Homeಕರ್ನಾಟಕಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಇನ್ನಿಲ್ಲ

ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಇನ್ನಿಲ್ಲ

- Advertisement -
- Advertisement -

ಶತಮಾನದ ಸಂತ ಎಂಬ ಗೌರವಕ್ಕೆ ಪಾತ್ರರಾದ ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿಯವರು ನಿಧನರಾಗಿದ್ದಾರೆ. ಅನಾರೋಗ್ಯದ ಕಾರಣ ಹಲವು ದಿನಗಳಿಂದ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಸೋಮವಾರ ಸಂಜೆ ಅವರ ಆರೋಗ್ಯ ತೀವ್ರ ಹದಗೆಟ್ಟಿತ್ತು.

ಸ್ವಾಮೀಜಿಯವರ ಅಂತಿಮ ದರ್ಶನ ಪಡೆಯುವುದಕ್ಕಾಗಿ ವಿಜಯಪುರದ ಜ್ಞಾನಯೋಗಾಶ್ರಮದತ್ತ ಜನರು ಸಾಗರೋಪಾದಿಯಲ್ಲಿ ಧಾವಿಸುತ್ತಿದ್ದಾರೆ. ಮಂಗಳವಾರ ಸಂಜೆ 5 ಗಂಟೆಗೆ ಸ್ವಾಮೀಜಿಯವರ ಸಂಕಲ್ಪದ ಪ್ರಕಾರದಂತೆಯೇ ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನಡೆಯಲಿದೆ.

ಕೆಲವು ವರ್ಷಗಳ ಹಿಂದೆಯೇ ತಮ್ಮ ಅಂತ್ಯಕ್ರಿಯೆಯ ವಿಧಿವಿಧಾನಗಳ ಬಗ್ಗೆ ಇಚ್ಛೆಯನ್ನು ಸ್ಪಷ್ಟವಾಗಿ ತಿಳಿಸಿದ್ದ ಸ್ವಾಮೀಜಿಯವರು ತಮಗಾಗಿ ಯಾವುದೇ ಸ್ಮಾರಕ ನಿರ್ಮಿಸಬಾರದು ಎಂಬ ಸೂಚಿಸಿದ್ದರು ಎಂದು ಯೋಗಾಶ್ರಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬಿಜ್ಜರಗಿ ಗ್ರಾಮದ ರೈತ ಕುಟುಂಬದಲ್ಲಿ 1941ರ ಅಕ್ಟೋಬರ್ 24ರಂದು ಜನಿಸಿದ್ದ ಸ್ವಾಮೀಜಿಯವರ ಪೂರ್ವಾಶ್ರಮದ ಹೆಸರು ಸಿದ್ದಗೊಂಡಪ್ಪ. ಬಿಜ್ಜರಗಿ ಗ್ರಾಮದ ಶಾಲೆಯಲ್ಲಿ 4ನೇ ತರಗತಿವರೆಗೆ ಓದಿದ ನಂತರ ಜ್ಞಾನಯೋಗಾಶ್ರಮದ ಮಲ್ಲಿಕಾರ್ಜುನ ಸ್ವಾಮೀಜಿಯವರಲ್ಲಿ ಆಶ್ರಯಪಡೆದರು.

ತಾವು ಪ್ರವಚನ ಮಾಡುವ ಸ್ಥಳಗಳಿಗೆ ಮಲ್ಲಿಕಾರ್ಜುನಾ ಸ್ವಾಮೀಜಿಯವರು, ಸಿದ್ದೇಶ್ವರರನ್ನು ಕರೆದುಕೊಂಡು ಹೋಗುತ್ತಿದ್ದರು. ಜೊತೆಯಲ್ಲಿಯೇ ಅವರ ಶಾಲಾ ಕಾಲೇಜುಗಳ ವಿದ್ಯಾಭ್ಯಾಸವೂ ಮುಂದುವರಿಯುವಂತೆ ನೋಡಿಕೊಂಡರು. ಸಿದ್ದೇಶ್ವರ ಸ್ವಾಮೀಜಿ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದರು. ಕೊಲ್ಹಾಪುರ ವಿಶ್ವವಿದ್ಯಾನಿಲಯದಿಂದ ತತ್ವಶಾಸ್ತ ವಿಷಯದಲ್ಲಿ ಎಂ.ಎ ಪದವಿಯನ್ನು ಪಡೆದರು.

ಕನ್ನಡದ ಜೊತೆ ಸಂಸ್ಕೃತ, ಇಂಗ್ಲೀಷ್, ಮರಾಠಿ, ಮತ್ತು ಹಿಂದಿ ಭಾಷೆಗಳಲ್ಲಿ ಸಿದ್ದೇಶ್ವರ ಸ್ವಾಮೀಜಿಯವರಿಗೆ ಅಪಾರ ಪಾಂಡಿತ್ಯವಿತ್ತು. ಅತ್ಯಂತ ಸರಳವಾಗಿ ಬದುಕುತ್ತಾ, ಅಧ್ಯಾತ್ಮವನ್ನು ಬೋಧಿಸಿದರು.

ಜನತೆಗೆ ಜ್ಞಾನದಾಸೋಹ ನೀಡುವ ಮೂಲಕ ಜ್ಞಾನಯೋಗಾಶ್ರಮ, ಉತ್ತರ ಕರ್ನಾಟಕದ ಜನಮಾನಸದಲ್ಲಿ ಬಹಳವಾಗಿ ಮಹತ್ವ ಪಡೆಯಿತು. ವಿಜಯಪುರ ಜ್ಞಾನಯೋಗಾಶ್ರಮದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಸಿದ್ಧೇಶ್ವರರು ತಮ್ಮ ಗುರುಗಳ ಮಾರ್ಗದರ್ಶನದಲ್ಲೇ ಆಶ್ರಮದ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಬಂದಿದ್ದಾರೆ.

ಕೊಲ್ಹಾಪುರದಲ್ಲಿ ತಮ್ಮ ಗುರುಗಳಾದ ಮಲ್ಲಿಕಾರ್ಜುನ ಸ್ವಾಮೀಜಿಯವರು ಮಾಡಿದ ಪ್ರವಚನಗಳನ್ನು ಒಂದುಗೂಡಿಸಿ ‘ಸಿದ್ದಾಂತ ಶಿಖಾಮಣಿ’ ಎಂಬ ಪುಸ್ತಕವನ್ನು ಬರೆದು ಗುರುಗಳ ಹೆಸರಿನಲ್ಲೇ ಪ್ರಕಟಿಸಿದ್ದರು. ಸ್ವಾಮೀಜಿಯವರು ವಚನಕಾರರ ಅಧ್ಯಾತ್ಮವನ್ನು ಜನರಿಗೆ ಸರಳವಾಗಿ ಬಿಡಿಸಿ ಹೇಳಿದರು. ಬದುಕಿನ ಮಾರ್ಗವನ್ನು ತೋರಿದರು. ‘ಪತಂಜಲಿಯ ಯೋಗಶಾಸ್ತ್ರ’ವನ್ನು ಸಂಪಾದಿಸಿದರು.

ಗಣ್ಯರ ಸಂತಾಪ

ಸ್ವಾಮೀಜಿಯವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿದ್ದು, “ವಿಜಯಪುರದ ಜ್ಞಾನ ಯೋಗಾಶ್ರಮದ ಪರಮ ಪೂಜ್ಯ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ತಿಳಿದು ಅತ್ಯಂತ ದುಃಖವಾಗಿದೆ. ತಮ್ಮ ಪ್ರವಚನಗಳ ಮೂಲಕ ಮನುಕುಲದ ಉದ್ಧಾರಕ್ಕೆ ಶ್ರಮಿಸಿದ ಶ್ರೀಗಳ ಸೇವೆ ಅಮೋಘ ಹಾಗೂ ಅನನ್ಯವಾದುದು” ಎಂದಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪ್ರತಿಕ್ರಿಯಿಸಿದ್ದು, “ದೇಶ ಕಂಡ ಶ್ರೇಷ್ಟ ಸಂತರು,ಆಧ್ಯಾತ್ಮಿಕ ಪ್ರವಚನಕಾರ, ವಿಜಯಪುರದ ಜ್ಞಾನಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿರವರು ಲಿಂಗೈಕ್ಯರಾದ ಸುದ್ದಿ ತಿಳಿದು ಮನಸ್ಸಿಗೆ ಅತೀವ ದುಃಖ ಉಂಟುಮಾಡಿದೆ. ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ,ಅವರ ಭಕ್ತ ಸಮೂಹಕ್ಕೆ ಈ ದುಃಖ ತಡೆಯುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದಿದ್ದಾರೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು ಸಂತಾಪ ಸೂಚಿಸಿದ್ದು, “ಜ್ಞಾನಯೋಗಾಶ್ರಮದ ಪೀಠಾಧೀಶರಾದ ಸಿದ್ದೇಶ್ವರ ಸ್ವಾಮೀಜಿಯವರು ಲಿಂಗೈಕ್ಯರಾದ ಸುದ್ದಿ ಅತೀವ ನೋವುಂಟುಮಾಡಿದೆ. ಧಾರ್ಮಿಕ ಪ್ರವಚನದ ಮೂಲಕ ಸಮಾಜವನ್ನು ಸನ್ಮಾರ್ಗದಲ್ಲಿ ನಡೆಸುತ್ತಿದ್ದ ದಾರ್ಶನಿಕ ಗುರುವಿನ ಅಗಲಿಕೆ ವೈಯಕ್ತಿಕವಾಗಿ ಮತ್ತು ನಾಡಿಗೆ ತುಂಬಲಾಗದ ನಷ್ಟ” ಎಂದು ಅಭಿಪ್ರಾಯಪಟ್ಟಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...