Homeಕರ್ನಾಟಕಪ್ರವಾಹ ಕಾರ್ಯಾಚರಣೆಗೆ ಹೋಗುತ್ತೇವೆಂದು ಚುನಾವಣೆ ಪ್ರಚಾರಕ್ಕೆ ಹೋದ ಬಿಜೆಪಿ: ಸಿದ್ದರಾಮಯ್ಯ ಆರೋಪ

ಪ್ರವಾಹ ಕಾರ್ಯಾಚರಣೆಗೆ ಹೋಗುತ್ತೇವೆಂದು ಚುನಾವಣೆ ಪ್ರಚಾರಕ್ಕೆ ಹೋದ ಬಿಜೆಪಿ: ಸಿದ್ದರಾಮಯ್ಯ ಆರೋಪ

- Advertisement -
- Advertisement -

ನನ್ನ ಮೇಲೆ ಭರವಸೆಯಿಟ್ಟು ರಾಜ್ಯದಲ್ಲಿ ಪಕ್ಷವನ್ನು ಮುನ್ನಡೆಸಲು ನನ್ನನ್ನು ಪ್ರತಿಪಕ್ಷದ ನಾಯಕನಾಗಿ ಆಯ್ಕೆ ಮಾಡಿರುವ ಸೋನಿಯಾ ಗಾಂಧಿಯವರನ್ನು ಇಂದು ದೆಹಲಿಯಲ್ಲಿ ಭೇಟಿಮಾಡಿ ಕೃತಜ್ಞತೆ ಸಲ್ಲಿಸಿದ್ದೇನೆ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಮಾಡಬೇಕಾದ ಕೆಲಸಗಳ ಬಗ್ಗೆ ಅಮೂಲ್ಯವಾದ ಸಲಹೆಗಳನ್ನು ಅವರು ನೀಡಿದರು ಎಂದು ಕರ್ನಾಟಕದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಸಿದ್ದಾಂತವನ್ನು ಒಪ್ಪಿ ಪಕ್ಷಕ್ಕೆ ಯಾರಾದರೂ ಬರಬಹುದು ಎಂದಿದ್ದೆ, ಅದನ್ನೇ ಅನರ್ಹ ಶಾಸಕರು ಮರಳಿ ಕಾಂಗ್ರೆಸ್‌ಗೆ ಬಂದರೆ ಸ್ವಾಗತಿಸುತ್ತೇನೆ ಎಂದು ಮಾಧ್ಯಮಗಳಲ್ಲಿ ತಪ್ಪಾಗಿ ತೋರಿಸಲಾಗಿದೆ. ಪಕ್ಷಕ್ಕೆ ದ್ರೋಹ ಬಗೆದು, ಸರ್ಕಾರವನ್ನು ಬೀಳಿಸಿ ಹೋದವರನ್ನು ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಈ ವಿಚಾರದಲ್ಲಿ ನನ್ನ ನಿರ್ಧಾರ ಅಚಲ. ಬೇರೆ ಪಕ್ಷಗಳ ನಾಯಕರು ಕಾಂಗ್ರೆಸ್ ಪಕ್ಷದ ಸಿದ್ದಾಂತ ಒಪ್ಪಿ ಪಕ್ಷ ಸೇರಲು ಇಚ್ಛೆಯನ್ನು ವ್ಯಕ್ತಪಡಿಸಿದಲ್ಲಿ, ನಮ್ಮ ಕಾರ್ಯಕರ್ತರು ಒಪ್ಪಿದರೆ ಮಾತ್ರ ಅಂತಹವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು. ನಮಗೆ ನಮ್ಮ ಕಾರ್ಯಕರ್ತರ ಅಭಿಪ್ರಾಯವೇ ಮುಖ್ಯ ಎಂದಿದಾರೆ.

ಪ್ರವಾಹ ಪರಿಸ್ಥಿತಿ ಮತ್ತು ಬಜೆಟ್‌ನ ಬೇಡಿಕೆಗಳ ಮೇಲಿನ ಚರ್ಚೆಯನ್ನು ಮೊಟಕುಗೊಳಿಸಿ ಬಿಜೆಪಿ ನಾಯಕರು ಮಹಾರಾಷ್ಟ್ರ ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ. ಇದು ರಾಜ್ಯದ ಜನರ ಬಗ್ಗೆ ಅವರಿಗಿರುವ ಕಾಳಜಿಯನ್ನು ತೋರಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯವರಿಗೆ ಅಧಿಕಾರ ಮುಖ್ಯವೇ ಹೊರತು ಸಾರ್ವಜನಿಕ ಹಿತಾಸಕ್ತಿಯಲ್ಲ ಎಂಬುದನ್ನು ಜನತೆ ಈಗಲಾದರೂ ಅರ್ಥಮಾಡಿಕೊಳ್ಳಬೇಕು. ಕೆಲವರು ವರ್ಗಾವಣೆಯನ್ನೇ ದಂಧೆಯಾಗಿಸಿಕೊಂಡು ವ್ಯಾಪಾರಕ್ಕೆ ಕೂತಿದ್ದಾರೆ. ಈ ವಿಚಾರ ಸದನದಲ್ಲಿ ಮುಖ್ಯವಾಗಿ ಚರ್ಚೆಯಾಗಬೇಕಿತ್ತು. ಹಲವರ ಬಣ್ಣ ಬಯಲಾಗುತ್ತೆ ಎಂದೇ ಸದನದಲ್ಲಿ ಚರ್ಚೆಗೆ ಅವಕಾಶ ನೀಡಲಿಲ್ಲ. ಪ್ರವಾಹ ಪರಿಹಾರ ಕಾರ್ಯಾಚರಣೆಗೆ ಹೋಗುತ್ತೇವೆ ಎಂದು ಸುಳ್ಳು ಹೇಳಿ ಸದನವನ್ನು 3 ದಿನಕ್ಕೆ ಇಳಿಸಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ ಎಂದು ಟೀಕಿಸಿದರು.

ಕನಿಷ್ಠ 6 ದಿನವಾದರೂ ಸದನ ನಡೆಯಲಿ ಎಂದು ಶಕ್ತಿಮೀರಿ ಪ್ರಯತ್ನಿಸಿದೆ.‌ ಆದರೆ ಮಾನ್ಯ ಸಭಾಧ್ಯಕ್ಷರು ನಮ್ಮ ಮಾತಿಗೆ ಮನ್ನಣೆ ನೀಡಲಿಲ್ಲ. ಬಿಜೆಪಿ ಮತ್ತು ಸಂಘ ಪರಿವಾರದ ತಾಳಕ್ಕೆ ತಕ್ಕಂತೆ ಅವರು ಕುಣಿಯುತ್ತಿದ್ದಾರೆ. ಜನರ ಸಮಸ್ಯೆಗಳ ಬಗ್ಗೆ ಮಾತನಾಡಲು ಬಿಡಲಿಲ್ಲ ಎಂಬ ಕಾರಣಕ್ಕೆ ನಾನು ಸದನದಲ್ಲಿ ಕೂಗಾಡಿದೆ. ಆದರೂ ಪ್ರಯೋಜನವಾಗಲಿಲ್ಲ. ಸದನ ಶುರುವಾದ ದಿನದಿಂದ ಮುಗಿಯುವವರೆಗೂ ಸಭಾಧ್ಯಕ್ಷರು ನನಗೆ ಸಾಕು ನೀವು ಮಾತನಾಡಿದ್ದು, ಬೇಗ ನಿಮ್ಮ ಮಾತು ಮುಗಿಸಿ ಎಂದು ಹೇಳುತ್ತಲೇ ಬಂದಿದ್ದರು. ನಾನು ಸದನದಲ್ಲಿ ವೈಯಕ್ತಿಕ ಕಷ್ಟ ಹೇಳಿಕೊಳ್ಳುತ್ತಿರಲಿಲ್ಲ, ಜನರ ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದೆ. ಜನರ ಸಮಸ್ಯೆಗಳ ಬಗ್ಗೆ ಚರ್ಚಿಸದ ಸರ್ಕಾರವಿದ್ದು ಏನು ಉಪಯೋಗ? ಎಂದು ಪ್ರಶ್ನಿಸಿದರು.

ಬಿಜೆಪಿಯವರದ್ದೇನು ಜನಮನ್ನಣೆ ಗಳಿಸಿದ ಸರ್ಕಾರವಲ್ಲ. ಆಪರೇಷನ್ ಕಮಲದ ಮೂಲಕ ಹಿಂಬಾಗಿಲ ರಾಜಕಾರಣ ಮಾಡಿ ಅವರು ಅಧಿಕಾರದ ಗದ್ದುಗೆ ಏರಿದ್ದಾರೆ. ಯಡಿಯೂರಪ್ಪ ಅವರು ಅನೈತಿಕ‌ ಸರ್ಕಾರದ ಮುಖ್ಯಮಂತ್ರಿ. ಆಪರೇಷನ್ ಕಮಲದ ಅನೈತಿಕ‌ ಕೂಸಾಗಿರುವ ಈ ಸರ್ಕಾರ ಬಹುಕಾಲ ನಡೆಯಲಾರದು ಎಂದು ಸಿದ್ದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....