Homeಕರ್ನಾಟಕ'ಸಂಘ'ದೋಷದ ಫಲ: ದೇವೇಗೌಡರ 'ಕಾಂಗ್ರೆಸ್‌ ಮುಕ್ತ' ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

‘ಸಂಘ’ದೋಷದ ಫಲ: ದೇವೇಗೌಡರ ‘ಕಾಂಗ್ರೆಸ್‌ ಮುಕ್ತ’ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

- Advertisement -
- Advertisement -

ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲೇ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಂತ್ಯ ಕಾಣಲಿದೆ ಎಂದು ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ ನಿನ್ನೆ ಹೇಳಿಕೆಯನ್ನು ಕೊಟ್ಟಿದ್ದರು. ಇದಕ್ಕೆ ಸಿದ್ದರಾಮಯ್ಯ ಅವರು ಸರಣಿ ಟ್ವೀಟ್‌ಗಳ ಮೂಲಕ ಪ್ರತಿಕ್ರಿಯಿಸಿದ್ದು, ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂಬ ಸೊಕ್ಕಿನ ಮಾತುಗಳನ್ನು ಆಡುತ್ತಿರುವ ಬಿಜೆಪಿಯ ಗಾಳಿ ದೇವೇಗೌಡರಿಗೂ ಸೋಕಿದ ಹಾಗಿದೆ. ಇದುಸಂಘ’ದೋಷದ ಫಲ ಎಂದು ಹೇಳಿದ್ದಾರೆ.

ದೇವೇಗೌಡ ಅವರ ಹೇಳಿಕೆ ಬಗ್ಗೆ ಎಕ್ಸ್‌ನಲ್ಲಿ ಸರಣಿ ಪೋಸ್ಟ್‌ ಮಾಡಿದ ಸಿದ್ದರಾಮಯ್ಯ, ನನ್ನ ಮತ್ತು ಡಿಕೆ ಶಿವಕುಮಾರ್‌ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಅಂತ್ಯವಾಗಲಿದೆ ಎಂದು ಮಾಜಿ ಪ್ರಧಾನಿ ದೇವೇಗೌಡ ಅವರು ಭವಿಷ್ಯ ನುಡಿದಿದ್ದಾರೆ. ವಯಸ್ಸಿನಲ್ಲಿ ದೊಡ್ಡವರಾದ ದೇವೇಗೌಡರ ಈ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ. ಅವರಿಗೆ ಮತ್ತು ಅವರ ಪಕ್ಷಕ್ಕೆ ದೀರ್ಘ ಕಾಲ ಆಯುರಾರೋಗ್ಯವನ್ನು ಪರಮಾತ್ಮ ಕರುಣಿಸಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಜಾತ್ಯತೀತ ಜನತಾದಳ ಅಂತ್ಯವಾಗಬಾರದು ಎಂದು ನಾನು ಹೃತ್ಪೂರ್ವಕವಾಗಿ ಹಾರೈಸುತ್ತೇನೆ. ಅದೇ ರೀತಿ ದೇವೇಗೌಡ ಅವರು ಇನ್ನಷ್ಟು ಕಾಲ ರಾಜಕೀಯದಲ್ಲಿ ಸಕ್ರಿಯರಾಗಿರಬೇಕೆಂದು ಕೂಡಾ ನಾನು ಬಯಸುತ್ತೇನೆ. ಆದರೆ ಜೆಡಿಎಸ್ ಮತ್ತು ಅವರ ಹೊಸ ಮಿತ್ರ ಬಿಜೆಪಿ ಶಾಶ್ವತವಾಗಿ ವಿರೋಧ ಪಕ್ಷದಲ್ಲಿಯೇ ಇರಬೇಕೆಂದು ನಾನು ಬಯಸುತ್ತೇನೆ. ನಮ್ಮ ಕಾಂಗ್ರೆಸ್ ಪಕ್ಷ ಈ ಬಯಕೆ ಈಡೇರಿಕೆಗೆ ನಿರಂತರ ಪ್ರಯತ್ನ ಮಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಯಾವ ರಾಜಕೀಯ ಪಕ್ಷ ಕೂಡಾ ಮತ್ತೊಂದು ರಾಜಕೀಯ ಪಕ್ಷದ ಅಂತ್ಯವನ್ನು ಬಯಸಬಾರದು. ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂಬ ಸೊಕ್ಕಿನ ಮಾತುಗಳನ್ನು ಆಡುತ್ತಿರುವ ಬಿಜೆಪಿಯ ಗಾಳಿ ದೇವೇಗೌಡರಿಗೂ ಸೋಕಿದ ಹಾಗಿದೆ. ಅದಕ್ಕೆ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಇದು “ಸಂಘ”ದೋಷದ ಫಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಜಾತ್ಯತೀತ ಜನತಾ ಪಕ್ಷ ಎನ್ನುವುದು “ಬಿಜೆಪಿಯ ಬಿ ಟೀಮ್” ಎಂದು ಹಿಂದಿನಿಂದಲೇ ನಾನು ಹೇಳಿಕೊಂಡು ಬಂದಿದ್ದೇನೆ. ನನ್ನ ಮಾತನ್ನು ಒಪ್ಪಿಕೊಂಡು ತಮ್ಮ ಸೈದ್ದಾಂತಿಕ ನಿಲುವನ್ನು ಸ್ಪಷ್ಟಪಡಿಸಿದ್ದಕ್ಕೆ ಜೆಡಿಎಸ್ ಪಕ್ಷವನ್ನು ಅಭಿನಂದಿಸುತ್ತೇನೆ. ಈ ಪಕ್ಷದ ಜಾತ್ಯತೀತ ಮುಖವನ್ನು ನಿಜ ಎಂದು ನಂಬಿ ಒಂದಷ್ಟು ಸೆಕ್ಯುಲರ್ ಮತದಾರರು ದಾರಿತಪ್ಪುವುದನ್ನು ಜೆಡಿಎಸ್ ಪಕ್ಷದ ಈ ನಿಲುವು ತಪ್ಪಿಸಿದೆ. ಇದು ಮುಂದಿನ ಚುನಾವಣೆಯನ್ನು ಜಾತ್ಯತೀತ ಮತ್ತು ಕೋಮುವಾದಿ ಶಕ್ತಿಗಳ ನಡುವಿನ ನೇರ ಸಂಘರ್ಷವಾಗಿ ಪರಿವರ್ತಿಸಿದೆ. ಜಾತ್ಯತೀತತೆ ಮತ್ತು ಸೌಹಾರ್ದತೆಯ ಪರಂಪರೆಯ ಕರ್ನಾಟಕದ ಮತದಾರರು ಮುಂದಿನ ಚುನಾವಣೆಗಳಲ್ಲಿ ಸರಿಯಾದ ಆಯ್ಕೆ ಮಾಡಲಿದ್ದಾರೆ ಎಂಬ ವಿಶ್ವಾಸ ನನಗೆ ಇದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇದಕ್ಕೂ ಮೊದಲು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಎಚ್.ಡಿ. ದೇವೇಗೌಡ, 60 ವರ್ಷಗಳಿಂದ ರಾಜಕೀಯ ಮಾಡಿಕೊಂಡು ಬಂದಿದ್ದೇನೆ. ಕರ್ನಾಟಕದಲ್ಲಿ ಇವರು ಅಂತ್ಯ ಕಾಣುತ್ತಿದ್ದಾರೆ ಎಂದು ಇವತ್ತೇ ಹೇಳುತ್ತಿದ್ದೇನೆ. ನಾವು ಅವರನ್ನು ಸೋಲಿಸಿಯೇ ತೀರುತ್ತೇವೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಾಯಕತ್ವದಲ್ಲೇ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಂತ್ಯ ಕಾಣಲಿದೆ. ಅಲ್ಲಿ ಪ್ರಧಾನಿ ಮೋದಿಯವರು ಶ್ರೀರಾಮ ಅನ್ನುತ್ತಾ ಉಪವಾಸ, ನದಿಸ್ನಾನ, ತಣ್ಣೀರು ಸ್ನಾನ ಇವೆಲ್ಲ ಮಾಡುತ್ತಿದ್ದಾರೆ. ಇಲ್ಲಿ ಇವರಿಗೆ ಸಿದ್ದರಾಮ ಮಾತ್ರ. ಸಿದ್ದರಾಮ ಹೆಸರಿನಲ್ಲಿ ಎನ್‌ಡಿಎ ಸೋಲಿಸಿ 20 ಸೀಟು ಗೆಲ್ಲುತ್ತೇವೆ ಎಂಬ ಅಹಂಕಾರದಿಂದ ಇವೆಲ್ಲ ಮಾಡುತ್ತಿದ್ದಾರೆ. 20 ಸೀಟು ಗೆಲ್ಲುವುದು ಅವರ ಕನಸು ಮಾತ್ರ ಎಂದು ಹೇಳಿಕೆ ಕೊಟ್ಟಿದ್ದರು.

 

ಇದನ್ನು ಓದಿ: ‘ಒಂದು ರಾಷ್ಟ್ರ ಒಂದು ಚುನಾವಣೆ‘: ಸಾರ್ವಜನಿಕ ಸಲಹೆ ಕೇಳಿದ ಕೋವಿಂದ್‌ ಸಮಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...