Homeಮುಖಪುಟಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿದ್ದಕ್ಕೆ ಸತ್ಯಪಾಲ್ ಮಲಿಕ್‌ ಮೇಲೆ ಸಿಬಿಐ ದಾಳಿ: ಸಿದ್ದರಾಮಯ್ಯ ಆರೋಪ

ಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿದ್ದಕ್ಕೆ ಸತ್ಯಪಾಲ್ ಮಲಿಕ್‌ ಮೇಲೆ ಸಿಬಿಐ ದಾಳಿ: ಸಿದ್ದರಾಮಯ್ಯ ಆರೋಪ

- Advertisement -
- Advertisement -

ಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿದ ಕಾರಣಕ್ಕೆ ಮಾಜಿ ರಾಜ್ಯಪಾಲರು ಮತ್ತು ಬಿಜೆಪಿಯ ಮಾಜಿ ರಾಷ್ಟ್ರೀಯ ಉಪಾಧ್ಯಕ್ಷರಾದ ಸತ್ಯಪಾಲ್ ಮಲಿಕ್ ಅವರ ಮೇಲೆ ಸಿಬಿಐ ದಾಳಿ ನಡೆದಿದೆ ಮತ್ತು ಅವರನ್ನು ಬೆದರಿಸುವ ಪ್ರಯತ್ನ ನಡೆದಿದೆ ಎಂದು ಸಿಎಂ ಸಿದ್ದರಾಮಯ್ಯ ಅವರು ಆರೋಪಿಸಿದ್ದಾರೆ.

ಸತ್ಯಪಾಲ್ ಮಲಿಕ್ ಅವರ ನಿವಾಸದ ಮೇಲೆ ಸಿಬಿಐ ದಾಳಿ ಬಗ್ಗೆ ಮಾದ್ಯಮ ಪ್ರಕಟನೆ ಹೊರಡಿಸಿರುವ ಸತ್ಯಪಾಲ್ ಮಲಿಕ್, ಪುಲ್ವಾಮ ದುರಂತ ನಡೆದ ಸಮಯದಲ್ಲಿ ಅವರು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದ ಕಾರಣ ಕೇಂದ್ರದ ವಿರುದ್ಧದ ಅವರ ಆರೋಪವನ್ನು ತಳ್ಳಿಹಾಕಲಾಗದು. ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ನಿರೀಕ್ಷೆಯಂತೆ ಅವರಿಗೆ ಸಿಬಿಐ ತನಿಖೆ ಮೂಲಕ ಚಿತ್ರಹಿಂಸೆ ನೀಡಲು ಹೊರಟಿದೆ, ಈ ಕೃತ್ಯ ಅತ್ಯಂತ ಖಂಡನೀಯ ಎಂದು ಹೇಳಿದ್ದಾರೆ.

ಕೇಂದ್ರ ಸರಕಾರ ತಮ್ಮ ದುಷ್ಟಬುದ್ದಿಯನ್ನು ತಿದ್ದಿಕೊಂಡು, ಸತ್ಯಪಾಲ್ ಮಲಿಕ್ ಅವರ ಮೇಲಿನ ದೌರ್ಜನ್ಯ ನಿಲ್ಲಿಸಬೇಕು. ಸತ್ಯವನ್ನು ಸಹಿಸದಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮನ್ನು ಪ್ರಶ್ನಿಸುವವರ ವಿರುದ್ಧ ಐಟಿ, ಇಡಿ, ಸಿಬಿಐಗಳನ್ನು ಛೂ ಬಿಟ್ಟು ಬಲತ್ಕಾರದಿಂದ ಬಾಯಿ ಮುಚ್ಚಿಸುವ ಪ್ರಯತ್ನನ್ನು ಮುಂದುವರಿಸಿದ್ದಾರೆ. ಆದರೆ ದೇಶದ ಜನತೆ ಇಂತಹ ಕುಟಿಲ ಕಾರಸ್ತಾನಗಳನ್ನು ಅರ್ಥಮಾಡಿಕೊಳ್ಳುವಷ್ಟು ಪ್ರಬುದ್ಧರಾಗಿದ್ದಾರೆ ಎಂದು ಎಕ್ಸ್‌ನಲ್ಲಿ ಸಿದ್ದರಾಮಯ್ಯ ಪೋಸ್ಟ್‌ ಮಾಡಿದ್ದಾರೆ.

ಏನಿದು ಪ್ರಕರಣ: ಕಿರು ಜಲ ವಿದ್ಯುತ್ ಯೋಜನೆಗೆ ಸಂಬಂಧಿಸಿದ ಭ್ರಷ್ಟಾಚಾರದ ತನಿಖೆಯ ಭಾಗವಾಗಿ ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರ ನಿವಾಸ ಸೇರಿ 30ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆಸಿತ್ತು. ಆಗಸ್ಟ್ 23, 2018ರಿಂದ ಅಕ್ಟೋಬರ್ 30, 2019ರವರೆಗೆ ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದ ಮಲಿಕ್ ಅವರು ಕಿರು ಜಲ ವಿದ್ಯುತ್ ಯೋಜನೆಗೆ ಸಂಬಂಧಿಸಿದ ಎರಡು ಕಡತಗಳನ್ನು ತೆರವುಗೊಳಿಸಲು 300 ಕೋಟಿ ರೂಪಾಯಿ ಲಂಚದ ಆಫರ್ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.

ಏಪ್ರಿಲ್ 20, 2022ರಂದು ಜಮ್ಮು ಮತ್ತು ಕಾಶ್ಮೀರ ಸರ್ಕಾರದ ಮನವಿ ಮೇರೆಗೆ ಈ ಬಗ್ಗೆ ಪ್ರಕರಣವನ್ನು ದಾಖಲಿಸಲಾಗಿದೆ. ಅಂದಿನ ಕಿರು ಜಲವಿದ್ಯುತ್ ಯೋಜನೆಯ ಚಯರ್‌ ಮ್ಯಾನ್‌, ಎಂಡಿ, ಚೆನಾಬ್ ವ್ಯಾಲಿ ಪವರ್ ಪ್ರಾಜೆಕ್ಟ್‌ನ (ಸಿವಿಪಿಪಿಪಿಎಲ್) ಇಬ್ಬರು ನಿರ್ದೇಶಕರು, ಖಾಸಗಿ ಕಂಪನಿ ಮತ್ತು ಇತರ ಅಪರಿಚಿತರ ವಿರುದ್ಧ ಅವ್ಯವಹಾರದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

ಕಿರು ಜಲವಿದ್ಯುತ್ ಯೋಜನೆಯ ಸಿವಿಲ್ ಕಾಮಗಾರಿಗೆ ಪ್ಯಾಕೇಜ್‌ನ್ನು ಇ-ಟೆಂಡರ್ ಮಾಡುವ ಮಾರ್ಗಸೂಚಿಗಳನ್ನು ಅನುಸರಿಸದೆ ನೀಡಲಾಗಿದೆ ಎಂದು ಆರೋಪಿಸಲಾಗಿದೆ. ಸಿವಿಪಿಪಿಪಿಎಲ್ (ಚೆನಾಬ್ ವ್ಯಾಲಿ ಪವರ್ ಪ್ರಾಜೆಕ್ಟ್ಸ್ (ಪಿ) ಲಿಮಿಟೆಡ್) ಮಂಡಳಿಯ ಸಭೆಯಲ್ಲಿ ಮತ್ತೆ ಹರಾಜಿನ ಮೂಲಕ ಇ-ಟೆಂಡರ್ ಮೂಲಕ ಮರು ಟೆಂಡರ್ ಮಾಡಲು ನಿರ್ಧಾರ ತೆಗೆದುಕೊಳ್ಳಲಾಗಿದ್ದರೂ, ಚಾಲ್ತಿಯಲ್ಲಿರುವ ಟೆಂಡರ್ ಪ್ರಕ್ರಿಯೆಯನ್ನು ರದ್ದುಗೊಳಿಸಿದ ನಂತರ ಅದನ್ನು ಕಾರ್ಯಗತಗೊಳಿಸಲಾಗಿಲ್ಲ. ಅಂತಿಮವಾಗಿ ಟೆಂಡರ್‌ನ್ನು ಖಾಸಗಿ ಕಂಪನಿಗೆ ನೀಡಲಾಗಿದೆ ಎಂದು ಆರೋಪಿಸಲಾಗಿತ್ತು.

ಈ ಮೊದಲು ಇದೇ ಪ್ರಕರಣಕ್ಕೆ ಸಂಬಂಧಿಸಿ ಡಿಸೆಂಬರ್ 2ರಂದು ಸಿಬಿಐ ದೆಹಲಿ, ನೋಯ್ಡಾ, ಚಂಡೀಗಢ ಮತ್ತು ಶಿಮ್ಲಾದ ಆರು ಸ್ಥಳಗಳಲ್ಲಿ ಶೋಧ ನಡೆಸಿತ್ತು. ಇದಲ್ಲದೆ ಜನವರಿ 29, 2024ರಂದು ಸಿಬಿಐ, ದೆಹಲಿ ಮತ್ತು ಜಮ್ಮು ಮತ್ತು ಕಾಶ್ಮೀರದ ಸುಮಾರು 8 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿತ್ತು. 21ಲಕ್ಷಕ್ಕೂ ಹೆಚ್ಚು ನಗದು ಜೊತೆಗೆ ಡಿಜಿಟಲ್ ಸಾಧನಗಳು, ಕಂಪ್ಯೂಟರ್‌ಗಳು, ದಾಖಲೆಗಳನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ತೆಗೆದುಕೊಂಡಿದ್ದರು.

ಈ ಮೊದಲು ಬಿಜೆಪಿ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ್ದ ಸತ್ಯಪಾಲ್‌ ಮಲಿಕ್‌, 2024ರ ಲೋಕಸಭಾ ಚುನಾವಣೆ ಗೆಲ್ಲಲು ಬಿಜೆಪಿ ಮತ್ತು ಮೋದಿ ದೇಶದಲ್ಲಿ ಯಾವುದೇ ರೀತಿಯ ಅನಾಹುತ ಮಾಡಿಸಬಹುದು ಎಂದು  ಹೇಳಿಕೆಯನ್ನು ನೀಡಿದ್ದರು. ಈ ಮೊದಲು ಪುಲ್ವಮಾ ದಾಳಿ ಬಗ್ಗೆ ಮೋದಿ ಸರಕಾರದ ಬಗ್ಗೆ ಗಂಭೀರವಾದ ಆರೋಪವನ್ನು ಮಾಡಿದ್ದ ಸತ್ಯಪಾಲ್ ಮಲಿಕ್‌, ಪುಲ್ವಾಮಾ ದಾಳಿಗೂ ಮೊದಲು ಸಿಆರ್‌ಪಿಎಫ್ ಯೋಧರ ಸಾಗಣೆಗೆ ಐದು ವಿಮಾನಗಳಿಗೆ ಬೇಡಿಕೆ ಇಡಲಾಗಿತ್ತು. ಆದರೆ, ಗೃಹ ಸಚಿವಾಲಯವು ಅದನ್ನು ಒದಗಿಸಲಿಲ್ಲ. ಅಲ್ಲದೆ ಅಲ್ಲಿ ಇನ್ನೂ ಹಲವು ಲೋಪಗಳಾಗಿದ್ದು, ರಸ್ತೆ ಮಾರ್ಗವಾಗಿ ತೆರಳುವ ವಾಹನಗಳನ್ನು ತಪಾಸಣೆ ಮಾಡಲು ಯಾವುದೇ ಗಸ್ತು ವಾಹನಗಳಾಗಲಿ, ತಪಾಸಣಾ ಠಾಣೆಗಳಾಗಲಿ ಇರಲಿಲ್ಲ ಎಂದು ಸತ್ಯಪಾಲ್ ಮಲಿಕ್ ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕರೆ ಮಾಡಿ, ಸರ್ಕಾರದ ಲೋಪಗಳ ಕುರಿತು ಏನೂ ಮಾತಾಡಬಾರದೆಂದು ಸೂಚಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಕೂಡ ಕರೆ ಮಾಡಿ ಮೌನವಾಗಿರುವಂತೆ ಸೂಚಿಸಿದ್ದರು ಎಂದು ಹೇಳಿದ್ದರು.

ಇದನ್ನು ಓದಿ: ‘ಮುಸ್ಲಿಂ ವಿವಾಹ-ವಿಚ್ಛೇದನ ನೋಂದಣಿ ಕಾಯಿದೆ’ ರದ್ದುಪಡಿಸಿದ ಅಸ್ಸಾಂ ಬಿಜೆಪಿ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...