Homeಕರ್ನಾಟಕರಾಜ್ಯದಲ್ಲಿ ಚುನಾವಣಾ ಆಯೋಗ ಅಸ್ತಿತ್ವದಲ್ಲಿದೆಯೇ? - ಸಿದ್ದರಾಮಯ್ಯ ಪ್ರಶ್ನೆ

ರಾಜ್ಯದಲ್ಲಿ ಚುನಾವಣಾ ಆಯೋಗ ಅಸ್ತಿತ್ವದಲ್ಲಿದೆಯೇ? – ಸಿದ್ದರಾಮಯ್ಯ ಪ್ರಶ್ನೆ

ತಮ್ಮನ್ನು ಮಂತ್ರಿಯೂ ಮಾಡಬೇಕು ಹಾಗೂ ಉಪಚುನಾವಣೆಯಲ್ಲಿ ಹಣವನ್ನೂ ಖರ್ಚು ಮಾಡಬೇಕೆಂದು ಯಡಿಯೂರಪ್ಪ ಅವರ ಜೊತೆ ಅನರ್ಹರು ಮೊದಲೇ ಒಪ್ಪಂದ ಮಾಡಿಕೊಂಡಿದ್ದರು.

- Advertisement -
- Advertisement -

ನಾನು ಜೆಡಿಎಸ್ ಬಿಡಲಿಲ್ಲ, ನನ್ನನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡಿದ್ದರು. ಧರಂಸಿಂಗ್ ಸರ್ಕಾರದಲ್ಲಿ ನಾನು ಉಪಮುಖ್ಯಮಂತ್ರಿಯಾಗಿದ್ದೆ, ಆ ಸ್ಥಾನದಿಂದ ನನ್ನನ್ನು ವಜಾ ಮಾಡಿದರು. ಇದಾದ ಒಂದು ವರ್ಷದ ನಂತರ ನಾನು ಕಾಂಗ್ರೆಸ್ ಸೇರಿದ್ದು. ನಾನು ಕಾಂಗ್ರೆಸ್ ಸೇರುವಾಗ ಕಾಂಗ್ರೆಸ್ ಅಧಿಕಾರದಲ್ಲಿ ಇರಲಿಲ್ಲ, ವಿರೋಧ ಪಕ್ಷದ ಸ್ಥಾನದಲ್ಲಿತ್ತು. ಹಣ, ಅಧಿಕಾರದಾಸೆಗೆ ಬೇರೆಯವರಂತೆ ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಇನ್ನೊಂದು ಪಕ್ಷ ಸೇರಿದವನಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ರಾಜಾರೋಷವಾಗಿ ಬಿಜೆಪಿ ಪಕ್ಷ ದುಡ್ಡು ಹಂಚ್ತಿದೆ, ಸಚಿವ ಕಾರಜೋಳ ದುಡ್ಡು ಹಂಚಿದ್ದು ಟಿವಿಯಲ್ಲಿ ಬರ್ತಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಜಾತಿ ಮೇಲೆ ಮತ ಕೇಳ್ತಿದ್ದಾರೆ, ಮಂತ್ರಿ ಮಾಡ್ತೀನಿ, ತಾಲ್ಲೂಕು ಮಾಡ್ತೀನಿ ಎಂದು ಆಶ್ವಾಸನೆ ಕೊಡ್ತಿದ್ದಾರೆ. ಇದರ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಟ್ಟರೂ ಕ್ರಮ ಇಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಆಯೋಗ ಅಸ್ತಿತ್ವದಲ್ಲಿದೆಯೇ? ಹದಿನೇಳು ಶಾಸಕರನ್ನು ಬಿಜೆಪಿ ದುಡ್ಡು ಕೊಟ್ಟೇ ಖರೀದಿಸಿದ್ದಕ್ಕೆ ಸಾಂದರ್ಭಿಕ ಸಾಕ್ಷ್ಯಗಳಿವೆ. ಈಗಿನ ಡಿಸಿಎಂ ಅಶ್ವಥನಾರಾಯಣ, ಶಾಸಕರಾದ ವಿಶ್ವನಾಥ್, ಲಿಂಬಾವಳಿ ಮತ್ತು ಯೋಗೇಶ್ವರ್ ಮನೆಗೆ ಬಂದು 5 ಕೋಟಿ ರೂ. ನೀಡಿದ್ದರು ಎಂದು ಮಾಜಿ ಸಚಿವ ಶ್ರೀನಿವಾಸಗೌಡ ವಿಧಾನಸಭೆಯಲ್ಲಿಯೇ ಹೇಳಿಲ್ವೆ? ಇನ್ನು ಏನು ಸಾಕ್ಷಿ ಬೇಕು? ದೇವದುರ್ಗಕ್ಕೆ ಯಡಿಯೂರಪ್ಪ ಹೋಗಿ ಜೆಡಿಎಸ್ ಶಾಸಕನ ಖರೀದಿಗೆ ಯತ್ನಿಸಿದ್ದು ಅಡಿಯೋ ಟೇಪ್‌ನಲ್ಲಿಲ್ವೇ? ಅದು ತಮ್ಮದೇ ಧ್ವನಿ ಎಂದು ಅವರು ಒಪ್ಪಿಕೊಂಡಿಲ್ವೆ? ಇದರ ಅರ್ಥ ಏನು? ಆತ್ಮಸಾಕ್ಷಿಗಿಂತ ಮಿಗಿಲಾದ ಸಾಕ್ಷಿ ಯಾವುದು? ಎಂದು ಕಿಡಿಕಾರಿದ್ದಾರೆ.

ತಮ್ಮನ್ನು ಮಂತ್ರಿಯೂ ಮಾಡಬೇಕು ಹಾಗೂ ಉಪಚುನಾವಣೆಯಲ್ಲಿ ಹಣವನ್ನೂ ಖರ್ಚು ಮಾಡಬೇಕೆಂದು ಯಡಿಯೂರಪ್ಪ ಅವರ ಜೊತೆ ಅನರ್ಹರು ಮೊದಲೇ ಒಪ್ಪಂದ ಮಾಡಿಕೊಂಡಿದ್ದರು. ಹಾಗಾಗಿ ಉಪಚುನಾವಣೆಯಲ್ಲಿ ಬಿಜೆಪಿ ಕೋಟಿಗಟ್ಟಲೆ ಹಣ ಸುರಿಯುತ್ತಿದೆ, ನಮ್ಮ ಪಕ್ಷದಲ್ಲಿ ಹಣವಿಲ್ಲ‌. ಹಣ ಖರ್ಚು ಮಾಡುವ ವಿಚಾರದಲ್ಲಿ ಬಿಜೆಪಿ ಜೊತೆ ಸ್ಪರ್ಧೆ ಅಸಾಧ್ಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...