Homeಕರ್ನಾಟಕಪ್ರವಾಹ ಕಾರ್ಯಾಚರಣೆಗೆ ಹೋಗುತ್ತೇವೆಂದು ಚುನಾವಣೆ ಪ್ರಚಾರಕ್ಕೆ ಹೋದ ಬಿಜೆಪಿ: ಸಿದ್ದರಾಮಯ್ಯ ಆರೋಪ

ಪ್ರವಾಹ ಕಾರ್ಯಾಚರಣೆಗೆ ಹೋಗುತ್ತೇವೆಂದು ಚುನಾವಣೆ ಪ್ರಚಾರಕ್ಕೆ ಹೋದ ಬಿಜೆಪಿ: ಸಿದ್ದರಾಮಯ್ಯ ಆರೋಪ

- Advertisement -
- Advertisement -

ನನ್ನ ಮೇಲೆ ಭರವಸೆಯಿಟ್ಟು ರಾಜ್ಯದಲ್ಲಿ ಪಕ್ಷವನ್ನು ಮುನ್ನಡೆಸಲು ನನ್ನನ್ನು ಪ್ರತಿಪಕ್ಷದ ನಾಯಕನಾಗಿ ಆಯ್ಕೆ ಮಾಡಿರುವ ಸೋನಿಯಾ ಗಾಂಧಿಯವರನ್ನು ಇಂದು ದೆಹಲಿಯಲ್ಲಿ ಭೇಟಿಮಾಡಿ ಕೃತಜ್ಞತೆ ಸಲ್ಲಿಸಿದ್ದೇನೆ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಮಾಡಬೇಕಾದ ಕೆಲಸಗಳ ಬಗ್ಗೆ ಅಮೂಲ್ಯವಾದ ಸಲಹೆಗಳನ್ನು ಅವರು ನೀಡಿದರು ಎಂದು ಕರ್ನಾಟಕದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಸಿದ್ದಾಂತವನ್ನು ಒಪ್ಪಿ ಪಕ್ಷಕ್ಕೆ ಯಾರಾದರೂ ಬರಬಹುದು ಎಂದಿದ್ದೆ, ಅದನ್ನೇ ಅನರ್ಹ ಶಾಸಕರು ಮರಳಿ ಕಾಂಗ್ರೆಸ್‌ಗೆ ಬಂದರೆ ಸ್ವಾಗತಿಸುತ್ತೇನೆ ಎಂದು ಮಾಧ್ಯಮಗಳಲ್ಲಿ ತಪ್ಪಾಗಿ ತೋರಿಸಲಾಗಿದೆ. ಪಕ್ಷಕ್ಕೆ ದ್ರೋಹ ಬಗೆದು, ಸರ್ಕಾರವನ್ನು ಬೀಳಿಸಿ ಹೋದವರನ್ನು ಮರಳಿ ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಈ ವಿಚಾರದಲ್ಲಿ ನನ್ನ ನಿರ್ಧಾರ ಅಚಲ. ಬೇರೆ ಪಕ್ಷಗಳ ನಾಯಕರು ಕಾಂಗ್ರೆಸ್ ಪಕ್ಷದ ಸಿದ್ದಾಂತ ಒಪ್ಪಿ ಪಕ್ಷ ಸೇರಲು ಇಚ್ಛೆಯನ್ನು ವ್ಯಕ್ತಪಡಿಸಿದಲ್ಲಿ, ನಮ್ಮ ಕಾರ್ಯಕರ್ತರು ಒಪ್ಪಿದರೆ ಮಾತ್ರ ಅಂತಹವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗುವುದು. ನಮಗೆ ನಮ್ಮ ಕಾರ್ಯಕರ್ತರ ಅಭಿಪ್ರಾಯವೇ ಮುಖ್ಯ ಎಂದಿದಾರೆ.

ಪ್ರವಾಹ ಪರಿಸ್ಥಿತಿ ಮತ್ತು ಬಜೆಟ್‌ನ ಬೇಡಿಕೆಗಳ ಮೇಲಿನ ಚರ್ಚೆಯನ್ನು ಮೊಟಕುಗೊಳಿಸಿ ಬಿಜೆಪಿ ನಾಯಕರು ಮಹಾರಾಷ್ಟ್ರ ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ. ಇದು ರಾಜ್ಯದ ಜನರ ಬಗ್ಗೆ ಅವರಿಗಿರುವ ಕಾಳಜಿಯನ್ನು ತೋರಿಸುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯವರಿಗೆ ಅಧಿಕಾರ ಮುಖ್ಯವೇ ಹೊರತು ಸಾರ್ವಜನಿಕ ಹಿತಾಸಕ್ತಿಯಲ್ಲ ಎಂಬುದನ್ನು ಜನತೆ ಈಗಲಾದರೂ ಅರ್ಥಮಾಡಿಕೊಳ್ಳಬೇಕು. ಕೆಲವರು ವರ್ಗಾವಣೆಯನ್ನೇ ದಂಧೆಯಾಗಿಸಿಕೊಂಡು ವ್ಯಾಪಾರಕ್ಕೆ ಕೂತಿದ್ದಾರೆ. ಈ ವಿಚಾರ ಸದನದಲ್ಲಿ ಮುಖ್ಯವಾಗಿ ಚರ್ಚೆಯಾಗಬೇಕಿತ್ತು. ಹಲವರ ಬಣ್ಣ ಬಯಲಾಗುತ್ತೆ ಎಂದೇ ಸದನದಲ್ಲಿ ಚರ್ಚೆಗೆ ಅವಕಾಶ ನೀಡಲಿಲ್ಲ. ಪ್ರವಾಹ ಪರಿಹಾರ ಕಾರ್ಯಾಚರಣೆಗೆ ಹೋಗುತ್ತೇವೆ ಎಂದು ಸುಳ್ಳು ಹೇಳಿ ಸದನವನ್ನು 3 ದಿನಕ್ಕೆ ಇಳಿಸಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ ಎಂದು ಟೀಕಿಸಿದರು.

ಕನಿಷ್ಠ 6 ದಿನವಾದರೂ ಸದನ ನಡೆಯಲಿ ಎಂದು ಶಕ್ತಿಮೀರಿ ಪ್ರಯತ್ನಿಸಿದೆ.‌ ಆದರೆ ಮಾನ್ಯ ಸಭಾಧ್ಯಕ್ಷರು ನಮ್ಮ ಮಾತಿಗೆ ಮನ್ನಣೆ ನೀಡಲಿಲ್ಲ. ಬಿಜೆಪಿ ಮತ್ತು ಸಂಘ ಪರಿವಾರದ ತಾಳಕ್ಕೆ ತಕ್ಕಂತೆ ಅವರು ಕುಣಿಯುತ್ತಿದ್ದಾರೆ. ಜನರ ಸಮಸ್ಯೆಗಳ ಬಗ್ಗೆ ಮಾತನಾಡಲು ಬಿಡಲಿಲ್ಲ ಎಂಬ ಕಾರಣಕ್ಕೆ ನಾನು ಸದನದಲ್ಲಿ ಕೂಗಾಡಿದೆ. ಆದರೂ ಪ್ರಯೋಜನವಾಗಲಿಲ್ಲ. ಸದನ ಶುರುವಾದ ದಿನದಿಂದ ಮುಗಿಯುವವರೆಗೂ ಸಭಾಧ್ಯಕ್ಷರು ನನಗೆ ಸಾಕು ನೀವು ಮಾತನಾಡಿದ್ದು, ಬೇಗ ನಿಮ್ಮ ಮಾತು ಮುಗಿಸಿ ಎಂದು ಹೇಳುತ್ತಲೇ ಬಂದಿದ್ದರು. ನಾನು ಸದನದಲ್ಲಿ ವೈಯಕ್ತಿಕ ಕಷ್ಟ ಹೇಳಿಕೊಳ್ಳುತ್ತಿರಲಿಲ್ಲ, ಜನರ ಸಮಸ್ಯೆ ಬಗ್ಗೆ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದೆ. ಜನರ ಸಮಸ್ಯೆಗಳ ಬಗ್ಗೆ ಚರ್ಚಿಸದ ಸರ್ಕಾರವಿದ್ದು ಏನು ಉಪಯೋಗ? ಎಂದು ಪ್ರಶ್ನಿಸಿದರು.

ಬಿಜೆಪಿಯವರದ್ದೇನು ಜನಮನ್ನಣೆ ಗಳಿಸಿದ ಸರ್ಕಾರವಲ್ಲ. ಆಪರೇಷನ್ ಕಮಲದ ಮೂಲಕ ಹಿಂಬಾಗಿಲ ರಾಜಕಾರಣ ಮಾಡಿ ಅವರು ಅಧಿಕಾರದ ಗದ್ದುಗೆ ಏರಿದ್ದಾರೆ. ಯಡಿಯೂರಪ್ಪ ಅವರು ಅನೈತಿಕ‌ ಸರ್ಕಾರದ ಮುಖ್ಯಮಂತ್ರಿ. ಆಪರೇಷನ್ ಕಮಲದ ಅನೈತಿಕ‌ ಕೂಸಾಗಿರುವ ಈ ಸರ್ಕಾರ ಬಹುಕಾಲ ನಡೆಯಲಾರದು ಎಂದು ಸಿದ್ದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...

ಕರ್ನಾಟಕ ಎಸ್‌ಐಆರ್: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬರಿಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಮಂಗಳೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತಮ್ಮ ವಿಶಿಷ್ಟ ಸೇವೆಯ ಮೂಲಕ ದೇಶ-ವಿದೇಶಗಳಲ್ಲಿ ಗುರುತಿಸಿಕೊಂಡಿರುವ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರಿಗೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ...

SIR ಸೂತ್ರದಿಂದ ಬದಲಾಗುತ್ತಾ ಬೆಂಗಳೂರಿನ 28 ಕ್ಷೇತ್ರಗಳ ಗೆಲುವಿನ ಸಮೀಕರಣ?

ರಾಜ್ಯ ರಾಜಕೀಯದ ಶಕ್ತಿಕೇಂದ್ರವಾದ ಬೆಂಗಳೂರಿನ 28 ವಿಧಾನಸಭಾ ಕ್ಷೇತ್ರಗಳಲ್ಲಿ ‘ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR)’ ಪ್ರಕ್ರಿಯೆಯು ಮಹತ್ವದ ರಾಜಕೀಯ ಮತ್ತು ಆಡಳಿತಾತ್ಮಕ ಚರ್ಚೆಯನ್ನು ಹುಟ್ಟುಹಾಕಿದೆ. ಎಸ್‌ಐಆರ್‌ಗೂ ಮುನ್ನ ನಗರದಲ್ಲಿದ್ದ ಸುಮಾರು 1.03...

ಮಣಿಪುರದಲ್ಲಿ ಹಿಂಸಾಚಾರಕ್ಕೆ 306 ಬಲಿ, 49 ಮಂದಿ ನಾಪತ್ತೆ: ವಿಧಾನಸಭೆಯಲ್ಲಿ ಗೃಹ ಸಚಿವರ ಸ್ಪಷ್ಟನೆ

ಇಂಫಾಲ್: ಮಣಿಪುರದಲ್ಲಿ 2023ರ ಮೇ ತಿಂಗಳಲ್ಲಿ ಭುಗಿಲೆದ್ದ ಜನಾಂಗೀಯ ಹಿಂಸಾಚಾರಕ್ಕೆ ಮೂರು ವರ್ಷಗಳಿಗೂ ಹೆಚ್ಚು ಕಾಲ ಕಳೆದಿದ್ದರೂ, ಅದರ ಪರಿಣಾಮದಿಂದ ರಾಜ್ಯ ಸಂಪೂರ್ಣವಾಗಿ ಹೊರಬಂದಿಲ್ಲ. ಹಿಂಸಾಚಾರ ಆರಂಭವಾದ ಬಳಿಕ ಇದುವರೆಗೆ ಕನಿಷ್ಠ 306...

ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ನಿಧಿ ದುರ್ಬಳಕೆ; ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷದ ಸಿ.ಸಿ. ರಸ್ತೆ ನಿರ್ಮಾಣ!

ಸಮಾಜ ಕಲ್ಯಾಣ ಇಲಾಖೆಯ 'ಪ್ರಗತಿ ಕಾಲೋನಿ' ಯೋಜನೆಯ ನಿಧಿ ದುರ್ಬಳಕೆಯಾಗಿರುವ ಆರೋಪ ಕೇಳಿಬಂದಿದ್ದು, ಜನವಸತಿಯೇ ಇಲ್ಲದ ಜಾಗದಲ್ಲಿ ರೂ. 50 ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಿರುವ ಪ್ರಕರಣ ಬೆಂಗಳೂರು...

SIR: ‘ಚುನಾವಣಾ ಆಯೋಗದಿಂದ ನೋಟಿಸ್‌’ ಇಲ್ಲದಿರುವ ದಾಖಲೆಗಳನ್ನು ಎಲ್ಲಿಂದಾ ತರೋದು? ಸಾರ್ವಜನಿಕರ ಪ್ರಶ್ನೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಚುನಾವಣಾ ಆಯೋಗವು ಬಳಸುತ್ತಿರುವ 'Logical Discrepancy' (ತಾರ್ಕಿಕ ವ್ಯತ್ಯಾಸ) ಎಂಬ ಸಾಫ್ಟ್‌ವೇರ್ ಆಧಾರಿತ ಪರಿಶೀಲನೆಯು ತಾಂತ್ರಿಕವಾಗಿ ದೋಷರಹಿತವೆಂದು ತೋರಿದರೂ, ವಾಸ್ತವದಲ್ಲಿ ಲಕ್ಷಾಂತರ ನೈಜ...

SIR ರಗಳೆ: ಕೊನೆಗೂ 43.81 ಲಕ್ಷ ಮತದಾರರ ನೋಟಿಸ್ ಪಟ್ಟಿ ಬಹಿರಂಗಪಡಿಸಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ಭಾರಿ ಸದ್ದು ಮಾಡುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯಲ್ಲಿ ನೋಟಿಸ್‌ಗೆ ಗುರಿಯಾಗಿರುವ 43.81 ಲಕ್ಷ ಮತದಾರರ ಪಟ್ಟಿಯನ್ನು ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಕೊನೆಗೂ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ...

‘ಆರ್‌ಎಸ್‌ಎಸ್‌ ಅಡಗಿಕೊಂಡಿದೆ’: ಮೋಹನ್ ಭಾಗವತ್‌ ಯುಕೆ ಭೇಟಿ ವಿರೋಧಿಸಿ ಲಂಡನ್‌ನಲ್ಲಿ ಪ್ರತಿಭಟನೆ

ಲಂಡನ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರ ಯುನೈಟೆಡ್ ಕಿಂಗ್‌ಡಮ್‌ ಭೇಟಿಯನ್ನು ವಿರೋಧಿಸಿ ಲಂಡನ್‌ನ ಪಾರ್ಲಿಮೆಂಟ್ ಸ್ಕ್ವೇರ್‌ನಲ್ಲಿ ನೂರಾರು ಜನರು ಪ್ರತಿಭಟನೆ ನಡೆಸಿದ್ದಾರೆ. ಭಾಗವತ್ ಅವರ ಯುಕೆ ಪ್ರವಾಸದ...

ಪಂಚಾಯಿತಿಯಲ್ಲಿ ಅಸ್ಪೃಶ್ಯತೆ ಆಚರಣೆ-ಪ್ರತ್ಯೇಕ ಟೀ ಲೋಟ; ಆತ್ಮಹತ್ಯೆಗೆ ಯತ್ನಿಸಿದ ಪೌರಕಾರ್ಮಿಕ ಮಹಿಳೆ

ಕೆಲಸದ ಸ್ಥಳದಲ್ಲಿ ನಡೆಯುತ್ತಿದ್ದ ಅಸ್ಪೃಶ್ಯತೆ ಆಚರಣೆಯಿಂದ ಮನನೊಂದ 37 ವರ್ಷದ ದಲಿತ ನೈರ್ಮಲ್ಯ ಕಾರ್ಮಿಕರೊಬ್ಬರು ಕ್ರಿಮಿನಾಶಕ ಸೇವಿಸಿ ಆತ್ಮತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮೇಲೂರು ಸಮೀಪದ ಕಂಬೂರ್ ಪಂಚಾಯತ್‌ನಲ್ಲಿ ಬೆಳಕಿಗೆ ಬಂದಿದೆ. ...

ಗೌರಿ, ಗಾಂಧಿಯನ್ನು ಕೊಂದದ್ದು ಬರೀ ಬುಲೆಟ್‌ಗಳಲ್ಲ, ಕೋಮುವಾದಿ ಸಿದ್ಧಾಂತ: ವಿದ್ಯಾರ್ಥಿ ನಾಯಕಿ ದಾನಿಶ್ ಅಲಿ

"ಗಾಂಧಿ, ಗೌರಿಯನ್ನು ಕೊಂದಿದ್ದು ಬರೀ ಬುಲೆಟ್‌ಗಳಲ್ಲ, ಅದು ಸಿದ್ಧಾಂತ ಎಂಬುದನ್ನು ನಾವು ನೆನಪಿಡಬೇಕು. ಈ ಸಿದ್ಧಾಂತಗಳ ವಿರುದ್ಧವಾಗಿ ನಾವು ಇಂದು ಹೋರಾಡಬೇಕಿದೆ” ಎಂದು ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (JNU) ವಿದ್ಯಾರ್ಥಿ ನಾಯಕಿ...