ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ನಡೆದಿದೆ ಎಂಬ ಆರೋಪ ಕೇಳಿ ಬಂದ ಕೋವಿಡ್ ಹಗರಣದ ಬಗ್ಗೆ ತನಿಖೆಗೆ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ಜಾನ್ ಮೈಕಲ್ ಕುನ್ಹಾ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ.
ಕಳೆದ ಬಿಜೆಪಿ ಸರ್ಕಾರ ಅವಧಿಯಲ್ಲಿ ಕೋವಿಡ್ ನಿರ್ವಹಣೆ, ತಡೆಗಟ್ಟಲು ಔಷಧ, ಉಪಕರಣಗಳು ಹಾಗೂ ಸಾಮಾಗ್ರಿಗಳ ಖರೀದಿ, ಆಮ್ಲಜನಕ ನಿರ್ವಹಣೆ, ಆಮ್ಲಜನಕ ಕೊರತೆಯಿಂದ ಉಂಟಾದ ಸಾವುಗಳ ಕುರಿತು ತನಿಖೆಗೆ ನ್ಯಾ. ಕುನ್ಹಾ ಅವರ ನೇತೃತ್ವದಲ್ಲಿ ತನಿಖಾ ಆಯೋಗ ರಚಿಸಿದ್ದು, 3 ತಿಂಗಳಲ್ಲಿ ವರದಿ ನೀಡುವಂತೆ ಸೂಚಿಸಲಾಗಿದೆ.
2021ರ ಜುಲೈ- ಆಗಸ್ಟ್ನಲ್ಲಿ ನಡೆದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ನೀಡಿರುವ ವರದಿಯಲ್ಲಿನ ಗಂಭೀರ ಆರೋಪಗಳ ಹಿನ್ನೆಲೆ ತನಿಖಾ ಆಯೋಗ ರಚನೆ ಮಾಡಲಾಗಿದೆ.
ತನಿಖೆಯ ವೇಳೆ ಆಯಾ ಇಲಾಖೆಯ ಅಧಿಕಾರಿಗಳು ಆಯೋಗವು ಕಾಲಾನುಕಾಲಕ್ಕೆ ತನಿಖೆಗಾಗಿ ಅಪೇಕ್ಷಿಸುವ ಎಲ್ಲ ಕಡತಗಳು,ದಾಖಲಾತಿಗಳನ್ನು ಒದಗಿಸವಂತೆ ಸೂಚಿಸಲಾಗಿದೆ.
ಈ ಮೊದಲು ರಾಜ್ಯ ಸರಕಾರ 40 ಪರ್ಸೆಂಟ್ಕಮಿಷನ್ ಆರೋಪದ ಬಗ್ಗೆ ತನಿಖೆಗೆ ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದಲ್ಲಿ ತನಿಖಾ ಸಮಿತಿ ರಚಿಸಿತ್ತು.
ಇದನ್ನು ಓದಿ: ರಾಜಸ್ಥಾನ: ಸರಕಾರಿ ಶಾಲೆಯಲ್ಲಿ ದಲಿತ ಬಾಲಕ ಆತ್ಮಹತ್ಯೆ ಪ್ರಕರಣ; ಇಬ್ಬರು ಶಿಕ್ಷಕರು ಅಮಾನತು