Homeಮುಖಪುಟನಿದ್ರಿಸುತ್ತಿರುವವರನ್ನು ಎಬ್ಬಿಸಬಹುದು, ನಿದ್ರಿಸುತ್ತಿರುವಂತೆ ನಟಿಸುವವರನ್ನು ಎಬ್ಬಿಸುವುದು ಅಸಾಧ್ಯ: ಸಿದ್ದರಾಮಯ್ಯ..

ನಿದ್ರಿಸುತ್ತಿರುವವರನ್ನು ಎಬ್ಬಿಸಬಹುದು, ನಿದ್ರಿಸುತ್ತಿರುವಂತೆ ನಟಿಸುವವರನ್ನು ಎಬ್ಬಿಸುವುದು ಅಸಾಧ್ಯ: ಸಿದ್ದರಾಮಯ್ಯ..

- Advertisement -
- Advertisement -

ಮಹಾರಾಷ್ಟ್ರ ಚುನಾವಣಾ ಪ್ರಚಾರಕ್ಕೆಂದು ಹೋದಾಗ ಅಲ್ಲಿನ ಸರ್ಕಾರ ಐದು ವರ್ಷ ಏನು ಅಭಿವೃದ್ಧಿ ಮಾಡಿದೆ ಎಂಬ ಬಗ್ಗೆ ಅನುಮಾನ ಮೂಡಿತು. ಹೈದರಾಬಾದ್- ಪೂನಾ ಹೆದ್ದಾರಿಯಲ್ಲಿ ವಾಹನ ಸಂಚರಿಸಲು ಪರದಾಡಬೇಕಿದೆ. ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿಯವರ ತವರು ರಾಜ್ಯದ ಸ್ಥಿತಿಯೇ ಹೀಗೆ. ಆದರೂ ಜನ ಬಿಜೆಪಿಗೆ ಮತ ನೀಡುತ್ತಾರೆಯೇ? ಎಂದು ಕರ್ನಾಟಕದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಿನ್ನೆ ನಡೆದ ಮಹಾರಾಷ್ಟ್ರ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಲು ಅಲ್ಲಿಗೆ ತೆರಳಿದ್ದ ಅವರು ಚುನಾವಣೆಯ ನಂತರ ಅಲ್ಲಿನ ಸ್ಥಿತಿಯನ್ನು ವಿಶ್ಲೇಷಿಸಿದ್ದಾರೆ.

ಬಿಜೆಪಿಯವರು ಇವಿಎಂ ದುರುಪಯೋಗ ಮಾಡಿಕೊಂಡು ಚುನಾವಣೆಯಲ್ಲಿ ಗೆಲ್ಲುತ್ತಿರುವ ಸಾಧ್ಯತೆಗಳೂ ಇರಬಹುದು. ಅಭಿವೃದ್ಧಿ ಕಾರ್ಯಗಳನ್ನೇ ಮಾಡದಿದ್ದರೂ ಹೇಗೆ ಚುನಾವಣೆ ಗೆಲ್ಲಲು ಸಾಧ್ಯ? ಅಧಿಕಾರ ಹಿಡಿಯಲು ಚುನಾವಣಾ ಆಯೋಗ ಸೇರಿದಂತೆ ಎಲ್ಲ ಸ್ವಾಯತ್ತ ಸಂಸ್ಥೆಗಳನ್ನು ಬಿಜೆಪಿ ದುರ್ಬಳಕೆ ಮಾಡಿಕೊಳ್ಳತ್ತಿದೆ. ಚುನಾವಣೆ ಘೋಷಣೆಯಾದ ದಿನದಿಂದ ನೀತಿಸಂಹಿತೆ ಜಾರಿಯಾಗಬೇಕು. ಆದರೆ ರಾಜ್ಯದಲ್ಲಿ 70 ದಿನ ಮುಂಚಿತವಾಗಿ ಚುನಾವಣೆಯ ದಿನವನ್ನು ಘೋಷಿಸಿದರೂ ಇನ್ನೂ ನೀತಿಸಂಹಿತೆ ಜಾರಿಯಾಗಿಲ್ಲ. ಇವೆಲ್ಲ ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೇಲೆ ಪ್ರಭಾವ ಬೀರುತ್ತಿರುವುದಕ್ಕೆ ಸ್ಪಷ್ಟ ನಿದರ್ಶನಗಳು ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಇವಿಎಂ ಯಂತ್ರಗಳು ನಂಬಿಕಾರ್ಹವಲ್ಲ ಎಂಬ ಕಾರಣದಿಂದ ಅಮೆರಿಕಾ, ಜಪಾನ್, ಜರ್ಮನಿಯಂತಹ ಮುಂದುವರೆದ ರಾಷ್ಟ್ರಗಳೇ ಸಾಂಪ್ರದಾಯಿಕ ಮತದಾನದ ಶೈಲಿಯಾದ ಮತಚೀಟಿ ಬಳಕೆಯನ್ನು ಮರು ಅಳವಡಿಕೆ ಮಾಡಿಕೊಂಡಿರುವಾಗ ಭಾರತ ಏಕೆ ಮಾಡಿಕೊಳ್ಳಬಾರದು? ಇಷ್ಟೊಂದು ಜನ ಇವಿಎಂ ವಿಶ್ವಾಸಾರ್ಹತೆ ಬಗ್ಗೆ ಪ್ರಶ್ನಿಸಿದರೂ ಅದರ ಮೇಲೆ ಬಿಜೆಪಿಗರ ಅತಿಯಾದ ಪ್ರೀತಿಗೆ ಕಾರಣವೇನು? ಎಂದು ಪ್ರಶ್ನಿಸಿದ್ದಾರೆ.

ಪ್ರವಾಹದಲ್ಲಿ‌ ಮನೆ ಕಳೆದುಕೊಂಡವರಿಗೆ ಪರಿಹಾರಧನ ನೀಡಿಲ್ಲ, ತಾತ್ಕಾಲಿಕ ಶೆಡ್ ಹಾಕಿಕೊಟ್ಟಿಲ್ಲ, ಕೆಲವರಿಗೆ ಹತ್ತು ಸಾವಿರ ಕೊಟ್ಟಿದ್ದು ಬಿಟ್ಟರೆ ಇದುವರೆಗೂ ರಾಜ್ಯ ಸರ್ಕಾರ ಬೇರಾವ ಗಮನಾರ್ಹ ಕೆಲಸವನ್ನು ಮಾಡಿಲ್ಲ. ಈಗ ಮತ್ತೆ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಸರ್ಕಾರ ಜನರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಹೀಗಾದರೆ ಸಂತ್ರಸ್ತರ ಗತಿಯೇನು? ಯು.ಪಿ.ಎ ಅವಧಿಯಲ್ಲಿ ದೊರೆತ ಪರಿಹಾರಕ್ಕೂ, ಎನ್‌ಡಿಎ ಅವಧಿಯಲ್ಲಿ ದೊರೆತ ಪರಿಹಾರದ ಮೊತ್ತಕ್ಕು ತಾಳೆ ಹಾಕುವುದು ಮೂರ್ಖತನ. ಹಿಂದೆ ಸಂಭವಿಸಿದ ಪ್ರವಾಹಕ್ಕೂ, ಈ ಬಾರಿಯ ಪ್ರವಾಹಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಸಾವು, ನೋವು, ನಷ್ಟದ ಪ್ರಮಾಣ ಈ ಬಾರಿ ಅತಿ ಹೆಚ್ಚಾಗಿದೆ. ನಾನು ಮೊದಲ ಬಜೆಟ್ ಮಂಡಿಸಿದಾಗ ಒಂದು ಲಕ್ಷ ಕೋಟಿಯಿದ್ದ ಬಜೆಟ್ ಗಾತ್ರ, ಕೊನೆಯ ಬಜೆಟ್‌ಗೆ ರೂ.2 ಲಕ್ಷ ಕೋಟಿ ಮೀರಿತ್ತು. ಅಂದರೆ ಹಣದ ಮೌಲ್ಯ ಒಂದೇ ಪ್ರಕಾರವಾಗಿ ಇಲ್ಲ. ಹಾಗಾಗಿ ಕೇಂದ್ರ ನೀಡಿರುವ ಪರಿಹಾರ ಹಣದ ಪ್ರಮಾಣದಲ್ಲಿ ಸ್ವಲ್ಪ ಹೆಚ್ಚಿರಬಹುದು. ಹಾಗೆಂದ ಮಾತ್ರಕ್ಕೆ ಅಗತ್ಯ ಪ್ರಮಾಣದ ನೆರವು ದೊರೆತಿದೆ ಎಂದಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೆರೆ ಪರಿಹಾರ ಕಾರ್ಯಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷವಾಗಿ ನಾವು ನಿತ್ಯವೂ ಸರ್ಕಾರವನ್ನು ಎಚ್ಚರಿಸುವ ಕಾರ್ಯ ಮಾಡುತ್ತಿದ್ದೇವೆ. ಆದರೆ ಇದು ಭಂಡಗೆಟ್ಟ ಸರ್ಕಾರ, ಅಧಿಕಾರದ ಹೊರತಾಗಿ ಅವರಿಗೆ ಬೇರೇನೂ ಬೇಡ.
“ನಿದ್ರಿಸುತ್ತಿರುವವರನ್ನು ಎಬ್ಬಿಸಬಹುದು, ನಿದ್ರಿಸುತ್ತಿರುವಂತೆ ನಟಿಸುವವರನ್ನು ಎಬ್ಬಿಸುವುದು ಅಸಾಧ್ಯದ ಮಾತು”.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಪ್ರತಿ ಸಾರಿ ಚುನಾವಣೆ ನಡೆದಾಗ ಇವರು ಇದನ್ನೇ ಹೇಳೋದು ಮಧ್ಯಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಗೆದ್ದಾಗ ಈ ಮಾತುಗಳನ್ನು ಹೇಳಲಿಲ್ಲವೇ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...