Homeಮುಖಪುಟನಿದ್ರಿಸುತ್ತಿರುವವರನ್ನು ಎಬ್ಬಿಸಬಹುದು, ನಿದ್ರಿಸುತ್ತಿರುವಂತೆ ನಟಿಸುವವರನ್ನು ಎಬ್ಬಿಸುವುದು ಅಸಾಧ್ಯ: ಸಿದ್ದರಾಮಯ್ಯ..

ನಿದ್ರಿಸುತ್ತಿರುವವರನ್ನು ಎಬ್ಬಿಸಬಹುದು, ನಿದ್ರಿಸುತ್ತಿರುವಂತೆ ನಟಿಸುವವರನ್ನು ಎಬ್ಬಿಸುವುದು ಅಸಾಧ್ಯ: ಸಿದ್ದರಾಮಯ್ಯ..

- Advertisement -
- Advertisement -

ಮಹಾರಾಷ್ಟ್ರ ಚುನಾವಣಾ ಪ್ರಚಾರಕ್ಕೆಂದು ಹೋದಾಗ ಅಲ್ಲಿನ ಸರ್ಕಾರ ಐದು ವರ್ಷ ಏನು ಅಭಿವೃದ್ಧಿ ಮಾಡಿದೆ ಎಂಬ ಬಗ್ಗೆ ಅನುಮಾನ ಮೂಡಿತು. ಹೈದರಾಬಾದ್- ಪೂನಾ ಹೆದ್ದಾರಿಯಲ್ಲಿ ವಾಹನ ಸಂಚರಿಸಲು ಪರದಾಡಬೇಕಿದೆ. ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರ ತವರು ರಾಜ್ಯದ ಸ್ಥಿತಿಯೇ ಹೀಗೆ. ಆದರೂ ಜನ ಬಿಜೆಪಿಗೆ ಮತ ನೀಡುತ್ತಾರೆಯೇ? ಎಂದು ಕರ್ನಾಟಕದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಿನ್ನೆ ನಡೆದ ಮಹಾರಾಷ್ಟ್ರ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಲು ಅಲ್ಲಿಗೆ ತೆರಳಿದ್ದ ಅವರು ಚುನಾವಣೆಯ ನಂತರ ಅಲ್ಲಿನ ಸ್ಥಿತಿಯನ್ನು ವಿಶ್ಲೇಷಿಸಿದ್ದಾರೆ.

ಬಿಜೆಪಿಯವರು ಇವಿಎಂ ದುರುಪಯೋಗ ಮಾಡಿಕೊಂಡು ಚುನಾವಣೆಯಲ್ಲಿ ಗೆಲ್ಲುತ್ತಿರುವ ಸಾಧ್ಯತೆಗಳೂ ಇರಬಹುದು. ಅಭಿವೃದ್ಧಿ ಕಾರ್ಯಗಳನ್ನೇ ಮಾಡದಿದ್ದರೂ ಹೇಗೆ ಚುನಾವಣೆ ಗೆಲ್ಲಲು ಸಾಧ್ಯ? ಅಧಿಕಾರ ಹಿಡಿಯಲು ಚುನಾವಣಾ ಆಯೋಗ ಸೇರಿದಂತೆ ಎಲ್ಲ ಸ್ವಾಯತ್ತ ಸಂಸ್ಥೆಗಳನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳತ್ತಿದೆ. ಚುನಾವಣೆ ಘೋಷಣೆಯಾದ ದಿನದಿಂದ ನೀತಿಸಂಹಿತೆ ಜಾರಿಯಾಗಬೇಕು. ಆದರೆ ರಾಜ್ಯದಲ್ಲಿ 70 ದಿನ ಮುಂಚಿತವಾಗಿ ಚುನಾವಣೆಯ ದಿನವನ್ನು ಘೋಷಿಸಿದರೂ ಇನ್ನೂ ನೀತಿಸಂಹಿತೆ ಜಾರಿಯಾಗಿಲ್ಲ. ಇವೆಲ್ಲ ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೇಲೆ ಪ್ರಭಾವ ಬೀರುತ್ತಿರುವುದಕ್ಕೆ ಸ್ಪಷ್ಟ ನಿದರ್ಶನಗಳು ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಇವಿಎಂ ಯಂತ್ರಗಳು ನಂಬಿಕಾರ್ಹವಲ್ಲ ಎಂಬ ಕಾರಣದಿಂದ ಅಮೆರಿಕಾ, ಜಪಾನ್, ಜರ್ಮನಿಯಂತಹ ಮುಂದುವರೆದ ರಾಷ್ಟ್ರಗಳೇ ಸಾಂಪ್ರದಾಯಿಕ ಮತದಾನದ ಶೈಲಿಯಾದ ಮತಚೀಟಿ ಬಳಕೆಯನ್ನು ಮರು ಅಳವಡಿಕೆ ಮಾಡಿಕೊಂಡಿರುವಾಗ ಭಾರತ ಏಕೆ ಮಾಡಿಕೊಳ್ಳಬಾರದು? ಇಷ್ಟೊಂದು ಜನ ಇವಿಎಂ ವಿಶ್ವಾಸಾರ್ಹತೆ ಬಗ್ಗೆ ಪ್ರಶ್ನಿಸಿದರೂ ಅದರ ಮೇಲೆ ಬಿಜೆಪಿಗರ ಅತಿಯಾದ ಪ್ರೀತಿಗೆ ಕಾರಣವೇನು? ಎಂದು ಪ್ರಶ್ನಿಸಿದ್ದಾರೆ.

ಪ್ರವಾಹದಲ್ಲಿ‌ ಮನೆ ಕಳೆದುಕೊಂಡವರಿಗೆ ಪರಿಹಾರಧನ ನೀಡಿಲ್ಲ, ತಾತ್ಕಾಲಿಕ ಶೆಡ್ ಹಾಕಿಕೊಟ್ಟಿಲ್ಲ, ಕೆಲವರಿಗೆ ಹತ್ತು ಸಾವಿರ ಕೊಟ್ಟಿದ್ದು ಬಿಟ್ಟರೆ ಇದುವರೆಗೂ ರಾಜ್ಯ ಸರ್ಕಾರ ಬೇರಾವ ಗಮನಾರ್ಹ ಕೆಲಸವನ್ನು ಮಾಡಿಲ್ಲ. ಈಗ ಮತ್ತೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಸರ್ಕಾರ ಜನರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಹೀಗಾದರೆ ಸಂತ್ರಸ್ತರ ಗತಿಯೇನು? ಯು.ಪಿ.ಎ ಅವಧಿಯಲ್ಲಿ ದೊರೆತ ಪರಿಹಾರಕ್ಕೂ, ಎನ್‌ಡಿಎ ಅವಧಿಯಲ್ಲಿ ದೊರೆತ ಪರಿಹಾರದ ಮೊತ್ತಕ್ಕು ತಾಳೆ ಹಾಕುವುದು ಮೂರ್ಖತನ. ಹಿಂದೆ ಸಂಭವಿಸಿದ ಪ್ರವಾಹಕ್ಕೂ, ಈ ಬಾರಿಯ ಪ್ರವಾಹಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಸಾವು, ನೋವು, ನಷ್ಟದ ಪ್ರಮಾಣ ಈ ಬಾರಿ ಅತಿ ಹೆಚ್ಚಾಗಿದೆ. ನಾನು ಮೊದಲ ಬಜೆಟ್ ಮಂಡಿಸಿದಾಗ ಒಂದು ಲಕ್ಷ ಕೋಟಿಯಿದ್ದ ಬಜೆಟ್ ಗಾತ್ರ, ಕೊನೆಯ ಬಜೆಟ್‌ಗೆ ರೂ.2 ಲಕ್ಷ ಕೋಟಿ ಮೀರಿತ್ತು. ಅಂದರೆ ಹಣದ ಮೌಲ್ಯ ಒಂದೇ ಪ್ರಕಾರವಾಗಿ ಇಲ್ಲ. ಹಾಗಾಗಿ ಕೇಂದ್ರ ನೀಡಿರುವ ಪರಿಹಾರ ಹಣದ ಪ್ರಮಾಣದಲ್ಲಿ ಸ್ವಲ್ಪ ಹೆಚ್ಚಿರಬಹುದು. ಹಾಗೆಂದ ಮಾತ್ರಕ್ಕೆ ಅಗತ್ಯ ಪ್ರಮಾಣದ ನೆರವು ದೊರೆತಿದೆ ಎಂದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೆರೆ ಪರಿಹಾರ ಕಾರ್ಯಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷವಾಗಿ ನಾವು ನಿತ್ಯವೂ ಸರ್ಕಾರವನ್ನು ಎಚ್ಚರಿಸುವ ಕಾರ್ಯ ಮಾಡುತ್ತಿದ್ದೇವೆ. ಆದರೆ ಇದು ಭಂಡಗೆಟ್ಟ ಸರ್ಕಾರ, ಅಧಿಕಾರದ ಹೊರತಾಗಿ ಅವರಿಗೆ ಬೇರೇನೂ ಬೇಡ.
“ನಿದ್ರಿಸುತ್ತಿರುವವರನ್ನು ಎಬ್ಬಿಸಬಹುದು, ನಿದ್ರಿಸುತ್ತಿರುವಂತೆ ನಟಿಸುವವರನ್ನು ಎಬ್ಬಿಸುವುದು ಅಸಾಧ್ಯದ ಮಾತು”.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರತಿ ಸಾರಿ ಚುನಾವಣೆ ನಡೆದಾಗ ಇವರು ಇದನ್ನೇ ಹೇಳೋದು ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಾಗ ಈ ಮಾತುಗಳನ್ನು ಹೇಳಲಿಲ್ಲವೇ

LEAVE A REPLY

Please enter your comment!
Please enter your name here

- Advertisment -

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...

ಶಬರಿಮಲೆ ತುಪ್ಪ ಮಾರಾಟ ಹಗರಣ: ತನಿಖೆ ಪೂರ್ಣಗೊಳಿಸಲು ವಿಎಸಿಬಿಗೆ 30 ದಿನ ಕಾಲಾವಕಾಶ ನೀಡಿದ ಕೇರಳ ಹೈಕೋರ್ಟ್ 

ಕೊಚ್ಚಿ: ಶಬರಿಮಲೆಯ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಮಾರಾಟವಾಗುವ ಪವಿತ್ರ ನೈವೇದ್ಯ 'ಆದಿಯ ಸಿಷ್ಟಂ ತುಪ್ಪ' ಮಾರಾಟಕ್ಕೆ ಸಂಬಂಧಿಸಿದಂತೆ ಟಿಡಿಬಿ ನೌಕರರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ತನಿಖೆಯನ್ನು ಪೂರ್ಣಗೊಳಿಸಲು ಕೇರಳ ಹೈಕೋರ್ಟ್ ಜಾಗೃತ...

ಧಾರ್ಮಿಕ ಆಚರಣೆ ಹೆಸರಿನಲ್ಲಿ ನರ್ಮದಾ ನದಿಗೆ 11,000 ಲೀಟರ್ ಹಾಲು ಸುರಿದ ಭಕ್ತರು

ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ನರ್ಮದಾ ನದಿ ದಂಡೆಯಲ್ಲಿ ಬುಧವಾರ ನಡೆದ ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ 11,000 ಲೀಟರ್ ಹಾಲು ನರ್ಮದಾ ನದಿಗೆ ಸುರಿಯಲಾಗಿದ್ದು, ಇದು ನಂಬಿಕೆ ಮತ್ತು ಪರಿಸರ ಹಾನಿಯ ಕುರಿತು ಚರ್ಚೆಗೆ...

ಪಶ್ಚಿಮ ಬಂಗಾಳ: ಹುಮಾಯೂನ್ ಕಬೀರ್ ಪಕ್ಷದೊಂದಿಗಿನ ಮೈತ್ರಿ ಹಿಂತೆಗೆದುಕೊಂಡ ಎಐಎಂಐಎಂ; ಸ್ವತಂತ್ರ ಸ್ಪರ್ಧೆ ಘೋಷಣೆ

ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹುಮಾಯೂನ್ ಕಬೀರ್ ನೇತೃತ್ವದ ಪಕ್ಷದೊಂದಿಗಿನ ಮೈತ್ರಿಯಿಂದ ಹಿಂದೆ ಸರಿಯುತ್ತಿರುವುದಾಗಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಘೋಷಿಸಿದೆ. ಕಬೀರ್ ಅವರ ಹೇಳಿಕೆಗಳು ಮತ್ತು ಬಹಿರಂಗಪಡಿಸುವಿಕೆಗಳು "ಮುಸ್ಲಿಮರ ಸಮಗ್ರತೆ"ಯ ಬಗ್ಗೆ...

ಏಕನಾಥ್ ಶಿಂಧೆ ಕುರಿತ ಹೇಳಿಕೆ ವಿವಾದ; ‘ಕ್ಷಮೆಯಾಚಿಸುವುದಿಲ್ಲ’ ಎಂದ ಕುನಾಲ್ ಕಮ್ರಾ

ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತಾ ಬಲಪಂಥೀಯ ರಾಜಕೀಯವನ್ನು ವಿಡಂಬನೆ ಮಾಡುವ ಭಾರತದ ಖ್ಯಾತ 'ಸ್ಟಾಂಡಪ್‌ ಕಾಮಿಡಿಯನ್' ಕುನಾಲ್ ಕಮ್ರಾ ಗುರುವಾರ ಮಹಾರಾಷ್ಟ್ರ ಶಾಸಕಾಂಗ ಸಮಿತಿಯ ಮುಂದೆ ಹಾಜರಾದರು. "ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯನ್ನು ಗುರಿಯಾಗಿಸಿಕೊಂಡು...

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...