Homeಮುಖಪುಟನಿದ್ರಿಸುತ್ತಿರುವವರನ್ನು ಎಬ್ಬಿಸಬಹುದು, ನಿದ್ರಿಸುತ್ತಿರುವಂತೆ ನಟಿಸುವವರನ್ನು ಎಬ್ಬಿಸುವುದು ಅಸಾಧ್ಯ: ಸಿದ್ದರಾಮಯ್ಯ..

ನಿದ್ರಿಸುತ್ತಿರುವವರನ್ನು ಎಬ್ಬಿಸಬಹುದು, ನಿದ್ರಿಸುತ್ತಿರುವಂತೆ ನಟಿಸುವವರನ್ನು ಎಬ್ಬಿಸುವುದು ಅಸಾಧ್ಯ: ಸಿದ್ದರಾಮಯ್ಯ..

- Advertisement -
- Advertisement -

ಮಹಾರಾಷ್ಟ್ರ ಚುನಾವಣಾ ಪ್ರಚಾರಕ್ಕೆಂದು ಹೋದಾಗ ಅಲ್ಲಿನ ಸರ್ಕಾರ ಐದು ವರ್ಷ ಏನು ಅಭಿವೃದ್ಧಿ ಮಾಡಿದೆ ಎಂಬ ಬಗ್ಗೆ ಅನುಮಾನ ಮೂಡಿತು. ಹೈದರಾಬಾದ್- ಪೂನಾ ಹೆದ್ದಾರಿಯಲ್ಲಿ ವಾಹನ ಸಂಚರಿಸಲು ಪರದಾಡಬೇಕಿದೆ. ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರ ತವರು ರಾಜ್ಯದ ಸ್ಥಿತಿಯೇ ಹೀಗೆ. ಆದರೂ ಜನ ಬಿಜೆಪಿಗೆ ಮತ ನೀಡುತ್ತಾರೆಯೇ? ಎಂದು ಕರ್ನಾಟಕದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಿನ್ನೆ ನಡೆದ ಮಹಾರಾಷ್ಟ್ರ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಲು ಅಲ್ಲಿಗೆ ತೆರಳಿದ್ದ ಅವರು ಚುನಾವಣೆಯ ನಂತರ ಅಲ್ಲಿನ ಸ್ಥಿತಿಯನ್ನು ವಿಶ್ಲೇಷಿಸಿದ್ದಾರೆ.

ಬಿಜೆಪಿಯವರು ಇವಿಎಂ ದುರುಪಯೋಗ ಮಾಡಿಕೊಂಡು ಚುನಾವಣೆಯಲ್ಲಿ ಗೆಲ್ಲುತ್ತಿರುವ ಸಾಧ್ಯತೆಗಳೂ ಇರಬಹುದು. ಅಭಿವೃದ್ಧಿ ಕಾರ್ಯಗಳನ್ನೇ ಮಾಡದಿದ್ದರೂ ಹೇಗೆ ಚುನಾವಣೆ ಗೆಲ್ಲಲು ಸಾಧ್ಯ? ಅಧಿಕಾರ ಹಿಡಿಯಲು ಚುನಾವಣಾ ಆಯೋಗ ಸೇರಿದಂತೆ ಎಲ್ಲ ಸ್ವಾಯತ್ತ ಸಂಸ್ಥೆಗಳನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳತ್ತಿದೆ. ಚುನಾವಣೆ ಘೋಷಣೆಯಾದ ದಿನದಿಂದ ನೀತಿಸಂಹಿತೆ ಜಾರಿಯಾಗಬೇಕು. ಆದರೆ ರಾಜ್ಯದಲ್ಲಿ 70 ದಿನ ಮುಂಚಿತವಾಗಿ ಚುನಾವಣೆಯ ದಿನವನ್ನು ಘೋಷಿಸಿದರೂ ಇನ್ನೂ ನೀತಿಸಂಹಿತೆ ಜಾರಿಯಾಗಿಲ್ಲ. ಇವೆಲ್ಲ ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೇಲೆ ಪ್ರಭಾವ ಬೀರುತ್ತಿರುವುದಕ್ಕೆ ಸ್ಪಷ್ಟ ನಿದರ್ಶನಗಳು ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಇವಿಎಂ ಯಂತ್ರಗಳು ನಂಬಿಕಾರ್ಹವಲ್ಲ ಎಂಬ ಕಾರಣದಿಂದ ಅಮೆರಿಕಾ, ಜಪಾನ್, ಜರ್ಮನಿಯಂತಹ ಮುಂದುವರೆದ ರಾಷ್ಟ್ರಗಳೇ ಸಾಂಪ್ರದಾಯಿಕ ಮತದಾನದ ಶೈಲಿಯಾದ ಮತಚೀಟಿ ಬಳಕೆಯನ್ನು ಮರು ಅಳವಡಿಕೆ ಮಾಡಿಕೊಂಡಿರುವಾಗ ಭಾರತ ಏಕೆ ಮಾಡಿಕೊಳ್ಳಬಾರದು? ಇಷ್ಟೊಂದು ಜನ ಇವಿಎಂ ವಿಶ್ವಾಸಾರ್ಹತೆ ಬಗ್ಗೆ ಪ್ರಶ್ನಿಸಿದರೂ ಅದರ ಮೇಲೆ ಬಿಜೆಪಿಗರ ಅತಿಯಾದ ಪ್ರೀತಿಗೆ ಕಾರಣವೇನು? ಎಂದು ಪ್ರಶ್ನಿಸಿದ್ದಾರೆ.

ಪ್ರವಾಹದಲ್ಲಿ‌ ಮನೆ ಕಳೆದುಕೊಂಡವರಿಗೆ ಪರಿಹಾರಧನ ನೀಡಿಲ್ಲ, ತಾತ್ಕಾಲಿಕ ಶೆಡ್ ಹಾಕಿಕೊಟ್ಟಿಲ್ಲ, ಕೆಲವರಿಗೆ ಹತ್ತು ಸಾವಿರ ಕೊಟ್ಟಿದ್ದು ಬಿಟ್ಟರೆ ಇದುವರೆಗೂ ರಾಜ್ಯ ಸರ್ಕಾರ ಬೇರಾವ ಗಮನಾರ್ಹ ಕೆಲಸವನ್ನು ಮಾಡಿಲ್ಲ. ಈಗ ಮತ್ತೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಸರ್ಕಾರ ಜನರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಹೀಗಾದರೆ ಸಂತ್ರಸ್ತರ ಗತಿಯೇನು? ಯು.ಪಿ.ಎ ಅವಧಿಯಲ್ಲಿ ದೊರೆತ ಪರಿಹಾರಕ್ಕೂ, ಎನ್‌ಡಿಎ ಅವಧಿಯಲ್ಲಿ ದೊರೆತ ಪರಿಹಾರದ ಮೊತ್ತಕ್ಕು ತಾಳೆ ಹಾಕುವುದು ಮೂರ್ಖತನ. ಹಿಂದೆ ಸಂಭವಿಸಿದ ಪ್ರವಾಹಕ್ಕೂ, ಈ ಬಾರಿಯ ಪ್ರವಾಹಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಸಾವು, ನೋವು, ನಷ್ಟದ ಪ್ರಮಾಣ ಈ ಬಾರಿ ಅತಿ ಹೆಚ್ಚಾಗಿದೆ. ನಾನು ಮೊದಲ ಬಜೆಟ್ ಮಂಡಿಸಿದಾಗ ಒಂದು ಲಕ್ಷ ಕೋಟಿಯಿದ್ದ ಬಜೆಟ್ ಗಾತ್ರ, ಕೊನೆಯ ಬಜೆಟ್‌ಗೆ ರೂ.2 ಲಕ್ಷ ಕೋಟಿ ಮೀರಿತ್ತು. ಅಂದರೆ ಹಣದ ಮೌಲ್ಯ ಒಂದೇ ಪ್ರಕಾರವಾಗಿ ಇಲ್ಲ. ಹಾಗಾಗಿ ಕೇಂದ್ರ ನೀಡಿರುವ ಪರಿಹಾರ ಹಣದ ಪ್ರಮಾಣದಲ್ಲಿ ಸ್ವಲ್ಪ ಹೆಚ್ಚಿರಬಹುದು. ಹಾಗೆಂದ ಮಾತ್ರಕ್ಕೆ ಅಗತ್ಯ ಪ್ರಮಾಣದ ನೆರವು ದೊರೆತಿದೆ ಎಂದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೆರೆ ಪರಿಹಾರ ಕಾರ್ಯಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷವಾಗಿ ನಾವು ನಿತ್ಯವೂ ಸರ್ಕಾರವನ್ನು ಎಚ್ಚರಿಸುವ ಕಾರ್ಯ ಮಾಡುತ್ತಿದ್ದೇವೆ. ಆದರೆ ಇದು ಭಂಡಗೆಟ್ಟ ಸರ್ಕಾರ, ಅಧಿಕಾರದ ಹೊರತಾಗಿ ಅವರಿಗೆ ಬೇರೇನೂ ಬೇಡ.
“ನಿದ್ರಿಸುತ್ತಿರುವವರನ್ನು ಎಬ್ಬಿಸಬಹುದು, ನಿದ್ರಿಸುತ್ತಿರುವಂತೆ ನಟಿಸುವವರನ್ನು ಎಬ್ಬಿಸುವುದು ಅಸಾಧ್ಯದ ಮಾತು”.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರತಿ ಸಾರಿ ಚುನಾವಣೆ ನಡೆದಾಗ ಇವರು ಇದನ್ನೇ ಹೇಳೋದು ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಾಗ ಈ ಮಾತುಗಳನ್ನು ಹೇಳಲಿಲ್ಲವೇ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...