ರಹಿಸಲು ಸಾಧ್ಯವಾಗದವರು" ಎಂದು ಗುರುತಿಸಿ ಹೊರಗಿಡಲಾಗಿರುವ ಬರೋಬ್ಬರಿ 47.7 ಲಕ್ಷ ಮತದಾರರ ಮತಗಟ್ಟೆವಾರಿನ ಪಟ್ಟಿಯನ್ನು ತಕ್ಷಣವೇ...

ದ್ವೇಷ ಭಾಷಣ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಜಾಮೀನು ರಹಿತ ವಾರಂಟ್

ದ್ವೇಷ ಭಾಷಣಕ್ಕೆ (Hate Speech) ಸಂಬಂಧಿಸಿದ ಪ್ರಕರಣದಲ್ಲಿ ಪದೇ ಪದೆ ಸಮನ್ಸ್ ನೀಡಿದ್ದರೂ ನ್ಯಾಯಾಲಯಕ್ಕೆ ಗೈರುಹಾಜರಾದ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪಶ್ಚಿಮ ಬಂಗಾಳದ ಕೃಷ್ಣನಗರ ನ್ಯಾಯಾಲಯವು...

ಬಿಹಾರ| ಉಪ್ಪಿನ ಬದಲು ಡಿಟರ್ಜೆಂಟ್ ಬಳಸಿ ಅಡುಗೆ; ಊಟ ಸೇವಿಸಿದ 34 ಶಾಲಾ ಮಕ್ಕಳು ಅಸ್ವಸ್ಥ

ಬಿಹಾರದ ನಳಂದ ಜಿಲ್ಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ ನಂತರ 34 ಮಕ್ಕಳು ಅಸ್ವಸ್ಥರಾಗಿದ್ದಾರೆ. ಅಡುಗೆಯವರು ಉಪ್ಪಿನ ಬದಲಿಗೆ ಕಣ್ತಪ್ಪಿನಿಂದ ಡಿಟರ್ಜೆಂಟ್ ಪುಡಿಯನ್ನು ಬೆರೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆಗಸ್ಟ್ 18 ರ ಮಂಗಳವಾರ ಪಾರ್ಸಾ ಪ್ರಾಥಮಿಕ...

ಬೆಳಗಾವಿಯಲ್ಲಿ ನೇಕಾರ ಕಾರ್ಮಿಕ ಆತ್ಮಹತ್ಯೆ: ಅನಾಥವಾಯಿತು ಕುಟುಂಬ, ನೆರವಿಗೆ ಹೆಣ್ಣುಮಕ್ಕಳ ಅಳಲು

ಸಾಲದ ಸುಳಿಗೆ ಸಿಲುಕಿ ಜೀವನ ನಡೆಸಲಾಗದೆ ನೇಕಾರ ಕೂಲಿ ಕಾರ್ಮಿಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಕರುಣಾಜನಕ ಘಟನೆ ಬೆಳಗಾವಿ ನಗರದ ಮಂಗಾಯಿ ನಗರದ 4ನೇ ಕ್ರಾಸ್‌ನಲ್ಲಿ ಸಂಭವಿಸಿದೆ. ಮೃತರನ್ನು ವಿಠ್ಠಲ ಲಿಂಗಪ್ಪ ಲೋಕರಿ ಎಂದು...

ಶಿವಮೊಗ್ಗ| ಅಂಗನವಾಡಿ ಸಹಾಯಕಿಯಾಗಿ ದಲಿತ ಮಹಿಳೆಯ ನೇಮಕ; ಗ್ರಾಮಸ್ಥರ ವಿರೋಧ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗುಡ್ತಿ ಗ್ರಾಮದಲ್ಲಿ ದಲಿತ ಮಹಿಳೆಯೊಬ್ಬರನ್ನು ಅಂಗನವಾಡಿ ಸಹಾಯಕಿಯಾಗಿ ನೇಮಕ ಮಾಡಿರುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿರುವ ಸುದ್ದಿ ಬೆಳಕಿಗೆ ಬಂದಿದ್ದು,...

ಉಮರ್ ಖಾಲಿದ್- ಶಾರ್ಜೀಲ್ ದೀರ್ಘಕಾಲದ ಬಂಧನದ ಬಗ್ಗೆ ಕಳವಳ; 100 ಕ್ಕೂ ಹೆಚ್ಚು ಪ್ರಮುಖರಿಂದ ಸಿಜೆಐಗೆ ಬಹಿರಂಗ ಪತ್ರ

2020 ರ ದೆಹಲಿ ಗಲಭೆ ಪಿತೂರಿ ಪ್ರಕರಣದಲ್ಲಿ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ದೀರ್ಘಕಾಲದ ಬಂಧನದ ಬಗ್ಗೆ ಕಳವಳ ವ್ಯಕ್ತಪಡಿಸಿ 100 ಕ್ಕೂ ಹೆಚ್ಚು ಬರಹಗಾರರು, ನಟರು,...