Homeಮುಖಪುಟಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿದ್ದಕ್ಕೆ ಸತ್ಯಪಾಲ್ ಮಲಿಕ್‌ ಮೇಲೆ ಸಿಬಿಐ ದಾಳಿ: ಸಿದ್ದರಾಮಯ್ಯ ಆರೋಪ

ಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿದ್ದಕ್ಕೆ ಸತ್ಯಪಾಲ್ ಮಲಿಕ್‌ ಮೇಲೆ ಸಿಬಿಐ ದಾಳಿ: ಸಿದ್ದರಾಮಯ್ಯ ಆರೋಪ

- Advertisement -
- Advertisement -

ಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿದ ಕಾರಣಕ್ಕೆ ಮಾಜಿ ರಾಜ್ಯಪಾಲರು ಮತ್ತು ಬಿಜೆಪಿಯ ಮಾಜಿ ರಾಷ್ಟ್ರೀಯ ಉಪಾಧ್ಯಕ್ಷರಾದ ಸತ್ಯಪಾಲ್ ಮಲಿಕ್ ಅವರ ಮೇಲೆ ಸಿಬಿಐ ದಾಳಿ ನಡೆದಿದೆ ಮತ್ತು ಅವರನ್ನು ಬೆದರಿಸುವ ಪ್ರಯತ್ನ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.

ಸತ್ಯಪಾಲ್ ಮಲಿಕ್ ಅವರ ನಿವಾಸದ ಮೇಲೆ ಸಿಬಿಐ ದಾಳಿ ಬಗ್ಗೆ ಮಾದ್ಯಮ ಪ್ರಕಟನೆ ಹೊರಡಿಸಿರುವ ಸತ್ಯಪಾಲ್ ಮಲಿಕ್, ಪುಲ್ವಾಮ ದುರಂತ ನಡೆದ ಸಮಯದಲ್ಲಿ ಅವರು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದ ಕಾರಣ ಕೇಂದ್ರದ ವಿರುದ್ಧದ ಅವರ ಆರೋಪವನ್ನು ತಳ್ಳಿಹಾಕಲಾಗದು. ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ನಿರೀಕ್ಷೆಯಂತೆ ಅವರಿಗೆ ಸಿಬಿಐ ತನಿಖೆ ಮೂಲಕ ಚಿತ್ರಹಿಂಸೆ ನೀಡಲು ಹೊರಟಿದೆ, ಈ ಕೃತ್ಯ ಅತ್ಯಂತ ಖಂಡನೀಯ ಎಂದು ಹೇಳಿದ್ದಾರೆ.

ಕೇಂದ್ರ ಸರಕಾರ ತಮ್ಮ ದುಷ್ಟಬುದ್ದಿಯನ್ನು ತಿದ್ದಿಕೊಂಡು, ಸತ್ಯಪಾಲ್ ಮಲಿಕ್ ಅವರ ಮೇಲಿನ ದೌರ್ಜನ್ಯ ನಿಲ್ಲಿಸಬೇಕು. ಸತ್ಯವನ್ನು ಸಹಿಸದಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮನ್ನು ಪ್ರಶ್ನಿಸುವವರ ವಿರುದ್ಧ ಐಟಿ, ಇಡಿ, ಸಿಬಿಐಗಳನ್ನು ಛೂ ಬಿಟ್ಟು ಬಲತ್ಕಾರದಿಂದ ಬಾಯಿ ಮುಚ್ಚಿಸುವ ಪ್ರಯತ್ನನ್ನು ಮುಂದುವರಿಸಿದ್ದಾರೆ. ಆದರೆ ದೇಶದ ಜನತೆ ಇಂತಹ ಕುಟಿಲ ಕಾರಸ್ತಾನಗಳನ್ನು ಅರ್ಥಮಾಡಿಕೊಳ್ಳುವಷ್ಟು ಪ್ರಬುದ್ಧರಾಗಿದ್ದಾರೆ ಎಂದು ಎಕ್ಸ್‌ನಲ್ಲಿ ಸಿದ್ದರಾಮಯ್ಯ ಪೋಸ್ಟ್‌ ಮಾಡಿದ್ದಾರೆ.

ಏನಿದು ಪ್ರಕರಣ: ಕಿರು ಜಲ ವಿದ್ಯುತ್ ಯೋಜನೆಗೆ ಸಂಬಂಧಿಸಿದ ಭ್ರಷ್ಟಾಚಾರದ ತನಿಖೆಯ ಭಾಗವಾಗಿ ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರ ನಿವಾಸ ಸೇರಿ 30ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿತ್ತು. ಆಗಸ್ಟ್ 23, 2018ರಿಂದ ಅಕ್ಟೋಬರ್ 30, 2019ರವರೆಗೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದ ಮಲಿಕ್ ಅವರು ಕಿರು ಜಲ ವಿದ್ಯುತ್ ಯೋಜನೆಗೆ ಸಂಬಂಧಿಸಿದ ಎರಡು ಕಡತಗಳನ್ನು ತೆರವುಗೊಳಿಸಲು 300 ಕೋಟಿ ರೂಪಾಯಿ ಲಂಚದ ಆಫರ್ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಏಪ್ರಿಲ್ 20, 2022ರಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರದ ಮನವಿ ಮೇರೆಗೆ ಈ ಬಗ್ಗೆ ಪ್ರಕರಣವನ್ನು ದಾಖಲಿಸಲಾಗಿದೆ. ಅಂದಿನ ಕಿರು ಜಲವಿದ್ಯುತ್ ಯೋಜನೆಯ ಚಯರ್‌ ಮ್ಯಾನ್‌, ಎಂಡಿ, ಚೆನಾಬ್ ವ್ಯಾಲಿ ಪವರ್ ಪ್ರಾಜೆಕ್ಟ್‌ನ (ಸಿವಿಪಿಪಿಪಿಎಲ್) ಇಬ್ಬರು ನಿರ್ದೇಶಕರು, ಖಾಸಗಿ ಕಂಪನಿ ಮತ್ತು ಇತರ ಅಪರಿಚಿತರ ವಿರುದ್ಧ ಅವ್ಯವಹಾರದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

ಕಿರು ಜಲವಿದ್ಯುತ್ ಯೋಜನೆಯ ಸಿವಿಲ್ ಕಾಮಗಾರಿಗೆ ಪ್ಯಾಕೇಜ್‌ನ್ನು ಇ-ಟೆಂಡರ್ ಮಾಡುವ ಮಾರ್ಗಸೂಚಿಗಳನ್ನು ಅನುಸರಿಸದೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಸಿವಿಪಿಪಿಪಿಎಲ್ (ಚೆನಾಬ್ ವ್ಯಾಲಿ ಪವರ್ ಪ್ರಾಜೆಕ್ಟ್ಸ್ (ಪಿ) ಲಿಮಿಟೆಡ್) ಮಂಡಳಿಯ ಸಭೆಯಲ್ಲಿ ಮತ್ತೆ ಹರಾಜಿನ ಮೂಲಕ ಇ-ಟೆಂಡರ್ ಮೂಲಕ ಮರು ಟೆಂಡರ್ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದ್ದರೂ, ಚಾಲ್ತಿಯಲ್ಲಿರುವ ಟೆಂಡರ್ ಪ್ರಕ್ರಿಯೆಯನ್ನು ರದ್ದುಗೊಳಿಸಿದ ನಂತರ ಅದನ್ನು ಕಾರ್ಯಗತಗೊಳಿಸಲಾಗಿಲ್ಲ. ಅಂತಿಮವಾಗಿ ಟೆಂಡರ್‌ನ್ನು ಖಾಸಗಿ ಕಂಪನಿಗೆ ನೀಡಲಾಗಿದೆ ಎಂದು ಆರೋಪಿಸಲಾಗಿತ್ತು.

ಈ ಮೊದಲು ಇದೇ ಪ್ರಕರಣಕ್ಕೆ ಸಂಬಂಧಿಸಿ ಡಿಸೆಂಬರ್ 2ರಂದು ಸಿಬಿಐ ದೆಹಲಿ, ನೋಯ್ಡಾ, ಚಂಡೀಗಢ ಮತ್ತು ಶಿಮ್ಲಾದ ಆರು ಸ್ಥಳಗಳಲ್ಲಿ ಶೋಧ ನಡೆಸಿತ್ತು. ಇದಲ್ಲದೆ ಜನವರಿ 29, 2024ರಂದು ಸಿಬಿಐ, ದೆಹಲಿ ಮತ್ತು ಜಮ್ಮು ಮತ್ತು ಕಾಶ್ಮೀರದ ಸುಮಾರು 8 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು. 21ಲಕ್ಷಕ್ಕೂ ಹೆಚ್ಚು ನಗದು ಜೊತೆಗೆ ಡಿಜಿಟಲ್ ಸಾಧನಗಳು, ಕಂಪ್ಯೂಟರ್‌ಗಳು, ದಾಖಲೆಗಳನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದರು.

ಈ ಮೊದಲು ಬಿಜೆಪಿ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ್ದ ಸತ್ಯಪಾಲ್‌ ಮಲಿಕ್‌, 2024ರ ಲೋಕಸಭಾ ಚುನಾವಣೆ ಗೆಲ್ಲಲು ಬಿಜೆಪಿ ಮತ್ತು ಮೋದಿ ದೇಶದಲ್ಲಿ ಯಾವುದೇ ರೀತಿಯ ಅನಾಹುತ ಮಾಡಿಸಬಹುದು ಎಂದು  ಹೇಳಿಕೆಯನ್ನು ನೀಡಿದ್ದರು. ಈ ಮೊದಲು ಪುಲ್ವಮಾ ದಾಳಿ ಬಗ್ಗೆ ಮೋದಿ ಸರಕಾರದ ಬಗ್ಗೆ ಗಂಭೀರವಾದ ಆರೋಪವನ್ನು ಮಾಡಿದ್ದ ಸತ್ಯಪಾಲ್ ಮಲಿಕ್‌, ಪುಲ್ವಾಮಾ ದಾಳಿಗೂ ಮೊದಲು ಸಿಆರ್‌ಪಿಎಫ್ ಯೋಧರ ಸಾಗಣೆಗೆ ಐದು ವಿಮಾನಗಳಿಗೆ ಬೇಡಿಕೆ ಇಡಲಾಗಿತ್ತು. ಆದರೆ, ಗೃಹ ಸಚಿವಾಲಯವು ಅದನ್ನು ಒದಗಿಸಲಿಲ್ಲ. ಅಲ್ಲದೆ ಅಲ್ಲಿ ಇನ್ನೂ ಹಲವು ಲೋಪಗಳಾಗಿದ್ದು, ರಸ್ತೆ ಮಾರ್ಗವಾಗಿ ತೆರಳುವ ವಾಹನಗಳನ್ನು ತಪಾಸಣೆ ಮಾಡಲು ಯಾವುದೇ ಗಸ್ತು ವಾಹನಗಳಾಗಲಿ, ತಪಾಸಣಾ ಠಾಣೆಗಳಾಗಲಿ ಇರಲಿಲ್ಲ ಎಂದು ಸತ್ಯಪಾಲ್ ಮಲಿಕ್ ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕರೆ ಮಾಡಿ, ಸರ್ಕಾರದ ಲೋಪಗಳ ಕುರಿತು ಏನೂ ಮಾತಾಡಬಾರದೆಂದು ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಕರೆ ಮಾಡಿ ಮೌನವಾಗಿರುವಂತೆ ಸೂಚಿಸಿದ್ದರು ಎಂದು ಹೇಳಿದ್ದರು.

ಇದನ್ನು ಓದಿ: ‘ಮುಸ್ಲಿಂ ವಿವಾಹ-ವಿಚ್ಛೇದನ ನೋಂದಣಿ ಕಾಯಿದೆ’ ರದ್ದುಪಡಿಸಿದ ಅಸ್ಸಾಂ ಬಿಜೆಪಿ ಸರಕಾರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರೋಹಿತ್ ವೇಮುಲಾ ಪ್ರಕರಣ: ಪೊಲೀಸರ ವರದಿ ಸಂಪೂರ್ಣವಾಗಿ ಸುಳ್ಳಿನಿಂದ ಕೂಡಿದೆ; ಪ್ರತಿಕ್ರಿಯಿಸಿದ ಕುಟುಂಬ

0
ಹೈದರಾಬಾದ್ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ರೋಹಿತ್ ವೇಮುಲಾ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ತೆಲಂಗಾಣ ಪೊಲೀಸರು ಮುಕ್ತಾಯದ ವರದಿಯನ್ನು ಸಲ್ಲಿಸಿದ್ದಾರೆ. ಇದಲ್ಲದೆ ವರದಿಯಲ್ಲಿ ರೋಹಿತ್‌ ವೇಮುಲಾ 'ದಲಿತ ಅಲ್ಲ', ತನ್ನ “ನಿಜವಾದ ಜಾತಿಯ ಗುರುತು”...