Homeಕರ್ನಾಟಕಪ್ರವಾಹ ಕಾರ್ಯಾಚರಣೆಗೆ ಹೋಗುತ್ತೇವೆಂದು ಚುನಾವಣೆ ಪ್ರಚಾರಕ್ಕೆ ಹೋದ ಬಿಜೆಪಿ: ಸಿದ್ದರಾಮಯ್ಯ ಆರೋಪ

ಪ್ರವಾಹ ಕಾರ್ಯಾಚರಣೆಗೆ ಹೋಗುತ್ತೇವೆಂದು ಚುನಾವಣೆ ಪ್ರಚಾರಕ್ಕೆ ಹೋದ ಬಿಜೆಪಿ: ಸಿದ್ದರಾಮಯ್ಯ ಆರೋಪ

- Advertisement -
- Advertisement -

ನನ್ನ ಮೇಲೆ ಭರವಸೆಯಿಟ್ಟು ರಾಜ್ಯದಲ್ಲಿ ಪಕ್ಷವನ್ನು ಮುನ್ನಡೆಸಲು ನನ್ನನ್ನು ಪ್ರತಿಪಕ್ಷದ ನಾಯಕನಾಗಿ ಆಯ್ಕೆ ಮಾಡಿರುವ ಸೋನಿಯಾ ಗಾಂಧಿಯವರನ್ನು ಇಂದು ದೆಹಲಿಯಲ್ಲಿ ಭೇಟಿಮಾಡಿ ಕೃತಜ್ಞತೆ ಸಲ್ಲಿಸಿದ್ದೇನೆ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಮಾಡಬೇಕಾದ ಕೆಲಸಗಳ ಬಗ್ಗೆ ಅಮೂಲ್ಯವಾದ ಸಲಹೆಗಳನ್ನು ಅವರು ನೀಡಿದರು ಎಂದು ಕರ್ನಾಟಕದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಸಿದ್ದಾಂತವನ್ನು ಒಪ್ಪಿ ಪಕ್ಷಕ್ಕೆ ಯಾರಾದರೂ ಬರಬಹುದು ಎಂದಿದ್ದೆ, ಅದನ್ನೇ ಅನರ್ಹ ಶಾಸಕರು ಮರಳಿ ಕಾಂಗ್ರೆಸ್‌ಗೆ ಬಂದರೆ ಸ್ವಾಗತಿಸುತ್ತೇನೆ ಎಂದು ಮಾಧ್ಯಮಗಳಲ್ಲಿ ತಪ್ಪಾಗಿ ತೋರಿಸಲಾಗಿದೆ. ಪಕ್ಷಕ್ಕೆ ದ್ರೋಹ ಬಗೆದು, ಸರ್ಕಾರವನ್ನು ಬೀಳಿಸಿ ಹೋದವರನ್ನು ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಈ ವಿಚಾರದಲ್ಲಿ ನನ್ನ ನಿರ್ಧಾರ ಅಚಲ. ಬೇರೆ ಪಕ್ಷಗಳ ನಾಯಕರು ಕಾಂಗ್ರೆಸ್ ಪಕ್ಷದ ಸಿದ್ದಾಂತ ಒಪ್ಪಿ ಪಕ್ಷ ಸೇರಲು ಇಚ್ಛೆಯನ್ನು ವ್ಯಕ್ತಪಡಿಸಿದಲ್ಲಿ, ನಮ್ಮ ಕಾರ್ಯಕರ್ತರು ಒಪ್ಪಿದರೆ ಮಾತ್ರ ಅಂತಹವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು. ನಮಗೆ ನಮ್ಮ ಕಾರ್ಯಕರ್ತರ ಅಭಿಪ್ರಾಯವೇ ಮುಖ್ಯ ಎಂದಿದಾರೆ.

ಪ್ರವಾಹ ಪರಿಸ್ಥಿತಿ ಮತ್ತು ಬಜೆಟ್‌ನ ಬೇಡಿಕೆಗಳ ಮೇಲಿನ ಚರ್ಚೆಯನ್ನು ಮೊಟಕುಗೊಳಿಸಿ ಬಿಜೆಪಿ ನಾಯಕರು ಮಹಾರಾಷ್ಟ್ರ ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ. ಇದು ರಾಜ್ಯದ ಜನರ ಬಗ್ಗೆ ಅವರಿಗಿರುವ ಕಾಳಜಿಯನ್ನು ತೋರಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯವರಿಗೆ ಅಧಿಕಾರ ಮುಖ್ಯವೇ ಹೊರತು ಸಾರ್ವಜನಿಕ ಹಿತಾಸಕ್ತಿಯಲ್ಲ ಎಂಬುದನ್ನು ಜನತೆ ಈಗಲಾದರೂ ಅರ್ಥಮಾಡಿಕೊಳ್ಳಬೇಕು. ಕೆಲವರು ವರ್ಗಾವಣೆಯನ್ನೇ ದಂಧೆಯಾಗಿಸಿಕೊಂಡು ವ್ಯಾಪಾರಕ್ಕೆ ಕೂತಿದ್ದಾರೆ. ಈ ವಿಚಾರ ಸದನದಲ್ಲಿ ಮುಖ್ಯವಾಗಿ ಚರ್ಚೆಯಾಗಬೇಕಿತ್ತು. ಹಲವರ ಬಣ್ಣ ಬಯಲಾಗುತ್ತೆ ಎಂದೇ ಸದನದಲ್ಲಿ ಚರ್ಚೆಗೆ ಅವಕಾಶ ನೀಡಲಿಲ್ಲ. ಪ್ರವಾಹ ಪರಿಹಾರ ಕಾರ್ಯಾಚರಣೆಗೆ ಹೋಗುತ್ತೇವೆ ಎಂದು ಸುಳ್ಳು ಹೇಳಿ ಸದನವನ್ನು 3 ದಿನಕ್ಕೆ ಇಳಿಸಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ ಎಂದು ಟೀಕಿಸಿದರು.

ಕನಿಷ್ಠ 6 ದಿನವಾದರೂ ಸದನ ನಡೆಯಲಿ ಎಂದು ಶಕ್ತಿಮೀರಿ ಪ್ರಯತ್ನಿಸಿದೆ.‌ ಆದರೆ ಮಾನ್ಯ ಸಭಾಧ್ಯಕ್ಷರು ನಮ್ಮ ಮಾತಿಗೆ ಮನ್ನಣೆ ನೀಡಲಿಲ್ಲ. ಬಿಜೆಪಿ ಮತ್ತು ಸಂಘ ಪರಿವಾರದ ತಾಳಕ್ಕೆ ತಕ್ಕಂತೆ ಅವರು ಕುಣಿಯುತ್ತಿದ್ದಾರೆ. ಜನರ ಸಮಸ್ಯೆಗಳ ಬಗ್ಗೆ ಮಾತನಾಡಲು ಬಿಡಲಿಲ್ಲ ಎಂಬ ಕಾರಣಕ್ಕೆ ನಾನು ಸದನದಲ್ಲಿ ಕೂಗಾಡಿದೆ. ಆದರೂ ಪ್ರಯೋಜನವಾಗಲಿಲ್ಲ. ಸದನ ಶುರುವಾದ ದಿನದಿಂದ ಮುಗಿಯುವವರೆಗೂ ಸಭಾಧ್ಯಕ್ಷರು ನನಗೆ ಸಾಕು ನೀವು ಮಾತನಾಡಿದ್ದು, ಬೇಗ ನಿಮ್ಮ ಮಾತು ಮುಗಿಸಿ ಎಂದು ಹೇಳುತ್ತಲೇ ಬಂದಿದ್ದರು. ನಾನು ಸದನದಲ್ಲಿ ವೈಯಕ್ತಿಕ ಕಷ್ಟ ಹೇಳಿಕೊಳ್ಳುತ್ತಿರಲಿಲ್ಲ, ಜನರ ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದೆ. ಜನರ ಸಮಸ್ಯೆಗಳ ಬಗ್ಗೆ ಚರ್ಚಿಸದ ಸರ್ಕಾರವಿದ್ದು ಏನು ಉಪಯೋಗ? ಎಂದು ಪ್ರಶ್ನಿಸಿದರು.

ಬಿಜೆಪಿಯವರದ್ದೇನು ಜನಮನ್ನಣೆ ಗಳಿಸಿದ ಸರ್ಕಾರವಲ್ಲ. ಆಪರೇಷನ್ ಕಮಲದ ಮೂಲಕ ಹಿಂಬಾಗಿಲ ರಾಜಕಾರಣ ಮಾಡಿ ಅವರು ಅಧಿಕಾರದ ಗದ್ದುಗೆ ಏರಿದ್ದಾರೆ. ಯಡಿಯೂರಪ್ಪ ಅವರು ಅನೈತಿಕ‌ ಸರ್ಕಾರದ ಮುಖ್ಯಮಂತ್ರಿ. ಆಪರೇಷನ್ ಕಮಲದ ಅನೈತಿಕ‌ ಕೂಸಾಗಿರುವ ಈ ಸರ್ಕಾರ ಬಹುಕಾಲ ನಡೆಯಲಾರದು ಎಂದು ಸಿದ್ದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...