Homeಮುಖಪುಟಪ್ರವಾಹ ಕಾರ್ಯಾಚರಣೆಗೆ ಹೋಗುತ್ತೇವೆಂದು ಚುನಾವಣೆ ಪ್ರಚಾರಕ್ಕೆ ಹೋದ ಬಿಜೆಪಿ: ಸಿದ್ದರಾಮಯ್ಯ ಆರೋಪ

ಪ್ರವಾಹ ಕಾರ್ಯಾಚರಣೆಗೆ ಹೋಗುತ್ತೇವೆಂದು ಚುನಾವಣೆ ಪ್ರಚಾರಕ್ಕೆ ಹೋದ ಬಿಜೆಪಿ: ಸಿದ್ದರಾಮಯ್ಯ ಆರೋಪ

- Advertisement -
- Advertisement -

ನನ್ನ ಮೇಲೆ ಭರವಸೆಯಿಟ್ಟು ರಾಜ್ಯದಲ್ಲಿ ಪಕ್ಷವನ್ನು ಮುನ್ನಡೆಸಲು ನನ್ನನ್ನು ಪ್ರತಿಪಕ್ಷದ ನಾಯಕನಾಗಿ ಆಯ್ಕೆ ಮಾಡಿರುವ ಸೋನಿಯಾ ಗಾಂಧಿಯವರನ್ನು ಇಂದು ದೆಹಲಿಯಲ್ಲಿ ಭೇಟಿಮಾಡಿ ಕೃತಜ್ಞತೆ ಸಲ್ಲಿಸಿದ್ದೇನೆ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಮಾಡಬೇಕಾದ ಕೆಲಸಗಳ ಬಗ್ಗೆ ಅಮೂಲ್ಯವಾದ ಸಲಹೆಗಳನ್ನು ಅವರು ನೀಡಿದರು ಎಂದು ಕರ್ನಾಟಕದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಸಿದ್ದಾಂತವನ್ನು ಒಪ್ಪಿ ಪಕ್ಷಕ್ಕೆ ಯಾರಾದರೂ ಬರಬಹುದು ಎಂದಿದ್ದೆ, ಅದನ್ನೇ ಅನರ್ಹ ಶಾಸಕರು ಮರಳಿ ಕಾಂಗ್ರೆಸ್‌ಗೆ ಬಂದರೆ ಸ್ವಾಗತಿಸುತ್ತೇನೆ ಎಂದು ಮಾಧ್ಯಮಗಳಲ್ಲಿ ತಪ್ಪಾಗಿ ತೋರಿಸಲಾಗಿದೆ. ಪಕ್ಷಕ್ಕೆ ದ್ರೋಹ ಬಗೆದು, ಸರ್ಕಾರವನ್ನು ಬೀಳಿಸಿ ಹೋದವರನ್ನು ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಈ ವಿಚಾರದಲ್ಲಿ ನನ್ನ ನಿರ್ಧಾರ ಅಚಲ. ಬೇರೆ ಪಕ್ಷಗಳ ನಾಯಕರು ಕಾಂಗ್ರೆಸ್ ಪಕ್ಷದ ಸಿದ್ದಾಂತ ಒಪ್ಪಿ ಪಕ್ಷ ಸೇರಲು ಇಚ್ಛೆಯನ್ನು ವ್ಯಕ್ತಪಡಿಸಿದಲ್ಲಿ, ನಮ್ಮ ಕಾರ್ಯಕರ್ತರು ಒಪ್ಪಿದರೆ ಮಾತ್ರ ಅಂತಹವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು. ನಮಗೆ ನಮ್ಮ ಕಾರ್ಯಕರ್ತರ ಅಭಿಪ್ರಾಯವೇ ಮುಖ್ಯ ಎಂದಿದಾರೆ.

ಪ್ರವಾಹ ಪರಿಸ್ಥಿತಿ ಮತ್ತು ಬಜೆಟ್‌ನ ಬೇಡಿಕೆಗಳ ಮೇಲಿನ ಚರ್ಚೆಯನ್ನು ಮೊಟಕುಗೊಳಿಸಿ ಬಿಜೆಪಿ ನಾಯಕರು ಮಹಾರಾಷ್ಟ್ರ ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ. ಇದು ರಾಜ್ಯದ ಜನರ ಬಗ್ಗೆ ಅವರಿಗಿರುವ ಕಾಳಜಿಯನ್ನು ತೋರಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯವರಿಗೆ ಅಧಿಕಾರ ಮುಖ್ಯವೇ ಹೊರತು ಸಾರ್ವಜನಿಕ ಹಿತಾಸಕ್ತಿಯಲ್ಲ ಎಂಬುದನ್ನು ಜನತೆ ಈಗಲಾದರೂ ಅರ್ಥಮಾಡಿಕೊಳ್ಳಬೇಕು. ಕೆಲವರು ವರ್ಗಾವಣೆಯನ್ನೇ ದಂಧೆಯಾಗಿಸಿಕೊಂಡು ವ್ಯಾಪಾರಕ್ಕೆ ಕೂತಿದ್ದಾರೆ. ಈ ವಿಚಾರ ಸದನದಲ್ಲಿ ಮುಖ್ಯವಾಗಿ ಚರ್ಚೆಯಾಗಬೇಕಿತ್ತು. ಹಲವರ ಬಣ್ಣ ಬಯಲಾಗುತ್ತೆ ಎಂದೇ ಸದನದಲ್ಲಿ ಚರ್ಚೆಗೆ ಅವಕಾಶ ನೀಡಲಿಲ್ಲ. ಪ್ರವಾಹ ಪರಿಹಾರ ಕಾರ್ಯಾಚರಣೆಗೆ ಹೋಗುತ್ತೇವೆ ಎಂದು ಸುಳ್ಳು ಹೇಳಿ ಸದನವನ್ನು 3 ದಿನಕ್ಕೆ ಇಳಿಸಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ ಎಂದು ಟೀಕಿಸಿದರು.

ಕನಿಷ್ಠ 6 ದಿನವಾದರೂ ಸದನ ನಡೆಯಲಿ ಎಂದು ಶಕ್ತಿಮೀರಿ ಪ್ರಯತ್ನಿಸಿದೆ.‌ ಆದರೆ ಮಾನ್ಯ ಸಭಾಧ್ಯಕ್ಷರು ನಮ್ಮ ಮಾತಿಗೆ ಮನ್ನಣೆ ನೀಡಲಿಲ್ಲ. ಬಿಜೆಪಿ ಮತ್ತು ಸಂಘ ಪರಿವಾರದ ತಾಳಕ್ಕೆ ತಕ್ಕಂತೆ ಅವರು ಕುಣಿಯುತ್ತಿದ್ದಾರೆ. ಜನರ ಸಮಸ್ಯೆಗಳ ಬಗ್ಗೆ ಮಾತನಾಡಲು ಬಿಡಲಿಲ್ಲ ಎಂಬ ಕಾರಣಕ್ಕೆ ನಾನು ಸದನದಲ್ಲಿ ಕೂಗಾಡಿದೆ. ಆದರೂ ಪ್ರಯೋಜನವಾಗಲಿಲ್ಲ. ಸದನ ಶುರುವಾದ ದಿನದಿಂದ ಮುಗಿಯುವವರೆಗೂ ಸಭಾಧ್ಯಕ್ಷರು ನನಗೆ ಸಾಕು ನೀವು ಮಾತನಾಡಿದ್ದು, ಬೇಗ ನಿಮ್ಮ ಮಾತು ಮುಗಿಸಿ ಎಂದು ಹೇಳುತ್ತಲೇ ಬಂದಿದ್ದರು. ನಾನು ಸದನದಲ್ಲಿ ವೈಯಕ್ತಿಕ ಕಷ್ಟ ಹೇಳಿಕೊಳ್ಳುತ್ತಿರಲಿಲ್ಲ, ಜನರ ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದೆ. ಜನರ ಸಮಸ್ಯೆಗಳ ಬಗ್ಗೆ ಚರ್ಚಿಸದ ಸರ್ಕಾರವಿದ್ದು ಏನು ಉಪಯೋಗ? ಎಂದು ಪ್ರಶ್ನಿಸಿದರು.

ಬಿಜೆಪಿಯವರದ್ದೇನು ಜನಮನ್ನಣೆ ಗಳಿಸಿದ ಸರ್ಕಾರವಲ್ಲ. ಆಪರೇಷನ್ ಕಮಲದ ಮೂಲಕ ಹಿಂಬಾಗಿಲ ರಾಜಕಾರಣ ಮಾಡಿ ಅವರು ಅಧಿಕಾರದ ಗದ್ದುಗೆ ಏರಿದ್ದಾರೆ. ಯಡಿಯೂರಪ್ಪ ಅವರು ಅನೈತಿಕ‌ ಸರ್ಕಾರದ ಮುಖ್ಯಮಂತ್ರಿ. ಆಪರೇಷನ್ ಕಮಲದ ಅನೈತಿಕ‌ ಕೂಸಾಗಿರುವ ಈ ಸರ್ಕಾರ ಬಹುಕಾಲ ನಡೆಯಲಾರದು ಎಂದು ಸಿದ್ದು ಅಭಿಪ್ರಾಯಪಟ್ಟಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಣಿಪುರ ಹಿಂಸಾಚಾರಕ್ಕೆ ಬಲಿಯಾದವರ ಬಗ್ಗೆ ಮೋದಿ ಸರ್ಕಾರಕ್ಕೆ ಸ್ವಲ್ಪವೂ ಸಹಾನುಭೂತಿ ಇಲ್ಲ: ಮಲ್ಲಿಕಾರ್ಜುನ ಖರ್ಗೆ

0
ಮಣಿಪುರದ ಪರಿಸ್ಥಿತಿಯ ಬಗ್ಗೆ ಮೋದಿ ಸರಕಾರ ನಿರಾಸಕ್ತಿಯನ್ನು ಹೊಂದಿದ್ದು, ಪಶ್ಚಾತ್ತಾಪವಿಲ್ಲದಂತೆ ವರ್ತಿಸುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದೆ. ಈ ಕುರಿತು ಎಕ್ಸ್‌ನಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ...